Just In
- 45 min ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 2 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 3 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 5 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
Don't Miss
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿವಾರದ ದಿನ ಭವಿಷ್ಯ: ಕರ್ಕ ರಾಶಿಯವರಿಗೆ ಮುಖ್ಯವಾದ ದಿನ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ಶ್ರೀ
ಶ್ರೀನಿವಾಸ್
ಗುರೂಜಿ
ಶ್ರೀ
ಸಾಯಿ
ಅನುಗ್ರಹ
ಜ್ಯೋತಿಷ್ಯ
ಪೀಠ
ಪ್ರಧಾನ
ಜ್ಯೋತಿಷ್ಯರು
ಶ್ರೀ
ಶ್ರೀನಿವಾಸ್
ಗುರೂಜಿ
ಕರಾವಳಿ
ವಂಶಪರಂಪರೆ
ಮನೆತನದ
ಪ್ರಖ್ಯಾತ
ದೈವಶಕ್ತಿ
ಜ್ಯೋತಿಷ್ಯರು
ನಿಮ್ಮ
ಸಮಸ್ಯೆಗಳಾದ-
ಪ್ರೇಮ
ವಿಚಾರ,
ಪ್ರೀತಿಯಲ್ಲಿ
ನಂಬಿ
ಮೋಸ,
ಅತ್ತೆ-ಸೊಸೆ
ಕಲಹ,
ಹಣಕಾಸಿನ
ತೊಂದರೆ,
ಮದುವೆಯಲ್ಲಿ
ಅಡೆತಡೆ,
ಸತಿ
ಪತಿ
ಕಲಹ,
ಸಂತಾನ
ಸಮಸ್ಯೆ,
ಆರೋಗ್ಯ,
ಉದ್ಯೋಗ,
ಸಾಲ
ಭಾದೆ,
ಲವ್
ಪ್ರಾಬ್ಲಮ್
ಇನ್ನು
ಯಾವುದೇ
ಜಟಿಲ
ಸಮಸ್ಯೆಗಳಿಗೆ
ಪರಿಹಾರ
ತಿಳಿಸುತ್ತಾರೆ.
ಜೀವನದಲ್ಲಿ
ಜಿಗುಪ್ಸೆ
ಹೊಂದಿದ್ದರೆ
ಶ್ರೀ
ಸಾಯಿ
ಬಾಬಾ
ಪೂಜೆ
ಶಕ್ತಿಯಿಂದ
ಯಾವುದೇ
ಸಮಸ್ಯೆ
ಇದ್ದರೂ(
5)
ದಿನದಲ್ಲಿಶಾಶ್ವತ
ಪರಿಹಾರ
ತಿಳಿಸುತ್ತಾರೆ.
ಮನೆ
ವಿಳಾಸ-
#37/17
27th
cross
12
th
main
4th
block
ಜಯನಗರ
ಬೆಂಗಳೂರು
M.
9986623344
web:
www.sadguru-sai.com
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಕಾರ್ತಿಕಾ
ನಕ್ಷತ್ರ:
ಬೆಳಗ್ಗೆ
09:54
ರ
ವರೆಗೆ
ಶ್ರಾವಣ
ನಂತರ,
ಧನಿಷ್ಠ
ಶುಕ್ಲ
ಪಕ್ಷ
ರಾಹುಕಾಲ:
ಬೆಳಗ್ಗೆ
09:28ರಿಂದ
10:47ರವರೆಗೆ
ಗುಳಿಕಕಾಲ:
ಬೆಳಗ್ಗೆ
06:49ರಿಂದ
08:08ರವರೆಗೆ
ಯಮಗಂಡಕಾಲ:
ಮಧ್ಯಾಹ್ನ
01:27
ರಿಂದ
02:46ರವರೆಗೆ
ದುರ್ಮುಹೂರ್ತ:
ಬೆಳಗ್ಗೆ
06:49ರಿಂದ
07:31ರವರೆಗೆ
ಬೆಳಗ್ಗೆ
07:31ರಿಂದ
08:14ರವರೆಗೆ
ಸೂರ್ಯೋದಯ:
ಬೆಳಗ್ಗೆ
06:49ಕ್ಕೆ
ಸೂರ್ಯಾಸ್ತ:
ಸಂಜೆ
05:25ಕ್ಕೆ
ಮೇಷ ರಾಶಿ:
ಕಚೇರಿಯಲ್ಲಿ ಕೆಲಸದ ಒತ್ತಡ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಸೋಮಾರಿತನವನ್ನು ಬಿಟ್ಟು ನಿಮ್ಮ ಎಲ್ಲಾ ಕಾರ್ಯಗಳನ್ನು ವೇಗವಾಗಿ ಪೂರ್ಣಗೊಳಿಸಲು ಪ್ರಯತ್ನಿಸುವುದು ಉತ್ತಮ. ಇದಲ್ಲದೆ, ಸಹೋದ್ಯೋಗಿಗಳೊಂದಿಗೆ ಯಾವುದೇ ಸಂಘರ್ಷ ಮಾಡಬೇಡಿ. ನೀವು ವ್ಯಾಪಾರಸ್ಥರಾಗಿದ್ದರೆ ಇಂದು ನೀವು ಪ್ರಯಾಣ ಮಾಡುವುದನ್ನು ತಪ್ಪಿಸಬೇಕು. ಇಂದಿನ ಪ್ರಯಾಣವು ಸಾಕಷ್ಟು ದುಬಾರಿಯಾಗಿರಲಿದೆ ಮತ್ತು ದಣಿವು ತರಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಲಿದೆ. ನೀವು ಮನೆಯ ಸದಸ್ಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಇತ್ತೀಚಿಗೆ ನಿಮ್ಮ ಹಾಗೂ ನಿಮ್ಮ ಸಂಗಾತಿಯ ನಡುವೆ ಮನಸ್ತಾಪ ಇದ್ದಲ್ಲಿ, ಇಂದು ಆ ಎಲ್ಲಾ ಸಮಸ್ಯೆಗಳೂ ನಿವಾರಣೆ ಮಾಡಬಹುದು. ಆರ್ಥಿಕ ಸ್ಥಿತಿ ಸ್ವಲ್ಪ ಮಟ್ಟಿಗೆ ಹದಗೆಡಬಹುದು. ಯಾಕಂದರೆ ಇದ್ದಕ್ಕಿದ್ದಂತೆ ದೊಡ್ಡ ಖರ್ಚು ಎದುರಾಗಬಹುದು. ಇನ್ನು ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ, ಇಂದು ಹೊಟ್ಟೆಗೆ ಸಂಬಂಧಿಸಿದ ಯಾವುದಾದರೂ ಸಮಸ್ಯೆಯನ್ನು ಎದುರಿಸಬೇಕಾಗಬಹುದು.
ಉತ್ತಮ ಬಣ್ಣ: ಆಕಾಶ ನೀಲಿ
ಶುಭ ಸಂಖ್ಯೆ: 26
ಶುಭ ಸಮಯ: ಮಧ್ಯಾಹ್ನ 3 ರಿಂದ 7 ರವರೆಗೆ
ವೃಷಭ ರಾಶಿ:
ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ ಮತ್ತು ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ, ಅದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಇದಲ್ಲದೆ, ನೀವು ಪ್ರತಿ ವ್ಯವಹಾರ ನಿರ್ಧಾರವನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಪಾಲುದಾರಿಕೆಯಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳ ಶುಭ ದಿನವಾಗಲಿದೆ. ನೀವು ಅಪಾರ ಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಭಡ್ತಿ ಸಿಗಬಹುದು. ನಿಮ್ಮ ಬಾಸ್ ನೀಡಿದ ಜವಾಬ್ದಾರಿಗಳನ್ನು ಗಂಭೀರವಾಗಿ ಪರಿಗಣಿಸಿ. ಆರ್ಥಿಕವಾಗಿ ಇಂದು ಸಾಮಾನ್ಯ ದಿನವಾಗಲಿದೆ. ಪೋಷಕರ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ನೀವು ಅವರ ಪ್ರೀತಿಯನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಸುಸ್ತು ನಿಮ್ಮನ್ನು ಕಾಡಬಹುದು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 18
ಶುಭ ಸಮಯ: ಬೆಳಗ್ಗೆ 6:30 ರಿಂದ 12:45 ರವರೆಗೆ
ಮಿಥುನ ರಾಶಿ:
ಕೆಲಸದ ವಿಷಯದಲ್ಲಿ ನೀವು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಮಾಡಬೇಕಾಗುತ್ತದೆ. ಇಂದು ಕಚೇರಿಯಲ್ಲಿ ನಡೆಯುವ ಒಂದು ಪ್ರಮುಖ ಸಭೆಗಾಗಿ ನೀವು ತುಂಬಾ ಕಾರ್ಯನಿರತರಾಗಿರುತ್ತೀರಿ. ಮತ್ತೊಂದೆಡೆ, ವ್ಯಾಪಾರಸ್ಥರು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಕೆಲಸ ಡೀಸೆಲ್, ಪೆಟ್ರೋಲ್, ಆಸ್ತಿ, ಆಮದು-ರಫ್ತು, ಸಾರಿಗೆ ಇತ್ಯಾದಿಗಳಿಗೆ ಸಂಬಂಧಪಟ್ಟಿದ್ದರೆ ಇಂದು ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಬಹಳ ಸಮಯದ ನಂತರ ನೀವು ಇಂದು ನಿಮ್ಮ ಕುಟುಂಬದೊಂದಿಗೆ ಸಾಕಷ್ಟು ಸಮಯವನ್ನು ಕಳೆಯುತ್ತೀರಿ. ಹಣವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಯಾವುದೇ ಹಳೆಯ ಬಿಲ್ ಅನ್ನು ಸಹ ಪಾವತಿಸಬಹುದು. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ.
ಉತ್ತಮ ಬಣ್ಣ: ನೀಲಿ
ಶುಭ ಸಂಖ್ಯೆ: 37
ಶುಭ ಸಮಯ: ಮಧ್ಯಾಹ್ನ 12:30 ರಿಂದ 7:55 ರವರೆಗೆ
ಕರ್ಕಾಟಕ ರಾಶಿ:
ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಲಿದೆ. ನಿಮ್ಮ ಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳಾಗಬಹುದು. ಆದಾಗ್ಯೂ, ನೀವು ಹೆಚ್ಚು ಚಿಂತಿಸಬೇಕಾಗಿಲ್ಲ ಏಕೆಂದರೆ ಈ ಬದಲಾವಣೆಯು ನಿಮಗೆ ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಕೆಲಸದ ಬಗ್ಗೆ ಮಾತನಾಡುತ್ತಾ, ನಿಮಗೆ ಕಚೇರಿಯಲ್ಲಿ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಿದರೆ, ಅದರ ಬಗ್ಗೆ ಚಿಂತೆ ಮಾಡುವ ಬದಲು, ನಿಮ್ಮ ಕೆಲಸವನ್ನು ಪೂರ್ಣ ಉತ್ಸಾಹ ಮತ್ತು ಶ್ರದ್ಧೆಯಿಂದ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯದಾಗಬಹುದು. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಪೋಷಕರು, ಸಹೋದರ ಸಹೋದರಿಯರು, ಎಲ್ಲರೊಂದಿಗೂ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ನೀವು ಮದುವೆಯಾಗಿದ್ದರೆ ನಿಮ್ಮ ವೈವಾಹಿಕ ಜೀವನದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಎದುರಾಗಬಹುದು.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 2:30 ರಿಂದ 5:30 ರವರೆಗೆ
ಸಿಂಹ ರಾಶಿ:
ನಿಮ್ಮ ಕೆಲವು ಪ್ರಮುಖ ಕಾರ್ಯಗಳು ನಿನ್ನೆ ಅಪೂರ್ಣವಾಗಿದ್ದರೆ, ಅದು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹಣದ ಪರಿಸ್ಥಿತಿಯಲ್ಲಿ ಏಳ್ಗೆ. ನೀವು ಬಹಳ ಸಮಯದಿಂದ ಆರ್ಥಿಕ ಸ್ಥಿತಿ ಉತ್ತಮವಾಗಿಸಲು ಪ್ರಯತ್ನಿಸುತ್ತಿದ್ದರೆ, ಇಂದು ನೀವು ಯಶಸ್ಸನ್ನು ಪಡೆಯಬಹುದು. ಆದರೆ ಹಣಕಾಸಿನ ವಿಷಯಗಳಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ವ್ಯವಹರಿಸಬೇಕು. ವಿಶೇಷವಾಗಿ ಆರ್ಥಿಕ ವಹಿವಾಟು ನಡೆಸುವಾಗ ಕಾಳಜಿ ವಹಿಸಿ. ಉದ್ಯೋಗದಲ್ಲಿರುವವರು ಕಚೇರಿಯಲ್ಲಿ ಬಹಳ ಸಮತೋಲನದಲ್ಲಿ ವರ್ತಿಸಬೇಕು. ಹಿರಿಯ ಅಧಿಕಾರಿಗಳೊಂದಿಗೆ ಕೋಪದಿಂದ ಮಾತನಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ನೀವು ತೊಂದರೆಗೆ ಒಳಗಾಗಬಹುದು. ಇಂದು ವ್ಯಾಪಾರಿಗಳಿಗೆ ಉತ್ತಮ ದಿನವಾಗಲಿದೆ. ವಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದಲ್ಲಿ, ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳು ಉಂಟಾಗಬಹುದು.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 39
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕನ್ಯಾರಾಶಿ:
ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳಿರಬಹುದು. ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ನೀವು ತುಂಬಾ ಭಾವನಾತ್ಮಕವಾಗಿ ಯೋಚಿಸಬೇಡಿ. ನೀವು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ನೀವು ವ್ಯಾಪಾರ ಮಾಡುತ್ತಿದ್ದರೆ, ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತಿಲ್ಲವಾದರೆ ಇಂದು ಸ್ವಲ್ಪ ಸುಧಾರಣೆ ಸಾಧ್ಯ. ಇದ್ದಕ್ಕಿದ್ದಂತೆ ನಿಮ್ಮ ಕೈಗೆ ಉತ್ತಮ ಅವಕಾಶ ಒದಗಿಬರಬಹುದು. ಉದ್ಯೋಗಿಗಳು ಕಚೇರಿಯಲ್ಲಿ ತಮ್ಮ ಮೇಲಾಧಿಕಾರಿಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಬಾಸ್ ಕುರಿತ ಸಣ್ಣ ವಿಷಯವನ್ನು ಸಹ ನಿರ್ಲಕ್ಷಿಸಬೇಡಿ. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನೀವು ಇಂದು ತಲೆನೋವಿನಿಂದ ತೊಂದರೆಗೊಳಗಾಗುತ್ತೀರಿ.
ಉತ್ತಮ ಬಣ್ಣ: ಆಕಾಶ ನೀಲಿ
ಶುಭ ಸಂಖ್ಯೆ: 20
ಶುಭ ಸಮಯ: ಬೆಳಗ್ಗೆ 7:55 ರಿಂದ 11:30 ರವರೆಗೆ
ತುಲಾ ರಾಶಿ:
ಇಂದಿನ ದಿನ ನಿಮಗೆ ಅಷ್ಟು ಉತ್ತಮವಾಗಿರುವುದಿಲ್ಲ. ಸಂಗಾತಿಯೊಂದಿಗೆ ಸಣ್ಣ ಮಾತುಕತೆ ಎದುರಿಸಬೇಕಾಗುತ್ತದೆ. ನಿಮ್ಮ ಪ್ರೀತಿ ಪಾತ್ರರ ಅಸಭ್ಯ ವರ್ತನೆಯು ನಿಮ್ಮ ಭಾವನೆಗಳನ್ನು ಘಾಸಿಗೊಳಿಸುತ್ತದೆ. ನಿಮ್ಮ ನಡವಳಿಕೆಯನ್ನು ನೀವು ಸರಿಯಾಗಿ ಇಟ್ಟುಕೊಳ್ಳುವುದು ಉತ್ತಮ. ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ಇಂದು ನೀವು ಸಾಲ ಪಡೆಯುವುದನ್ನು ಮತ್ತು ಸಾಲ ನೀಡುವುದನ್ನು ತಪ್ಪಿಸಿ. ಕೆಲಸದ ಬಗ್ಗೆ ಮಾತನಾಡುತ್ತಾ, ನಿಮ್ಮ ಬಾಸ್ ಅಥವಾ ಮೇಲಾಧಿಕಾರಿಗಳನ್ನು ಮೆಚ್ಚಿಸಲು ಹೆಚ್ಚು ಕೆಲಸದ ಹೊರೆಯನ್ನು ತೆಗೆದುಕೊಳ್ಳಬೇಡಿ. ಇದು ನಿಮ್ಮ ಕಾರ್ಯಕ್ಷಮತೆ ಕುಸಿಯಲು ಕಾರಣವಾಗಬಹುದು. ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ವ್ಯಾಪಾರಸ್ಥರು ಇಂದು ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ನಿಮ್ಮ ವಿರೋಧಿಗಳು ತೀವ್ರವಾಗಿ ಸ್ಪರ್ಧಿಸಬಹುದು. ಆರೋಗ್ಯದ ಬಗ್ಗೆ ಮಾತನಾಡುತ್ತಾ, ನೀವು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದರೆ, ಆ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ವೈದ್ಯರನ್ನು ಸಂಪರ್ಕಿಸಿ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 13
ಶುಭ ಸಮಯ: ಬೆಳಗ್ಗೆ 10:10 ರಿಂದ ಮಧ್ಯಾಹ್ನ 12:25
ವೃಶ್ಚಿಕ ರಾಶಿ:
ನೀವು ವಿದ್ಯಾರ್ಥಿಯಾಗಿದ್ದರೆ ಇಂದು ನಿಮಗೆ ಅದೃಷ್ಟ ಒದಗಿ ಬರಲಿದೆ. ಇತ್ತೀಚೆಗೆ ಬರೆದ ಯಾವುದಾದರೂ ಪರೀಕ್ಷೆಯಲ್ಲಿ ನೀವು ಅದ್ಭುತ ಯಶಸ್ಸನ್ನು ಪಡೆಯಬಹುದು. ಇದೆಲ್ಲವೂ ನಿಮ್ಮ ಕಠಿಣ ಪರಿಶ್ರಮದ ಫಲ. ಉದ್ಯೋಗಸ್ಥರು ಹಿರಿಯ ಅಧಿಕಾರಿಗಳನ್ನು ಗೌರವದಿಂದ ನೋಡಿಕೊಳ್ಳಬೇಕು. ನೀವು ಮಾಡುವ ಕೆಲಸದಲ್ಲಿ ಅವರು ನ್ಯೂನತೆಗಳನ್ನು ಗುರುತಿಸಿದರೆ ಅವರೊಂದಿಗೆ ವಾದಿಸಬೇಡಿ. ಸರ್ಕಾರಿ ಉದ್ಯೋಗಗಳಲ್ಲಿ ಕೆಲಸ ಮಾಡುವವರಿಗೆ ಕೆಲಸ ಜಾಸ್ತಿ. ನಿಮ್ಮ ಜವಾಬ್ದಾರಿಗಳ ಹೊರೆ ಹೆಚ್ಚಾಗಬಹುದು. ನೀವು ಚಿನ್ನ ಮತ್ತು ಬೆಳ್ಳಿ ವ್ಯಾಪಾರ ಮಾಡುತ್ತಿದ್ದರೆ ಇಂದು ನಿಮಗೆ ಮಿಶ್ರ ಫಲ. ದಿನದ ಎರಡನೇ ಭಾಗದಲ್ಲಿ, ನೀವು ಹಣದ ಬಗ್ಗೆ ಯಾರೊಂದಿಗಾದರೂ ವಿವಾದವನ್ನು ಎದುರಿಸಬೇಕಾಗಬಹುದು. ನಿಮ್ಮ ಕೋಪವನ್ನು ನೀವು ನಿಯಂತ್ರಿಸಿ. ಆರೋಗ್ಯದ ಬಗ್ಗೆ ಮಾತನಾಡುವುದಾದಲ್ಲಿ, ನಿಮಗೆ ಉಸಿರಾಟದ ತೊಂದರೆ ಇದ್ದರೆ, ನೀವು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 2
ಶುಭ ಸಮಯ: ಸಂಜೆ 4:30 ರಿಂದ 10 ರವರೆಗೆ
ಧನು ರಾಶಿ:
ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಇದಲ್ಲದೆ, ನಿಮ್ಮ ಹಣಕಾಸಿನ ಯೋಜನೆಗಳನ್ನು ರಹಸ್ಯವಾಗಿಡುವುದು ಒಳ್ಳೆಯದು. ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಇಂದು ನಿಮ್ಮ ಯೋಜನೆ ಮುಂದುವರಿಯಬಹುದು. ಕೀಟನಾಶಕಗಳೊಂದಿಗೆ ಕೆಲಸ ಮಾಡುವ ವ್ಯಾಪಾರಿಗಳು ಇಂದು ಹೆಚ್ಚು ಪ್ರಯೋಜನ ಪಡೆಯಬಹುದು. ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮದ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಕಚೇರಿಯಲ್ಲಿ, ನಿಮ್ಮ ಪ್ರಗತಿಯಾಗುವ ಸಾಧ್ಯತೆ ಇದೆ. ನೀವು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೀರಿ. ಇನ್ನು ಮನೆಯ ವಾತಾವರಣ ಸರಿಯಾಗಿರುವುದಿಲ್ಲ. ಕುಟುಂಬದಲ್ಲಿ ಅಪಶ್ರುತಿ ಹೆಚ್ಚಾಗಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದಲ್ಲಿ, ಒತ್ತಡದಿಂದಾಗಿ ನಿಮ್ಮ ಆರೋಗ್ಯದ ಸ್ಥಿತಿ ಕುಸಿಯಬಹುದು.
ಉತ್ತಮ ಬಣ್ಣ: ತಿಳಿ ಹಳದಿ
ಶುಭ ಸಂಖ್ಯೆ: 9
ಶುಭ ಸಮಯ: ಬೆಳಗ್ಗೆ 4:40 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ:
ಉದ್ಯೋಗಸ್ಥರಿಗೆ ಇಂದು ಮಿಶ್ರ ದಿನ. ನಿಮಗೆ ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗಬಹುದು. ಆದಾಗ್ಯೂ, ನಿಮ್ಮ ಎಲ್ಲ ಕೆಲಸಗಳನ್ನು ನೀವು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಪೂರ್ಣಗೊಳಿಸುತ್ತೀರಿ. ಹಿರಿಯ ಅಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಗೆ ತೃಪ್ತರಾಗುತ್ತಾರೆ. ಸಗಟು ವ್ಯಾಪಾರಿಗಳು ಇಂದು ಲಾಭ ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಇಂದು ಸಂಘರ್ಷ ಮಾಡಬೇಡಿ. ನಿಮ್ಮ ನಡುವಿನ ವೈಮನಸ್ಸು ಹಾನಿಯನ್ನುಂಟು ಮಾಡುತ್ತದೆ. ಜೀವನ ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಇಂದು ನಿಮ್ಮ ಪ್ರಿಯರಿಂದ ಆರ್ಥಿಕ ಲಾಭಗಳು ಸಿಗಬಹುದು. ಸಂಜೆ ಸ್ನೇಹಿತರೊಂದಿಗೆ ಮೋಜು ಮಾಡುವ ಅವಕಾಶ ಸಿಗುತ್ತದೆ. ಇದು ನಿಮಗೆ ಮಾನಸಿಕವಾಗಿ ತುಂಬಾ ನೆಮ್ಮದಿಯನ್ನು ನೀಡುತ್ತದೆ.
ಉತ್ತಮ ಬಣ್ಣ: ಮರೂನ್
ಶುಭ ಸಂಖ್ಯೆ: 11
ಶುಭ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ:
ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದದರೆ ಇಂದು ಸಾಮಾನ್ಯವಾಗಿರುತ್ತದೆ. ಆದರೆ ನೀವು ಪ್ರತಿದಿನ ಲಘು ವ್ಯಾಯಾಮ ಮಾಡಬೇಕು. ಇದು ನಿಮ್ಮನ್ನು ಚುರುಕುಗೊಳಿಸುತ್ತದೆ. ಇಂದು ಕುಟುಂಬ ವಿಷಯದಲ್ಲಿ ಶುಭ ದಿನವಾಗಿರುತ್ತದೆ. ಇದ್ದಕ್ಕಿದ್ದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಇದರಿಂದ ಮನೆಯ ವಾತಾವರಣ ಇನ್ನಷ್ಟು ಆಹ್ಲಾದಕರಗೊಳ್ಳುತ್ತದೆ. ಪೋಷಕರ ಆಶೀರ್ವಾದ ನಿಮ್ಮಮೇಲಿದೆ. ನಿಮ್ಮ ಸಂಗಾತಿಯು ಕೆಲ ದಿನಗಳಿಂದ ನಿಮ್ಮತ್ತ ಗಮನ ಹರಿಸಿಲ್ಲದಿದ್ದರೆ, ಇಂದು ನಿಮ್ಮ ಮನೆಯಲ್ಲಿ ನಿಮಗಾಗಿ ವಿಶೇಷವಾದ ಅಚ್ಚರಿಯನ್ನು ನೀಡಲು ಯೋಜನೆ ಮಾಡಿರಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಸಾಧ್ಯ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 9
ಶುಭ ಸಮಯ: ಬೆಳಗ್ಗೆ 11:30 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ:
ಇಂದು ಆರ್ಥಿಕ ಸ್ಥಿತಿಯಲ್ಲಿ ಏರಿಳಿತಗಳು ಉಂಟಾಗುತ್ತವೆ. ಅಕಸ್ಮಾತ್ ಖರ್ಚು ಹೆಚ್ಚಾಗಿ ನಿಮ್ಮ ಬಜೆಟ್ ಯೋಜನೆ ಹದಗೆಡಬಹುದು. ಅಲ್ಲದೆ, ಇಂದು ಬರಬೇಕಾಗಿದ್ದ ಸಾಲದ ಹಣವನ್ನು ಪಡೆಯದೇ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ನೀವು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ನಿರಂತರ ಪ್ರಯತ್ನದಿಂದಾಗಿ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರಿಗಳಿಗೆ ಇಂದು ಸಾಮಾನ್ಯ ದಿನವಾಗಲಿದೆ. ಬುದ್ಧಿವಂತಿಕೆಯಿಂದ ಯಾವುದೇ ಸಮಸ್ಯೆಯನ್ನು ಪರಿಹರಿಸಲು ನಿಮಗೆ ಸಾಧ್ಯವಾಗುತ್ತದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಸ್ವಲ್ಪ ಒತ್ತಡವನ್ನುಂಟುಮಾಡುತ್ತವೆ. ನಿಮ್ಮ ಜೀವನ ಸಂಗಾತಿಯು ನಿಮ್ಮ ಮೇಲೆ ತುಂಬಾ ಕೋಪಗೊಳ್ಳುತ್ತಾರೆ. ಅನಗತ್ಯ ವಿವಾದಗಳಿಂದ ದೂರವಿರಿ, ಇಲ್ಲದಿದ್ದರೆ ನಿಮ್ಮ ದಿನವು ಅನಗತ್ಯ ವಿಷಯಗಳಲ್ಲಿಯೇ ವ್ಯರ್ಥವಾಗಿ ಬಿಡುತ್ತದೆ.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 1 ರಿಂದ 5 ರವರೆಗೆ
ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com