Just In
- 3 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 1 hr ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 3 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಮವಾರದ ದಿನ ಭವಿಷ್ಯ: 13 ಜುಲೈ 2020
ಜೀವನ ಎನ್ನುವುದು ಒಂದು ರಸ್ತೆ ಇದ್ದಂತೆ. ನಿರಾಸೆ ಎನ್ನುವುದು ರಸ್ತೆಯ ಉಬ್ಬು ತಗ್ಗುಗಳು. ನಾವು ಸಾಗುವ ದಾರಿಯಲ್ಲಿ ಉಬ್ಬು ತಗ್ಗುಗಳು ಬಂತೆಂದು ಮಾನಸಿಕವಾಗಿ ಕಿರಿಕಿರಿಗೆ ಒಳಗಾಗಿ ನಮ್ಮ ಸಂಚಾರವನ್ನು ನಿಲ್ಲಿಸಬಾರದು. ಎಂತಹದ್ದೇ ಉಬ್ಬು ತಗ್ಗುಗಳು ಎದುರಾದರೂ ನಿಧಾನವಾಗಿ ಅಥವಾ ಕಾಳಜಿಯಿಂದ ಅದನ್ನು ದಾಟಿ ಮುಂದೆ ಸಾಗಬೇಕು. ಆಗ ನಮ್ಮ ಸಂಚಾರ ಸುಗಮವಾಗುತ್ತದೆ. ನಮ್ಮ ಜೀವನದ್ದಲ್ಲೂ ಹಾಗೆಯೇ. ಯಾವುದಾದರೂ ಕಷ್ಟ, ಅಡೆತಡೆ ಅಥವಾ ಮೂರ್ಖರ ಚುಚ್ಚು ಮಾತುಗಳಿಗೆ ಕಿವಿಕೊಡುವುದು ಅಥವಾ ಅತಿಯಾದ ಚಿಂತೆಗೆ ಒಳಗಾಗಿ ಬೇಸರಗೊಳ್ಳುವ ಗೋಜಿಗೆ ಹೋಗಬಾರದು. ಸತ್ಯದ ದಾರಿಯಲ್ಲಿ, ಸಮತೋಲನದ ಮನಃಸ್ಥಿತಿಯಲ್ಲಿ ಮುಂದೆ ಸಾಗಬೇಕು. ಆಗ ನಮ್ಮ ಜೀವನ ಸುಖ ಹಾಗೂ ಸಂತೋಷದಿಂದ ಕೂಡಿರುತ್ತದೆ. ಅಲ್ಲದೆ ಇತರ ವ್ಯಕ್ತಿಗಳಿಗೂ ನಾವು ಮಾದರಿಯಾಗುತ್ತೇವೆ. ಬದುಕಿನಲ್ಲಿ ಸುಂದರ ಕನಸು ಹಾಗೂ ಆತ್ಮವಿಶ್ವಾಸವನ್ನು ತುಂಬಿಕೊಂಡು ಕೆಲಸವನ್ನು ಆರಂಭಿಸಿ. ನಿಮ್ಮ ಈ ಸುಂದರ ಬದುಕಿಗೆ ಗ್ರಹಗತಿಗಳ ಸಹಕಾರ ಎಷ್ಟರ ಮಟ್ಟಿಗೆ ಇದೆ ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....
ಶ್ರೀ
ಸದ್ಗುರು
ಸಾಯಿ
ಜ್ಯೋತಿಷ್ಯ
ಪೀಠಂ
ಪ್ರಧಾನ
ಜ್ಯೋತಿಷ್ಯ
ರತ್ನ
ಶ್ರೀ
ಶ್ರೀನಿವಾಸ್
ಗುರೂಜಿ.
Om
Sai
ram
#:37
/17
27th
Cross,12th
main
syndicate
Bank
near
vasudevan
adigas
hotel
4th
block
East
jayangar
Bangalore
560011
phone
no
99866
23344
ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಹೇಮಂತ
ಮಾಸ: ಆಷಾಢ
ಪಕ್ಷ: ಕೃಷ್ಣ
ತಿಥಿ: ಅಷ್ಠಮಿ
ನಕ್ಷತ್ರ: ರೇವತಿ
ರಾಹುಕಾಲ: ಬೆಳಿಗ್ಗೆ 7.16 ರಿಂದ 9.00 ರವರೆಗೆ
ಗುಳಿಕಕಾಲ: ಮಧ್ಯಾಹ್ನ 2.10 ರಿಂದ 3.54 ರವರೆಗೆ
ಯಮಗಂಡಕಾಲ: ಬೆಳಿಗ್ಗೆ 10.43 ರಿಂದ ಮಧ್ಯಾಹ್ನ 12.27 ರವರೆಗೆ
ದುರ್ಮುಹೂರ್ತ: ಮಧ್ಯಾಹ್ನ 12.54 ರಿಂದ 1.50 ರವರೆಗೆ
ಸೂರ್ಯೋದಯ: ಬೆಳಿಗ್ಗೆ 5.32
ಸೂರ್ಯಾಸ್ತ: ಸಂಜೆ 7.21
ಮೇಷ ರಾಶಿ
ನಿಮ್ಮ ತಾಳ್ಮೆ ಮತ್ತು ಧೈರ್ಯ ಇಂದು ಹೆಚ್ಚಾಗುತ್ತದೆ ಮತ್ತು ನಿಮ್ಮ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಕೊರತೆಯಿಂದಾಗಿ ನೀವು ಸಮಸ್ಯೆಗಳನ್ನು ಎದುರಿಸಬಹುದು. ಈ ಸಮಯದಲ್ಲಿ ಅವರಿಗೆ ಉತ್ತಮ ಕಾಳಜಿ ಅಗತ್ಯವಿದೆ. ಕಚೇರಿಯಲ್ಲಿ ಪ್ರಮುಖ ಕಾರ್ಯಗಳನ್ನು ನಾಳೆಯವರೆಗೆ ಮುಂದೂಡಿದರೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪಗೊಳ್ಳಬಹುದು. ಇಂದಿನಿಂದ ಅವುಗಳನ್ನು ಪೂರ್ಣಗೊಳಿಸುವುದು ಉತ್ತಮ. ಕೌಟುಂಬಿಕ ಜೀವನವು ಸಂತೋಷದಿಂದ ತುಂಬಿರುತ್ತದೆ ಮತ್ತು ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಇತರರಿಗೆ ಖರ್ಚು ಮಾಡುವ ನಿಮ್ಮ ಅಭ್ಯಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಸಂಬಂಧಿಕರು ಮತ್ತು ಸ್ನೇಹಿತರ ನಡುವೆ ಕೆಲವು ವ್ಯತ್ಯಾಸಗಳು ಉದ್ಭವಿಸಬಹುದು. ಪ್ರೀತಿಯ ದಂಪತಿಗಳಿಗೆ ದಿನವು ತುಂಬಾ ರೋಮ್ಯಾಂಟಿಕ್ ಆಗಿರುತ್ತದೆ.
ಅದೃಷ್ಟ ಬಣ್ಣ: ಕಂದು
ಅದೃಷ್ಟ ಸಂಖ್ಯೆ: 19
ಅದೃಷ್ಟ ಸಮಯ: ಬೆಳಿಗ್ಗೆ 9:20 ರಿಂದ ರಾತ್ರಿ 10:20
ವೃಷಭ ರಾಶಿ
ಇಂದು ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಸೃಜನಶೀಲತೆಯನ್ನು ನೋಡಿ ಹಿರಿಯರು ಸಂತೋಷವಾಗಿರುತ್ತಾರೆ ಅದು ನಿಮಗೆ ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತದೆ. ಇಂದು ಮೋಜಿ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು, ಇದು ನಿಮಗೆ ಸಾಕಷ್ಟು ಖರ್ಚನ್ನು ತರುತ್ತದೆ ನಿಮ್ಮ ಬಜೆಟ್ ಬಗ್ಗೆಯೂ ಗಮನವಿರಲಿ. ಹೆತ್ತವರ ಪ್ರೀತಿ ಮತ್ತು ಬೆಂಬಲದೊಂದಿಗೆ ಉತ್ಸಾಹ ಹೆಚ್ಚಾಗುತ್ತದೆ. ಇಂದು ಹೂಡಿಕೆ ಮಾಡಿದರೆ ವ್ಯಾಪಾರಿಗಳಿಗೆ ಪ್ರಯೋಜನಕಾರಿಯಾಗಲಿದೆ. ನೀವು ಹೊಸ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಪ್ರಾರಂಭಿಸಲು ಇಂದು ಶುಭ ದಿನ. ಆದರೆ ಈ ವಿಷಯದಲ್ಲಿ ಮೊದಲು ಹಿರಿಯರನ್ನು ಸಂಪರ್ಕಿಸಿದರೆ ಉತ್ತಮ. ಇಂದು ನಿಮ್ಮ ಮೊಂಡುತನದ ಸ್ವಭಾವವು ಸ್ವಲ್ಪ ತೊಂದರೆ ಉಂಟುಮಾಡಬಹುದು. ಇದನ್ನು ನೆನಪಿನಲ್ಲಿಡಿ ಮತ್ತು ಅದನ್ನು ಮಾಡುವುದನ್ನು ತಪ್ಪಿಸಿ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 11
ಅದೃಷ್ಟ ಸಮಯ: ಬೆಳಿಗ್ಗೆ 6:00 ರಿಂದ 11:25 ರವರೆಗೆ
ಮಿಥುನ ರಾಶಿ
ಮನೆಯಲ್ಲಿ ಶಾಂತಿಯ ವಾತಾವರಣವಿರುತ್ತದೆ ಮತ್ತು ನಿಮ್ಮ ಪ್ರೀತಿಪಾತ್ರರೊಡನೆ ಮೋಜಿನ ದಿನವನ್ನು ಕಳೆಯುತ್ತೀರಿ. ಇಂದು ನೀವು ಅವರೊಂದಿಗೆ ತಿರುಗಾಡಲು ಸಹ ಅವಕಾಶವನ್ನು ಪಡೆಯಬಹುದು. ನಿಮ್ಮ ಪೋಷಕರಿಂದ ವಿಶೇಷ ಉಡುಗೊರೆಯನ್ನು ಪಡೆಯುವ ಸಾಧ್ಯತೆಯಿದೆ, ಅದು ನಿಮ್ಮ ಸಂತೋಷವನ್ನು ಇನ್ನಷ್ಟು ಹೆಚ್ಚಿಸುತ್ತದೆ. ವೈವಾಹಿಕ ಜೀವನವನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳು ಇಂದು ಯಶಸ್ವಿಯಾಗಲಿವೆ. ನಿಮ್ಮ ಸಂಗಾತಿಯು ಅವರ ಕಠಿಣ ಮನೋಭಾವವನ್ನು ಬಿಟ್ಟು ನಿಮ್ಮನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಇಂದು ನೀವು ಹೊಸ ಆದಾಯದ ಮೂಲಗಳನ್ನು ಪಡೆಯುತ್ತೀರಿ ಮತ್ತು ಆರ್ಥಿಕ ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ಹಿರಿಯರೊಂದಿಗೆ ಮಾತನಾಡುವಾಗ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ವಿಶೇಷ ಕಾಳಜಿವಹಿಸಿ. ಆರೋಗ್ಯದ ದೃಷ್ಟಿಯಿಂದ ಸಮಯ ಅನುಕೂಲಕರವಾಗಿದೆ. ಇಂದು ನೀವು ನಿಮ್ಮ ನೆಚ್ಚಿನ ಆಹಾರವನ್ನು ಆನಂದಿಸುವಿರಿ.
ಅದೃಷ್ಟ ಬಣ್ಣ: ತಿಳಿ ಗುಲಾಬಿ
ಅದೃಷ್ಟ ಸಂಖ್ಯೆ: 5
ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:30 ರವರೆಗೆ
ಕರ್ಕ ರಾಶಿ
ಇಂದು ನಿಮ್ಮ ಎಲ್ಲಾ ಗೊಂದಲಗಳನ್ನು ಪರಿಹರಿಸಲಾಗುವುದು ಮತ್ತು ನಿಮಗೆ ಒಂದು ನಿಟ್ಟುಸಿರು ಸಿಗುತ್ತದೆ. ಈಗಿರುವ ಆರ್ಥಿಕ ಸಮಸ್ಯೆಗಳನ್ನೂ ಪರಿಹರಿಸಲಾಗುವುದು. ನಿಮ್ಮ ಹವ್ಯಾಸಗಳನ್ನು ಪೂರೈಸಲು ದಿನವು ಒಳ್ಳೆಯದು. ಸ್ವಲ್ಪ ಸಮಯದಿಂದ ನಿಮ್ಮ ಬಗ್ಗೆ ಗಮನ ಹರಿಸಲು ನಿಮಗೆ ಸಾಧ್ಯವಾಗಿರಲಿಲ್ಲ, ಆದರೆ ಇಂದು ನೀವು ನಿಮಗಾಗಿ ಸಮಯವನ್ನು ಕಂಡುಕೊಳ್ಳುತ್ತೀರಿ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಯಾವುದೇ ಕೆಲಸವು ಕೆಲವು ಕಾರಣಗಳಿಗಾಗಿ ಸಿಲುಕಿಕೊಂಡಿದ್ದರೆ, ಅದು ನಿಮ್ಮ ಮೇಲಧಿಕಾರಿಗಳ ಸಹಾಯದಿಂದ ಇಂದು ಪೂರ್ಣಗೊಳ್ಳುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದ ಪ್ರಯಾಣಗಳು ಬಹಳ ಲಾಭದಾಯಕವಾಗುತ್ತವೆ. ಪ್ರೀತಿಯ ಬಗ್ಗೆ ಮಾತನಾಡುತ್ತಾ, ನೀವು ಒಬ್ಬಂಟಿಯಾಗಿದ್ದರೆ ಪ್ರೀತಿಯ ಪ್ರಸ್ತಾಪವನ್ನು ಪಡೆಯಲಿದ್ದೀರಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ದೃಢವಾಗಿ ಉಳಿಯುತ್ತದೆ. ಪೋಷಕರು ಸಹ ಇಂದು ಬೆಂಬಲ ನೀಡುತ್ತಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ.
ಅದೃಷ್ಟ ಬಣ್ಣ: ಕೇಸರಿ
ಅದೃಷ್ಟ ಸಂಖ್ಯೆ: 43
ಅದೃಷ್ಟ ಸಮಯ: ಬೆಳಿಗ್ಗೆ 7:00 ರಿಂದ ರಾತ್ರಿ 10:00 ರವರೆಗೆ
ಸಿಂಹ ರಾಶಿ
ನಿಮ್ಮ ಕೆಲವು ಹಳೆಯ ಕಾನೂನು ವಿಷಯಗಳು ಇಂದು ಪರಿಹರಿಸಲ್ಪಡುವ ಬಲವಾದ ಸಾಧ್ಯತೆಯಿದೆ, ಅದು ನಿಮಗೆ ದೊಡ್ಡ ಲಾಭವನ್ನು ನೀಡುತ್ತದೆ. ಇಂದು ನೀವು ಯೋಜಿಸಿದಂತೆ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿದರೆ ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಸ್ವಲ್ಪ ಸಮಯದವರೆಗೆ ನಿಮ್ಮ ಮುಖ್ಯಸ್ಥ ಅಥವಾ ಇತರ ಉನ್ನತ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಅತೃಪ್ತರಾಗಿದ್ದರು, ಆದರೆ ನಿಮ್ಮ ನಿರಂತರ ಪ್ರಯತ್ನಗಳು ಮತ್ತು ಸುಧಾರಣೆಯಿಂದಾಗಿ ಅವರ ಆಲೋಚನೆ ನಿಮ್ಮ ಕಡೆಗೆ ಬದಲಾಗುತ್ತದೆ. ವ್ಯಾಪಾರಸ್ಥರು ಉತ್ತಮ ಪ್ರಯೋಜನಗಳನ್ನು ಪಡೆಯುವ ನಿರೀಕ್ಷೆಯಿದೆ. ಆರ್ಥಿಕ ರಂಗದಲ್ಲಿ ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ಮಕ್ಕಳಿಗಾಗಿ ಶಾಪಿಂಗ್ ಮಾಡಬಹುದು ಮತ್ತು ಅವರ ಸಂತೋಷವನ್ನು ನೋಡುವ ಮೂಲಕ ನೀವು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ಸುದೀರ್ಘ ವಿವಾದದ ನಂತರ ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ.
ಅದೃಷ್ಟ ಬಣ್ಣ: ಹಸಿರು
ಅದೃಷ್ಟ ಸಂಖ್ಯೆ: 9
ಅದೃಷ್ಟ ಸಮಯ: ಬೆಳಿಗ್ಗೆ 8:00 ರಿಂದ ಮಧ್ಯಾಹ್ನ 2:30 ರವರೆಗೆ
ಕನ್ಯಾ ರಾಶಿ
ಪೋಷಕರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗುವ ಕಾರಣ ಮನೆಯ ವಾತಾವರಣ ಇಂದು ಉತ್ತಮವಾಗಿರುವುದಿಲ್ಲ. ನಿಮ್ಮ ಮಾತುಗಳಿಗೆ ನೀವು ಗಮನ ಕೊಡುವುದು ಉತ್ತಮ. ಇಂದು ನೀವು ಕೆಲವು ಸವಾಲುಗಳನ್ನು ಎದುರಿಸಬಹುದು ಆದರೆ ನಿಮ್ಮ ಸಂಗಾತಿಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರ್ಥಿಕ ರಂಗದಲ್ಲಿ ದಿನವು ಅನುಕೂಲಕರವಾಗಿಲ್ಲ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ ಆದರೆ ವೆಚ್ಚಗಳು ನಿಯಂತ್ರಣದಲ್ಲಿರುವುದಿಲ್ಲ. ನಿಮ್ಮ ಗಳಿಕೆ ಮತ್ತು ಖರ್ಚುಗಳನ್ನು ಸಮತೋಲನಗೊಳಿಸುವುದು ಉತ್ತಮ. ಕೆಲಸದ ಸ್ಥಳದಲ್ಲಿ ನಿಮ್ಮ ಮುಖ್ಯಸ್ಥರ ವರ್ತನೆ ಸರಿಯಾಗಿರುವುದಿಲ್ಲ. ನೀವು ಇತರರಿಗಿಂತ ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನ ಹರಿಸಬೇಕು ಮತ್ತು ಅನಗತ್ಯ ವಿಷಯಗಳಿಗೆ ಸಮಯ ವ್ಯರ್ಥ ಮಾಡಬೇಡಿ. ದಂಪತಿಗಳಿಗೆ ದಿನವು ರೋಮ್ಯಾಂಟಿಕ್ ಆಗಿರುತ್ತದೆ. ನಿಮ್ಮ ಆಯ್ಕೆಯ ಸ್ಥಳದಲ್ಲಿ ನಿಮ್ಮ ಸಂಗಾತಿಯೊಂದಿಗೆ ಹೊರಗೆ ಹೋಗಲು ಇಂದು ಅವಕಾಶ ಸಿಗಬಹುದು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 18
ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 6:30 ರವರೆಗೆ
ತುಲಾ ರಾಶಿ
ಇಂದು ನೀವು ನಿಮ್ಮ ಮಕ್ಕಳ ಬಗ್ಗೆ ಹೆಚ್ಚು ಚಿಂತೆ ಮಾಡುತ್ತೀರಿ. ಅವರ ಅಸಡ್ಡೆ ವರ್ತನೆ ಮತ್ತು ಮೊಂಡುತನದ ಸ್ವಭಾವವು ನಿಮಗೆ ತೊಮದರೆಯನ್ನು ನೀಡುತ್ತದೆ. ಸಾಧ್ಯವಾದರೆ ಅವರೊಂದಿಗೆ ಸ್ವಲ್ಪ ಸಮಯ ಕಳೆಯಲು ಪ್ರಯತ್ನಿಸಿ. ವ್ಯಾಪಾರ ಪಾಲುದಾರರೊಂದಿಗೆ ನೀವು ಇಂದು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು, ಅದು ಭವಿಷ್ಯದಲ್ಲಿ ನಿಮ್ಮ ಉತ್ತಮ ಪ್ರಯೋಜನಗಳನ್ನು ತರುತ್ತದೆ. ಉದ್ಯೋಗಿಗಳು ತಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸೂಚಿಸಲಾಗುತ್ತದೆ, ಇಲ್ಲವಾದಲ್ಲಿ ಸಮಸ್ಯೆಗಳು ಉಂಟಾಗಬಹುದು. ಇಂದು ಹಣವನ್ನು ಖರ್ಚು ಮಾಡುವಾಗ ಕಾಳಜಿ ವಹಿಸಿ ಇಲ್ಲದಿದ್ದರೆ ಅದು ನಿಮ್ಮ ಹಣಕಾಸಿನ ಸ್ಥಿತಿಯನ್ನು ದುರ್ಬಲಗೊಳಿಸಬಹುದು ಮತ್ತು ನಿಮ್ಮ ಯೋಜನೆಗಳಿಗೆ ಅಡ್ಡಿಯಾಗಬಹುದು. ಸಂಜೆ ನೀವು ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಲು ಅವಕಾಶ ಪಡೆಯಬಹುದು.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 22
ಅದೃಷ್ಟ ಸಮಯ: ಸಂಜೆ 7:00 ರಿಂದ 11:00 ರವರೆಗೆ
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಇಂದು ನಿಮ್ಮ ಸಂಗಾತಿಯು ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತಾರೆ ಮತ್ತು ನೀವಿಬ್ಬರೂ ಪರಸ್ಪರ ಹೊಂದಾಣಿಕೆಯಿಂದ ಇರುತ್ತೀರಿ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಜಾಗರೂಕರಾಗಿರಿ ಮತ್ತು ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬೇಡಿ, ಅವರು ನಿಮ್ಮ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳಬಹುದು ಅಥವಾ ಅದನ್ನು ನಿಮ್ಮ ವಿರುದ್ಧವೇ ಬಳಸಿಕೊಳ್ಳಬಹುದು. ಉದ್ಯಮಿಗಳಿಗೆ ದಿನ ಸ್ವಲ್ಪ ಕಷ್ಟವಾಗುತ್ತದೆ. ನಿಮ್ಮ ವ್ಯವಹಾರದ ಕಾರ್ಯವೈಖರಿಗೆ ಸಂಬಂಧಿಸಿದ ತೊಂದರೆಗಳು ಉದ್ಭವಿಸಬಹುದು. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ, ವಿಶೇಷವಾಗಿ ನೀವು ಪ್ರಯಾಣಿಸುತ್ತಿದ್ದರೆ. ಆರ್ಥಿಕ ಪರಿಸ್ಥಿತಿ ಇಂದು ನಿಮ್ಮ ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 23
ಅದೃಷ್ಟ ಸಮಯ: ಮಧ್ಯಾಹ್ನ 1:00 ರಿಂದ 9:00 ರವರೆಗೆ
ಧನು ರಾಶಿ
ನಿಮ್ಮ ಹಿಂದಿನ ಕೆಲವು ಸಮಸ್ಯೆಗಳು ಇಂದು ಪರಿಹಾರವಾಗಬಹುದು. ಬಹಳ ಸಮಯದ ನಂತರ ಮನೆಯಲ್ಲಿ ವಾತಾವರಣವು ಶಾಂತಿಯುತವಾಗಿರುತ್ತದೆ ಮತ್ತು ನಿಮ್ಮ ಪ್ರೀತಿಪಾತ್ರರ ಜೊತೆ ಸ್ವಲ್ಪ ಸಮಯವನ್ನು ಕಳೆಯುತ್ತೀರಿ. ಮಗುವಿನ ಕಡೆಯಿಂದ ಸಂತೋಷ ಸಿಗುತ್ತದೆ. ಕೆಲಸದ ವಿಷಯದಲ್ಲಿ ಉದ್ಯಮಿಗಳು ತಮ್ಮ ಕಠಿಣ ಪರಿಶ್ರಮದಿಂದ ಕೆಲವು ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ಸಮಯವು ಉದ್ಯೋಗಿಗಳಿಗೆ ಅನುಕೂಲಕರವಾಗಿದೆ ಮತ್ತು ಅವರ ಪ್ರಗತಿಗೆ ಅವಕಾಶಗಳಿವೆ. ವೈವಾಹಿಕ ಜೀವನವು ಆನಂದಮಯವಾಗಿರುತ್ತದೆ. ನೀವಿಬ್ಬರೂ ನಿಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳುವಿರಿ ಮತ್ತು ಪರಸ್ಪರ ಬೆಂಬಲಿಸುವಿರಿ. ಇತರ ಎಲ್ಲ ಕಾರ್ಯಗಳು ಇಂದು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ.
ಅದೃಷ್ಟ ಬಣ್ಣ: ಹಸಿರು
ಅದೃಷ್ಟ ಸಂಖ್ಯೆ: 29
ಅದೃಷ್ಟ ಸಮಯ: ಮಧ್ಯಾಹ್ನ 12:00 ರಿಂದ 2:25 ರವರೆಗೆ
ಮಕರ ರಾಶಿ: 22 ಡಿಸೆಂಬರ್ - 19 ಜನವರಿ
ನಿಮ್ಮ ಹಣಕಾಸಿನ ಪರಿಸ್ಥಿತಿಗಳಲ್ಲಿ ಸುಧಾರಣೆಯ ಸಾಧ್ಯತೆಗಳಿವೆ. ಸ್ನೇಹಿತರ ಸಹಾಯದಿಂದ ಹೊಸ ಆದಾಯದ ಮೂಲವನ್ನು ಪಡೆಯಬಹುದು. ಇದು ಮಾತ್ರವಲ್ಲ ನೀವು ಇತ್ತೀಚೆಗೆ ಪ್ರಾರಂಭಿಸಿರುವ ನಿಮ್ಮ ಹೊಸ ಕೆಲಸದಿಂದ ಕೆಲವು ಹೆಚ್ಚುವರಿ ಆರ್ಥಿಕ ಲಾಭಗಳನ್ನು ಸಹ ಪಡೆಯಬಹುದು. ವ್ಯವಹಾರದಲ್ಲಿ ಸಣ್ಣ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ನಿಮ್ಮ ತಂದೆಯಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು. ಕಳೆದ ಕೆಲವು ದಿನಗಳಿಂದ ನಿಮ್ಮ ಯಾವುದೇ ಕೆಲಸವು ಆಗದೇ ಇದ್ದರೆ ಇಂದು ಪೂರ್ಣಗೊಳ್ಳಬಹುದು. ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಗಳ ನಿರೀಕ್ಷೆಗಳನ್ನು ಪೂರೈಸುತ್ತೀರಿ. ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ದಿನವಿಡೀ ತಾಜಾ ಆಗಿರುತ್ತೀರಿ.
ಅದೃಷ್ಟ ಬಣ್ಣ: ಕ್ರೀಮ್
ಅದೃಷ್ಟ ಸಂಖ್ಯೆ: 11
ಅದೃಷ್ಟ ಸಮಯ: ಸಂಜೆ 5:00 ರಿಂದ 9:00 ರವರೆಗೆ
ಕುಂಭ ರಾಶಿ
ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಇಂದು ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮಿಬ್ಬರ ನಡುವೆ ನಡೆಯುತ್ತಿರುವ ವ್ಯತ್ಯಾಸಗಳು ಗಾಢವಾಗಬಹುದು ಮತ್ತು ಅದು ಮನೆಯಲ್ಲಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಇಂತಹ ಸಮಸ್ಯೆಗಳು ನಿಮ್ಮ ಮನಸ್ಸಿನಲ್ಲಿ ಪ್ರಾಬಲ್ಯ ಸಾಧಿಸುತ್ತವೆ ಮತ್ತು ಇಂದು ನೀವು ಕಚೇರಿಯಲ್ಲಿ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ, ಅದನ್ನು ಸಾಧ್ಯವಾದಷ್ಟು ತಪ್ಪಿಸಲು ಪ್ರಯತ್ನಿಸಿ. ನೀವು ಸಹಭಾಗಿತ್ವದಲ್ಲಿ ವ್ಯಾಪಾರ ಮಾಡಿದರೆ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳು ಸಂಭವಿಸಬಹುದು. ನಿಮಗೆ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗದಿದ್ದರೆ, ಮೂರನೇ ಅನುಭವಿ ವ್ಯಕ್ತಿಯ ಸಲಹೆಯನ್ನು ತೆಗೆದುಕೊಳ್ಳುವ ಮೂಲಕ ಸಮಸ್ಯೆಯನ್ನು ಪರಿಹರಿಸುವುದು ಉತ್ತಮ. ಪ್ರಣಯ ಜೀವನದಲ್ಲಿ ನಿಮ್ಮ ಸಂಬಂಧವು ಮೊದಲಿಗಿಂತಲೂ ಬಲವಾಗಿರುತ್ತದೆ. ಹಣದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ. ಆದರೆ, ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ.
ಅದೃಷ್ಟ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 26
ಅದೃಷ್ಟ ಸಮಯ: ಬೆಳಿಗ್ಗೆ 8:00 ರಿಂದ 12: 20 ರವರೆಗೆ
ಮೀನ ರಾಶಿ
ಕೆಲಸದ ವಿಷಯಗಳಲ್ಲಿ ನೀವು ಇಂದು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಬುದ್ಧಿವಂತಿಕೆಯಿಂದ ವರ್ತಿಸಿದರೆ ಮುಂದುವರಿಯಲು ನಿಮಗೆ ಸುವರ್ಣಾವಕಾಶ ಸಿಗಬಹುದು. ಸ್ವಲ್ಪ ಸಮಯದಿಂದ ಕೆಲಸದಲ್ಲಿ ಸಾಕಷ್ಟು ಕಾರ್ಯನಿರತರಾಗಿದ್ದೀರಿ, ನಿಮಗಾಗಿ ಸಾಕಷ್ಟು ಸಮಯವನ್ನು ಇರಲಿಲ್ಲ. ಇಂದು ನೀವು ನಿಮಗಾಗಿ ಸಮಯವನ್ನು ಮೀಸಲಿಡಬಹುದು ಮತ್ತು ನಿಮಗೆ ಸಂತೋಷವನ್ನು ನೀಡುವಂತಹದನ್ನು ಮಾಡುತ್ತೀರಿ. ನೀವು ವಿದ್ಯಾರ್ಥಿಯಾಗಿದ್ದರೆ ಉತ್ತಮ ಫಲಿತಾಂಶಗಳು ಬರಲಿವೆ. ಗುರುಗಳ ಸಂಪೂರ್ಣ ಬೆಂಬಲ ಮತ್ತು ಆಶೀರ್ವಾದ ಇರುತ್ತದೆ. ಆರ್ಥಿಕ ವಿಷಯದಲ್ಲಿ ದಿನವು ಅನುಕೂಲಕರವಾಗಿಲ್ಲ. ಯೋಚಿಸದೆ ಖರ್ಚು ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ಕೆಲವು ಆರ್ಥಿಕ ತೊಂದರೆಗೆ ಸಿಲುಕಬಹುದು. ನೀವು ಇಂದು ಕಡಿಮೆ ಶಕ್ತಿಯುಳ್ಳವರಾಗಿರುತ್ತೀರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 12
ಅದೃಷ್ಟ ಸಮಯ: ಸಂಜೆ 4:00 ರಿಂದ 8:05 ರವರೆಗೆ
ಶ್ರೀ ಸದ್ಗುರು ಸಾಯಿ ಜ್ಯೋತಿಷ್ಯ ಪೀಠಂ
ಪ್ರಧಾನ ಜ್ಯೋತಿಷ್ಯ ರತ್ನ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ಆರೋಗ್ಯ ಬಾದೆ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಸತಿ ಪತಿ ಕಲಹ, ಡೈವರ್ಸ್ ಪ್ರಾಬ್ಲಮ್, ಅತ್ತೆ-ಸೊಸೆ ಕಲಹ, ಆಸ್ತಿ ವಿಚಾರ, ಭೂತ ಭಯ, ಪ್ರೇತ ಭಯ, ವಿದೇಶ ಪ್ರಯಾಣ, ರಾಜಕೀಯ ಪ್ರವೇಶ, ಸಿನಿಮಾ ಪ್ರವೇಶ, ಎಷ್ಟೇ ಸಂಪತ್ತಿದ್ದರೂ ಮನಸ್ಸಿಗೆ ಅಶಾಂತಿ, ಫ್ಯಾಕ್ಟರಿ ಬಿಜಿನೆಸ್ನಲ್ಲಿ ತೊಂದರೆ ಇನ್ನು ಯಾವುದೇ ಕಠಿಣ ಸಮಸ್ಯೆ ಇದ್ದರು ಸಹ 7 ದಿನಗಳಲ್ಲಿ ಪರಿಹಾರ ಶತಸಿದ್ಧ.
ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಗುರೂಜಿಯವರನ್ನು ಸಮಾಲೋಚನೆಗೆ ಇಂದೇ ಭೇಟಿ ಕೊಡಿ.
Om Sai ram #:37 /17 27th Cross,12th main syndicate Bank near vasudevan adigas hotel 4th block East jayangar Bangalore 560011 phone no 99866 23344