Just In
- 5 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 6 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 6 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 7 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಗಳವಾರದ ದಿನ ಭವಿಷ್ಯ: ವೃಷಭ ರಾಶಿಯವರೇ ಕಚೇರಿಯಲ್ಲಿ ತಾಳ್ಮೆ ಮುಖ್ಯ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ
ಕನ್ನಡದ
ಪ್ರಸಿದ್ಧ
ಜ್ಯೋತಿಷ್ಯರು,
ಆಚಾರ್ಯ
ಶ್ರೀ
ರಾಘವೇಂದ್ರ
ಭಟ್
ಕುಡ್ಲ.
ಕಟೀಲು
ಶ್ರೀದುರ್ಗಾಪರಮೇಶ್ವರಿ
ಅಮ್ಮನವರ
ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.
ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.
ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9845000635 .
https://sridurga-astrologer.com
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಆಶ್ವಿಜ
ನಕ್ಷತ್ರ:
ಅಕ್ಟೋಬರ್
21,
ಮಧ್ಯಾಹ್ನ
02:12ರವರೆಗೆ
ಜೇಷ್ಠ
ನಂತರ
ಮೂಲ
ತಿಥಿ:
ಶುಕ್ಲ
ಪಕ್ಷ
ರಾಹುಕಾಲ:
ಮಧ್ಯಾಹ್ನ
02:56ರಿಂದ
04:21ರವರೆಗೆ
ಗುಳಿಕಕಾಲ:
ಮಧ್ಯಾಹ್ನ
12:06ರಿಂದ
01:31ರವರೆಗೆ
ಯಮಗಂಡಕಾಲ:
ಬೆಳಗ್ಗೆ
09:15ರಿಂದ
10:40ರವರೆಗೆ
ದುರ್ಮುಹೂರ್ತ:
ಬೆಳಗ್ಗೆ
08:41ರಿಂದ
09:27ರವರೆಗೆ
ರಾತ್ರಿ
10:50ರಿಂದ
11:41ರವರೆಗೆ
ಸೂರ್ಯೋದಯ:
ಬೆಳಗ್ಗೆ
06:25ಕ್ಕೆ
ಸೂರ್ಯಾಸ್ತ:
ಸಂಜೆ
05:46ಕ್ಕೆ
ಮೇಷ ರಾಶಿ:
ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ನಿಮಗೆ ಈ ದಿನ ನಿಮ್ಮ ಆರೋಗ್ಯವೇ ಮೊದಲ ಆದ್ಯತೆಯಾಗಿರಬೇಕು. ನಿಮ್ಮನ್ನು ಆರೋಗ್ಯವಾಗಿಡಲು ನಿಮ್ಮ ದಿನಚರಿಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಬಹುದು. ನಿಮ್ಮ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರತಿದಿನ ಪ್ರಾಣಾಯಾಮ ಮಾಡಿ. ಆಫೀಸ್ ನ ಕೆಲಸದ ಬಗ್ಗೆ ಜಾಗರೂಕರಾಗಿರಿ ಮತ್ತು ಚರ್ಚೆ ಮಾಡಬೇಡಿ. ನೀವು ವ್ಯಾಪಾರ ಮಾಡುವವರಾಗಿದ್ದರೆ, ಈ ಸಮಯದಲ್ಲಿ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ವಿಶೇಷವಾಗಿ ನೀವು ವ್ಯವಹಾರ ವಿಸ್ತರಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ಸಮಯ ಇದಕ್ಕೆ ಸೂಕ್ತವಲ್ಲ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನೀವು ಕುಟುಂಬ ಸದಸ್ಯರಿಂದ ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯತೆ. ಇಂದು ನಿಮ್ಮ ಸಂಗಾತಿಯೊಂದಿಗೆ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಆರ್ಥಿಕವಾಗಿ ದಿನ ದುಬಾರಿ. ಮನೆಯ ವೆಚ್ಚಗಳು ಹೆಚ್ಚಾಗಬಹುದು.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 20
ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ
ವೃಷಭ ರಾಶಿ:
ಕಚೇರಿಯಲ್ಲಿ ನೀವು ತಾಳ್ಮೆಯಿಂದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಹಾಗೂ ನಿಮ್ಮ ಶ್ರಮದ ಬಗ್ಗೆ ನಿಮಗೆ ನಂಬಿಕೆ ಇರಲಿ. ಶೀಘ್ರದಲ್ಲೇ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ನಡವಳಿಕೆಯ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸಬೇಕು. ಕೋಪದಿಂದ ಯಾವುದನ್ನೂ ಬಗೆಹರಿಸಲಾಗದು.ವ್ಯಾಪಾರಸ್ಥರು ಇಂದು ಆರ್ಥಿಕ ನಷ್ಟವನ್ನು ಭರಿಸಬೇಕಾಗಬಹುದು. ಇಂದು, ನೀವು ಯಾವುದೇ ಕೆಲಸವನ್ನು ಅವಸರದಲ್ಲಿ ಮಾಡಬೇಡಿ. ಇದು ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ನೀವು ಕಷ್ಟಪಟ್ಟು ಪ್ರಯತ್ನ ಮಾಡಬೇಕಾಗುತ್ತದೆ. ಹಣದ ವಿಷಯದಲ್ಲಿ ಉತ್ತಮ. ವೆಚ್ಚಗಳೂ ಕಡಿಮೆ. ನಿಮ್ಮ ಬಜೆಟ್ ಸಹ ಸಮತೋಲನದಲ್ಲಿರುತ್ತದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ನಿಮ್ಮ ಹಾಗೂ ನಿಮ್ಮ ಸಂಗಾತಿಯ ನಡುವೆ ಮನಸ್ತಾಪಗಳಿದ್ದರೆ, ನಿಮ್ಮ ಕೋಪವೂ ಕಡಿಮೆಯಾಗಿ ನಿಮ್ಮಿಬ್ಬರ ನಡುವೆ ಪ್ರೀತಿ ಉಳಿಯುತ್ತದೆ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 3: 45 ರವರೆಗೆ
ಮಿಥುನ ರಾಶಿ:
ಇದ್ದಕ್ಕಿದ್ದ ಹಾಗೆ ದೊಡ್ಡ ಸಮಸ್ಯೆ ಒಂದು ಎದುರಾಗಲಿದೆ. ಇದರಿಂದಾಗಿ ಮನಸ್ಸು ತುಂಬಾ ಅಸಮಾಧಾನಗೊಳ್ಳುತ್ತದೆ. ಆದರೆ ಈ ಸಮಯದಲ್ಲಿ ಧೈರ್ಯವಾಗಿರಿ. ತಾಳ್ಮೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಿದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕೆಲಸದ ಬಗ್ಗೆ ಹೇಳುವುದಾದರೆ, ಆಫೀಸ್ ನಲ್ಲಿ ಜವಾಬ್ದಾರಿ ಹೆಚ್ಚುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನೀವು ಪ್ರಯತ್ನಿಸುತ್ತೀರಿ ಮತ್ತು ಯಾವುದೇ ಕೆಲಸವನ್ನು ಅಪೂರ್ಣವಾಗಲು ಬಿಡಬೇಡಿ. ಮತ್ತೊಂದೆಡೆ, ನೀವು ಚಿನ್ನ ಮತ್ತು ಬೆಳ್ಳಿಯನ್ನು ವ್ಯಾಪಾರ ಮಾಡುತ್ತಿದ್ದರೆ, ಇಂದು ನಿಮಗೆ ತುಂಬಾ ಅದೃಷ್ಟದ ದಿನ. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ, ಕುಟುಂಬದಲ್ಲಿ ಮನಸ್ತಾಪ. ಸಣ್ಣ ವಿಷಯಗಳ ಬಗ್ಗೆ ನಿಮ್ಮ ನಡುವೆ ಜಗಳವಾಗಬಹುದು. ಆರೋಗ್ಯದಲ್ಲಿ ದಿನ ಉತ್ತಮವಾಗಿದೆ.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 19
ಶುಭ ಸಮಯ: ಮಧ್ಯಾಹ್ನ 2 ರಿಂದ 9 ರವರೆಗೆ
ಕರ್ಕಾಟಕ ರಾಶಿ:
ನೀವು ಇತ್ತೀಚೆಗೆ ವಿವಾಹವಾಗಿದ್ದರೆ, ನಿಮ್ಮ ವೈವಾಹಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯಾಗಬಹುದು. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಮತ್ತು ನಿಮ್ಮ ದಾರಿಯಲ್ಲಿ ಕೆಲವು ಅಡೆತಡೆಗಳು ಎದುರಾಗುತ್ತಿದ್ದರೆ, ಶೀಘ್ರದಲ್ಲೇ ಎಲ್ಲಾ ಅಡೆತಡೆಗಳೂ ನಿವಾರಣೆಯಾಗಿ ನೀವು ಪ್ರೀತಿ ಬಂಧದಲ್ಲಿ ಸಿಲುಕಿಕೊಳ್ಳುತ್ತೀರಿ. ಇಂದು ಮನೆಯ ಸದಸ್ಯರೊಂದಿಗೆ ದಿನವನ್ನು ಮೋಜಿನಿಂದ ಕಳೆಯುವಿರಿ. ವಿಶೇಷವಾಗಿ ಮನೆಯ ಹಿರಿಯರ ಆಶೀರ್ವಾದದೊಂದಿಗೆ, ನಿಮಗೆ ಒಳ್ಳೆಯದಾಗಲಿದೆ. ಕೆಲಸದ ಬಗ್ಗೆ ಮಾತನಾಡುವುದಾದರೆ, ವರ್ಗಾವಣೆಯ ಸಾಧ್ಯತೆ. ನೀವು ಸರ್ಕಾರಿ ಕೆಲಸ ಮಾಡುವವರಾಗಿದ್ದರೆ ತುಂಬಾ ತಾಳ್ಮೆಯಿಂದ ಕೆಲಸ ಮಾಡಬೇಕು. ನೀವು ಕೆಲವು ದೊಡ್ಡ ಜವಾಬ್ದಾರಿಯನ್ನು ಹೊಂದಬಹುದು. ವ್ಯಾಪಾರಿಗಳು ಇಂದು ಉತ್ತಮ ಲಾಭವನ್ನು ಪಡೆಯಬಹುದು. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಬುದ್ದಿವಂತಿಕೆಯಿಂದ ಖರ್ಚನ್ನು ನಿಭಾಯಿಸಿ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ಶೀತ, ಕಫ ಇತ್ಯಾದಿಗಳಿಂದ ತೊಂದರೆಗೊಳಗಾಗುತ್ತೀರಿ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 1: 45: ರಿಂದ 7 ರವರೆಗೆ
ಸಿಂಹ ರಾಶಿ:
ನೀವು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು. ಸಾಲ ತೆಗೆದುಕೊಳ್ಳುವುದು ಅಥಾವ್ ಕೊಡುವುದು ಇದ್ಯಾವುದೂ ಇಂದು ಬೇಡ. ನೀವು ಶಾಪಿಂಗ್ ಬಗ್ಗೆ ಯೋಚಿಸುತ್ತಿದ್ದರೆ, ಸಾಲ ಮಾಡಿ ವಸ್ತುಗಳನ್ನು ಖರೀದಿಸಬೇಡಿ. ನೀವು ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಮಾರ್ಗದರ್ಶನ ಪಡೆಯುತ್ತೀರಿ, ಇದರಿಂದಾಗಿ ನೀವು ಕಠಿಣ ಕಾರ್ಯಗಳನ್ನು ಸಹ ಸುಲಭವಾಗಿ ಪೂರ್ಣಗೊಳಿಸಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರಿಗೆ ಇಂದು ಕೆಲಸಗಳು ಹೆಚ್ಚು. ವ್ಯಾಪಾರಸ್ಥರು ಹೊಸ ಸರಕುಗಳ ಬಗ್ಗೆ ಯೋಜಿಸಬಹುದು. ನೀವು ಕಬ್ಬಿಣವನ್ನು ವ್ಯಾಪಾರ ಮಾಡುವವರಾಗಿದ್ದರೆ, ಏರಿಳಿತಗಳು ಸಾಮಾನ್ಯ. ಕುಟುಂಬ ಜೀವನದಲ್ಲಿ ಹಠಾತ್ ಸಮಸ್ಯೆ ಎದುರಾಗಬಹುದು. ಮನೆಯ ಸದಸ್ಯರ ಆರೋಗ್ಯ ಕೆಡಬಹುದು. ನೀವು ಆಸ್ಪತ್ರೆ ಮತ್ತು ವೈದ್ಯರನ್ನು ಹೆಚ್ಚು ಭೇಟಿ ಮಾಡಬೇಕಾಗಬಹುದು.
ಉತ್ತಮ ಬಣ್ಣ: ನೀಲಿ
ಶುಭ ಸಂಖ್ಯೆ: 23
ಶುಭ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ
ಕನ್ಯಾರಾಶಿ:
ಕೆಲಸದಲ್ಲಿ ದಿನ ಒಳ್ಳೆಯದಾಗಿದೆ. ಆದರೆ ನೀವು ಪ್ರತಿ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ನೀವು ದೊಡ್ಡ ಉದ್ಯಮಿಯಾಗಿದ್ದರೆ, ಇದ್ದಕ್ಕಿದ್ದಂತೆ ನಿಮ್ಮ ಕೆಲವು ಕೆಲಸಗಳು ಅರ್ಧದಲ್ಲೇ ನಿಲ್ಲಬಹುದು. ಆದರೆ ನಿಮ್ಮ ಸಮಸ್ಯೆಗಳೂ ಬೇಗನೇ ನಿವಾರಣೆಯಾಗುತ್ತವೆ. ಯಾವುದೇ ವಿಷಯದಲ್ಲೂ ಬೇಜವಾಬ್ದಾರಿ ತೋರಿಸಿಬಿಡಿ. ಕಚೇರಿಯಲ್ಲಿ ನಿಮ್ಮ ಎಲ್ಲಾ ಕಾರ್ಯಗಳನ್ನು ಪೂರ್ಣ ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದಿಂದ ಪೂರ್ಣಗೊಳಿಸುತ್ತೀರಿ. ಹಿರಿಯ ಅಧಿಕಾರಿಗಳೊಂದಿಗೆ ಉತ್ತಮ ಹೊಂದಾಣಿಕೆ. ಇದಲ್ಲದೆ, ನಿಮಗೆ ಸಹೋದ್ಯೋಗಿಗಳ ಬೆಂಬಲವೂ ಇದೆ. ಹಣದ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಶಾಪಿಂಗ್ ಗೆ ಒಂದು ಉತ್ತಮ ದಿನ. ಪೋಷಕರ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ನೀವು ಅವರ ಪ್ರೀತಿಯನ್ನು ಪಡೆಯುತ್ತೀರಿ. ಹಿರಿಯ ಸಹೋದರ ಅಥವಾ ಸಹೋದರಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಬಿರುಕು ಮೂಡಿದ್ದರೆ, ನಿಮಗಿರುವ ಎಲ್ಲಾ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 8:15 ರಿಂದ ಮಧ್ಯಾಹ್ನ 2:30 ರವರೆಗೆ
ತುಲಾ ರಾಶಿ:
ಕುಟುಂಬದಲ್ಲಿ ಸಂತೋಷ. ಇಂದು, ನಿಮ್ಮ ಹಿರಿಯ ಸಹೋದರ ಅಥವಾ ಸಹೋದರಿಯ ಸಹಾಯದಿಂದ, ನಿಮ್ಮ ದೊಡ್ಡ ಸಮಸ್ಯೆ ಕೊನೆಗೊಳ್ಳುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ನಿಮ್ಮ ಕಷ್ಟದ ಸಮಯದಲ್ಲಿ ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಕೆಲಸವಾಗಲಿ ಅಥವಾ ವ್ಯವಹಾರವಾಗಲಿ ನೀವು ಹೆಚ್ಚು ಗಮನವನ್ನು ಹರಿಸಲೇಬೇಕು. ಕಚೇರಿಯಲ್ಲಿ ನಿಮ್ಮ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಿ. ನೀವು ಸಣ್ಣ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದು, ಹಣಕಾಸು ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇಂದು ಒಳ್ಳೆಯ ಸುದ್ದಿ ಕೇಳುವಿರಿ. ಚಿಲ್ಲರೆ ವ್ಯಾಪಾರಿಗಳು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ, ನಿಮ್ಮ ಆರೋಗ್ಯವು ಕ್ಷೀಣಿಸಬಹುದು. ನೀವು ನಿಮ್ಮ ಬಗ್ಗೆ ಕಾಳಜಿ ವಹಿಸುವುದು ಉತ್ತಮ.
ಉತ್ತಮ ಬಣ್ಣ: ಕಡುಗೆಂಪು
ಶುಭ ಸಂಖ್ಯೆ: 26
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ
ವೃಶ್ಚಿಕ ರಾಶಿ:
ಇಂದಿನ ದಿನ ಸ್ವಲ್ಪ ಬೇಸರದಾಯಕ. ಆದರೂ ಕೆಲವು ವಿಷಯದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ಜವಾಬ್ದಾರಿಗಳು ಹೆಚ್ಚಬಹುದು. ಇದರಿಂದಾಗಿ ನೀವು ಸ್ವಲ್ಪ ಉದ್ವೇಗಕ್ಕೆ ಒಳಗಾಗುವಿರಿ.ಮತ್ತು ಸಿಟ್ಟೂ ಬರಬಹುದು. ಆದರೆ ತಾಳ್ಮೆಯಿಂದ ಇದ್ದು, ನಿಮ್ಮ ಕೆಲಸದ ಮೇಲೆ ನಿಮ್ಮ ಗಮನವನ್ನು ಹರಿಸಿದರೆ ನಿಮಗೆ ಒಳ್ಳೆಯದು. ನೀವು ವ್ಯಾಪಾರ ಮಾಡುವವರಾಗಿದ್ದು, ಯಾವುದೇ ಪ್ರಮುಖ ವ್ಯವಹಾರ ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲಗಳಿದ್ದರೆ, ಅನುಭವಿ ವ್ಯಕ್ತಿಯ ಸಲಹೆ ಪಡೆಯಿರಿ. ತಾಯಿ ಅಥವಾ ತಂದೆಯ ಆರೋಗ್ಯ ಕ್ಷೀಣಿಸಬಹುದು. ಈ ಸಮಯದಲ್ಲಿ ಅವರಿಗೆ ಉತ್ತಮ ಆರೈಕೆಯ ಅಗತ್ಯವಿದೆ. ಹಣದ ಬಗ್ಗೆ ಮಾತನಾಡುವುದಾದರೆ, ಆದಾಯ ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ನಿರ್ಧಾರಗಳನ್ನು ನೀವು ಎಚ್ಚರಿಕೆಯಿಂದ ತೆಗೆದುಕೊಂಡರೆ, ನಿಮ್ಮ ಠೇವಣಿ ಬಂಡವಾಳವೂ ಹೆಚ್ಚಾಗುತ್ತದೆ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 8
ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ
ಧನು ರಾಶಿ:
ದಿನದ ಆರಂಭ ಉತ್ತಮವಾಗಿದೆ. ನಿಮ್ಮ ದೊಡ್ಡ ಸಮಸ್ಯೆಯೊಂದು ಪರಿಹಾರವಾಗಲಿದೆ. ನಿಮ್ಮ ಮನಸ್ಸಿನಲ್ಲಿ ತೃಪ್ತಿಯ ಭಾವನೆ ಇರುತ್ತದೆ, ಸಕಾರಾತ್ಮಕ ಚಿಂತನೆ ನಿಮ್ಮದಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ, ಇದು ಸಂಬಂಧದಲ್ಲಿನ ಅಂತರವನ್ನು ಸಹ ಕಡಿಮೆ ಮಾಡುತ್ತದೆ. ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದಲ್ಲಿ ನಿಮ್ಮ ಉತ್ಸಾಹ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನಿಮ್ಮ ಸಂಗಾತಿಗೆ ವಿಶೇಷ ಪ್ರೀತಿಯನ್ನು ನೀಡಿ. ಸಾಧ್ಯವಾದರೆ, ಇಂದು ಅವರಿಗೆ ಆಶ್ವರ್ಯಕರ ಉಡುಗೊರೆಯನ್ನು ನೀಡಿ. ಮತ್ತೊಂದೆಡೆ, ನೀವು ಅವಿವಾಹಿತರಾಗಿದ್ದರೆ, ನಿಮ್ಮ ಮದುವೆ ಮಾತುಕತೆ ಮುನ್ನಡೆಯುವ ಸಾಧ್ಯತೆ ಇದೆ. ಪೋಷಕರು ಸಹ ಈ ಬಗ್ಗೆ ನಿಮ್ಮೊಂದಿಗೆ ಮಾತನಾಡಬಹುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗುತ್ತದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ತೃಪ್ತರಾಗುತ್ತಾರೆ. ವ್ಯಾಪಾರಿಗಳು ಅಪಾರ ಲಾಭವನ್ನು ಪಡೆಯುವ ನಿರೀಕ್ಷೆಯಿದೆ ಇದರಿಂದ ನಿಮ್ಮ ಹಣಕಾಸಿನ ಸಮಸ್ಯೆಗಳು ಕೊನೆಗೊಳ್ಳುತ್ತದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ಇಂದು ನೀವು ತುಂಬಾ ಉಲ್ಲಾಸದಿಂದಿರುವಿರಿ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 26
ಶುಭ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12 ರವರೆಗೆ
ಮಕರ ರಾಶಿ:
ಇಂದು ವ್ಯಾಪಾರಸ್ಥರಿಗೆ ಬಹಳ ಮುಖ್ಯವಾಗಿರುತ್ತದೆ. ಬಹಳ ಸಮಯದ ವರೆಗೆ ಮಾಡಲು ಸಾಧ್ಯವಾಗದೆ ಇರುವ ಕೆಲಸವನ್ನು ಇಂದು ಪುನರಾರಂಭಿಸಬಹುದು. ನೀವು ಲೇಖನ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳು ಅಥವಾ ಆಹಾರ ಪದಾರ್ಥಗಳಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರೆ, ಇಂದು ನಿಮಗೆ ಆರ್ಥಿಕವಾಗಿ ತುಂಬಾ ಲಾಭ. ಉದ್ಯೋಗಸ್ಥರು ಇಂದು ಶ್ರಮಪಡಬೇಕು. ನೀವು ಕಚೇರಿಯಲ್ಲಿ ದೊಡ್ಡ ಸಭೆಯೊಂದರಲ್ಲಿ ಬ್ಯುಸಿಯಾಗಿರುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಕುಟುಂಬದೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಇಂದು ಸಂಗಾತಿಯೊಂದಿಗೆ ಬಹಳ ವಿಶೇಷ ದಿನವಾಗಲಿದೆ. ನಿಮ್ಮ ಪ್ರಿಯತಮೆಯು ಉತ್ತಮ ಮನಸ್ಥಿತಿಯನ್ನು ಹೊಂದಿರುತ್ತಾರೆ. ಮಕ್ಕಳ ಶಿಕ್ಷಣದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಮತ್ತು ಅವರು ಶ್ರದ್ಧೆಯಿಂದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಅವರ ಶಿಕ್ಷಣಕ್ಕಾಗಿ ಹಣ ಖರ್ಚು ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನೀವು ಮಧುಮೇಹ ರೋಗಿಯಾಗಿದ್ದರೆ, ನಿಮ್ಮ ಆಹಾರವನ್ನು ನೀವು ನಿಯಂತ್ರಣದಲ್ಲಿಟ್ಟುಕೊಳ್ಳಿ.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 22
ಶುಭ ಸಮಯ: ಸಂಜೆ 4 ರಿಂದ 8:55 ರವರೆಗೆ
ಕುಂಭ ರಾಶಿ:
ಯಾವುದೇ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಲು ನೀವು ನಿರಂತರವಾಗಿ ಕೆಲಸ ಮಾಡುತ್ತಿದ್ದರೆ, ಈ ದಿನದಂದು ನೀವು ಬಹಳ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಒಂದು ಸಣ್ಣ ತಪ್ಪು ಕೂಡ ನಿಮ್ಮ ಎಲ್ಲ ಶ್ರಮವನ್ನು ಹಾಳುಮಾಡಿ ಬಿಡಬಹುದು. ಉದ್ಯೋಗಸ್ಥರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ನಿಮಗೆ ಯಾವುದೇ ಸಮಸ್ಯೆ ಇದ್ದರೆ ಅವರ ಸಹಾಯ ತೆಗೆದುಕೊಳ್ಳಿ. ವ್ಯವಹಾರ ವಿಷಯಗಳಲ್ಲಿ ಆತುರ ಬೇಡ. ಸಣ್ಣ ಲಾಭ ಗಳಿಸಬಹುದು. ದೊಡ್ಡ ಲಾಭದ ಹುಡುಕಾಟದಲ್ಲಿ ಸಣ್ಣ ಲಾಭ ಸಿಗುವ ಅವಕಾಶವನ್ನು ಕಳೆದುಕೊಳ್ಳಬೇಡಿ. ನೀವು ವಿದ್ಯಾರ್ಥಿಯಾಗಿದ್ದರೆ, ಸೋಮಾರಿತನವನ್ನು ತಪ್ಪಿಸಿ ಮತ್ತು ನಿಮ್ಮ ಅಧ್ಯಯನದತ್ತ ಗಮನ ಹರಿಸಿ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ, ಇಂದು ನೀವು ನಿಮ್ಮ ತಂದೆಯಿಂದ ವಿಶೇಷ ಉಡುಗೊರೆಯನ್ನು ಪಡೆಯಬಹುದು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ:
ಇಂದಿನ ಮೊದಲಾರ್ಧ ನಿಮಗೆ ಲಾಭದಾಯಕ. ಸಾಮಾಜಿಕವಾಗಿ ಇಂದು ನೀವು ತುಂಬಾ ಸಕ್ರಿಯರಾಗಿರುತ್ತೀರಿ. ನೀವು ದೀರ್ಘಕಾಲ ಸಂಪರ್ಕಿಸಲು ಸಾಧ್ಯವಾಗದ ಜನರನ್ನು ಭೇಟಿಯಾಗುವ ಸಾಧ್ಯತೆ. ಇಂದು, ಕೆಲಸಗಳು ಹದಗೆಡಬಹುದು. ಇಂದು ನಿಮಗೆ ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕರೆ, ಈ ಅವಕಾಶವನ್ನು ಕೈಯಿಂದ ತಪ್ಪಿಹೋಗಲು ಬಿಡಬೇಡಿ. ನಿಮ್ಮಿಂದ ಯಾವುದೇ ತಪ್ಪಾಗದಂತೆ ಎಚ್ಚರವಹಿಸಿ. ಇಂದು ವ್ಯಾಪಾರಿಗಳು ಆರ್ಥಿಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಕೊರತೆಯಿಂದಾಗಿ ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಬಹುದು. ಆದರೆ ಚಿಂತಿಸುವ ಅಗತ್ಯವಿಲ್ಲ, ಕಾಲ ಸರಿದಂತೆ ಎಲ್ಲವೂ ಸರಿಯಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಕಡು ನೀಲಿ
ಶುಭ ಸಂಖ್ಯೆ: 29
ಶುಭ ಸಮಯ: ಸಂಜೆ 5 ರಿಂದ 10 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.
ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.
ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9845000635 .