Just In
- 58 min ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 1 hr ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 3 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 3 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
Don't Miss
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿವಾರದ ದಿನ ಭವಿಷ್ಯ: ಸಿಂಹರಾಶಿಯವರೇ ಜೀವನದಲ್ಲಿ ಮೂರನೇಯವರ ಹಸ್ತಕ್ಷೇಪ ತಪ್ಪಿಸಿ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ
ಕನ್ನಡದ
ಪ್ರಸಿದ್ಧ
ಜ್ಯೋತಿಷ್ಯರು,
ಆಚಾರ್ಯ
ಶ್ರೀ
ರಾಘವೇಂದ್ರ
ಭಟ್
ಕುಡ್ಲ.
ಕಟೀಲು
ಶ್ರೀ
ದುರ್ಗಾ
ಪರಮೇಶ್ವರಿ
ಅಮ್ಮನವರ
ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.
ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.
ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9845000635 .
https://sridurga-astrologer.com
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರತ್
ಮಾಸ:
ಅಶ್ವಿನಿ
ರಾಹುಕಾಲ:
ಮಧ್ಯಾಹ್ನ
08:57ರಿಂದ
10:25ರವರೆಗೆ
ಗುಳಿಕಕಾಲ:
ಬೆಳಗ್ಗೆ
05:29ರಿಂದ
07:28ರವರೆಗೆ
ಯಮಗಂಡಕಾಲ:
ಮಧ್ಯಾಹ್ನ
01:23ರಿಂದ
02:581ವರೆಗೆ
ದುರ್ಮುಹೂರ್ತ:
ಬೆಳಗ್ಗೆ
5:59ರಿಂದ
06:47ರವರೆಗೆ
ಬೆಳಗ್ಗೆ
06:47ರಿಂದ
07:34ರವರೆಗೆ
ಸೂರ್ಯೋದಯ:
ಬೆಳಗ್ಗೆ05:59ಕ್ಕೆ
ಸೂರ್ಯಾಸ್ತ:
ಸಂಜೆ
05:49ಕ್ಕೆ
ಮೇಷ ರಾಶಿ:
ಅಧ್ಯಯನದಲ್ಲಿ ನಿಮ್ಮ ಅಜಾಗರೂಕತೆಯೇ ನಿಮ್ಮನ್ನು ತೊಂದರೆಗೆ ಸಿಲುಕಿಸುತ್ತದೆ. ನಿಮ್ಮ ಗುರಿ ತಲುಪಲು ಶ್ರದ್ಧೆಯಿಂದ ಅಧ್ಯಯನ ಮಾಡುವುದು ಅಗತ್ಯ. ಟಿವಿ ಮತ್ತು ಮೊಬೈಲ್ನಿಂದ ದೂರವಿರಿ. ಕೆಲಸದ ಬಗ್ಗೆ ಮಾತನಾಡುವುದಾದರೆ, ಉದ್ಯೋಗಿಗಳು ಈ ಸಮಯದಲ್ಲಿ ಹೆಚ್ಚು ಶ್ರಮಿಸಬೇಕಾಗುತ್ತದೆ. ನಿಮ್ಮೊಳಗಿನ ಸಾಮರ್ಥ್ಯಗಳನ್ನು ನೀವೇ ಗುರುತಿಸಿ, ನಿಮ್ಮ ಪ್ರಯತ್ನ ನೀವು ಮಾಡಿ. ನಿಮ್ಮ ವ್ಯಾಪಾರದಲ್ಲಿ ಆರ್ಥಿಕವಾಗಿ ಲಾಭ ಪಡೆಯಬಹುದು. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನೀವು ಪೋಷಕರ ಬೆಂಬಲವನ್ನು ಪಡೆಯುತ್ತೀರಿ. ಗಂಭೀರವಾದ ಕೌಟುಂಬಿಕ ಸಮಸ್ಯೆಯ ಬಗ್ಗೆ ನೀವು ಇಂದು ನಿಮ್ಮ ತಂದೆಯೊಂದಿಗೆ ಚರ್ಚೆ ಮಾಡುವಿರಿ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯ ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ನೀಲಿ
ಶುಭ ಸಂಖ್ಯೆ: 35
ಶುಭ ಸಮಯ: ಮಧ್ಯಾಹ್ನ 2 ರಿಂದ 9 ರವರೆಗೆ
ವೃಷಭ ರಾಶಿ:
ಹಣದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ನೀವು ಯಾರಿಗಾದರೂ ಸಾಲ ನೀಡಿದ್ದರೆ, ಅವರು ಮರುಪಾವತಿ ಮಾಡುತ್ತಾರೆ. ಕೆಲಸದಲ್ಲಿ ಯಾವುದೇ ಪ್ರಮುಖ ಬದಲಾವಣೆ ಇಂದು ಸಾಧ್ಯ. ನೀವು ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಮತ್ತೊಂದೆಡೆ, ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವುದು ಇಂದು ಒಳ್ಳೆಯದಲ್ಲ. ಪೋಷಕರ ಸಹಾಯದಿಂದ, ನಿಮ್ಮ ದೊಡ್ಡ ಸಮಸ್ಯೆ ಪರಿಹಾರವಾಗಬಹುದು. ನಿಮ್ಮ ಸಂಗಾತಿಯೊಂದಿಗೆ ದಿನವು ವಿಶೇಷವಾಗಿರುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಮರೂನ್
ಶುಭ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 7 ರವರೆಗೆ
ಮಿಥುನ ರಾಶಿ:
ಉದ್ಯೋಗಸ್ಥರಿಗೆ ಉತ್ತಮ ದಿನ. ನವ ದುರ್ಗೆಯರ ಆಶೀರ್ವಾದ ನಿಮ್ಮ ಮೇಲಿದೆ. ನಿಮ್ಮ ಕೆಲಸದ ಸಾಮರ್ಥ್ಯ ಹಾಗೂ ಕಾರ್ಯಕ್ಷಮತೆಯನ್ನು ನೋಡಿ ನಿಮ್ಮ ಬಾಸ್ ಭಡ್ತಿಯನ್ನು ನಿರ್ಧರಿಸಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುವುದನ್ನು ನೋಡಿ ನಿಮಗೆ ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತದೆ. ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ನೂತನ ವ್ಯವಹಾರ ಪ್ರಾರಂಭಿಸಿರುವವರಿಗೆ ನಿರೀಕ್ಷೆಯಂತೆ ಲಾಭ ಸಿಗದಿದ್ದರೆ ಚಿಂತಿಸುವ ಅಗತ್ಯವಿಲ್ಲ. ಕ್ರಮೇಣ ಎಲ್ಲವೂ ಸುಸ್ಥಿತಿಗೆ ಮರಳುತ್ತದೆ. ಸಂಗಾತಿಯ ಕಠಿಣ ವರ್ತನೆ ನಿಮ್ಮ ನಡುವೆ ಜಗಳಕ್ಕೆ ಕಾರಣವಾಗಬಹುದು. ಹಣದ ದೃಷ್ಟಿಯಿಂದ ದಿನ ದುಬಾರಿಯಾಗಲಿದೆ. ಖರ್ಚು ಹೆಚ್ಚುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಭುಜದ ನೋವಿನ ಸಮಸ್ಯೆ ಇರಬಹುದು.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 13
ಶುಭ ಸಮಯ: ಸಂಜೆ 5 ರಿಂದ 10 ರವರೆಗೆ
ಕರ್ಕಾಟಕ ರಾಶಿ:
ನೀವು ನಿರುದ್ಯೋಗಿಯಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ಸ್ನೇಹಿತ ಅಥವಾ ಆಪ್ತ ಸ್ನೇಹಿತನ ಸಹಾಯದಿಂದ, ನೀವು ಉದ್ಯೋಗ ಪಡೆಯುವ ಸಾಧ್ಯತೆಯಿದೆ. ನೀವು ಈಗಾಗಲೇ ಉದ್ಯೋಗದಲ್ಲಿದ್ದರೆ ಮೇಲಾಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ಅವರು ಇಂದು ನಿಮಗೆ ಕೆಲವು ಪ್ರಮುಖ ಕೆಲಸಗಳನ್ನು ವಹಿಸಿಕೊಡಬಹುದು. ಇಂದು, ವ್ಯಾಪಾರಸ್ಥರು ಹೆಚ್ಚಿನ ಪರಿಹಾರವನ್ನು ಪಡೆಯಬಹುದು. ನಿಮ್ಮ ಹಣಕಾಸಿನ ಸಮಸ್ಯೆಗೆ ಇಂದು ಪರಿಹಾರ ಸಿಗಲಿದೆ. ನೀವು ವ್ಯವಹಾರಕ್ಕಾಗಿ ಸಾಲವನ್ನು ತೆಗೆದುಕೊಂಡಿದ್ದರೆ, ನೀವು ಇಂದು ಮರುಪಾವತಿ ಮಾಡುವಿರಿ. ಕುಟುಂಬದಲ್ಲಿ ಸಂತೋಷ. ಮನಸ್ತಾಪಗಳು ಕೊನೆಯಾಗಿ ಸಂಬಂಧದಲ್ಲಿ ಮಾಧುರ್ಯವು ಹೆಚ್ಚಾಗುತ್ತದೆ. ಜೀವನ ಸಂಗಾತಿಯ ಮನಸ್ಥಿತಿ ಸಾಕಷ್ಟು ಚೆನ್ನಾಗಿರುತ್ತದೆ. ನಿಮ್ಮ ಪ್ರಿಯತಮೆಯಿಂದ ನೀವು ಉಡುಗೊರೆಯನ್ನು ಪಡೆಯಬಹುದು. ಆರೋಗ್ಯದಲ್ಲಿ ಸುಧಾರಣೆ ಇರುತ್ತದೆ.
ಉತ್ತಮ ಬಣ್ಣ: ತಿಳಿ ಹಸಿರು
ಶುಭ ಸಂಖ್ಯೆ: 36
ಶುಭ ಸಮಯ: ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ:
ಯಾರಾದರೂ ಇಂದು ನಿಮ್ಮನ್ನು ಹಣದ ಸಹಾಯ ಕೇಳಿ ಬಂದರೆ ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಅವರಿಗೆ ಸಹಾಯ ಮಾಡಬೇಕು. ಇದಲ್ಲದೆ, ಇಂದು ನಿಮ್ಮ ಹಣವನ್ನು ಯಾವುದೇ ಧಾರ್ಮಿಕ ಕಾರ್ಯಗಳಿಗೆ ಖರ್ಚು ಮಾಡಬಹುದು. ಕಚೇರಿಯಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ನೀವು ತಲೆಹಾಕಬೇಡಿ. ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ ಮತ್ತು ಅನಗತ್ಯ ತೊಂದರೆಗಳಿಂದ ದೂರವಿರಿ. ವ್ಯಾಪಾರಸ್ಥರು ಉತ್ತಮ ಲಾಭವನ್ನು ಪಡೆಯಬಹುದು, ಆದರೆ ಹಣದ ವಿಷಯದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಕೌಟುಂಬಿಕ ಜೀವನದ ಬಗ್ಗೆ ಮಾತನಾಡುವುದಾರೆ, ಮೂರನೆಯವರ ಹಸ್ತಕ್ಷೇಪದಿಂದಾಗಿ ಇಂದು ನಿಮ್ಮ ಮನೆಯಲ್ಲಿ ಅಪಶ್ರುತಿ ಇರಬಹುದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡಲು ನೀವು ಬಿಡದಿರುವುದು ಉತ್ತಮ. ಆರೋಗ್ಯವಾಗಿರಲು, ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 15
ಶುಭ ಸಮಯ: ಮಧ್ಯಾಹ್ನ 2:30 ರಿಂದ 5 ರವರೆಗೆ
ಕನ್ಯಾರಾಶಿ:
ಇಂದಿನ ದಿನ ನಿಮಗೆ ತುಂಬಾ ಅಮೂಲ್ಯವಾದದ್ದು. ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸಬಹುದು. ಉದ್ಯೋಗಸ್ಥರು ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕಚೇರಿಯಲ್ಲಿ ನಿಮ್ಮ ನಡವಳಿಕೆಯನ್ನು ಉತ್ತಮವಾಗಿ ಇರಿಸಿ ಮತ್ತು ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ. ಅನಗತ್ಯ ಚರ್ಚೆಯಿಂದ ದೂರವಿರಿ ಇಲ್ಲದಿದ್ದರೆ ನಿಮ್ಮ ಕೆಲಸ ಮತ್ತು ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಹಣದ ವಿಷಯದಲ್ಲಿ, ದಿನವು ಮಿಶ್ರವಾಗಿದೆ. ಮನೆಯ ವೆಚ್ಚಗಳು ಹೆಚ್ಚಾಗಬಹುದು. ನಿಮ್ಮ ಬಜೆಟ್ ಅನ್ನು ನೀವು ಮೊದಲೇ ಸಿದ್ಧಪಡಿಸಿಕೊಳ್ಳುವುದು ಒಳ್ಳೆಯದು. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ನೀವು ಪೋಷಕರಿಂದ ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ಹೊಟ್ಟೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿರಬಹುದು. ನಿಮ್ಮ ಆಹಾರ ಮತ್ತು ಪಾನೀಯದ ಬಗ್ಗೆ ನೀವು ವಿಶೇಷ ಕಾಳಜಿ ವಹಿಸುವುದು ಉತ್ತಮ.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 36
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ
ತುಲಾ ರಾಶಿ:
ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ. ನಿಮ್ಮ ಆರೋಗ್ಯ ಸರಿಯಾಗಿಲ್ಲದಿದ್ದರೆ, ನೀವು ತಕ್ಷಣ ವೈದ್ಯರನ್ನು ಪರೀಕ್ಷಿಸಬೇಕು. ಇದಲ್ಲದೆ, ನಿಮ್ಮ ಔಷಧಿಗಳನ್ನು ನಿಯಮಿತವಾಗಿ ತೆಗೆದುಕೊಳ್ಳುತ್ತಿರಿ. ಹಣದ ದೃಷ್ಟಿಯಿಂದ ದಿನ ದುಬಾರಿಯಾಗಲಿದೆ. ವೆಚ್ಚವನ್ನು ಹೆಚ್ಚಿಸುವುದರಿಂದ ನಿಮಗೆ ಮಾನಸಿಕ ಒತ್ತಡವೂ ಹೆಚ್ಚಾಗಬಹುದು. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಹೆಚ್ಚು ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದಲ್ಲಿ ನಿಮ್ಮ ಗುರಿಯ ಕಡೆಗೆ ಹರಿಸಬೇಕು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ತಮ್ಮ ಸಂಬಂಧವನ್ನು ಸುಧಾರಿಸಬೇಕಾಗಿದೆ. ಸಣ್ಣ ವ್ಯತ್ಯಾಸಗಳು ಕೂಡ ನಿಮ್ಮ ವ್ಯವಹಾರದ ಮೇಲೆ ಪರಿಣಾಮ ಬೀರಬಹುದು. ಕುಟುಂಬ ಜೀವನ ಸಾಮಾನ್ಯವಾಗಿರಲಿದೆ. ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಆಕಾಶ ನೀಲಿ
ಶುಭ ಸಂಖ್ಯೆ: 16
ಶುಭ ಸಮಯ: ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ
ವೃಶ್ಚಿಕ ರಾಶಿ:
ನೀವು ಕೆಲಸ ಮಾಡುವ ಸ್ಥಳದಲ್ಲಿ ಏನಾದರೂ ತೊಂದರೆ ಅನುಭವಿಸುತ್ತಿದ್ದರೆ ಇಂದು ಎಲ್ಲಾ ಸಮಸ್ಯೆಗೂ ಪರಿಹಾರ ಸಿಗಲಿದೆ. ನಿಮ್ಮ ಕೆಲಸವನ್ನು ನೀವು ಶ್ರದ್ಧೆಯಿಂದ ಮಾಡಲು ಸಾಧ್ಯವಾಗುತ್ತದೆ ಮತ್ತು ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಬಹುಶಃ ನಿಮಗೆ ಹೊಸ ಹುದ್ದೆ ದೊರೆಯಲಿದೆ ಇಲ್ಲಿ ನಿಮ್ಮ ಪ್ರತಿಭೆಯನ್ನು ತೋರಿಸಲು ನಿಮಗೆ ಅವಕಾಶ ಸಿಗುತ್ತದೆ. ಈ ಅವಕಾಶದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವುದು ಉತ್ತಮ. ವ್ಯಾಪಾರಸ್ಥರು ಯೋಗ್ಯವಾದ ಲಾಭವನ್ನು ಪಡೆಯಬಹುದು. ಹೊಸ ವ್ಯವಹಾರಕ್ಕೆ ದಿನವು ಉತ್ತಮವಾಗಿದೆ. ಹಣದ ಪರಿಸ್ಥಿತಿ ಉತ್ತಮವಾಗಿದೆ. ಇಂದು ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ನಿಮ್ಮ ಸಂಗಾತಿಯೊಂದಿಗೆ ನೀವು ಸಮಸ್ಯೆಯನ್ನು ಹೊಂದಿರಬಹುದು. ನಿಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು, ಇಲ್ಲದಿದ್ದರೆ ಅದು ನಿಮ್ಮ ಮನೆಯ ವಾತಾವರಣವನ್ನು ಹಾಳುಮಾಡುತ್ತದೆ. ಇಂದು ಕಫದ ಸಮಸ್ಯೆ ಉಂಟಾಗಬಹುದು.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 22
ಶುಭ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ
ಧನು ರಾಶಿ:
ಕೆಲಸದಲ್ಲಿ ಉತ್ತಮ ಫಲಿತಾಂಶ ಸಿಗುತ್ತದೆ. ನೀವು ಕಚೇರಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ ಮತ್ತು ನಿಮ್ಮ ಬಾಸ್ ನಿಮ್ಮನ್ನು ಸಾಕಷ್ಟು ಹೊಗಳುತ್ತಾರೆ. ಇದಲ್ಲದೆ, ನೀವು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ನಿಮಗೆ ಬೇಕಾದಲ್ಲಿ ವರ್ಗಾವಣೆಯನ್ನು ನೀವು ಪಡೆಯುವ ಸಾಧ್ಯತೆಯಿದೆ. ಕಬ್ಬಿಣದ ವ್ಯಾಪಾರಿಗಳು ಹಣದ ವಿಷಯದಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ತಂದೆಯ ಆರೋಗ್ಯವು ಇಂದು ಸುಧಾರಿಸುತ್ತದೆ. ಸಂಗಾತಿಗೆ ಮಾಡುವ ಕೆಲಸದಲ್ಲಿ ಉತ್ತಮ ಯಶಸ್ಸು ಸಿಗುತ್ತದೆ. ನಿಮ್ಮ ಸಂಗಾತಿಯ ಸಾಧನೆಯ ಬಗ್ಗೆ ನಿಮಗೆ ತುಂಬಾ ಹೆಮ್ಮೆ ಅನಿಸುತ್ತದೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನೀವು ರಕ್ತದೊತ್ತಡದ ರೋಗಿಯಾಗಿದ್ದರೆ ನಿಮ್ಮ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸಬೇಕು. ಹೆಚ್ಚು ಒತ್ತಡವನ್ನು ತಪ್ಪಿಸಿ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 8
ಶುಭ ಸಮಯ: ಸಂಜೆ 4 ರಿಂದ 11 ರವರೆಗೆ
ಮಕರ ರಾಶಿ:
ದಿನದ ಆರಂಭ ಶುಭ. ಹಣದ ವಿಷಯದಲ್ಲಿ ಇಂದು ನಿಮಗೆ ಲಾಭವಾಗಲಿದೆ. ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ನೀವು ಮುಕ್ತವಾಗಿ ಖರ್ಚು ಮಾಡುತ್ತೀರಿ. ಇದಲ್ಲದೆ, ಆರ್ಥಿಕವಾಗಿ ನೀವು ನಿಮ್ಮ ಸಹೋದರ ಅಥವಾ ಸಹೋದರಿಗೆ ಸಹ ಸಹಾಯ ಮಾಡಬಹುದು. ಕಚೇರಿಯಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗುತ್ತವೆ. ಸಹೋದ್ಯೋಗಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ನೀವು ಉಡುಗೊರೆ ವಸ್ತುಗಳು ಅಥವಾ ಅಲಂಕಾರಕಗಳನ್ನು ವ್ಯಾಪಾರ ಮಾಡುವವರಾಗಿದ್ದರೆ, ಇಂದು ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ, ಮನೆಯ ವಾತಾವರಣವು ಉತ್ಸಾಹಭರಿತವಾಗಿರುತ್ತದೆ. ಪ್ರೀತಿ ಮತ್ತು ಐಕ್ಯತೆ ಇರುತ್ತದೆ. ಮನೆಯಲ್ಲಿ ವಯಸ್ಸಾದ ಸದಸ್ಯರಿದ್ದರೆ, ನೀವು ಅವರಿಗೆ ಸೇವೆ ಸಲ್ಲಿಸಬೇಕು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಕಣ್ಣು ಅಥವಾ ಕಿವಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಉತ್ತಮ ಬಣ್ಣ: ಕಡು ಹಸಿರು
ಶುಭ ಸಂಖ್ಯೆ: 3
ಶುಭ ಸಮಯ: ಮಧ್ಯಾಹ್ನ 3 ರಿಂದ 9:15 ರವರೆಗೆ
ಕುಂಭ ರಾಶಿ:
ವ್ಯಾಪಾರಸ್ಥರಿಗೆ ಇಂದು ಬಹಳ ಮುಖ್ಯವಾದ ದಿನ. ನೀವು ಹೊಸ ಉದ್ಯೋಗವನ್ನು ಪ್ರಾರಂಭಿಸಲು ಬಯಸಿದರೆ ಮತ್ತು ಇದಕ್ಕಾಗಿ ನೀವು ಬ್ಯಾಂಕಿನಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರೆ, ಇಂದು ನಿಮಗೆ ಶುಭ ಸುದ್ದಿ ಸಿಗುತ್ತದೆ. ಔಷಧಿಗಳನ್ನು ವ್ಯಾಪಾರ ಮಾಡುವವರಿಗೆ ಸಮಯ ಅನುಕೂಲಕರವಾಗಿದೆ. ನೀವು ಸರ್ಕಾರಿ ಕೆಲಸ ಮಾಡುವವರಾಗಿದ್ದರೆ, ನೀವು ಬಡ್ತಿ ಪಡೆಯುವ ಸಾಧ್ಯತೆಯಿದೆ. ದಿನದ ಎರಡನೇ ಭಾಗದಲ್ಲಿ, ಒಂದು ದೊಡ್ಡ ಸಮಸ್ಯೆ ಇದ್ದಕ್ಕಿದ್ದಂತೆ ಉದ್ಭವಿಸಬಹುದು. ಮನೆಯಲ್ಲಿ ವಿವಾದ ಉಂಟಾಗುವ ಸಾಧ್ಯತೆ ಇದೆ. ನಿಮಗೆ ಮಾನಸಿಕ ಒತ್ತಡ ಉಂಟಾಗಬಹುದು. ಒತ್ತಡ ಮತ್ತು ಆಯಾಸದಿಂದಾಗಿ ನಿಮ್ಮ ಆರೋಗ್ಯ ಕ್ಷೀಣಿಸಬಹುದು. ನೀವು ನಿಮ್ಮ ಬಗ್ಗೆ ಕಾಳಜಿ ವಹಿಸುವುದು ಉತ್ತಮ.
ಉತ್ತಮ ಬಣ್ಣ: ಕ್ರೀಮ್ (ತಿಳಿ ಬಿಳಿ)
ಶುಭ ಸಂಖ್ಯೆ: 14
ಶುಭ ಸಮಯ: ಸಂಜೆ 5 ರಿಂದ 9 ರವರೆಗೆ
ಮೀನ ರಾಶಿ:
ಮನೆಯ ಹಾಗೂ ಕೆಲಸದ ಒತ್ತಡ ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ನೀವು ದಿನವೂ ಧ್ಯಾನವನ್ನು ಮಾಡಬೇಕು. ಅಲ್ಲದೆ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ನೀವು ಮಾರಾಟಗಾರರಾಗಿದ್ದರೆ, ಇಂದು ನಿಮಗೆ ಏರಿಳಿತಗಳು ಸಾಮಾನ್ಯ. ವ್ಯವಹಾರದಲ್ಲಿ, ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದಲ್ಲದೆ ನೀವು ಭಡ್ತಿ ಬಗ್ಗೆಯೂ ಗಮನ ಹರಿಸಬೇಕು. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಿ. ಕೆಲವು ಕಾರಣಗಳಿಂದಾಗಿ ನಿಮ್ಮ ಪ್ರೀತಿಪಾತ್ರರು ನಿಮ್ಮ ಮೇಲೆ ಕೋಪಗೊಂಡಿದ್ದರೆ, ಅವರನ್ನು ಸಮಾಧಾನಗೊಳಿಸಲು ಇದು ಒಳ್ಳೆಯ ದಿನ. ಹಣದ ಪರಿಸ್ಥಿತಿ ಸಾಮಾನ್ಯವಾಗಿರಲಿದೆ.
ಉತ್ತಮ ಬಣ್ಣ: ಕಡು ಹಳದಿ
ಶುಭ ಸಂಖ್ಯೆ: 4
ಶುಭ ಸಮಯ: ಸಂಜೆ 4:05 ರಿಂದ 9 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.
ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.
ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9845000635 .