Just In
- 29 min ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 1 hr ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 1 hr ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 1 hr ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ಭಾನುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ಕಷ್ಟಕಾರ್ಪಣ್ಯದಿಂದ
ಮುಕ್ತಿ
ಹೊಂದಲು
ದಾರಿ
ದೀಪ:
ಸದ್ಗುರು
ಶ್ರೀ
ಸಾಯಿ
ಜ್ಯೋತಿಷ್ಯ
ಕೇಂದ್ರ
ತುಳುನಾಡಿನ
ಕರಾವಳಿಯ
ದೈವಶಕ್ತಿ
ಜ್ಯೋತಿಷ್ಯರು
ಸ್ತ್ರೀ-ಪುರುಷ
ಪ್ರೇಮವಿಚಾರ,
ಉದ್ಯೋಗ,
ಮದುವೆ
ವಿಳಂಬ,
ಸತಿ-ಪತಿ
ಕಲಹ,
ಅತ್ತೆ-ಸೊಸೆ
ಕಿರಿಕಿರಿ,
ವಶೀಕರಣ,
ಸಂತಾನಯೋಗ,
ಇತ್ಯಾದಿ
ಸಮಸ್ಯೆಗಳಿಗೆ,
ಅಷ್ಟಮಂಗಳ
ಪ್ರಶ್ನೆ,
ತಾಂಬೂಲ
ಪ್ರಶ್ನೆ,
ಜಾತಕ
ವಿಶ್ಲೇಷಣೆ
ಮಾಡಿ
ನಿಮ್ಮ
ಇಷ್ಟಾರ್ಥ
ಕಾರ್ಯಗಳಿಗೆ
5
ದಿನದಲ್ಲಿ
ಪರಿಹಾರ
ಶತಸಿದ್ದ.
ಮನೆಯ
ವಿಳಾಸ:
ನಂ.86,
ಸಂಪಿಗೆ
ರಸ್ತೆ,
ಮಲ್ಲೇಶ್ವರಂ
ಮೊ:
9945515555
ಸಂವತ್ಸರ:
ಶಾರ್ವರಿ
ಆಯನ:
ಉತ್ತರಾಯಣ
ಋತು:
ಶಿಶಿರ
ಮಾಸ:
ಪುಷ್ಯ
ನಕ್ಷತ್ರ:
ಇಡೀ
ರಾತ್ರಿ
ಪೂರ್ವ
ಭಾದ್ರಪದ
ಪಕ್ಷ:
ಶುಕ್ಲ
ಪಕ್ಷ
ರಾಹುಕಾಲ:
ಮಧ್ಯಾಹ್ನ
04:29ರಿಂದ
05:48ರವರೆಗೆ
ಗುಳಿಕಕಾಲ:
ಮಧ್ಯಾಹ್ನ
03:10ರಿಂದ
04:29ರವರೆಗೆ
ಯಮಗಂಡಕಾಲ:
ಮಧ್ಯಾಹ್ನ
12:31ರಿಂದ
01:51ರವರೆಗೆ
ದುರ್ಮುಹೂರ್ತ:
ಸಂಜೆ
04:24
ರಿಂದ
05:06ರವರೆಗೆ
ಸೂರ್ಯೋದಯ:
ಬೆಳಗ್ಗೆ
07:15ಕ್ಕೆ
ಸೂರ್ಯಾಸ್ತ:
ಸಂಜೆ
05:48ಕ್ಕೆ
ಮೇಷ ರಾಶಿ:
ಇಂದು ನೀವು ಕುಟುಂಬ ಜೀವನದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಕಳೆದ ಕೆಲವು ದಿನಗಳಿಂದ ನಿಮ್ಮ ಮನೆಯಲ್ಲಿ ವಿವಾದ ನಡೆಯುತ್ತಿದ್ದರೆ, ಇಂದು ನೀವು ಅದನ್ನು ಕೊನೆಗೊಳಿಸಲು ಪ್ರಯತ್ನ ಮಾಡುತ್ತೀರಿ. ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರನ್ನು ಪ್ರೀತಿಯಿಂದ ನೋಡಿಕೊಳ್ಳಿ ಮತ್ತು ನಿಮ್ಮ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಕೆಲಸದ ವಿಚಾರದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಶ್ಲಾಘನೀಯವಾಗಿರುತ್ತದೆ. ನಿಮ್ಮ ಅತ್ಯುತ್ತಮ ಕೆಲಸದಿಂದಾಗಿ ಹಿರಿಯ ಅಧಿಕಾರಿಗಳು ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಾರೆ. ಇದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ವ್ಯಾಪಾರಿಗಳು ಸಹ ಪ್ರಯೋಜನ ಪಡೆಯಬಹುದು. ನೀವು ಮರ, ಎಲೆಕ್ಟ್ರಾನಿಕ್, ಲೇಖನ ಸಾಮಗ್ರಿಗಳು, ಆಹಾರ ಪದಾರ್ಥಗಳ ವ್ಯಾಪಾರಿಗಳಾಗಿದ್ದರೆ ನೀವು ಅಪಾರ ಲಾಭ ಗಳಿಸಬಹುದು. ಹಣದ ಪರಿಸ್ಥಿತಿ ಬಲವಾಗಿರುತ್ತದೆ. ನಿಮಗೆ ಮೈಗ್ರೇನ್ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 8
ಶುಭ ಸಮಯ: ಸಂಜೆ 8 ರಿಂದ 11 ರವರೆಗೆ
ವೃಷಭ ರಾಶಿ:
ಕೆಲಸದ ವಿಚಾರದಲ್ಲಿ ನೀವು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಅದು ಕೆಲಸ ಅಥವಾ ವ್ಯವಹಾರವಾಗಿರಲಿ, ನಿಮ್ಮ ಕೆಲಸದ ಮೇಲೆ ನೀವು ಹೆಚ್ಚು ಗಮನ ಹರಿಸುತ್ತೀರಿ. ಕೆಲಸದಲ್ಲಿ ನಿರತರಾಗಿರುವುದರಿಂದ, ಇಂದು ನೀವು ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶನಿಮಗಿಂದು ಸಿಗುವುದಿಲ್ಲ. ಆದಾಗ್ಯೂ, ಪ್ರೀತಿ ಮತ್ತು ಸೌಹಾರ್ದತೆಯು ಕುಟುಂಬದ ಸಂಬಂಧದಲ್ಲಿರುತ್ತದೆ. ಹಣದ ಹರಿವು ಚೆನ್ನಾಗಿರುತ್ತದೆ. ಇಂದು ಯಾವುದೇ ದೊಡ್ಡ ಖರ್ಚು ಇರುವುದಿಲ್ಲ. ಆದಾಗ್ಯೂ, ನೀವು ಉಳಿತಾಯದ ಮೇಲೆ ಹೆಚ್ಚು ಗಮನಹರಿಸಿದರೆ ಅದರಿಂದ ನಿಮಗೆ ಒಳಿತಾಗುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು, ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. ಈ ರೀತಿಯಾಗಿ, ಸಣ್ಣ ವಿಷಯಗಳು ನಿಮ್ಮ ಸಂಬಂಧವನ್ನು ದುರ್ಬಲಗೊಳಿಸುತ್ತಿವೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಇಂದು ಕೈ ಕಾಲುಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಕಂಡು ಬರಬಹುದು.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 18
ಶುಭ ಸಮಯ: ಮಧ್ಯಾಹ್ನ 3 ರಿಂದ 6:30 ರವರೆಗೆ
ಮಿಥುನ ರಾಶಿ:
ನೀವು ಹಣದ ಬಗ್ಗೆ ಹೆಚ್ಚು ಚಿಂತೆ ಮಾಡುತ್ತೀರಿ. ಇಂದು, ಹಳೆಯ ಸಾಲಗಳು ನಿಮ್ಮನ್ನು ಕಾಡಬಹುದು. ಈ ಸಮಯದಲ್ಲಿ ನೀವು ತಾಳ್ಮೆಯಿಂದಿರಬೇಕು. ಸಮಯ ಬಂದಾಗ ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ವೈಯಕ್ತಿಕ ಜೀವನದಲ್ಲಿ ಒತ್ತಡ ಉಂಟಾಗಬಹುದು. ಕೆಲಸದ ವಿಚಾರದಲ್ಲಿ ದಿನವು ಅದ್ಭುತವಾಗಿದೆ. ದುಡಿಯುವ ಜನರು ಕಷ್ಟಪಟ್ಟು ದುಡಿಯುತ್ತಾರೆ. ಕಠಿಣ ಪರಿಶ್ರಮವೇ ಯಶಸ್ಸಿನ ಕೀಲಿ ಕೈ ಎಂಬುದನ್ನು ಮರೆಯದಿರಿ. ತೈಲಕ್ಕೆ ಸಂಬಂಧಿಸಿದ ವ್ಯಾಪಾರ ಮಾಡುವ ಜನರು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಇಂದು ಕುಟುಂಬದೊಂದಿಗೆ ನಿಮಗೆ ಉತ್ತಮ ದಿನವಾಗಲಿದೆ. ಯಾವುದೇ ಪ್ರಮುಖ ಕೆಲಸ ಹಿರಿಯ ಸಹೋದರನ ಸಹಾಯದಿಂದ ಪೂರ್ಣಗೊಳ್ಳುತ್ತದೆ. ಆರೋಗ್ಯ ಉತ್ತಮವಾಗಿರುತ್ತವೆ.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 14
ಶುಭ ಸಮಯ: ಸಂಜೆ 5 ರಿಂದ 9 ರವರೆಗೆ
ಕರ್ಕಾಟಕ ರಾಶಿ:
ನಿಮ್ಮ ಮನಸ್ಥಿತಿ ಇಂದು ತುಂಬಾ ಚೆನ್ನಾಗಿರುತ್ತದೆ, ಹಾಗೂ ತುಂಬಾ ಸಂತೋಷದಿಂದ ಇರುತ್ತೀರಿ. ಇಂದು, ನಿಮ್ಮ ಸುತ್ತಲಿನ ಜನರು ನಿಮ್ಮ ಸಂತೋಷ ಮತ್ತು ಚೈತನ್ಯದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಕಚೇರಿಯಲ್ಲಿ ಹೆಚ್ಚಿನ ಕೆಲಸವಿದ್ದರೂ ಸಹ, ನಿಮ್ಮ ಕೆಲಸವನ್ನು ಎಲ್ಲಾ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಪೂರ್ಣಗೊಳಿಸುತ್ತೀರಿ. ನಿಮ್ಮ ಕಾರ್ಯಕ್ಷಮತೆಯಿಂದ ನಿಮ್ಮ ಬಾಸ್ ತೃಪ್ತರಾಗುತ್ತಾರೆ. ಇನ್ನು ವ್ಯಾಪಾರಸ್ಥರ ಕಾನೂನು ಕೆಲಸದಲ್ಲಿ ಸಂಬಂಧಿಸಿದ ಅಡಚಣೆಗಳಿರಬಹುದು, ಈ ಕಾರಣದಿಂದಾಗಿ ನಿಮ್ಮ ಕೆಲಸವು ಅರ್ಧದಲ್ಲಿಯೇ ಸಿಲುಕಿಕೊಳ್ಳಬಹುದು. ಹಣದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಶ್ರಮಿಸುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನೀವು ಇಂದು ತುಂಬಾ ಎನರ್ಜಿ ಹೊಂದಿರುತ್ತೀರಿ.
ಉತ್ತಮ ಬಣ್ಣ: ಕಡುಗೆಂಪು
ಶುಭ ಸಂಖ್ಯೆ: 23
ಶುಭ ಸಮಯ: ಮಧ್ಯಾಹ್ನ 1:30 ರಿಂದ 9:15 ರವರೆಗೆ
ಸಿಂಹ ರಾಶಿ:
ಕೆಲಸದ ವಿಷಯದಲ್ಲಿ ನೀವು ಉತ್ತಮ ಯಶಸ್ಸನ್ನು ಸಾಧಿಸಲು ಬಯಸಿದರೆ ನೀವು ಹೆಚ್ಚು ಶ್ರಮ ಪಡಬೇಕು. ನಿಮ್ಮ ಕೆಲಸವಾಗಿರಲಿ ಅಥವಾ ವ್ಯವಹಾರವಾಗಿರಲಿ, ನಿಮ್ಮ ಬೆಳವಣಿಗೆ ನಿಮ್ಮ ಕಠಿಣ ಪರಿಶ್ರಮ ಬೇಕು. ಇಂದು ಎಲ್ಲಾ ಚಿಂತೆಗಳನ್ನು ಮರೆತು ನಿಮಗಾಗಿ ಈ ದಿನ ಏನನ್ನಾದರೂ ಮಾಡುತ್ತೀರಿ. ನಿಮಗಾಗಿ ಚೆನ್ನಾಗಿ ಶಾಪಿಂಗ್ ಮಾಡಬಹುದು. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಸಂಗಾತಿಯ ಬೆಂಬಲದೊಂದಿಗೆ, ನೀವು ಮಾನಸಿಕವಾಗಿ ಸದೃಢರಾಗಿರುತ್ತೀರಿ. ಆರೋಗ್ಯವಾಗಿರಲು, ನಿಮ್ಮ ಆಹಾರ, ಪಾನೀಯ, ನಿದ್ರೆಯ ಬಗ್ಗೆ ನೀವು ವಿಶೇಷ ಗಮನ ಹರಿಸಬೇಕು. ಕೆಲಸದಲ್ಲಿ ಅತಿಯಾಗಿ ತೊಡಗಿಸಿಕೊಳ್ಳುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಉತ್ತಮ ಬಣ್ಣ: ಕಡು ಹಳದಿ
ಶುಭ ಸಂಖ್ಯೆ: 17
ಶುಭ ಸಮಯ: ಸಂಜೆ 04:30 ರಿಂದ 10:10 ರವರೆಗೆ
ಕನ್ಯಾರಾಶಿ:
ನಿಮ್ಮ ಮಾನಸಿಕ ಅಸ್ವಸ್ಥತೆಯನ್ನು ಕಡಿಮೆಮಾಡಲು, ಮೊದಲನೆಯದಾಗಿ ನೀವು ಪ್ರತಿದಿನ ಧ್ಯಾನ ಮಾಡಿ. ಉದ್ಯೋಗಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಲಿದೆ. ನೀವು ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ಕೆಲವು ಉತ್ತಮ ಸುದ್ದಿಗಳನ್ನು ಪಡೆಯಬಹುದು. ಈ ಸಮಯದಲ್ಲಿ ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಶೀಘ್ರದಲ್ಲೇ ದೊಡ್ಡ ಹುದ್ದೆಯನ್ನು ಪಡೆಯಬಹುದು. ಹಣಕಾಸಿನ ತೊಂದರೆಯಿಂದಾಗಿ ವ್ಯಾಪಾರಸ್ಥರು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಇಂದು, ನಿಮ್ಮ ಯಾವುದೇ ಪ್ರಮುಖ ವ್ಯವಹಾರಗಳು ಪೂರ್ಣಗೊಳ್ಳುವುದಿಲ್ಲ. ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ. ನಿಮ್ಮ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಉತ್ತಮ ಬಣ್ಣ: ಮರೂನ್
ಶುಭ ಸಂಖ್ಯೆ: 9
ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ
ತುಲಾ ರಾಶಿ:
ಪ್ರತಿಕೂಲ ಸಂದರ್ಭಗಳಲ್ಲಿ ನೀವು ಧೈರ್ಯದಿಂದ ಕೆಲಸ ಮಾಡಬೇಕಾಗುತ್ತದೆ. ಇತರರ ಮಾತುಗಳಿಗೆ ಅತಿಯಾಗಿ ಪ್ರಭಾವಿತರಾಗಬೇಡಿ. ನಿಮ್ಮ ಒಳ್ಳೆಯದು ಮತ್ತು ಕೆಟ್ಟದ್ದನ್ನು ನೀವು ಚೆನ್ನಾಗಿ ತಿಳಿದಿದ್ದೀರಿ. ಅತಿಯಾದ ನಕಾರಾತ್ಮಕತೆಯು ನಿಮ್ಮ ಮಾನಸಿಕ ಶಾಂತಿಯನ್ನು ಭಂಗಗೊಳಿಸುತ್ತದೆ. ನೀವು ಯಾವುದೇ ಕೆಲಸವನ್ನು ಮಾಡಿದರೆ, ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಾಳೆಗೆ ಎಂದು ಯಾವುದೇ ಕೆಲಸವನ್ನು ಮುಂದೂಡಬೇಡಿ. ಮತ್ತೊಂದೆಡೆ, ವ್ಯಾಪಾರಸ್ಥರು ಬಹಳ ಜಾಗರೂಕರಾಗಿರಬೇಕು. ನಿಮ್ಮ ವಿರೋಧಿಗಳು ನಿಮಗೆ ಹಾನಿ ಉಂಟುಮಾಡಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಲಿದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯಲು ನೀವು ಇಷ್ಟಪಡುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಮೂಲಕ ನೀವು ಸಾಕಷ್ಟು ನೆಮ್ಮದಿಯನ್ನು ಅನುಭವಿಸುವಿರಿ. ಆರೋಗ್ಯದ ಬಗ್ಗೆ ಮಾತನಾಡುವುದಾದಲ್ಲಿ, ಹೆಚ್ಚು ಉದ್ವೇಗ ಅಥವಾ ಒತ್ತಡಕ್ಕೆ ಒಳಗಾಗಬೇಡಿ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಿಮಗೆ ಮುಖ್ಯ.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 16
ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 1:45 ರವರೆಗೆ
ವೃಶ್ಚಿಕ ರಾಶಿ:
ಇಂದು ನೀವು ಆಂಜನೇಯನ ಪೂಜೆಯೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಇದು ನಿಮಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ನೀವು ಕೆಲಸ ಮಾಡುತ್ತಿದ್ದರೆ, ನಿಮಗೆ ಕಚೇರಿಯಲ್ಲಿ ಕೆಲವು ಕಷ್ಟಕರವಾದ ಕೆಲಸವನ್ನು ನಿಯೋಜಿಸಬಹುದು. ಒತ್ತಡದಲ್ಲಿ ಕೆಲಸ ಮಾಡಬೇಡಿ, ಆಗ ನಿಮ್ಮ ಅತ್ಯುತ್ತಮವಾದದನ್ನು ನೀಡಲು ಸಾಧ್ಯವಾಗುವುದಿಲ್ಲ ಮತ್ತು ಉನ್ನತ ಅಧಿಕಾರಿಗಳ ಮುಂದೆ ನಿಮ್ಮ ಇಮೇಜ್ ಹಾಳಾಗಬಹುದು. ಇಂದು, ಆಹಾರಕ್ಕೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಆರ್ಥಿಕ ಲಾಭಗಳನ್ನು ಪಡೆಯಬಹುದು. ದಾಂಪತ್ಯ ಜೀವನದಲ್ಲಿ ಸ್ವಲ್ಪ ಕಲಹ ಉಂಟಾಗಬಹುದು. ನಿಮ್ಮ ಸಂಗಾತಿಯೊಂದಿಗೆ ನೀವು ದೊಡ್ಡ ಜಗಳವಾಡಬಹುದು. ಈ ಸಮಯದಲ್ಲಿ ನಿಮ್ಮ ಕೋಪವನ್ನು ನೀವು ನಿಯಂತ್ರಿಸದಿದ್ದರೆ, ನಿಮ್ಮ ನಡುವೆ ಕಲಹ, ಉದ್ವೇಗ ಹೆಚ್ಚಾಗಬಹುದು. ಇದು ನಿಮ್ಮ ಮಕ್ಕಳ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಆರೋಗ್ಯ ಸ್ಥಿತಿ ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 36
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 11 ರವರೆಗೆ
ಧನು ರಾಶಿ:
ಇಂದು ಉದ್ಯೋಗಿಗಳು ಕಚೇರಿಯಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಕೆಲವು ಸಹೋದ್ಯೋಗಿಗಳು ನಿಮ್ಮ ಇಮೇಜನ್ನು ಹಾಳು ಮಾಡಲು ಪ್ರಯತ್ನಿಸಬಹುದು. ಅಂತಹ ವಿಷಯಗಳ ಬಗ್ಗೆ ಅಸಮಾಧಾನಗೊಳ್ಳುವ ಬದಲು, ನೀವು ಈ ವಿಷಯವನ್ನು ಬುದ್ಧಿವಂತಿಕೆಯಿಂದ ಎದುರಿಸಲು ಪ್ರಯತ್ನಿಸಿದರೆ, ಅದು ನಿಮಗೆ ಒಳ್ಳೆಯದು. ನೀವು ವ್ಯಾಪಾರಸ್ಥರಾಗಿದ್ದರೆ, ಹೊಸ ಷೇರುಗಳಿಗೆ ದಿನ ಒಳ್ಳೆಯದಲ್ಲ. ಇಂದು ದೊಡ್ಡ ವ್ಯವಹಾರವನ್ನು ತಪ್ಪಿಸಬೇಕು. ಮನೆಯ ವಾತಾವರಣ ಶಾಂತವಾಗಿರುತ್ತದೆ. ಹೆತ್ತವರ ಆಶೀರ್ವಾದ ಪಡೆದ ನಂತರ ನೀವು ಸಕಾರಾತ್ಮಕತೆಯನ್ನು ಅನುಭವಿಸುವಿರಿ. ನೀವು ಸಹೋದರರೊಂದಿಗೆ ಬಹಳ ಮೋಜಿನ ಸಮಯವನ್ನು ಅನಭವಿಸುತ್ತೀರಿ. ಹಣದ ಬಗ್ಗೆ ಮಾತನಾಡುವುದಾದರೆ, ನಿಮ್ಮ ಬಜೆಟ್ ಪ್ರಕಾರ ಖರ್ಚು ಮಾಡಿದರೆ ಇಂದು ಯಾವುದೇ ತೊಂದರೆ ಇರುವುದಿಲ್ಲ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 15
ಶುಭ ಸಮಯ: ಮಧ್ಯಾಹ್ನ 2:30 ರಿಂದ 5 ರವರೆಗೆ
ಮಕರ ರಾಶಿ :
ಹಣದ ವಿಷಯದಲ್ಲಿ ಇಂದಿನ ದಿನ ಉತ್ತಮವಾಗಿಲ್ಲ. ನಿಮ್ಮ ದುಂದು ವೆಚ್ಚ ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸುತ್ತದೆ. ಇತರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಖರ್ಚುಗಳನ್ನು ಮಿತಿಗೊಳಿಸಿ ಮತ್ತು ಉಳಿತಾಯದ ಬಗ್ಗೆ ಹೆಚ್ಚು ಗಮನಹರಿಸಿ. ಇಂದು,ಮಾತನಾಡುವಾಗ ಕೆಟ್ಟ ಪದಗಳನ್ನು ಬಳಸದಿರಿ. ಇಲ್ಲದಿದ್ದರೆ ನಿಮ್ಮ ಕೆಟ್ಟ ಮಾತುಗಳು ನಿಮ್ಮ ಹತ್ತಿರದ ಮತ್ತು ಆತ್ಮೀಯರಿಗೆ ನೋವು ಉಂಟುಮಾಡಬಹುದು. ನೀವು ವ್ಯಾಪಾರಸ್ಥರಾಗಿದ್ದರೆ, ದೊಡ್ಡ ವ್ಯವಹಾರಗಳಿಗೆ ದಿನ ಅನುಕೂಲಕರವಾಗಿಲ್ಲ. ಉದ್ಯೋಗಿಗಳು ಕಚೇರಿಗಳಲ್ಲಿ ತಮ್ಮ ಬಾಸ್ ನಿಯೋಜಿಸಿದ ಯಾವುದೇ ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ನಿಮ್ಮ ತಪ್ಪುಗಳನ್ನು ನೀವು ಪುನರಾವರ್ತಿಸುತ್ತಿದ್ದರೆ ಅದರಿಂದ ಕಷ್ಟ ಎದುರಿಸಬೇಕಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಣ್ಣ ಸಮಸ್ಯೆ ಇದ್ದರೂ ಅದನ್ನು ನಿರ್ಲಕ್ಷಿಸಬೇಡಿ.
ಉತ್ತಮ ಬಣ್ಣ: ತಿಳಿ ಹಳದಿ
ಶುಭ ಸಂಖ್ಯೆ: ೩೬
ಶುಭ ಸಮಯ: ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ:
ಇಂದು ನೀವು ಎಂಜಾಯ್ ಮಾಡಲು ಅವಕಾಶವನ್ನು ಪಡೆಯಬಹುದು. ನೀವು ಬಹಳ ಸಮಯದ ನಂತರ ಹಳೆಯ ಸ್ನೇಹಿತನನ್ನು ಭೇಟಿ ಮಾಡಬಹುದು. ನಿಮ್ಮ ಸ್ನೇಹಿತನೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಇಂದು ನಿಮ್ಮ ಕೆಲವು ಹಳೆಯ ಮತ್ತು ಒಳ್ಳೆಯ ನೆನಪುಗಳು ನಿಮ್ಮ ಉಲ್ಲಾಸವನ್ನು ಹೆಚ್ಚಿಸುತ್ತದೆ. ಕೆಲಸದ ಬಗ್ಗೆ ಮಾತನಾಡುತ್ತಾ, ನೀವು ಸಣ್ಣ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ತಾಳ್ಮೆಯಿಂದ ಕೆಲಸ ಮಾಡಿ. ಶೀಘ್ರದಲ್ಲೇ ನಿಮ್ಮ ಸಮಸ್ಯೆಯು ಬಗೆಹರಿಯುತ್ತದೆ. ಕುಟುಂಬ ಜೀವನವು ಆಹ್ಲಾದಕರವಾಗಿರುತ್ತದೆ. ಮತ್ತೊಂದೆಡೆ, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಲಹ ಉಂಟಾಗಬಹುದು. ನಿಮ್ಮ ಅನಿಯಂತ್ರಿತ ಕೋಪವು ನಿಮ್ಮಿಬ್ಬರ ನಡುವಿನ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುತ್ತಾ, ಇಂದು ನಿಮಗೆ ಸಾಕಷ್ಟು ವಿಶ್ರಾಂತಿ ಸಿಗುತ್ತದೆ ಇದರಿಂದ ನೀವು ತುಂಬಾ ರಿಫ್ರೆಶ್ ಆಗುತ್ತೀರಿ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 13
ಶುಭ ಸಮಯ: ಸಂಜೆ 5 ರಿಂದ 10 ರವರೆಗೆ
ಮೀನ ರಾಶಿ:
ಆರ್ಥಿಕವಾಗಿ ನಿಮಗೆ ಈ ದಿನವು ಉತ್ತಮವಾಗಿಲ್ಲ. ನಿಮ್ಮ ಆದಾಯವು ಕಡಿಮೆಯಾಗಿದ್ದರೆ, ಅದನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ನೀವು ತೀವ್ರಗೊಳಿಸಬೇಕು. ಹಣಕಾಸಿನ ವಿಷಯದಲ್ಲೂ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಶಾಂತಿ ಇರುತ್ತದೆ. ಇಂದು ಸಂಗಾತಿಯೊಂದಿಗೆ ಇದ್ದ ಎಲ್ಲಾ ತಪ್ಪುಗ್ರಹಿಕೆಗಳು ದೂರವಾಗುತ್ತದೆ. ಮತ್ತೊಂದೆಡೆ, ಮನೆಯ ಕೆಲವು ಸದಸ್ಯರು ನಿಮ್ಮ ಮೇಲೆ ಹೆಚ್ಚು ಕೋಪಗೊಳ್ಳುತ್ತಾರೆ. ಈ ಸಮಯದಲ್ಲಿ ನೀವು ಶಾಂತಿಯಿಂದ ಇರುವುದು ಮತ್ತು ಅವರ ಮಾತುಗಳನ್ನು ಕೇಳುವುದು ಉತ್ತಮ. ಕೆಲಸದ ವಿಚಾರದಲ್ಲಿ, ಈ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ, ಉನ್ನತ ಅಧಿಕಾರಿಗಳು ನಿಮ್ಮ ಮೇಲೆ ಸಿಟ್ಟಾಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 19
ಶುಭ ಸಮಯ: ಸಂಜೆ 05:20 ರಿಂದ 10 ರವರೆಗೆ
ಕಷ್ಟಕಾರ್ಪಣ್ಯದಿಂದ ಮುಕ್ತಿ ಹೊಂದಲು ದಾರಿ ದೀಪ:
ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಕೇಂದ್ರ
ತುಳುನಾಡಿನ ಕರಾವಳಿಯ ದೈವಶಕ್ತಿ ಜ್ಯೋತಿಷ್ಯರು
ಸ್ತ್ರೀ-ಪುರುಷ ಪ್ರೇಮವಿಚಾರ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ,
ಅತ್ತೆ-ಸೊಸೆ ಕಿರಿಕಿರಿ, ವಶೀಕರಣ, ಸಂತಾನಯೋಗ, ಇತ್ಯಾದಿ ಸಮಸ್ಯೆಗಳಿಗೆ,
ಅಷ್ಟಮಂಗಳ ಪ್ರಶ್ನೆ, ತಾಂಬೂಲ ಪ್ರಶ್ನೆ, ಜಾತಕ ವಿಶ್ಲೇಷಣೆ ಮಾಡಿ ನಿಮ್ಮ
ಇಷ್ಟಾರ್ಥ ಕಾರ್ಯಗಳಿಗೆ 5 ದಿನದಲ್ಲಿ ಪರಿಹಾರ ಶತಸಿದ್ದ.
ಮನೆಯ ವಿಳಾಸ: ನಂ.86, ಸಂಪಿಗೆ ರಸ್ತೆ, ಮಲ್ಲೇಶ್ವರಂ ಮೊ: 9945515555