For Quick Alerts
ALLOW NOTIFICATIONS  
For Daily Alerts

ಶುಕ್ರವಾರದ ದಿನ ಭವಿಷ್ಯ: 10 ಜುಲೈ 2020

|

ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ. ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ ಅನುಭವ ಹಾಗೂ ನೆನಪುಗಳು ಮಾತ್ರವೇ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ. ಆ ಅನುಭವಗಳೇ ಜೀವನ ಎಂದರೇನು? ಎನ್ನುವ ಪಾಠವನ್ನು ಹೇಳಿಕೊಡುತ್ತವೆ. ಶುಕ್ರವಾರವಾದ ಈ ಶುಭ ದಿನ ಆ ಮಹಾ ಲಕ್ಷ್ಮಿಯು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಯಾವೆಲ್ಲಾ ಬದಲಾವಣೆಯನ್ನು ತರುತ್ತಾಳೆ? ನಿಮ್ಮ ಜೀವನದ ಪಯಣದಲ್ಲಿ ಯಾವೆಲ್ಲಾ ಘಟನೆಗಳು ನಡೆಯಬಹುದು? ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....

ಶ್ರೀ ಸದ್ಗುರು ಸಾಯಿ ಜ್ಯೋತಿಷ್ಯ ಪೀಠಂ
ಪ್ರಧಾನ ಜ್ಯೋತಿಷ್ಯ ರತ್ನ ಶ್ರೀ ಶ್ರೀನಿವಾಸ್ ಗುರೂಜಿ.
Om Sai ram #:37 /17 27th Cross,12th main syndicate Bank near vasudevan adigas hotel 4th block East jayangar Bangalore 560011 phone no 99866 23344

WWW.SADGURU SAI.IN

Dina Bhavishya 10 July 2020

ಸಂವತ್ಸರ: ಶಾರ್ವರಿ

ಆಯನ: ದಕ್ಷಿಣಾಯನ

ಋತು: ಹೇಮಂತ

ಮಾಸ: ಆಷಾಢ

ಪಕ್ಷ: ಕೃಷ್ಣ

ತಿಥಿ: ಪಂಚಮಿ

ನಕ್ಷತ್ರ: ಪೂರ್ವ ಬಾಧ್ರಪದ

ರಾಹುಕಾಲ: ಬೆಳಿಗ್ಗೆ 10.43 ರಿಂದ ಮಧ್ಯಾಹ್ನ 12.26 ರವರೆಗೆ

ಗುಳಿಕಕಾಲ: ಬೆಳಿಗ್ಗೆ 7.15 ರಿಂದ 8.59 ರವರೆಗೆ

ಯಮಗಂಡಕಾಲ: ಮಧ್ಯಾಹ್ನ 3.54 ರಿಂದ 5.38 ರವರೆಗೆ

ದುರ್ಮುಹೂರ್ತ: ಬೆಳಿಗ್ಗೆ 8.17 ರಿಂದ 9.12 ರವರೆಗೆ

ಸೂರ್ಯೋದಯ: ಬೆಳಿಗ್ಗೆ 5.31

ಸೂರ್ಯಾಸ್ತ: ಸಂಜೆ 7.22

ಮೇಷ ರಾಶಿ

ಮೇಷ ರಾಶಿ

ಕೆಲಸದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುವಲ್ಲಿ ನೀವು ತೃಪ್ತರಾಗುತ್ತೀರಿ. ನೀವು ನಿಗದಿಪಡಿಸಿದ ಗುರಿಗಳನ್ನು ಸುಲಭವಾಗಿ ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ. ಇಂದು ನೀವು ಎಲ್ಲ ವಿಷಯಗಳನ್ನು ಬದಿಗಿಟ್ಟು ನಿಮ್ಮ ಕೆಲಸದತ್ತ ಮಾತ್ರ ಗಮನ ಹರಿಸುತ್ತೀರಿ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಒಡಹುಟ್ಟಿದವರೊಂದಿಗೆ ಸಂವಹನ ನಡೆಸುವುದು ಒಳ್ಳೆಯದು, ಇಂದು ಕುಟುಂಬದೊಂದಿಗೆ ದಿನವನ್ನು ಪೂರ್ಣವಾಗಿ ಆನಂದಿಸುವಿರಿ. ಕುಟುಂಬವು ನಿಮ್ಮನ್ನು ತುಂಬಾ ಪ್ರೀತಿಸುತ್ತದೆ ಎಂದು ನೀವು ಭಾವಿಸುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾಗಿರುತ್ತದೆ. ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.

ಉತ್ತಮ ಬಣ್ಣ: ಹಸಿರು

ಅದೃಷ್ಟ ಸಂಖ್ಯೆ: 16

ಅದೃಷ್ಟ ಸಮಯ: ಸಂಜೆ 4:00 ರಿಂದ 9:30 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಇಂದು ಆರ್ಥಿಕ ರಂಗದಲ್ಲಿ ಮಿಶ್ರ ಫಲಿತಾಂಶಗಳು ನಿಮ್ಮದಾಗಲಿದೆ. ಹಣ ಇರುತ್ತದೆ, ಆದರೆ ಕೆಲವು ದೊಡ್ಡ ವೆಚ್ಚಗಳು ಎದುರಾಗಬಹುದು. ವಿದ್ಯಾರ್ಥಿಗಳು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಉನ್ನತ ಶಿಕ್ಷಣವನ್ನು ಪಡೆಯಲು ವಿದೇಶಕ್ಕೆ ಹೋಗಲು ಬಯಸಿದರೆ ಅಧ್ಯಯನದಲ್ಲಿ ಅಡಚಣೆ ಸಾಧ್ಯವಾಗುತ್ತದೆ. ಸಕಾರಾತ್ಮಕ ಪ್ರಯತ್ನಗಳು ಖಂಡಿತವಾಗಿಯೂ ನಿಮ್ಮನ್ನು ಯಶಸ್ವಿಗೊಳಿಸುತ್ತವೆ. ಹಿರಿಯರು ಬಹಳ ಬೆಂಬಲ ನೀಡುತ್ತಾರೆ. ವೈವಾಹಿಕ ಜೀವನದಲ್ಲಿ ದೊಡ್ಡ ಸಮಸ್ಯೆ ಇದ್ದಕ್ಕಿದ್ದಂತೆ ಉದ್ಭವಿಸಬಹುದು. ನಿರ್ಧಾರಗಳನ್ನು ಮನಸ್ಸಿನಿಂದ ತೆಗೆದುಕೊಳ್ಳಬೇಕು. ಈ ದಿನ ನೀವು ತುಂಬಾ ಜಾಗರೂಕರಾಗಿರಬೇಕು ಮತ್ತು ಶತ್ರುಗಳ ಕಡೆಯವರು ಸಕ್ರಿಯರಾಗಿರುತ್ತಾರೆ. ಆರೋಗ್ಯ ಉತ್ತಮವಾಗಿರುತ್ತದೆ.

ಅದೃಷ್ಟ ಬಣ್ಣ: ಗಾಢ ಹಳದಿ

ಅದೃಷ್ಟ ಸಂಖ್ಯೆ: 17

ಅದೃಷ್ಟ ಸಮಯ: ಸಂಜೆ 6:00 ರಿಂದ 10:20 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ಇಂದು ಹಣಕ್ಕೆ ಸಂಬಂಧಿತ ವಿಷಯಗಳಲ್ಲಿ ತುಂಬಾ ಅದೃಷ್ಟಶಾಲಿಯಾಗುತ್ತೀರಿ. ಉತ್ತಮ ಆರ್ಥಿಕ ಲಾಭವನ್ನು ನಿರೀಕ್ಷಿಸಬಹುದು. ಸರ್ಕಾರಿ ಉದ್ಯೋಗದಲ್ಲಿದ್ದರೆ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ. ಕೆಲಸದ ಒತ್ತಡ ಕಡಿಮೆಯಾದಂತೆ ವಿಶ್ರಾಂತಿ ಪಡೆಯಲು ನಿಮಗೆ ಸಾಕಷ್ಟು ಸಮಯವಿರುತ್ತದೆ. ಸ್ವಲ್ಪ ಸಮಯದವರೆಗೆ ಸಹೋದರರೊಂದಿಗೆ ಹೊಂದಿದ್ದ ಬಿರುಕು ಈಗ ದೂರವಾಗುತ್ತದೆ. ಕೆಲಸದಲ್ಲಿ ಇಂದು ಜಾಗರೂಕರಾಗಿರಲು ಸೂಚಿಸಲಾಗಿದೆ, ವಿಶೇಷವಾಗಿ ವ್ಯಾಪಾರಸ್ಥರು ತಮ್ಮ ಹೆಜ್ಜೆಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ಯೋಜನೆಗಳನ್ನು ವಿರೋಧಿಗಳು ತಡೆಯುವ ಸಾಧ್ಯತೆಯಿದೆ. ಇಂದು ಸಂಗಾತಿಯೊಂದಿಗೆ ಬಹಳ ವಿಶೇಷ ದಿನವಾಗಿರುತ್ತದೆ. ನೀವಿಬ್ಬರೂ ಒಟ್ಟಿಗೆ ಸಂತೋಷವನ್ನು ಅನುಭವಿಸುವಿರಿ.

ಅದೃಷ್ಟ ಬಣ್ಣ: ಗುಲಾಬಿ

ಅದೃಷ್ಟ ಸಂಖ್ಯೆ: 8

ಅದೃಷ್ಟ ಸಮಯ: ಸಂಜೆ 4:35 ರಿಂದ 7:20 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಇಂದು ನಿಮಗೆ ಕೆಲವು ಉತ್ತಮ ಅವಕಾಶಗಳು ಬರಬಹುದು, ಕೆಲಸದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಯಾವುದೇ ಸಮಸ್ಯೆ ಇದ್ದರೂ ನಿಮ್ಮ ತಿಳುವಳಿಕೆಯೊಂದಿಗೆ ಅದನ್ನು ಪರಿಹರಿಸಲು ಸಾಧ್ಯವಾಗುತ್ತದೆ. ವ್ಯಾಪಾರ ಮಾಡಿದರೆ ಇಂದು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಇದ್ದಕ್ಕಿದ್ದಂತೆ ದೊಡ್ಡ ಪ್ರಾಜೆಕ್ಟ್ ಪಡೆಯುವುದು ವ್ಯವಹಾರಕ್ಕೆ ಒಂದು ಲಾಭವಾಗಲಿದೆ. ಹಣದ ದೃಷ್ಟಿಯಿಂದ ಸಮಯ ಒಳ್ಳೆಯದು. ಹೂಡಿಕೆ ಮಾಡಲು ಬಯಸಿದರೆ ಇಂದು ನಿರ್ಧಾರವನ್ನು ತೆಗೆದುಕೊಳ್ಳಬಹುದು. ವೈಯಕ್ತಿಕ ಜೀವನವು ಸಂತೋಷವಾಗಿರುತ್ತದೆ.

ಅದೃಷ್ಟ ಬಣ್ಣ: ಮರೂನ್

ಅದೃಷ್ಟ ಸಂಖ್ಯೆ: 7

ಅದೃಷ್ಟ ಸಮಯ: ಮಧ್ಯಾಹ್ನ 2:00 ರಿಂದ 4:20 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಹೆಚ್ಚು ಖರ್ಚು ಮಾಡಬೇಡಿ, ನಿಮ್ಮ ಉಳಿತಾಯವು ಖಾಲಿಯಾಗಬಹುದು. ಚಿಂತಿಸಬೇಡಿ ಏಕೆಂದರೆ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳಿರಬಹುದು ಮತ್ತು ನಿಮ್ಮ ಕುಟುಂಬ ಸದಸ್ಯರು ಇಂದು ನಿಮ್ಮ ಬಗ್ಗೆ ಅಸಮಾಧಾನ ಹೊಂದಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ಬೇಜವಾಬ್ದಾರಿಯುತ ಕೃತ್ಯವನ್ನು ಮಾಡುವುದರಿಂದ ದೂರವಿರಬೇಕು. ಸಂಗಾತಿಯ ವರ್ತನೆ ಇಂದು ಉತ್ತಮವಾಗಿರುತ್ತದೆ. ನಿಮ್ಮ ಸ್ನೇಹಿತರು ನಿಮಗಾಗಿ ಏನಾದರೂ ಒಳ್ಳೆಯದನ್ನು ಯೋಜಿಸಿರುವ ಸಾಧ್ಯತೆಯಿದೆ. ಇಂದು ಕೆಲಸದಲ್ಲಿ ಸಾಮಾನ್ಯ ದಿನವಾಗಿರುತ್ತದೆ. ಇಂದು ವಾಕ್ ಮಾಡಿದರೆ ನೀವು ತುಂಬಾ ಫ್ರೆಶ್ ಆಗಿರಬಹುದು.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 11

ಅದೃಷ್ಟ ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಉತ್ಸಾಹ ಅಥವಾ ತೀವ್ರ ಕೋಪದಿಂದಾಗಿ ಇಂದು ದೊಡ್ಡ ನಷ್ಟವನ್ನು ಅನುಭವಿಸಬಹುದು. ಪ್ರೀತಿಪಾತ್ರರೊಂದಿಗಿನ ಸಂಬಂಧವೂ ಕೆಟ್ಟದಾಗಬಹುದು. ನೀವು ಕೆಲವು ತೊಂದರೆಯಲ್ಲಿ ಸಿಲುಕಿಕೊಳ್ಳಬಹುದು. ಇಂದು ನೀವು ಕೋಪಗೊಂಡು ಕೆಟ್ಟ ಪದಗಳನ್ನು ಬಳಸಿದರೆ, ನೀವು ಯಾರೊಂದಿಗಾದರೂ ಮಾತನ್ನು ಸಹ ಕೊನೆಗೊಳಿಸುತ್ತೀರಿ. ಅಂತಹ ಪರಿಸ್ಥಿತಿಯಲ್ಲಿ, ಕಾನೂನು ತೊಂದರೆಗಳಿಗೆ ಸಿಲುಕುವ ಸಾಧ್ಯತೆಯೂ ಇದೆ, ಆದ್ದರಿಂದ ಇದರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರ್ಥಿಕ ದೃಷ್ಟಿಯಿಂದ, ಇಂದು ಉತ್ತಮ ದಿನವಾಗಿರುತ್ತದೆ. ಆದಾಯ ಉತ್ತಮವಾಗಿರುತ್ತದೆ. ಬಹುಶಃ ಕೆಲಸದ ಸ್ಥಳದಲ್ಲಿ ಹಿರಿಯರು ನಿಮ್ಮ ಅಸಡ್ಡೆ ಬಗ್ಗೆ ಅಸಮಾಧಾನ ಹೊಂದಿರಬಹುದು. ಅದೇ ಸಮಯದಲ್ಲಿ, ಉದ್ಯಮಿಗಳು ಸಹ ಕಷ್ಟಕರ ದಿನವನ್ನು ಹೊಂದಿರುತ್ತಾರೆ. ಸಂಗಾತಿಯ ಮನಸ್ಥಿತಿ ಸ್ವಲ್ಪಮಟ್ಟಿಗೆ ತೊಂದರೆಗೊಳಗಾಗುತ್ತದೆ, ಆದ್ದರಿಂದ ಅವರ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಅದೃಷ್ಟ ಬಣ್ಣ: ಕಿತ್ತಳೆ

ಅದೃಷ್ಟ ಸಂಖ್ಯೆ: 8

ಅದೃಷ್ಟ ಸಮಯ: ಬೆಳಿಗ್ಗೆ 7:05 ರಿಂದ ಮಧ್ಯಾಹ್ನ 12:00 ರವರೆಗೆ

ತುಲಾ ರಾಶಿ

ತುಲಾ ರಾಶಿ

ಹಣದ ವಿಷಯದಲ್ಲಿ ಇಂದು ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು. ಹಠಾತ್ ಹಣದ ಲಾಭವು ನಿಮ್ಮ ಹಣಕಾಸಿನ ಭಾಗವನ್ನು ಬಲಪಡಿಸುತ್ತದೆ. ವೈಯಕ್ತಿಕ ಜೀವನದಲ್ಲಿ ಸಂತೋಷ ಇರುತ್ತದೆ. ಇಂದು ಕುಟುಂಬ ಸದಸ್ಯರೊಂದಿಗೆ ಉತ್ತಮ ದಿನವಾಗಿರುತ್ತದೆ. ಪೋಷಕರ ಸಹಾಯದಿಂದ ಕುಟುಂಬಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ, ಮನೆಯ ವಾತಾವರಣ ಉತ್ತಮವಾಗಿರುತ್ತದೆ. ಹಿರಿಯರು ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ, ಅವರ ಸಹಕಾರದಿಂದಾಗಿ ಎಲ್ಲಾ ಕೆಲಸಗಳನ್ನು ತೀವ್ರ ಮನಸ್ಸಿನಿಂದ ಪೂರ್ಣಗೊಳಿಸುತ್ತೀರಿ. ಇಂದು ಉದ್ಯಮಿಗಳಿಗೆ ಬಹಳ ಪ್ರಯೋಜನಕಾರಿಯಾಗಲಿದೆ. ಕೆಲವು ದೊಡ್ಡ ಆರ್ಥಿಕ ಲಾಭಗಳನ್ನು ಪಡೆಯುವ ಸಾಧ್ಯತೆಯಿದೆ ಮತ್ತು ಇಂದು ನಿಮ್ಮ ಹೊಸ ವ್ಯವಹಾರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರವನ್ನೂ ಸಹ ನೀವು ತೆಗೆದುಕೊಳ್ಳಬಹುದು. ಸಮಾಜದಲ್ಲಿ ನಿಮ್ಮ ಗೌರವವು ಹೆಚ್ಚಾಗುತ್ತದೆ ಮತ್ತು ನಿಮ್ಮ ಸಕಾರಾತ್ಮಕತೆಯಿಂದ ಜನರು ಹೆಚ್ಚು ಪ್ರಭಾವಿತರಾಗುತ್ತಾರೆ.

ಅದೃಷ್ಟ ಬಣ್ಣ: ಬಿಳಿ

ಅದೃಷ್ಟ ಸಂಖ್ಯೆ: 25

ಅದೃಷ್ಟ ಸಮಯ: ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 3:40

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಇರುತ್ತದೆ. ಪ್ರತಿ ಸಣ್ಣ ಮತ್ತು ದೊಡ್ಡ ನಿರ್ಧಾರಗಳಲ್ಲಿ ಸಂಗಾತಿಯು ನಿಮ್ಮನ್ನು ಬೆಂಬಲಿಸುತ್ತಾರೆ. ಅಲ್ಲದೆ, ಇಂದು ಕುಟುಂಬ ಸದಸ್ಯರಲ್ಲಿ ಪರಸ್ಪರ ವಾತ್ಸಲ್ಯ ಕಂಡುಬರುತ್ತದೆ. ಕುಟುಂಬ ಸದಸ್ಯರೊಂದಿಗೆ ವಿಶೇಷವಾಗಿ ಮಕ್ಕಳೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ನಿಮ್ಮ ತಾಯಿಯ ಆರೋಗ್ಯದಲ್ಲಿ ಸುಧಾರಣೆ ಇರುತ್ತದೆ ಮತ್ತು ಆದ್ದರಿಂದ ನೀವು ಸಮಾಧಾನವಾಗಿರುತ್ತೀರಿ. ಉದ್ಯೋಗಿಗಳಿಗೆ ದಿನ ಸಾಮಾನ್ಯವಾಗುತ್ತವೆ. ವ್ಯಾಪಾರಸ್ಥರು ಇಂದು ಪ್ರಯಾಣಿಸಬೇಕಾಗಬಹುದು, ಇದು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ದೀರ್ಘಕಾಲದವರೆಗೆ ಸ್ಥಗಿತವಾಗಿದ್ದ ಯಾವುದೇ ಒಪ್ಪಂದ ಇಂದು ಪೂರ್ಣಗೊಳಿಸಬಹುದು. ಹಣದ ದೃಷ್ಟಿಯಿಂದ ಇದು ನಿಮಗೆ ಅದೃಷ್ಟದ ದಿನವಾಗಿರುತ್ತದೆ. ಇಂದು ಶುಭವಾಗಿದೆ ಮತ್ತು ಆದ್ದರಿಂದ, ನೀವು ಆಭರಣಗಳ ಶಾಪಿಂಗ್ ಮಾಡಬಹುದು.

ಅದೃಷ್ಟ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 21

ಅದೃಷ್ಟ ಸಮಯ: ಬೆಳಿಗ್ಗೆ 11:40 ರಿಂದ ಮಧ್ಯಾಹ್ನ 2:30 ರವರೆಗೆ

ಧನು ರಾಶಿ

ಧನು ರಾಶಿ

ತಂದೆಯ ಆರೋಗ್ಯದಲ್ಲಿನ ಕುಸಿತದಿಂದಾಗಿ ನಿಮ್ಮ ಆತಂಕ ಹೆಚ್ಚಾಗಬಹುದು. ಇದಲ್ಲದೆ ಕೆಲವು ಹಳೆಯ ಕೌಟುಂಬಿಕ ಸಮಸ್ಯೆಗಳಿಂದಾಗಿ ನಿಮ್ಮ ಕುಟುಂಬ ಸದಸ್ಯರೊಂದಿಗಿನ ಸಂಬಂಧ ಕ್ಷೀಣಿಸಬಹುದು. ಅಂತಹ ಪರಿಸ್ಥಿತಿಯಲ್ಲಿ ಸಾಕಷ್ಟು ಕಿರಿಕಿರಿ ಅನುಭವಿಸುವಿರಿ. ನಿಮಗಿಂತ ಹಿರಿಯರ ಬಗ್ಗೆ ಗೌರವ ಇಟ್ಟುಕೊಳ್ಳುವುದು ಉತ್ತಮ. ಇಂದು ಕೆಲಸದಲ್ಲಿ ಕಠಿಣ ದಿನವಾಗಿರುತ್ತದೆ. ಹಿರಿಯರ ನಿರಂತರ ಹಸ್ತಕ್ಷೇಪದಿಂದಾಗಿ ನೀವು ತುಂಬಾ ನಿರಾಶೆಗೊಳ್ಳುವಿರಿ. ನಿಮ್ಮ ಪ್ರತಿಭೆಯನ್ನು ತೋರಿಸಲು ನಿಮಗೆ ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ನೀವು ಭಾವಿಸಿದರೆ, ಕೆಲಸವನ್ನು ಬದಲಾಯಿಸಲು ಪ್ರಯತ್ನಿಸಿ ಮತ್ತು ಅದೃಷ್ಟವು ನಿಮಗೆ ಅನುಕೂಲವಾಗಬಹುದು. ಈ ದಿನವು ಹಣದ ದೃಷ್ಟಿಯಿಂದ ಪ್ರಯೋಜನಕಾರಿಯಾಗಲಿದೆ. ನೀವು ನಿರೀಕ್ಷಿಸಿದ್ದ ಆರ್ಥಿಕ ಲಾಭ ಪಡೆಯುವ ಸಾಧ್ಯತೆಯಿದೆ. ಇಂದು ಧಾರ್ಮಿಕ ಚಟುವಟಿಕೆಗಳಲ್ಲಿ ಸಹ ಭಾಗವಹಿಸಬಹುದು.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 8

ಅದೃಷ್ಟ ಸಮಯ: ಬೆಳಿಗ್ಗೆ 11:00 ರಿಂದ 3: 45 ರವರೆಗೆ

ಮಕರ ರಾಶಿ

ಮಕರ ರಾಶಿ

ನಿಮ್ಮ ಕೆಲಸ ಮತ್ತು ಕುಟುಂಬ ಜೀವನವನ್ನು ನೀವು ಸಮತೋಲನಗೊಳಿಸಬೇಕಾಗಿರುವುದರಿಂದ ಎರಡಕ್ಕೂ ಸಮಾನ ಗಮನವನ್ನು ನೀಡಬಹುದು. ಕೆಲವೊಮ್ಮೆ, ಕೆಲಸದ ಒತ್ತಡದಿಂದಾಗಿ ಕುಟುಂಬದ ಬಗ್ಗೆ ಗಮನ ಹರಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಸಂಬಂಧವು ದುರ್ಬಲಗೊಳ್ಳುತ್ತದೆ. ಪ್ರೀತಿಪಾತ್ರರಿಗೂ ಸ್ವಲ್ಪ ಸಮಯ ತೆಗೆದುಕೊಂಡರೆ ಅದು ಉತ್ತಮವಾಗಿರುತ್ತದೆ. ಒತ್ತಡಕ್ಕೊಳಗಾಗುವುದರಿಂದ ನೀವು ಯಶಸ್ವಿಯಾಗುವುದಿಲ್ಲ ಎಂದು ಅರ್ಥಮಾಡಿಕೊಳ್ಳಿ. ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ವೆಚ್ಚಗಳು ಹೆಚ್ಚಾಗುತ್ತವೆ ಆದರೆ ಹೊಸ ಆದಾಯದ ಮೂಲವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಕೆಲಸದಲ್ಲಿ, ಈ ದಿನ ಒಳ್ಳೆಯದು. ಇಂದು ಕಡಿಮೆ ಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ನೀವು ಸಾಮರಸ್ಯ ಅನುಭವಿಸುವಿರಿ, ನಿಮ್ಮ ಪ್ರಿಯರಿಗೆ ಅದು ಎಷ್ಟು ಮುಖ್ಯ ಎಂಬುದನ್ನು ನೀವು ಅರಿತುಕೊಳ್ಳುವಿರಿ.

ಅದೃಷ್ಟ ಬಣ್ಣ: ನೀಲಿ

ಅದೃಷ್ಟ ಸಂಖ್ಯೆ: 30

ಅದೃಷ್ಟ ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 12:55 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಉಳಿಯುತ್ತದೆ. ನಿಮ್ಮ ಸಂಗಾತಿಯಿಂದ ಪೂರ್ಣ ಪ್ರೀತಿ ಮತ್ತು ಬೆಂಬಲವನ್ನು ಪಡೆಯಲು ನೀವು ಸಂತೋಷವಾಗಿರುತ್ತೀರಿ. ಪ್ರೀತಿಪಾತ್ರರು ಯಾವುದೇ ಉದ್ಯೋಗ ಅಥವಾ ವ್ಯವಹಾರದಲ್ಲಿದ್ದರೆ ಇಂದು ಅವರು ಉತ್ತಮ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಇಂದು ನಿಮ್ಮ ಸಂಗಾತಿಯಿಂದ ಅಮೂಲ್ಯವಾದ ಉಡುಗೊರೆಯನ್ನು ಪಡೆಯಬಹುದು. ಕುಟುಂಬದಲ್ಲಿ ಯಾವುದೇ ವಿವಾದ ಅಥವಾ ಜಗಳ ಇದ್ದರೆ ವಿಷಯವನ್ನು ಶಾಂತಿಯುತವಾಗಿ ಮತ್ತು ಬುದ್ಧಿವಂತಿಕೆಯಿಂದ ಪರಿಹರಿಸಲು ಪ್ರಯತ್ನಿಸಬೇಕು. ಇಂದು ನಿಮ್ಮ ಹತ್ತಿರ ಇರುವವರ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗಬಹುದು. ಹಣಕ್ಕೆ ಸಂಬಂಧಿಸಿದ ವಿಷಯಗಳು ಉತ್ತಮವಾಗಿರುತ್ತವೆ. ಹೊಸ ಆದಾಯದ ಮೂಲವನ್ನೂ ಪಡೆಯುತ್ತೀರಿ. ಇಂದು ನೀವು ಕಡಿಮೆ ಶ್ರಮದಿಂದ ಹೆಚ್ಚಿನ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ.

ಅದೃಷ್ಟ ಬಣ್ಣ: ಗಾಢ ಕೆಂಪು

ಅದೃಷ್ಟ ಸಂಖ್ಯೆ: 23

ಅದೃಷ್ಟ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 3:00 ರವರೆಗೆ

ಮೀನ ರಾಶಿ

ಮೀನ ರಾಶಿ

ಇದು ಅನಗತ್ಯ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವ ಸಮಯವಲ್ಲ. ಆದರೆ ಕಷ್ಟಪಟ್ಟು ಕೆಲಸ ಮಾಡಿ, ನಿಮ್ಮ ವೃತ್ತಿಜೀವನದತ್ತ ಗಮನವನ್ನು ಕೇಂದ್ರೀಕರಿಸಬೇಕು, ಇಲ್ಲದಿದ್ದರೆ ನಿಮ್ಮ ಒಂದು ತಪ್ಪು ನಿಮ್ಮ ಮುಂದಿನ ಎಲ್ಲಾ ಯೋಜನೆಗಳನ್ನು ಹಾಳುಮಾಡುತ್ತದೆ. ಕಚೇರಿಯಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ, ಫಲಿತಾಂಶವು ಸರಿಯಾಗಿರುವುದಿಲ್ಲ. ಈ ಸುದ್ದಿ ನಿಮ್ಮ ಹಿರಿಯರನ್ನು ತಲುಪುವ ಸಾಧ್ಯತೆಯಿದೆ. ಆದ್ದರಿಂದ ಕಷ್ಟಪಟ್ಟು ಮತ್ತು ದಕ್ಷತೆಯಿಂದ ಕೆಲಸ ಮಾಡುವುದು ಉತ್ತಮ. ಆದರೆ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಇಂದು ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ಮತ್ತೊಮ್ಮೆ ಪ್ರೀತಿ ಮತ್ತು ಶಾಂತಿ ಇರುತ್ತದೆ. ಇಂದು ಮಕ್ಕಳು ನಿಮ್ಮಿಂದ ಹೆಚ್ಚಿನ ಸಮಯವನ್ನು ಕೋರಬಹುದು, ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು.

ಅದೃಷ್ಟ ಬಣ್ಣ: ಬಿಳಿ

ಅದೃಷ್ಟ ಸಂಖ್ಯೆ: 19

ಅದೃಷ್ಟ ಸಮಯ: ಬೆಳಿಗ್ಗೆ 10:45 ರಿಂದ 12:25 ರವರೆಗೆ

ಶ್ರೀ ಸದ್ಗುರು ಸಾಯಿ ಜ್ಯೋತಿಷ್ಯ ಪೀಠಂ

ಪ್ರಧಾನ ಜ್ಯೋತಿಷ್ಯ ರತ್ನ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ಆರೋಗ್ಯ ಬಾದೆ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಸತಿ ಪತಿ ಕಲಹ, ಡೈವರ್ಸ್ ಪ್ರಾಬ್ಲಮ್, ಅತ್ತೆ-ಸೊಸೆ ಕಲಹ, ಆಸ್ತಿ ವಿಚಾರ, ಭೂತ ಭಯ, ಪ್ರೇತ ಭಯ, ವಿದೇಶ ಪ್ರಯಾಣ, ರಾಜಕೀಯ ಪ್ರವೇಶ, ಸಿನಿಮಾ ಪ್ರವೇಶ, ಎಷ್ಟೇ ಸಂಪತ್ತಿದ್ದರೂ ಮನಸ್ಸಿಗೆ ಅಶಾಂತಿ, ಫ್ಯಾಕ್ಟರಿ ಬಿಜಿನೆಸ್ನಲ್ಲಿ ತೊಂದರೆ ಇನ್ನು ಯಾವುದೇ ಕಠಿಣ ಸಮಸ್ಯೆ ಇದ್ದರು ಸಹ 7 ದಿನಗಳಲ್ಲಿ ಪರಿಹಾರ ಶತಸಿದ್ಧ.

ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಗುರೂಜಿಯವರನ್ನು ಸಮಾಲೋಚನೆಗೆ ಇಂದೇ ಭೇಟಿ ಕೊಡಿ.

Om Sai ram #:37 /17 27th Cross,12th main syndicate Bank near vasudevan adigas hotel 4th block East jayangar Bangalore 560011 phone no 99866 23344

WWW.SADGURU SAI.IN

English summary

Dina Bhavishya 10 July 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Thursday, July 9, 2020, 19:13 [IST]
X
Desktop Bottom Promotion