Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಧನು ಸಂಕ್ರಾಂತಿ 2022: ಸೂರ್ಯನ ಸಂಚಾರ ಈ 4 ರಾಶಿಯವರಿಗೆ ಅದೃಷ್ಟ ತರಲಿದೆ
ಹಿಂದೂ ಆಚರಣೆಯಲ್ಲಿ ಧನು ಸಂಕ್ರಾತಿಗೆ ವಿಶೇಷ ಮಹತ್ವವಿದೆ. 2022ರಲ್ಲಿ ಪೌಷ ಮಾಸದ ಡಿಸೆಂಬರ್ 16ರಂದು ಸೂರ್ಯ ದೇವರು ಧನು ರಾಶಿಯಲ್ಲಿ ಸಂಕ್ರಮಿಸಲಿದ್ದಾನೆ. ಸಂಕ್ರಮಣವು 12 ರಾಶಿಚಕ್ರದ ಮೇಲೂ ಪ್ರಭಾವ ಬೀರಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಧನು ಸಂಕ್ರಾಂತಿಯ ಪ್ರಭಾವದಿಂದ ಕೆಲವು ರಾಶಿಗಳಿಗೆ ಅಶುಭವಾದರೆ ಇನ್ನು ಕೆಲವು ರಾಶಿಚಕ್ರದವರು ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಧನು ಸಂಕ್ರಾಂತಿಯ ಪರಿಣಾಮ ಜ್ಯೋತಿಶಾಸ್ತ್ರದ ಪ್ರಕಾರ ಸಿಂಹ, ಧನು, ಕುಂಭ, ಮೀನ ರಾಶಿಯ ಜನರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಈ ರಾಶಿಯವರ ಜೀವನದಲ್ಲಿ ಸಕಾರಾತ್ಮಕವಾಗಿ ಬರುವ ಸೂಚನೆಗಳೇನು ಮುಂದೆ ನೋಡೋಣ:

ಧನು ಸಂಕ್ರಾಂತಿಯ ಮುಹೂರ್ತ
ಧನು ಸಂಕ್ರಾಂತಿಯ ಆರಂಭವಾಗುವ ಮುಹೂರ್ತ: 2022 ಡಿಸೆಂಬರ್ 16 ಬೆಳಗ್ಗೆ 10:02ಕ್ಕೆ
ಸೂರ್ಯೋದಯ: 2022 ಡಿಸೆಂಬರ್ 16 ಬೆಳಗ್ಗೆ 7:05ಕ್ಕೆ
ಸೂರ್ಯಾಸ್ತ: 2022 ಡಿಸೆಂಬರ್ 16 ಸಂಜೆ 5:39ಕ್ಕೆ
ಪುಣ್ಯ ಕಾಲ ಮುಹೂರ್ತ: 2022 ಡಿಸೆಂಬರ್ 16, ಬೆಳಗ್ಗೆ 10:02 ರಿಂದ ಡಿಸೆಂಬರ್ 16 ಸಂಜೆ 5:39 ರವರೆಗೆ
ಮಹಾ ಪುಣ್ಯ ಕಾಲ ಮುಹೂರ್ತ: ಡಿಸೆಂಬರ್ 16, ಬೆಳಗ್ಗೆ 10:02 ರಿಂದ ಡಿಸೆಂಬರ್ 16 ಬೆಳಗ್ಗೆ 10:26 ರವರೆಗೆ

ಸಿಂಹ ರಾಶಿ
ಸೂರ್ಯ ದೇವರು ಧನು ರಾಶಿಯಲ್ಲಿ ಸಂಕ್ರಮಿಸಿದಾಗ, ಅದು ಸಿಂಹ ರಾಶಿಯವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ, ವಿದ್ಯಾರ್ಥಿಗಳು ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾರೆ ಮತ್ತು ಅವರು ವಿವಿಧ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಇದರೊಂದಿಗೆ ಸಿಂಹ ರಾಶಿಯ ಜನರು ಈ ಅವಧಿಯಲ್ಲಿ ಆರ್ಥಿಕ ಲಾಭವನ್ನೂ ಪಡೆಯಬಹುದು.

ಧನು ರಾಶಿ
ಸೂರ್ಯ ದೇವನು ಈ ಅವಧಿಯಲ್ಲಿ ಧನು ರಾಶಿಯಲ್ಲಿಯೇ ಸಾಗುವುದರಿಂದ ಈ ರಾಶಿಯ ಜನರು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಸಮಯದಲ್ಲಿ ಧನು ರಾಶಿಯವರ ಎಲ್ಲಾ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಅವರು ತಮ್ಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಗೌರವ ಸಹ ಲಭಿಸುತ್ತದೆ.

ಕುಂಭ ರಾಶಿ
ಧನು ಸಂಕ್ರಾಂತಿಯ ಪ್ರಭಾವವು ಕುಂಭ ರಾಶಿಯವರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ತರುತ್ತವೆ. ಈ ಅವಧಿಯಲ್ಲಿ ಅವರು ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಈ ಸಮಯದಲ್ಲಿ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

ಮೀನ ರಾಶಿ
ಧನು ಸಂಕ್ರಾಂತಿಯ ಪರಿಣಾಮದಿಂದ ಮೀನ ರಾಶಿಯವರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಅವರು ತಮ್ಮ ಕೆಲಸದಲ್ಲಿ ಪ್ರಗತಿಯನ್ನು ಪಡೆಯುತ್ತಾರೆ ಮತ್ತು ಈ ಅವಧಿಯಲ್ಲಿ ಉದ್ಯೋಗಿಗಳು ಬಡ್ತಿ ಪಡೆಯಬಹುದು. ಉದ್ಯೋಗ ಹುಡುಕುತ್ತಿರುವ ಜನರು ಈ ಅವಧಿಯಲ್ಲಿ ಯಶಸ್ಸನ್ನು ಪಡೆಯಬಹುದು.



Click it and Unblock the Notifications