For Quick Alerts
ALLOW NOTIFICATIONS  
For Daily Alerts

ಶುಕ್ರವಾರದ ದಿನ ಭವಿಷ್ಯ: ಕರ್ಕ ರಾಶಿಯವರೇ ನೀವಿಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳುವಿರಿ

|

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.

ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.

ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

https://sridurga-astrologer.com

Dina Bhavishya 23 October 2020

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಆಶ್ವಿಜ
ನಕ್ಷತ್ರ: ಅಕ್ಟೋಬರ್ 24, ಮಧ್ಯಾಹ್ನ 01:28 ರವರೆಗೆ ಉತ್ತರಾಷಾಢ, ನಂತರ ಶ್ರವಣ
ತಿಥಿ: ಶುಕ್ಲ ಪಕ್ಷ
ರಾಹುಕಾಲ: ಬೆಳಗ್ಗೆ 10:41ರಿಂದ 12:05ರವರೆಗೆ
ಗುಳಿಕಕಾಲ: ಬೆಳಗ್ಗೆ 07:52ರಿಂದ 09:16ರವರೆಗೆ
ಯಮಗಂಡಕಾಲ: ಮಧ್ಯಾಹ್ನ 02:54ರಿಂದ 04:19ರವರೆಗೆ
ದುರ್ಮುಹೂರ್ತ: ಬೆಳಗ್ಗೆ 08:42ರಿಂದ 09:27ರವರೆಗೆ
ಮಧ್ಯಾಹ್ನ 12:28ರಿಂದ 01:13ರವರೆಗೆ
ಸೂರ್ಯೋದಯ: ಬೆಳಗ್ಗೆ 06:27ಕ್ಕೆ
ಸೂರ್ಯಾಸ್ತ: ಸಂಜೆ 05:43ಕ್ಕೆ

ಮೇಷ ರಾಶಿ:

ಮೇಷ ರಾಶಿ:

ಇಂದಿನ ಮೊದಲಾರ್ಧ ಉತ್ತಮವಾಗಿದೆ. ಕೆಲವೆಡೇ ಯಶಸ್ಸು ಕೆಲವೆಡೇ ನಿರಾಸೆಯಾಗಲಿದೆ. ಕಚೇರಿಯಲ್ಲಿ ಎಲ್ಲಾ ಕೆಲಸಗಳನ್ನು ಇಷ್ಟಪಟ್ಟು ಮಾಡಿ ಮುಗಿಸುತ್ತೀರಿ. ಅಗತ್ಯವಿದ್ದರೆ ನಿಮ್ಮ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನೂ ನೀವು ಪಡೆಯಬಹುದು. ಮತ್ತೊಂದೆಡೆ, ನೀವು ವ್ಯಾಪಾರ ಮಾಡಿದರೆ, ನೀವು ಹೂಡಿಕೆ ಅವಕಾಶವನ್ನು ಕೂಡ ಪಡೆಯಬಹುದು. ಆದರೆ ಹಣದ ವಿಷಯದಲ್ಲಿ ಜಾಗರೂಕರಾಗಿರಲೇ ಬೇಕು. ನೀವು ಪುಸ್ತಕ ವ್ಯಾಪಾರಿಗಳು ಇಂದು ಲಾಭವನ್ನು ಗಳಿಸುತ್ತಾರೆ. ಕುಟುಂಬ ಜೀವನದಲ್ಲಿ ಸ್ವಲ್ಪ ಮನಸ್ತಾಪ ಇಂದು. ನಿಮ್ಮ ಅಭಿಪ್ರಾಯವನ್ನು ಕುಟುಂಬದ ಮೇಲೆ ಹೇರುವುದನ್ನು ತಪ್ಪಿಸಿ. ಅವರ ಇಷ್ಟ ಕಷ್ಟಗಳ ಬಗ್ಗೆ ನೀವು ಗಮನಹರಿಸಬೇಕು. ಸಂಗಾತಿಯ ಅಸಭ್ಯ ವರ್ತನೆ ನಿಮ್ಮನ್ನು ಕಾಡಬಹುದು. ಆದರೆ ನೀವು ತಾಳ್ಮೆಯಿಂದ ವರ್ತಿಸಿದರೆ ಸ್ವಲ್ಪ ದಿನಗಳಲ್ಲಿಯೇ ಸಮಾಧಾನವನ್ನು ಕಂಡುಕೊಳ್ಳಬಹುದು. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಇಂದು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು. ಲ್ಯಾಪ್‌ಟಾಪ್, ಮೊಬೈಲ್ ಅಥವಾ ಕಂಪ್ಯೂಟರ್ ಅನ್ನು ದೀರ್ಘಕಾಲ ಬಳಸದಿರುವುದು ಉತ್ತಮ.

ಉತ್ತಮ ಬಣ್ಣ: ಬಿಳಿ

ಶುಭ ಸಂಖ್ಯೆ: 11

ಶುಭ ಸಮಯ: ಸಂಜೆ 4 ರಿಂದ 9 ರವರೆಗೆ

ವೃಷಭ ರಾಶಿ:

ವೃಷಭ ರಾಶಿ:

ಇಂದುನಿಮ್ಮ ಜೀವನದಲ್ಲಿ ಏರಿಳಿತಗಳನ್ನು ಅನುಭವಿಸುವಿರಿ. ನೀವು ಹಣದ ಬಗ್ಗೆ ತುಂಬಾ ಚಿಂತೆ ಮಾಡುತ್ತೀರಿ, ವಿಶೇಷವಾಗಿ ನೀವು ವ್ಯಾಪಾರ ಮಾಡುವಲ್ಲಿ ಹಣಕಾಸಿನ ಸಮಸ್ಯೆ ಉಂಟಾಗುತ್ತದೆ. ನಿಮ್ಮ ಪ್ರಮುಖ ಫೈಲ್‌ಗಳನ್ನು ಕಚೇರಿಯಲ್ಲಿ ಇರಿಸಿ, ಇಲ್ಲದಿದ್ದರೆ ತೊಂದರೆಯಾಗಬಹುದು. ಬಾಸ್ ಮುಂದೆ ಸರಿಯಾಗಿ ವರ್ತಿಸಿ. ತರಾತುರಿಯಲ್ಲಿ ಅಥವಾ ಬೇಜವಾಬ್ದಾರಿಯಿಂದ ವರ್ತಿಸಬೇಡಿ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಿ. ಅನಗತ್ಯವಾಗಿ ವಾದಿಸಬೇಡಿ. ಈ ರೀತಿಯ ವಿಷಯಗಳು ನಿಮ್ಮ ವೈವಾಹಿಕ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ನಿಮ್ಮ ಸ್ವಭಾವವನ್ನು ಬದಲಾಯಿಸಲು ನೀವು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಇಂದು ನೀವು ತುಂಬಾ ದಣಿವನ್ನು ಅನುಭವಿಸಬಹುದು. ಅಲ್ಲದೇ, ಮನಸ್ಸು ಕೂಡ ದುಃಖವಾಗಿರುತ್ತದೆ.

ಉತ್ತಮ ಬಣ್ಣ: ಕಡು ನೀಲಿ

ಶುಭ ಸಂಖ್ಯೆ: 4

ಶುಭ ಸಮಯ: ಮಧ್ಯಾಹ್ನ 2:05 ರಿಂದ 6:30 ರವರೆಗೆ

ಮಿಥುನ ರಾಶಿ:

ಮಿಥುನ ರಾಶಿ:

ಇಂದು ವ್ಯಾಪಾರಿಗಳಿಗೆ ಉತ್ತಮ ದಿನ. ನಿಮ್ಮ ಕೆಲವು ಪ್ರಮುಖ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ನೀವು ಸೌಂದರ್ಯವರ್ಧಕಗಳನ್ನು ವ್ಯಾಪಾರ ಮಾಡುತ್ತಿದ್ದರೆ, ಡಿದರೆ, ಈ ಸಮಯದಲ್ಲಿ ನೀವು ಹೆಚ್ಚಿನ ಸರಕುಗಳನ್ನು ಸಂಗ್ರಹಿಸುವುದನ್ನು ತಪ್ಪಿಸಬೇಕು. ಇಂದು ನೀವು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ನೌಕರಿ ಮಾಡುವವರಿಗೆ ಕೆಲಸಗಳು ಜಾಸ್ತಿ. ಇನ್ನು ಹಣದ ವಿಷಯದಲ್ಲಿ ಹೊಸ ಆದಾಯದ ಮೂಲವು ನಿಮ್ಮನ್ನರಸಿ ಬರಲಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನೀವು ಪೋಷಕ ಆಶೀರ್ವಾದ ನಿಮ್ಮ ಮೇಲಿದೆ. ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ ಕೋಪಗೊಳ್ಳುವುದು ಒಳ್ಳೆಯದಲ್ಲ. ಇಲ್ಲದಿದ್ದರೆ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ವಿಷಯಕ್ಕೆ ಬಂದರೆ, ನಿಮ್ಮ ದಿನಚರಿಯನ್ನು ಸರಿಯಾಗಿ ಯೋಜಿಸಿಕೊಳ್ಳಿ.

ಉತ್ತಮ ಬಣ್ಣ: ಹಸಿರು

ಶುಭ ಸಂಖ್ಯೆ: 17

ಶುಭ ಸಮಯ: ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿ:

ನೀವು ಇಂದು ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವುದಿದ್ದರೆ ಅದನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಇತರರ ಬಾಯಿ ಮಾತಿಗೆ ಬಲಿಯಾಗಬೇಡಿ. ವೈವಾಹಿಕ ಜೀವನವನ್ನು ಸಂತೋಷದಿಂದ ಇಡಲು ಸಂಗಾತಿಯೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಿರಿ. ಇದು ನಿಮ್ಮ ಸಂಬಂಧವನ್ನು ಬಲಪಡಿಸುತ್ತದೆ ಮತ್ತು ನಿಮ್ಮ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದಲ್ಲಿ, ಈ ಸಮಯದಲ್ಲಿ ನೀವು ನಿಮ್ಮ ಬುದ್ಧಿವಂತಿಕೆಯನ್ನು ಬಳಸಬೇಕಾಗುತ್ತದೆ. ಆಗ ಮಾತ್ರ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ಕಚೇರಿಯಲ್ಲಿ ನಿಮ್ಮ ಉನ್ನತ ಅಧಿಕಾರಿಗಳ ಹೃದಯವನ್ನು ಗೆಲ್ಲಲು ಪ್ರಯತ್ನಿಸಿ. ಸಹೋದ್ಯೋಗಿಗಳ ಅನಗತ್ಯ ಪಾಲ್ಗೊಳ್ಳುವಿಕೆಯನ್ನು ಸಹ ತಪ್ಪಿಸಿ. ಕಬ್ಬಿಣದ ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.

ಉತ್ತಮ ಬಣ್ಣ: ಆಕಾಶ

ಶುಭ ಸಂಖ್ಯೆ: 20

ಶುಭ ಸಮಯ: ಬೆಳಗ್ಗೆ 7:55 ರಿಂದ 11:30 ರವರೆಗೆ

ಸಿಂಹ ರಾಶಿ:

ಸಿಂಹ ರಾಶಿ:

ನಿರುದ್ಯೋಗಿಗಳು ಇನ್ನಷ್ಟು ಕಾಯಬೇಕು. ಈ ಸಮಯದಲ್ಲಿ ನೀವು ನಿರಾಶೆ ಅನುಭವಿಸಬೇಕಾಗಬಹುದು. ಆದಾಗ್ಯೂ, ನೀವು ನಿಮ್ಮ ಯಶಸ್ಸಿಗಾಗಿ ಪ್ರಯತ್ನಿಸುತ್ತಲೇ ಇರಬೇಕು. ಕೇವಲ ಒಂದು ಸಂದರ್ಶನವಲ್ಲ ಇನ್ನೂ ಹೆಚ್ಚಿನ ಕಂಪನಿಗಳಿಗೆ ಕೆಲಸಕ್ಕಾಗಿ ನೀವು ಅರ್ಜಿ ಸಲ್ಲಿಸಬೇಕು. ಮತ್ತೊಂದೆಡೆ, ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ನೀವು ಬಯಸಿದರೆ, ಹಣಕಾಸಿನ ಸಮಸ್ಯೆಗಳಿಂದಾಗಿ ನಿಮ್ಮ ಯೋಜನೆಗಳು ಅಡ್ಡಿಯಾಗಬಹುದು. ಚಿನ್ನ ಮತ್ತು ಬೆಳ್ಳಿಯೊಂದಿಗೆ ಕೆಲಸ ಮಾಡುವ ಜನರಿಗೆ ಯೋಗ್ಯವಾದ ಲಾಭಗಳು ಸಿಗುತ್ತವೆ. ಮನೆಯ ವಾತಾವರಣ ಸಾಮಾನ್ಯವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ಮನೆಯ ಸದಸ್ಯರು ಒಪ್ಪದೇ ಇರಬಹುದು. ಸಂಬಂಧದ ಮಾಧುರ್ಯವು ಉಳಿಯಲು ನಿಮ್ಮ ತಾಳ್ಮೆ ಅತ್ಯಗತ್ಯ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಆರೋಗ್ಯದಲ್ಲಿ ತೊಂದರೆ ಇದ್ದರೆ, ನೀವು ವೈದ್ಯರನ್ನು ಸಂಪರ್ಕಿಸಬೇಕು.

ಉತ್ತಮ ಬಣ್ಣ: ಕಂದು

ಶುಭ ಸಂಖ್ಯೆ: 9

ಶುಭ ಸಮಯ: ಬೆಳಗ್ಗೆ 10:45 ರಿಂದ ಮಧ್ಯಾಹ್ನ 12:25

ಕನ್ಯಾರಾಶಿ:

ಕನ್ಯಾರಾಶಿ:

ನಿಮಗಾಗಿ ಸ್ವಲ್ಪ ಸಮಯವನ್ನು ಇಂದು ಮೀಸಲಿಡಿ. ಇಷ್ಟು ದಿನಗಳ ಕಾಲ ನಿರಂತರವಾಗಿ ಕೆಲಸ ಮಾಡುತ್ತಿದ್ದರೆ, ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗದಿದ್ದರೆ ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ. ಇಂದು, ನೀವು ದೀರ್ಘಕಾಲದಿಂದ ಭೇಟಿಯಾಗದ ಸ್ನೇಹಿತರನ್ನು ಭೇಟಿ ಮಾಡುವಿರಿ. ಇತರರ ವಿಷಯದಲ್ಲಿ ಅನಗತ್ಯವಾಗಿ ಮಾತನಾಡುವುದು ಒಳ್ಳೆಯದಲ್ಲ. ಇದು ನಿಮ್ಮ ಕೆಲಸ ಮತ್ತು ವ್ಯಕ್ತಿತ್ವ ಎರಡರ ಮೇಲೂ ಪರಿಣಾಮ ಬೀರುತ್ತದೆ. ನಿಮ್ಮ ತಂದೆಯ ಸಹಾಯದಿಂದ ವ್ಯಾಪಾರ ಮಾಡುತ್ತಿದ್ದರೆ ನಿಮಗಿಂದು ಉತ್ತಮ ಲಾಭ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ. ನಿಮ್ಮ ಸಂಗಾತಿಯಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಆರ್ಥಿಕ ವಿಷಯದಲ್ಲಿ ಉತ್ತಮ ಲಾಭ. ಹಠಾತ್ ಹಣ ಸಿಗುವ ಸಾಧ್ಯತೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ

ಉತ್ತಮ ಬಣ್ಣ: ಕೆಂಪು

ಶುಭ ಸಂಖ್ಯೆ: 22

ಶುಭ ಸಮಯ: ಸಂಜೆ 5:30 ರಿಂದ 9 ರವರೆಗೆ

ತುಲಾ ರಾಶಿ:

ತುಲಾ ರಾಶಿ:

ನೀವು ಕಚೇರಿಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತೀರಿ. ಇಂದು ಹಿರಿಯರು ನಿಮ್ಮ ಕೆಲಸದಿಂದಲೂ ನೀವು ತೃಪ್ತರಾಗುತ್ತೀರಿ. ನೀವು ಇತ್ತೀಚಿಗೆ ತೆಗೆದುಕೊಂಡ ಪ್ರಮುಖ ನಿರ್ಧಾರದಿಂದ ನಿಮ್ಮ ವ್ಯಾಪಾರದಲ್ಲಿ ಉತ್ತಮ ಫಲಿತಾಂಶ ಪಡೆಯುವಿರಿ. ತೈಲ ವ್ಯಾಪಾರ ಮಾಡುವ ಜನರು ಉತ್ತಮ ಪ್ರಯೋಜನ ಪಡೆಯಬಹುದು. ಆರ್ಥಿಕ ರಂಗದಲ್ಲಿ, ದಿನವು ಉತ್ತಮವಾಗಿದೆ. ಹಣವನ್ನು ಗಳಿಸಬಹುದು. ಆದಾಗ್ಯೂ, ನೀವು ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಬೇಕು. ಕುಟುಂಬ ಜೀವನದ ಬಗ್ಗೆ ಮಾತನಾಡುವುದಾದರೆ, ಮನೆಯಲ್ಲಿ ಉದ್ವಿಗ್ನತೆ ಇದ್ದರೆ, ನಿಮ್ಮ ಬುದ್ಧಿವಂತಿಕೆಯಿಂದ ಪರಿಸ್ಥಿತಿಯನ್ನು ನಿಭಾಯಿಸಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸಾಮರಸ್ಯದಿಂದ ಕೂಡಿರುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನದ ಸಂತೋಷವು ಹೆಚ್ಚಾಗುತ್ತದೆ. ಮಗುವಿನ ಕಡೆಯಿಂದ ಯಾವುದೇ ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆ. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ.

ಉತ್ತಮ ಬಣ್ಣ: ಮರೂನ್

ಶುಭ ಸಂಖ್ಯೆ: 2

ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿ:

ದಿನದ ಮೊದಲಾರ್ಧದಲ್ಲಿ ಸ್ವಲ್ಪ ಒತ್ತಡದ ಮನಸ್ಥಿತಿ. ಹೆಚ್ಚುತ್ತಿರುವ ಮಾನಸಿಕ ಒತ್ತಡದಿಂದಾಗಿ, ಮನಸ್ಸಿನಲ್ಲಿ ಸಾಕಷ್ಟು ಕೋಲಾಹಲ ಉಂಟಾಗುತ್ತದೆ. ನೀವು ನಕಾರಾತ್ಮಕತೆಯ ಮನೋಭಾವವನ್ನು ಹೊಂದುವಿರಿ. ಆದರೆ ನೀವು ನಿರೀಕ್ಷಿಸಿದ ಫಲಿತಾಂಶಗಳನ್ನು ಪಡೆಯದಿದ್ದರೆ ನಿರಾಶೆಗೊಳ್ಳಬೇಡಿ. ಸಮಯ ಬಂದಾಗ ಎಲ್ಲವೂ ಸರಿಯಾಗುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದರೆ, ಅತಿಯಾದ ಆತ್ಮವಿಶ್ವಾಸವು ನಿಮಗೆ ಒಳ್ಳೆಯದಲ್ಲ, ವಿಶೇಷವಾಗಿ ನೀವು ವ್ಯಾಪಾರ ಮಾಡುವವರಾಗಿದ್ದರೆ, ಯಾವುದೇ ದೊಡ್ಡ ಕೆಲಸವನ್ನು ಮಾಡುವ ಮೊದಲು ನೀವು ಕೆಲವು ಅನುಭವಿ ಜನರನ್ನು ಸಂಪರ್ಕಿಸಿ ಮಾತನಾಡಿ. ಮತ್ತೊಂದೆಡೆ, ಉದ್ಯೋಗಸ್ಥರು ಹೆಚ್ಚುವರಿ ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಿದ್ಧರಾಗಿರಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಕುಟುಂಬದೊಂದಿಗೆ ಸಂಬಂಧವು ಬಲವಾಗಿರುತ್ತದೆ. ಹಣದ ದೃಷ್ಟಿಯಿಂದ ಇಂದು ದಿನ ಉತ್ತಮವಾಗಿದೆ. ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ಇಂದು ಆರೋಗ್ಯದಲ್ಲಿ ಸ್ವಲ್ಪ ಏರಿಳಿತಗಳು ಉಂಟಾಗುತ್ತವೆ.

ಉತ್ತಮ ಬಣ್ಣ: ಕೇಸರಿ

ಶುಭ ಸಂಖ್ಯೆ: 5

ಶುಭ ಸಮಯ: ಸಂಜೆ 6 ರಿಂದ 9 ರವರೆಗೆ

ಧನು ರಾಶಿ:

ಧನು ರಾಶಿ:

ದುಡ್ಡು ಕಾಸಿನ ವಿಷಯದಲ್ಲಿ ಅತೀಯಾದ ಕಾಳಜಿ ಬೇಕು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು ಮತ್ತು ನೀವು ಅದರಿಂದ ತೊಂದರೆಯನ್ನು ಅನುಭವಿಸುವಿರಿ. ಈ ಸಮಯದಲ್ಲಿ, ನೀವು ತಾಳ್ಮೆಯಿಂದಿರಬೇಕು. ತಿಳುವಳಿಕೆಯಿಂದ ಖರ್ಚು ಮಾಡಿ ಹಾಗೂ ಉಳಿತಾಯ ಮಾಡುವತ್ತ ಗಮನ ಹರಿಸಿ. ಜೊತೆಗೆ ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರಿ, ನೀವು ಶೀಘ್ರದಲ್ಲೇ ಯಶಸ್ಸನ್ನು ಪಡೆಯುತ್ತೀರಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಗೆ ಇಷ್ಟವಾಗದ ರೀತಿಯಲ್ಲಿ ಕೆಲಸ ಮಾಡಬೇಡಿ. ನಿಮ್ಮ ಸಣ್ಣ ತಪ್ಪು ಕೂಡ ನಿಮ್ಮ ಕಠಿಣ ಪರಿಶ್ರಮವನ್ನು ಹಾಳುಮಾಡುತ್ತದೆ. ವ್ಯಾಪಾರಿಗಳ ಕಠಿಣ ಪರಿಶ್ರಮ ಇಂದು ಯಶಸ್ವಿಯಾಗಲಿದೆ. ನಿಮ್ಮ ದೀರ್ಘಾವಧಿಯ ಬಾಕಿ ಇರುವ ಕೆಲವು ಕೆಲಸಗಳನ್ನು ಇಂದು ಪೂರ್ಣಗೊಳಿಸಬಹುದು. ಕುಟುಂಬ ಸದಸ್ಯರು ನಿಮ್ಮ ಮೇಲೆ ಕೋಪಗೊಳ್ಳಬಹುದು, ವಿಶೇಷವಾಗಿ ನಿಮ್ಮ ತಾಯಿಯ ಸ್ವಭಾವದಲ್ಲಿ ನೀವು ಬದಲಾವಣೆಯನ್ನು ಕಾಣಬಹುದು. ಅವರ ಭಾವನೆಗಳನ್ನು ನೋಯಿಸುವ ಯಾವುದೇ ಕೆಲಸವನ್ನು ನೀವು ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಅಷ್ಟು ಉತ್ತಮವಾಗಿಲ್ಲ. ನೀವು ಅಧಿಕ ರಕ್ತದೊತ್ತಡದ ರೋಗಿಯಾಗಿದ್ದರೆ, ನಿಮ್ಮ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸಬೇಕು.

ಉತ್ತಮ ಬಣ್ಣ: ಹಳದಿ

ಶುಭ ಸಂಖ್ಯೆ: 2

ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ

ಮಕರ ರಾಶಿ:

ಮಕರ ರಾಶಿ:

ಇವತ್ತು ಜಾಗರೂಕತೆ ಅಗತ್ಯ. ಅತ್ಯಂತ ಎಚ್ಚರಿಕೆಯಿಂದ ಕೆಲಸ ಮಾಡಿ ಇಲ್ಲವಾದರೆ ನಿಮ್ಮ ಕಾರ್ಯದ ಲಾಭವನ್ನು ಬೇರೆಯವರು ಪಡೆಯಲು ಪ್ರಯತ್ನಿಸಬಹುದು. ಕಚೇರಿಯಲ್ಲಿ, ಬಾಸ್ ನಿಮ್ಮ ಕೆಲಸದ ಬಗ್ಗೆ ಅತೃಪ್ತರಾಗುತ್ತಾರೆ ಮತ್ತು ನಿಮ್ಮ ತಪ್ಪುಗಳನ್ನು ಗುರುತಿಸಬಹುದು. ಪರಿಸ್ಥಿತಿ ಏನೇ ಇರಲಿ, ನೀವೇ ನಿಯಂತ್ರಿಸಿಕೊಳ್ಳಬೇಕು. ಈ ಸಮಯದಲ್ಲಿ ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲೆ ಇರಬೇಕು. ನಿಮ್ಮ ಪರವಾಗಿ ಶ್ರಮಿಸಿ ಮತ್ತು ಇನ್ನಷ್ಟು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿ. ಇಂದು ವ್ಯಾಪಾರ ಮಾಡುವವರು ಸಾಕಷ್ಟು ಕಠಿಣ ಪರಿಶ್ರಮದ ನಂತರ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಆಸ್ತಿಗೆ ಸಂಬಂಧಪಟ್ಟ ಕೆಲಸ ಮಾಡುವವರಿಗೆ ಇಂದು ಲಾಭ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ವಿಪರೀತವಾಗಿ ಖರ್ಚು ಮಾಡುವುದನ್ನು ತಪ್ಪಿಸಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಮನಸ್ಸಿನ ಮಾತನ್ನು ನಿಮ್ಮ ಪ್ರೀತಿಪಾತ್ರರೊಡನೆ ಹಂಚಿಕೊಳ್ಳಿ, ಇದರಿಂದ ನೀವೂ ಸಂತೋಷವಾಗಿರುತ್ತೀರಿ.

ಉತ್ತಮ ಬಣ್ಣ: ತಿಳಿ ಗುಲಾಬಿ

ಶುಭ ಸಂಖ್ಯೆ: 23

ಶುಭ ಸಮಯ: ಬೆಳಗ್ಗೆ 8 ರಿಂದ ರಾತ್ರಿ 8:05

ಕುಂಭ ರಾಶಿ:

ಕುಂಭ ರಾಶಿ:

ಇಂದು ಕೆಲಸದ ಆರಂಭ ಶುಭ ಸೂಚಕ. ಕೆಲಸ ಮಾಡುವಲ್ಲಿ ನಿಮ್ಮ ಗೌರವವು ಹೆಚ್ಚಾಗಲಿದೆ. ನೀವು ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ ತಂಡದ ಉತ್ತಮ ನಾಯಕನಂತೆ ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ನೀವು ಪೂರೈಸುತ್ತೀರಿ. ಹಿರಿಯ ಅಧಿಕಾರಿಗಳು ನಿಮ್ಮಕೆಲಸದಿಂದ ತುಂಬಾ ಸಂತೋಷಗೊಳ್ಳುತ್ತಾರೆ. ವ್ಯಾಪಾರಿಗಳಿಗೆ ಆರ್ಥಿಕ ಲಾಭವೂ ಸಿಗುತ್ತದೆ. ಕುಟುಂಬ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಿಮ್ಮ ಪರವಾಗಿ ಎಲ್ಲವನ್ನೂ ಸರಿಪಡಿಸಲು ನಿಮ್ಮ ಕೈಲಾದಷ್ಟು ಪ್ರಯತ್ನ ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಹಣದ ಹರಿವು ಚೆನ್ನಾಗಿರುತ್ತದೆ. ನೀವು ಅಮೂಲ್ಯವಾದ ವಸ್ತುವನ್ನು ಖರೀದಿಸಲು ಯೋಚಿಸುತ್ತಿದ್ದರೆ, ಇಂದಿನ ದಿನ ಉತ್ತಮವಾಗಿದೆ. ಅವಿವಾಹಿತರಿಗೆ ಇಂದು ಬಹಳ ಮುಖ್ಯವಾದ ದಿನ. ವಿಶೇಷವಾಗಿ ನೀವು ಪ್ರೇಮ ವಿವಾಹವನ್ನು ಮಾಡಿಕೊಳ್ಳಲು ಬಯಸಿದರೆ, ನೀವು ಪೋಷಕರ ಒಪ್ಪಿಗೆಯನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ದಿನ ಉತ್ತಮವಾಗಿದೆ.

ಉತ್ತಮ ಬಣ್ಣ: ಆಕಾಶ

ಶುಭ ಸಂಖ್ಯೆ: 16

ಶುಭ ಸಮಯ: ಸಂಜೆ 6 ರಿಂದ 9 ರವರೆಗೆ

ಮೀನ ರಾಶಿ:

ಮೀನ ರಾಶಿ:

ಮನೆಯಲ್ಲಿ ಇಂದು ನೆಮ್ಮದಿ. ಮನೆಯವರೊಂದಿಗಿನ ಎಲ್ಲಾ ಸಮಸ್ಯೆಗಳೂ, ತಪ್ಪು ಕಲ್ಪನೆಗಳೂ ಇಂದು ಮುಕ್ತಾಯವಾಗುತ್ತವೆ. ಕೆಲಸದ ಬಗ್ಗೆ ಮಾತನಾಡುವುದಾದರೆ, ನೀವು ಕೆಲಸವನ್ನು ಮಾಡುವಲ್ಲಿ, ನಿಮ್ಮ ಅತ್ಯುತ್ತಮ ಕಾರ್ಯಕ್ಷಮತೆಯಿಂದ ನಿಮ್ಮ ವ್ಯಕ್ತಿತ್ವದ ಗೌರವವೂ ಹೆಚ್ಚುತ್ತದೆ. ಬಾಸ್ ಮಾರ್ಗದರ್ಶನ ಸ್ವೀಕರಿಸಿ. ಮತ್ತೊಂದೆಡೆ, ವ್ಯಾಪಾರಮಾಡುವವರು ತಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ ಇದರಿಂದ ನಿಮ್ಮ ವ್ಯವಹಾರವು ಉತ್ತಮವಾಗಿ ಸಾಗುತ್ತದೆ. ಹಣದ ಹರಿವು ಚೆನ್ನಾಗಿರುತ್ತದೆ. ಮನೆ ದುರಸ್ತಿ ಅಥವಾ ಅಲಂಕಾರಕ್ಕಾಗಿ ನೀವು ಸ್ವಲ್ಪ ಹಣವನ್ನು ಖರ್ಚು ಮಾಡಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಹಳೆಯ ಆಹಾರವನ್ನು ಅಥವಾ ಹೊರಗಿನ ಆಹಾರವನ್ನು ಸೇವಿಸುವುದು ಒಳ್ಳೆಯದಲ್ಲ.

ಉತ್ತಮ ಬಣ್ಣ: ಕ್ರೀಮ್

ಶುಭ ಸಂಖ್ಯೆ: 8

ಶುಭ ಸಮಯ: ಬೆಳಗ್ಗೆ 4:25 ರಿಂದ ಮಧ್ಯಾಹ್ನ 1 ಗಂಟೆ

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ.

ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ.

ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ. ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9845000635 .

https://sridurga-astrologer.com

English summary

Dina Bhavishya 23 October 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
X
Desktop Bottom Promotion