For Quick Alerts
ALLOW NOTIFICATIONS  
For Daily Alerts

ಬುಧವಾರದ ದಿನ ಭವಿಷ್ಯ: ನಿಮ್ಮ ರಾಶಿಫಲ ಹೇಗಿದೆ ನೋಡಿ

|

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com

Dina Bhavishya 02 December 2020

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಕಾರ್ತಿಕಾ
ನಕ್ಷತ್ರ: ಬೆಳಗ್ಗೆ 10:38ರವರೆಗೆ ಮೃಘಶಿರಾ, ನಂತರ ಆರ್ದ್ರ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 12:11ರಿಂದ 01:29ರವರೆಗೆ
ಗುಳಿಕಕಾಲ: ಬೆಳಗ್ಗೆ 10:52ರಿಂದ 12:11ರವರೆಗೆ
ಯಮಗಂಡಕಾಲ: ಬೆಳಗ್ಗೆ 08:16ರಿಂದ 09:34ರವರೆಗೆ
ದುರ್ಮುಹೂರ್ತ: ಬೆಳಗ್ಗೆ 11:50ರಿಂದ 12:32ರವರೆಗೆ

ಸೂರ್ಯೋದಯ: ಬೆಳಗ್ಗೆ 06:57ಕ್ಕೆ
ಸೂರ್ಯಾಸ್ತ: ಸಂಜೆ 05:24ಕ್ಕೆ

ಮೇಷ ರಾಶಿ:

ಮೇಷ ರಾಶಿ:

ಇಂದು ಸಂಗಾತಿಯೊಂದಿಗೆ ಬಹಳ ವಿಶೇಷ ದಿನವಾಗಲಿದೆ. ನಿಮ್ಮ ಪ್ರಿಯತಮೆಯೊಂದಿಗೆ ಪಿಕ್ನಿಕ್ ಗೆ ಹೋಗಲು ನಿಮಗೆ ಅವಕಾಶ ಸಿಗುತ್ತದೆ. ಬಹಳ ಸಮಯದ ನಂತರ ನೀವು ಮೋಜಿನ ದಿನವನ್ನು ಆನಂದಿಸುವಿರಿ. ಹೆತ್ತವರ ವಾತ್ಸಲ್ಯ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇನ್ನು ನಿಮ್ಮ ಕೆಲಸದ ಬಗ್ಗೆ ಮಾತನಾಡುತ್ತಾ, ಉದ್ಯೋಗದಲ್ಲಿರುವ ಜನರು ಇಂದು ಕಚೇರಿಯಲ್ಲಿ ಸಣ್ಣ ನಿರ್ಲಕ್ಷ್ಯವನ್ನು ಕೂಡ ಮಾಡಬೇಡಿ. ವಿಶೇಷವಾಗಿ ನೀವು ದೊಡ್ಡ ಮತ್ತು ಮಹತ್ವದ ಯೋಜನೆಯನ್ನು ಮುನ್ನಡೆಸುತ್ತಿದ್ದರೆ, ನಿಮ್ಮ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನೀವು ವ್ಯಾಪಾರ ಮಾಡಿದರೆ ನಿಂತಿರುವ ಯೋಜನೆಗಳನ್ನು ಪುನರಾರಂಭಿಸಲು ಸಮಯ ಅನುಕೂಲಕರವಾಗಿರುತ್ತದೆ. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ನಿಮ್ಮ ಆರೋಗ್ಯದ ಮಟ್ಟಿಗೆ, ನೀವು ಹೊರಗೆ ತಿನ್ನುವುದನ್ನು ಅಥವಾ ಹಳೆಯ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು.

ಉತ್ತಮ ಬಣ್ಣ: ಕೆಂಪು

ಶುಭ ಸಂಖ್ಯೆ: 22

ಶುಭ ಸಮಯ: ಮಧ್ಯಾಹ್ನ 2:05ರಿಂದ ರಿಂದ 10ರ ವರೆಗೆ

ವೃಷಭ ರಾಶಿ :

ವೃಷಭ ರಾಶಿ :

ಕೆಲಸದ ವಿಷಯದಲ್ಲಿ ಇಂದು ಮಿಶ್ರ ಫಲ. ನೀವು ಉದ್ಯೋಗ ಮಾಡುತ್ತಿದ್ದರೆ, ಇಂದು ಕಚೇರಿಯಲ್ಲಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಬಾಸ್ ನಿಮ್ಮ ಕಾರ್ಯಕ್ಷಮತೆಯ ಬಗ್ಗೆ ಅತೃಪ್ತಿ ಹೊಂದಿರಬಹುದು ಮತ್ತು ನಿಮ ಬಗ್ಗೆ ತುಂಬಾ ಕಟ್ಟುನಿಟ್ಟಾಗಿ ವರ್ತಿಸಬಹುದು. ನಿಮ್ಮ ಕೆಲಸದ ಮೇಲೆ ನೀವು ಸರಿಯಾಗಿ ಗಮನ ಹರಿಸುಬೇಕು ಮತ್ತು ಯಾರಿಗೂ ನಿಮ್ಮ ಬಗ್ಗೆ ದೂರು ನೀಡಲು ಅವಕಾಶ ನೀಡಬಾರದು. ಮತ್ತೊಂದೆಡೆ, ವ್ಯಾಪಾರಸ್ಥರು ಇಂದು ಯಾವುದೇ ಅಪಾಯಕಾರಿ ನಿರ್ಧಾರ ತೆಗೆದುಕೊಳ್ಳದಿರುವುದು ಉತ್ತಮ.

ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಮನೆಯ ಸದಸ್ಯರೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ನೀವು ಇಂದು ಯಾವುದೇ ಪ್ರಮುಖ ಶಾಪಿಂಗ್ ಮಾಡಬಹುದು. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಆಯಾಸ ಹೆಚ್ಚಾಗುವುದರಿಂದ ಇಂದು ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಉತ್ತಮ ಬಣ್ಣ: ಬಿಳಿ

ಶುಭ ಸಂಖ್ಯೆ: 11

ಶುಭ ಸಮಯ: ಸಂಜೆ 5 ರಿಂದ 9 ರವರೆಗೆ

ಮಿಥುನ ರಾಶಿ:

ಮಿಥುನ ರಾಶಿ:

ನೌಕರಸ್ಥರು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವ್ಯಾಪಾರಸ್ಥರು ಆರ್ಥಿಕವಾಗಿ ಲಾಭ ಪಡೆಯಬಹುದು. ಇಂದು ನೀವು ದೊಡ್ಡ ವ್ಯವಹಾರವನ್ನು ಮಾಡುವ ಅವಕಾಶವನ್ನು ಸಹ ಪಡೆಯಬಹುದು. ಮತ್ತೊಂದೆಡೆ, ಕಠಿಣ ಪರಿಶ್ರಮದ ಪರಿಣಾಮವಾಗಿ ಉದ್ಯೋಗ ಬಡ್ತಿ ಪಡೆಯುವ ಸಾಧ್ಯತೆಯಿದೆ, ವಿಶೇಷವಾಗಿ ನೀವು ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರೆ, ನಿಮ್ಮ ಪ್ರಗತಿಯ ಬಲವಾದ ಸಾಧ್ಯತೆಯಿದೆ. ಇಂದು, ಜೀವನ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು. ನಿಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು. ಅಹಿತರಕ ಪದಗಳನ್ನು ಬಳಸುವುದನ್ನು ತಪ್ಪಿಸಿ. ಹಣದ ಬಗ್ಗೆ ಮಾತನಾಡುತ್ತಾ, ನೀವು ಅನಗತ್ಯವಾಗಿ ಖರ್ಚು ಮಾಡುವುದನ್ನು ತಪ್ಪಿಸಬೇಕಾಗುತ್ತದೆ, ಅಗತ್ಯವಿರುವಷ್ಟು ಮಾತ್ರ ಇಂದು ಖರ್ಚು ಮಾಡಿ. ಆರೋಗ್ಯದ ದೃಷ್ಟಿಯಿಂದ ದಿನ ಸಾಮಾನ್ಯವಾಗಿರಲಿದೆ.

ಉತ್ತಮ ಬಣ್ಣ: ನೇರಳೆ

ಶುಭ ಸಂಖ್ಯೆ: 26

ಒಳ್ಳೆಯ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿ:

ಇಂದು ನಿಮ್ಮ ಮಾತಿನ ಮೇಲೆ ಹೆಚ್ಚಿನ ನಿಯಂತ್ರಣವನ್ನು ಇಟ್ಟುಕೊಳ್ಳಬೇಕು. ಕೋಪದಲ್ಲಿ ಯಾವುದೇ ಬೇಜವಾಬ್ದಾರಿ ಕಾರ್ಯವನ್ನೂ ಮಾಡಬೇಡಿ, ಹಾಗೆ ಮಾಡಿದಲ್ಲಿ ಭವಿಷ್ಯದಲ್ಲಿ ನೀವು ವಿಷಾದಿಸಬೇಕಾಗುತ್ತದೆ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಹಣದ ಬಗ್ಗೆ ಮನಸ್ತಾಪ ಹೊಂದಬಹುದು. ನಿಮ್ಮ ಪ್ರೀತಿಪಾತ್ರರ ಸ್ವಭಾವವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸದ ಬಗ್ಗೆ ಮಾತನಾಡುತ್ತಾ, ಕಚೇರಿಯಲ್ಲಿ ಒಂದು ಪ್ರಮುಖ ಸಭೆ ನಡೆಯಬಹುದು. ಹಿರಿಯ ಅಧಿಕಾರಿಗಳಿಂದ ನೀವು ಕೆಲವು ಉತ್ತಮ ಸಲಹೆಗಳನ್ನು ಸಹ ಪಡೆಯಬಹುದು. ಇಂದು ವ್ಯಾಪಾರಸ್ಥರಿಗೆ ಸಮಾಧಾನಕರ ದಿನ. ಇತ್ತೀಚಿಗೆ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೆ ಇಂದು ನೀವು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಉತ್ತಮ ಬಣ್ಣ: ತಿಳಿ ಕೆಂಪು

ಶುಭ ಸಂಖ್ಯೆ: 45

ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ

ಸಿಂಹ ರಾಶಿ:

ಸಿಂಹ ರಾಶಿ:

ಆರೋಗ್ಯವಾಗಿರಲು ನೀವು ನಿಮ್ಮ ದಿನಚರಿಯನ್ನು ಯೋಜಿಸಿಕೊಳ್ಳಬೇಕು. ನೀವು ಈ ರೀತಿ ನಿರ್ಲಕ್ಷ್ಯ ವಹಿಸುವುದನ್ನು ಮುಂದುವರಿಸಿದರೆ, ನಿಮ್ಮ ಆರೋಗ್ಯವು ತೀವ್ರವಾಗಿ ಕುಸಿಯಬಹುದು. ಕೆಲಸದ ಬಗ್ಗೆ ಮಾತನಾಡುತ್ತಾ, ಉದ್ಯೋಗದಾತರು ಇಂದು ಕಚೇರಿಯಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮತ್ತೊಂದೆಡೆ, ವ್ಯಾಪಾರಸ್ಥರು ತಮ್ಮ ಗ್ರಾಹಕರೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು. ನೀವು ಇದನ್ನು ಮಾಡದಿದ್ದರೆ ನಷ್ಟವು ಸಂಭವಿಸುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಏರಿಳಿತದಿಂದ ತುಂಬಿರುತ್ತದೆ. ಮನೆಯಲ್ಲಿ ಅಪಶ್ರುತಿ ಹೆಚ್ಚಾಗಬಹುದು. ನಿಮ್ಮ ಪ್ರೀತಿಪಾತ್ರರ ಸಿಟ್ಟಿನ ಸ್ವಭಾವ ನಿಮಗೆ ಕಿರಿಕಿರಿ ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನಡವಳಿಕೆಯನ್ನು ನೀವು ಸಮತೋಲನದಲ್ಲಿರಿಸಿಕೊಳ್ಳಬೇಕು. ಆರ್ಥಿಕ ದೃಷ್ಟಿಯಿಂದ, ದಿನವು ಸ್ವಲ್ಪ ದುಬಾರಿಯಾಗಲಿದೆ. ಇದ್ದಕ್ಕಿದ್ದಂತೆ ಕೆಲವು ದೊಡ್ಡ ಖರ್ಚುಗಳು ಬರಬಹುದು. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಇಂದು ನೀವು ಗ್ಯಾಸ್ಟ್ರೀಕ್, ಅಜೀರ್ಣ ಅಥವಾ ಆಸಿಡಿಟಿ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತೀರಿ.

ಉತ್ತಮ ಬಣ್ಣ: ಹಸಿರು

ಶುಭ ಸಂಖ್ಯೆ: 14

ಶುಭ ಸಮಯ: ಸಂಜೆ 5:25 ರಿಂದ 9 ರವರೆಗೆ

ಕನ್ಯಾರಾಶಿ:

ಕನ್ಯಾರಾಶಿ:

ನೀವು ಕಚೇರಿಯಲ್ಲಿ ತಾಳ್ಮೆಯಿಂದ ಕೆಲಸ ಮಾಡಿದರೆ, ಅದು ನಿಮಗೆ ಒಳ್ಳೆಯದು. ಉನ್ನತ ಅಧಿಕಾರಿಗಳು ನೀವು ಮಾಡುವ ಕೆಲಸದಲ್ಲಿನ ನ್ಯೂನತೆಗಳನ್ನು ಕಂಡುಕೊಂಡರೆ, ನೀವು ತೀವ್ರವಾಗಿ ವಾದಿಸುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ವಿಷಯಗಳು ನಿಮ್ಮ ವಿರುದ್ಧ ಹೋಗಬಹುದು ಮತ್ತು ನೀವು ದೊಡ್ಡ ತೊಂದರೆಗೆ ಸಿಲುಕಬಹುದು. ಮತ್ತೊಂದೆಡೆ, ವ್ಯಾಪಾರಸ್ಥರು ತಮ್ಮ ವ್ಯವಹಾರ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬಾರದು. ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆದರೆ ನಿಮ್ಮ ಅಂತಿಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಇಂದು ನೀವು ಮನೆಯ ಸದಸ್ಯರೊಂದಿಗೆ ಸಾಕಷ್ಟು ಸಮಯ ಕಳೆಯುವ ಅವಕಾಶವನ್ನು ಪಡೆಯುವಿರಿ. ತಂದೆ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು, ಈ ಕಾರಣದಿಂದಾಗಿ ನೀವು ಇಂದು ಸ್ವಲ್ಪ ಒತ್ತಡಕ್ಕೆ ಒಳಗಾಗುತ್ತೀರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಹೆಚ್ಚು ಕುಳಿತುಕೊಳ್ಳುವುದು ಮತ್ತು ನಿರಂತರವಾಗಿ ಕೆಲಸ ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ಬೆನ್ನಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಉತ್ತಮ ಬಣ್ಣ: ಗುಲಾಬಿ

ಶುಭ ಸಂಖ್ಯೆ: 16

ಶುಭ ಸಮಯ: ಬೆಳಗ್ಗೆ 4 ರಿಂದ ಮಧ್ಯಾಹ್ನ 2 ರವರೆಗೆ

ತುಲಾ ರಾಶಿ:

ತುಲಾ ರಾಶಿ:

ಕೆಲಸದ ಆರಂಭದಲ್ಲಿ ಇಂದು ನಿಮಗೆ ಶುಭವಾಗಲಿದೆ. ಉದ್ಯೋಗದಲ್ಲಿರುವವರಿಗೆ ಕಚೇರಿಯಲ್ಲಿ ತಮ್ಮ ಮೇಲಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ. ನಿಮ್ಮ ಬಾಸ್ ನಿಮ್ಮ ಕಾರ್ಯಕ್ಷಮತೆಯಿಂದ ತೃಪ್ತರಾಗುತ್ತಾರೆ ಮತ್ತು ನಿಮ್ಮನ್ನು ಹೊಗಳುತ್ತಾರೆ. ಮತ್ತೊಂದೆಡೆ, ವ್ಯಾಪಾರಸ್ಥರು ಯಾವುದೇ ಕಾನೂನು ವಿಷಯದಿಂದ ಪರಿಹಾರ ಪಡೆಯುವ ಸಾಧ್ಯತೆಯಿದೆ. ನಿಮ್ಮ ವ್ಯವಹಾರವು ಬೆಳೆಯುತ್ತದೆ. ಹಣದ ಬಗ್ಗೆ ಮಾತನಾಡುತ್ತಾ, ಇಂದು ಸಂಪತ್ತು ಗಳಿಸಲಿದ್ದೀರಿ, ಆದರೆ ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕು. ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ಜೀವನದ ಯಾವುದೇ ಏರಿಳಿತದ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಹೆಚ್ಚಿನ ಕೋಪ ಮಾಡಿಕೊಳ್ಳಬೇಡಿ ಅಥವಾ ಒತ್ತಡವನ್ನು ಹೆಚ್ಚಾಗಿ ತೆಗೆದುಕೊಳ್ಳಬೇಡಿ. ಇಲ್ಲದಿದ್ದರೆ ನಿಮ್ಮ ಆರೋಗ್ಯ ಕುಸಿಯಬಹುದು.

ಉತ್ತಮ ಬಣ್ಣ: ಕಿತ್ತಳೆ

ಶುಭ: 36

ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿ:

ಇಂದು ದಿನ ಅಷ್ಟು ಶುಭವಾಗಿಲ್ಲ. ಬೆಳಗ್ಗೆ ಮನೆಯಲ್ಲಿ ಅಪಶ್ರುತಿ ಉಂಟಾಗಬಹುದು. ಮನೆಯ ಸದಸ್ಯರಲ್ಲಿ ಕಹಿ ಮನೋಭಾವ ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಕೋಪಕ್ಕಿಂತ ಪ್ರಜ್ಞೆಯೊಂದಿಗೆ ವ್ಯವಹರಿಸಬೇಕು. ಸಂಗಾತಿಯ ಅನಗತ್ಯ ಮಾತು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಣದ ಬಗ್ಗೆ ಮಾತನಾಡುತ್ತಾ, ಹಣದ ಬಗ್ಗೆ ನೀವು ತುಂಬಾ ಚಿಂತೆ ಮಾಡುತ್ತೀರಿ. ಹಣಕಾಸಿನ ಅಡಚಣೆಗಳಿಂದಾಗಿ, ಇಂದು ನಿಮ್ಮ ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ತಂದೆಯ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ಇಂದು ನೀವು ಅವರ ಸಲಹೆಯಿಂದ ಪ್ರಯೋಜನ ಪಡೆಯಬಹುದು. ಮತ್ತೊಂದೆಡೆ, ಇಂದು ಉದ್ಯೋಗಿಗಳಿಗೆ ಸಾಮಾನ್ಯ ದಿನವಾಗಲಿದೆ. ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಇನ್ನು ಆರೋಗ್ಯದ ಬಗ್ಗೆ ಮಾತನಾಡುತ್ತಾ, ಒತ್ತಡ ಮತ್ತು ಆಯಾಸದಿಂದಾಗಿ ನೀವು ತುಂಬಾ ಸುಸ್ತನ್ನು, ನಿಃಶಕ್ತಿಯನ್ನು ಅನುಭವಿಸುತ್ತೀರಿ.

ಉತ್ತಮ ಬಣ್ಣ: ಆಕಾಶ ನೀಲಿ

ಶುಭ ಸಂಖ್ಯೆ: 44

ಶುಭ ಸಮಯ: ಸಂಜೆ 6 ರಿಂದ 9 ರವರೆಗೆ

ಧನು ರಾಶಿ:

ಧನು ರಾಶಿ:

ವ್ಯಾಪಾರಸ್ಥರು ತಮ್ಮ ಆರ್ಥಿಕ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬಾರದು. ನೀವು ಯಾವುದೇ ದೊಡ್ಡ ಹೂಡಿಕೆ ಮಾಡಲು ಮುಂದಾದರೆ, ಕೆಲವು ಅನುಭವಿ ಜನರಿಂದ ಸಲಹೆ ಪಡೆಯಬೇಕು. ಮತ್ತೊಂದೆಡೆ, ಉದ್ಯೋಗದಲ್ಲಿರುವ ಜನರು ಕಚೇರಿಯಲ್ಲಿ ತಮ್ಮ ಮೇಲಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸಬೇಕು. ನಿಮ್ಮ ಅತಿಯಾದ ಆತ್ಮವಿಶ್ವಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸುತ್ತದೆ ಜೋಪಾನ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ, ನಿಮ್ಮ ಸಂಗಾತಿಯೊಂದಿಗೆ ನೀವು ಸೌಮ್ಯವಾಗಿರಬೇಕು. ನಿಮ್ಮ ಕಠಿಣ ವರ್ತನೆ ನಿಮ್ಮ ಪ್ರಿಯತಮೆಯ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಹಣವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಮಿಶ್ರ ದಿನ.

ಉತ್ತಮ ಬಣ್ಣ: ಕಡು ಹಳದಿ

ಶುಭ ಸಂಖ್ಯೆ: 18

ಶುಭ ಸಮಯ: ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ

ಮಕರ ರಾಶಿ:

ಮಕರ ರಾಶಿ:

ನೀವು ಇಂದು ಉದ್ಯೋಗಕ್ಕಾಗಿ ಯಾವುದಾದರೂ ಕಂಪನಿಗೆ ಸಂದರ್ಶನಕ್ಕೆ ಹೋಗುತ್ತಿದ್ದರೆ, ಪೂರ್ಣ ಸಿದ್ಧತೆಯೊಂದಿಗೆ ಹೋಗಿ, ಏಕೆಂದರೆ ಇಂದು ನಿಮಗೆ ಅದೃಷ್ಟದ ದಿನ. ಇಂದು ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ನೀವು ಈಗಾಗಲೇ ಉದ್ಯೋಗದಲ್ಲಿದ್ದರೆ, ನಿಮ್ಮ ಆದಾಯ ಹೆಚ್ಚಾಗಬಹುದು. ಸಾರಿಗೆಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭ ಪಡೆಯಬಹುದು. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಮನೆಯ ಸದಸ್ಯರೊಂದಿಗೆ ನಿಮ್ಮ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ಪೋಷಕರ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ನೀವು ಅವರ ಆಶೀರ್ವಾದವನ್ನು ಪಡೆಯುತ್ತೀರಿ. ಇನ್ನು ಹಣದ ಬಗ್ಗೆ ಮಾತನಾಡುತ್ತಾ, ತಂದೆಯಿಂದ ಆರ್ಥಿಕ ಲಾಭ ಸಾಧ್ಯ. ನೀವು ಆರ್ಥಿಕವಾಗಿ ಯಾರಿಗಾದರೂ ಸಹಾಯ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ. ನೀವು ತುಂಬಾ ಉಲ್ಲಾಸ ಮತ್ತು ಸಕಾರಾತ್ಮಕವಾಗಿರುತ್ತೀರಿ.

ಉತ್ತಮ ಬಣ್ಣ: ನೇರಳೆ

ಶುಭ ಸಂಖ್ಯೆ: 5

ಶುಭ ಸಮಯ: ಸಂಜೆ 6:45 ರಿಂದ 10 ರವರೆಗೆ

ಕುಂಭ ರಾಶಿ:

ಕುಂಭ ರಾಶಿ:

ನೌಕರಸ್ಥರಿಗೆ ಇಂದು ಮಿಶ್ರ ಫಲ. ಇಂದು ನಿಮ್ಮ ಕಠಿಣ ಪರಿಶ್ರಮದ ಹೊರತಾಗಿಯೂ ನಿಮಗೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ. ನೀವು ಮಾಡುವ ಕೆಲಸದಲ್ಲಿ ಹಿರಿಯ ಅಧಿಕಾರಿಗಳು ಅನೇಕ ನ್ಯೂನತೆಗಳನ್ನು ಕಂಡುಕೊಳ್ಳುವ ಸಾಧ್ಯತೆಯಿದೆ. ನಿಮ್ಮ ಕೆಲಸವನ್ನು ನೀವು ಎಚ್ಚರಿಕೆಯಿಂದ ಮಾಡುವುದು ಉತ್ತಮ. ನೀವು ಆಹಾರ ಮತ್ತು ಪಾನೀಯವನ್ನು ವ್ಯಾಪಾರ ಮಾಡುತ್ತಿದ್ದರೆ ನೀವು ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಣ್ಣ ಲೋಪಗಳು ಸಹ ಭಾರೀ ನಷ್ಟಕ್ಕೆ ಕಾರಣವಾಗಬಹುದು.

ಕುಟುಂಬ ಜೀವನದ ಬಗ್ಗೆ ಮಾತನಾಡುತ್ತಾ, ಮನೆಯಲ್ಲಿ ಉದ್ವಿಗ್ನತೆ ಇದ್ದರೆ, ಸಮಸ್ಯೆಯನ್ನು ಬಗೆಹರಿಸಲು ನಿಮ್ಮ ನಿಮ್ಮ ಕೈಲಾದಷ್ಟು ಪ್ರಯತ್ನ ಮಾಡಿ ಇಲ್ಲದಿದ್ದರೆ ಸಂಬಂಧದಲ್ಲಿನ ಕಹಿ ಹೆಚ್ಚಾಗಬಹುದು. ಹಣದ ಪರಿಸ್ಥಿತಿ ಸಾಮಾನ್ಯವಾಗಲಿದೆ. ನೀವು ಹಣಕಾಸಿನ ತೃಪ್ತಿಯನ್ನು ಬಯಸಿದರೆ, ಹಣದ ದೃಷ್ಟಿಯಿಂದ ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಸದೃಢವಾಗಿ ಮತ್ತು ಸಕ್ರಿಯವಾಗಿರಲು ಪ್ರತಿದಿನ ವ್ಯಾಯಾಮ ಮಾಡಿ.

ಉತ್ತಮ ಬಣ್ಣ: ಕ್ರೀಮ್

ಶುಭ ಸಂಖ್ಯೆ: 35

ಶುಭ ಸಮಯ: ಬೆಳಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ

ಮೀನ ರಾಶಿ:

ಮೀನ ರಾಶಿ:

ಸೂಕ್ಷ್ಮ ವಸ್ತುಗಳನ್ನು ಬಳಾಸುವಾಗ ಇಂದು ಹೆಚ್ಚು ಜಾಗರೂಕರಾಗಿರಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು. ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಗಳು ನೀವು ಮಾಡಿದ ಕೆಲಸದಲ್ಲಿನ ನಿಮ್ಮ ತಪ್ಪುಗಳನ್ನು ಹುಡುಕಿದರೆ, ನೀವು ನಿಮ್ಮ ತಪ್ಪುಗಳನ್ನು ಮುಕ್ತವಾಗಿ ಒಪ್ಪಿಕೊಳ್ಳಬೇಕು. ನಿಮ್ಮ ಅಹಂನ್ನು ಇಲ್ಲಿ ತೋರಿಸಬೇಡಿ., ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ವ್ಯಾಪಾರಿಗಳು ಇಂದು ಮಿಶ್ರ ಫಲಿತಾಂಶಗಳನ್ನು ಪಡೆಯಬಹುದು. ನೀವು ಎಲೆಕ್ಟ್ರಾನಿಕ್ ವಸ್ತುಗಳ ವ್ಯವಹಾರ ಮಾಡುತ್ತಿದ್ದರೆ ಇಂದು ನೀವು ಲಾಭ ಪಡೆಯಬಹುದು. ಮತ್ತೊಂದೆಡೆ, ನೀವು ಹೊಸ ಕಾರ್ಯವನ್ನು ಯೋಜಿಸುತ್ತಿದ್ದರೆ, ಯೋಜನೆಯು ಅರ್ಧದಲ್ಲೇ ಸಿಲುಕಿಕೊಳ್ಳಬಹುದು. ಸಂಗಾತಿಯು ಯಾವುದೋ ವಿಷಯಕ್ಕೆ ವಾದ ಮಾಡುವ ಸಾಧ್ಯತೆಯಿದೆ. ನಿಮ್ಮ ಕೋಪವನ್ನು ನೀವು ನಿಯಂತ್ರಿಸಿ.

ಉತ್ತಮ ಬಣ್ಣ: ಕಂದು

ಶುಭ ಸಂಖ್ಯೆ: 30

ಶುಭ ಸಮಯ: ಮಧ್ಯಾಹ್ನ 1 ರಿಂದ 7 ರವರೆಗೆ

ಶ್ರೀ ಶ್ರೀನಿವಾಸ್ ಗುರೂಜಿ

ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ

ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ

ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-

ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.

ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು

M. 9986623344

web: www.sadguru-sai.com

English summary

Dina Bhavishya 02 December 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Tuesday, December 1, 2020, 17:49 [IST]
X
Desktop Bottom Promotion