For Quick Alerts
ALLOW NOTIFICATIONS  
For Daily Alerts

ಭಾನುವಾರದ ದಿನ ಭವಿಷ್ಯ: ಕುಂಭ ರಾಶಿಎಚ್ಚರ ವಹಿಸದಿದ್ದರೆ, ವ್ಯಕ್ತಿತ್ವಕ್ಕೇ ಕಳಂಕ

|

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

Dina Bhavishya 25 October 2020

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಆಶ್ವಿಜ
ನಕ್ಷತ್ರ: ಅಕ್ಟೋಬರ್ 26, ಮಧ್ಯಾಹ್ನ 04:23 ರವರೆಗೆ ಧನಿಷ್ಠ, ನಂತರ ಶತಭಿಷ
ತಿಥಿ: ಶುಕ್ಲ ಪಕ್ಷ
ರಾಹುಕಾಲ: ಮಧ್ಯಾಹ್ನ 04:17ರಿಂದ 05:41ರವರೆಗೆ
ಗುಳಿಕಕಾಲ: ಮಧ್ಯಾಹ್ನ 02:53ರಿಂದ 04:17ರವರೆಗೆ
ಯಮಗಂಡಕಾಲ: ಮಧ್ಯಾಹ್ನ 12:05ರಿಂದ 01:29ರವರೆಗೆ
ದುರ್ಮುಹೂರ್ತ: ಮಧ್ಯಾಹ್ನ 04:12ರಿಂದ 04:57ರವರೆಗೆ

ಸೂರ್ಯೋದಯ: ಬೆಳಗ್ಗೆ 06:28ಕ್ಕೆ

ಸೂರ್ಯಾಸ್ತ: ಸಂಜೆ 05:41ಕ್ಕೆ

ಮೇಷ ರಾಶಿ:

ಮೇಷ ರಾಶಿ:

ಮೇಷ ರಾಶಿಗಿಂದು ಆರೋಗ್ಯದ ದೃಷ್ಟಿಯಿಂದಶುಭ ಫಲ. ಆರೋಗ್ಯದ ಸುಧಾರಣೆಯಿಂದಾಗಿ ನೀವು ಇಂದು ಆರಾಮವಾಗಿರುತ್ತೀರಿ, ಜೊತೆಗೆ ಮಾನಸಿಕ ಶಾಂತಿ ಇರುತ್ತದೆ. ನಿಮ್ಮ ಎಲ್ಲಾ ಒತ್ತಡವನ್ನು ನೀವು ಮರೆತು ನಿಮ್ಮ ಮೇಲೆ ನಿಮ್ಮ ಗಮನವನ್ನು ಕೇಂದ್ರೀಕರಿಸುತ್ತೀರಿ. ಇಂದು ಕೆಲಸದ ವಿಷಯದಲ್ಲೂ ಶುಭ ಚಿಹ್ನೆಗಳು ಕಾಣಿಸುತ್ತವೆ. ನೀವು ತುಂಬಾ ಶ್ರಮವಹಿಸಿ ಕೆಲಸ ಮಾಡಬೇಕಾಗಿದ್ದರೂ ನಿಮ್ಮ ಈ ಕಠಿಣ ಪರಿಶ್ರಮಕ್ಕಾಗಿ ನೀವು ಮೆಚ್ಚುಗೆ ಪಡೆಯುತ್ತೀರಿ. ನೀವು ಮರದ ವ್ಯಾಪಾರ ಮಾಡಿದರೆ ಉತ್ತಮ ಲಾಭ ಪಡೆಯಬಹುದು. ಹಣದ ವಿಷಯದಲ್ಲಿ ಸಾಕಷ್ಟು ಜಾಗರೂಕರಾಗಿರಬೇಕು. ಹೆಚ್ಚುವರಿ ಆದಾಯವನ್ನು ಪಡೆಯುವ ಸಾಧ್ಯತೆಯಿದೆ. ಯಾವುದೇ ಹಣಕಾಸಿನ ವಹಿವಾಟುಗಳನ್ನು ಇಂದು ಮಾಡದಿರುವುದು ಒಳ್ಳೆಯದು. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ನೀವು ಕುಟುಂಬ ಸದಸ್ಯರ ಬೆಂಬಲ ಮತ್ತು ಪ್ರೀತಿಯನ್ನು ಪಡೆಯುತ್ತೀರಿ. ಇದ್ದಕ್ಕಿದ್ದಂತೆ ಕೆಲವು ಅತಿಥಿಗಳು ಸಂಜೆ ಮನೆಗೆ ಆಗಮಿಸಬಹುದು.

ಉತ್ತಮ ಬಣ್ಣ: ನೀಲಿ

ಶುಭ ಸಂಖ್ಯೆ: 23

ಶುಭ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ

ವೃಷಭ ರಾಶಿ:

ವೃಷಭ ರಾಶಿ:

ಈ ದಿನ ಹೆಚ್ಚು ಜಾಗರೂಕತೆಯಿಂದ ಇರಿ. ರಸ್ತೆಯಲ್ಲಿ ನಡೆಯುವಾಗ ಅಥವಾ ವಾಹನ ಚಲಾಯಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಯಾವುದೇ ಅಪಾಯಕಾರಿ ಕೆಲಸ ಮಾಡುವುದು ಒಳ್ಳೆಯದಲ್ಲ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಪ್ರತಿಕೂಲವಾಗಿರುತ್ತದೆ. ಮನೆಯ ಸದಸ್ಯರ ವರ್ತನೆ ನಿಮಗೆ ಸರಿ ಅನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ದುಃಖ ಪಡಬೇಕಾಗುತ್ತದೆ. ಮೌನವಾಗಿರುವುದರಿಂದ ತಪ್ಪುಗ್ರಹಿಕೆಯು ಹೆಚ್ಚಾಗುತ್ತದೆ. ಹಾಗಾಗಿ ನೀವು ಮುಕ್ತವಾಗಿ ಮಾತನಾಡುವುದು ಉತ್ತಮ ಇದರಿಂದ ನೀವು ಸಮಸ್ಯೆಯ ಮೂಲವನ್ನು ಕಂಡುಕೊಳ್ಳಬಹುದು. ಹಣದ ದೃಷ್ಟಿಯಿಂದ ಇಂದು ದಿನ ಅಷ್ಟು ಉತ್ತಮವಾಗಿಲ್ಲ. ನೀವು ಇನ್ನೊಬ್ಬರಿಂದ ಆರ್ಥಿಕ ಸಹಾಯವನ್ನು ನಿರೀಕ್ಷಿಸುತ್ತಿದ್ದರೆ, ನೀವು ನಿರಾಶೆ ಅನುಭವಿಸುವಿರಿ. ಆರೋಗ್ಯವು ಚೆನ್ನಾಗಿರುತ್ತದೆ. ಕೆಲಸದ ಜೊತೆಗೆ ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ.

ಉತ್ತಮ ಬಣ್ಣ: ಕಂದು

ಶುಭ ಸಂಖ್ಯೆ: 4

ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 2: 30 ರವರೆಗೆ

ಮಿಥುನ ರಾಶಿ:

ಮಿಥುನ ರಾಶಿ:

ಸಮತೋಲನದಲ್ಲಿ ವ್ಯವಹರಿಸಿ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ವಾದ ಅಥವಾ ಘರ್ಷಣೆಯನ್ನು ಮಾಡದಿರಿ, ಇಲ್ಲದಿದ್ದರೆ ನೀವು ದೊಡ್ಡ ತೊಂದರೆಯಲ್ಲಿ ಸಿಲುಕಿಕೊಳ್ಳಬಹುದು. ಕೋಪ ಮತ್ತು ಅಹಂನಂತಹ ನಕಾರಾತ್ಮಕ ಭಾವನೆಗಳಿಂದ ದೂರವಿರಿ. ವ್ಯಾಪಾರಿಗಳು ಇಂದು ಇದ್ದಕ್ಕಿದ್ದಂತೆ ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ಮಾಡಿರುವ ಕೆಲಸಗಳು ಅಪೂರ್ಣವಾಗಬಹುದು. ಆರ್ಥಿಕವಾಗಿ ಇಂದು ಮಿಶ್ರ ದಿನ. ನಿಮ್ಮ ಬಜೆಟ್ ಪ್ರಕಾರ ನೀವು ಖರ್ಚು ಮಾಡಿದರೆ ಯಾವುದೇ ಸಮಸ್ಯೆ ಇರುವುದಿಲ್ಲ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ, ನಿಮ್ಮ ಸಂಗಾತಿಯ ಪ್ರೀತಿ ಮತ್ತು ಬೆಂಬಲದಿಂದಾಗಿ ಪ್ರತಿಕೂಲ ಸಂದರ್ಭಗಳಲ್ಲಿ ನಿಮಗೆ ಧೈರ್ಯ ಸಿಗುತ್ತದೆ. ನಿಮ್ಮ ಭವಿಷ್ಯದ ಯೋಜನೆಗಳನ್ನು ನೀವು ಇಂದು ನಿಮ್ಮ ಪ್ರೀತಿಪಾತ್ರರೊಂದಿಗೆ ಚರ್ಚಿಸಬಹುದು. ಆರೋಗ್ಯದಲ್ಲಿ ಒಂದು ಎಂದಿಗಿಂತ ಹೆಚ್ಚಿನ ಸುಧಾರಣೆ ಕಾಣುವಿರಿ.

ಉತ್ತಮ ಬಣ್ಣ: ಬಿಳಿ

ಶುಭ ಸಂಖ್ಯೆ: 28

ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿ:

ಆರೋಗ್ಯಲ್ಲಿ ಏರುಪೇರು ಸಾಧ್ಯತೆ. ಯಾವುದೇ ಶ್ವಾಸಕೋಶದ ಕಾಯಿಲೆ ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಸ್ವಲ್ಪ ಅಸಡ್ಡೆ ಮಾಡಿದರೂ ಆರೋಗ್ಯ ಇನ್ನಷ್ಟು ಹದಗೆಡಬಹುದು. ಹಣದ ವಿಷಯದಲ್ಲಿ ಇಂದು ಅಷ್ಟು ಉತ್ತಮ ದಿನವಲ್ಲ. ನೀವು ಸಣ್ಣ ಸಾಲವನ್ನು ತೆಗೆದುಕೊಂಡಿದ್ದರೆ, ಹಣವನ್ನು ಮರುಪಾವತಿಸಲು ನಿಮ್ಮ ಮೇಲೆ ಒತ್ತಡವು ಇಂದು ಹೆಚ್ಚಾಗಬಹುದು. ಹೀಗೆ ಒತ್ತಡಕ್ಕೆ ಒಳಗಾದಾಗ ನೀವು ತಾಳ್ಮೆಯಿಂದಿರುವುದು ಮುಖ್ಯ. ನಿಮ್ಮ ಉದ್ಯೋಗದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಉನ್ನತ ಅಧಿಕಾರಿಗಳ ಸಹಾಯವನ್ನು ತೆಗೆದುಕೊಳ್ಳಬೇಕು. ನೀವು ಮಾಡಿದ ಕೆಲಸದಲ್ಲಿನ ನ್ಯೂನತೆಗಳನ್ನು ಅವರು ಗುರುತಿಸಿದರೆ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನ. ಇಂದು ನೀವು ಸ್ವಲ್ಪ ಏಕಾಂಗಿತನವನ್ನು ಅನುಭವಿಸುವಿರಿ.

ಉತ್ತಮ ಬಣ್ಣ: ಕೆಂಪು

ಶುಭ ಸಂಖ್ಯೆ: 10

ಶುಭ ಸಮಯ: ಮಧ್ಯಾಹ್ನ 2 ರಿಂದ 6 ರವರೆಗೆ

ಸಿಂಹ ರಾಶಿ:

ಸಿಂಹ ರಾಶಿ:

ನಿಮ್ಮ ಒತ್ತಡವು ಕಡಿಮೆಯಾಗಿ ಸಕಾರಾತ್ಮಕ ಚಿಂತನೆಯನ್ನು ಮಾಡುವಿರಿ. ನಿಮ್ಮಲ್ಲಿ ಹೊಸ ಚೈತನ್ಯ ಮೂಡುತ್ತದೆ. ಇಂದು ನೀವು ನಿಮ್ಮ ಎಲ್ಲಾ ಕೆಲಸಗಳನ್ನು ಶ್ರದ್ಧೆಯಿಂದ ಮಾಡಲು ಸಾಧ್ಯವಾಗುತ್ತದೆ. ನೀವು ಕೆಲಸ ಮಾಡುವಲ್ಲಿ, ನಿಮ್ಮ ಪ್ರತಿಭೆಯನ್ನು ತೋರಿಸಲು ನಿಮಗೆ ಉತ್ತಮ ಅವಕಾಶ ಸಿಗುತ್ತದೆ. ನೀವು ಕಚೇರಿಯಲ್ಲಿ ನಡೆಯುವ ಪ್ರಮುಖ ಸಭೆಯಲ್ಲಿ ಭಾಗಿಯಾಗಬಹುದು. ನೀವು ವ್ಯಾಪಾರ ಮಾಡುತ್ತಿದ್ದರೆ, ಕಠಿಣ ಪರಿಶ್ರಮದ ನಂತರ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ, ನಿಮ್ಮ ಸಂಗಾತಿಯ ಎಲ್ಲಾ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು ನೀವು ಹೆಚ್ಚು ಪ್ರಯತ್ನಯನ್ನು ಮಾಡಬಹುದು. ಅವರಿಗಾಗಿ ಯಾವುದಾದರೂ ಯೋಜನೆಗಳನ್ನು ಮಾಡಬಹುದು. ಹಣದ ಕೊರತೆಯಿಂದಾಗಿ, ಅರ್ಧದಲ್ಲೇ ನಿಂತ ಕೆಲಸವನ್ನು ಇಂದು ಪೂರ್ಣಗೊಳಿಸಬಹುದು, ಇದರಿಂದ ನಿಮಗಿರುವ ದೊಡ್ಡ ಚಿಂತೆ ನಿವಾರಣೆಯಾಗುತ್ತದೆ.

ಉತ್ತಮ ಬಣ್ಣ: ಕಿತ್ತಳೆ

ಶುಭ ಸಂಖ್ಯೆ: 12

ಶುಭ ಸಮಯ: ಸಂಜೆ 5 ರಿಂದ 9 ರವರೆಗೆ

ಕನ್ಯಾರಾಶಿ:

ಕನ್ಯಾರಾಶಿ:

ಇಂದು ನಿಮಗೆ ಸಕಾರಾತ್ಮಕ ದಿನ. ನೀವು ಧೈರ್ಯದಿಂದ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುತ್ತೀರಿ. ನಿಮ್ಮ ಎಲ್ಲಾ ಗಮನವು ನಿಮ್ಮ ಕೆಲಸದ ಮೇಲೆ ಇರುತ್ತದೆ, ನೀವು ಸಾಧ್ಯವಾದಷ್ಟು ಶ್ರಮವಹಿಸಿ ಕೆಲಸ ಮಾಡುತ್ತೀರಿ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವೂ ನಿಮಗೆ ಸಿಗುತ್ತದೆ. ವ್ಯಾಪಾರಿಗಳು ಯೋಜಿತ ಲಾಭಕ್ಕಿಂತ ತುಸು ಕಡಿಮೆ ಲಾಭ ಗಳಿಸಬಹುದು. ಆದಾಗ್ಯೂ ನೀವು ನಿರಾಶೆಗೊಳ್ಳುವ ಅಗತ್ಯವಿಲ್ಲ ಏಕೆಂದರೆ ಪ್ರತಿದಿನ ಒಂದೇ ರೀತಿ ಇರುವುದಿಲ್ಲ. ಉತ್ತಮ ದಿನವು ಮುಂದೆ ಬರಲಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನಿಮ್ಮ ತಂದೆಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಅವರಿಂದ ಹೊಸದನ್ನೇನಾದರೂ ಕಲಿಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನ.

ಉತ್ತಮ ಬಣ್ಣ: ಕಡುಕೆಂಪು

ಶುಭ ಸಂಖ್ಯೆ: 4

ಒಳ್ಳೆಯ ಸಮಯ: ಸಂಜೆ 4:05 ರಿಂದ 9 ರವರೆಗೆ

ತುಲಾ ರಾಶಿ:

ತುಲಾ ರಾಶಿ:

ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಬರವಣಿಗೆಯಲ್ಲಿ ಅಡಚಣೆ ಅನುಭವಿಸುತ್ತಿದ್ದರೆ, ನೀವು ಉತ್ತಮ ಸಲಹೆಗಾರರ ಅಥವಾ ನಿಮ್ಮ ಗುರುಗಳ ಮಾರ್ಗದರ್ಶನವನ್ನು ಪಡೆಯಬೇಕು. ಈ ಸಮಯವು ನಿಮಗೆ ಬಹಳ ಮುಖ್ಯ, ಆದ್ದರಿಂದ ಅಧ್ಯಯನಗಳ ಬಗ್ಗೆ ಅಸಡ್ಡೆ ಮಾಡಬೇಡಿ. ಕೆಲಸದ ಆರಂಭದಲ್ಲಿ ಸ್ವಲ್ಪ ನಿರಾಶೆಯನ್ನು ಹೊಂದಿರಬಹುದು. ಕಚೇರಿಯಲ್ಲಿ ನಿಮ್ಮ ಸಣ್ಣ ತಪ್ಪನ್ನು ನೀವು ಮರೆಮಾಡಲಾಗದು. ಆದರೆ ಹಿರಿಯ ಅಧಿಕಾರಿಗಳು ನಿಮ್ಮೊಂದಿಗೆ ಕಟ್ಟುನಿಟ್ಟಾಗಿ ವ್ಯವಹರಿಸಬಹುದು. ಮತ್ತೊಂದೆಡೆ, ವ್ಯಾಪಾರಸ್ಥರು ತಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ದೊಡ್ಡ ಲಾಭ ಗಳಿಸುವ ನಿರೀಕ್ಷೆಯಿಂದ ಸಣ್ಣ ಲಾಭಗಳನ್ನು ಕೈಯಿಂದ ತಪ್ಪಿಹೋಗಲು ಬಿಡಬೇಡಿ. ನಿಮ್ಮ ಜೀವನದಲ್ಲಿ ಹೊಸ ತಿರುವು ಇರಬಹುದು. ನೀವು ಒಬ್ಬಂಟಿಯಾಗಿದ್ದರೆ, ಇಂದು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆ. ಹಾಗೆಯೇ ವಿವಾಹಿತರ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಕೆಲಸದಲ್ಲಿ ನೀವು ತುಂಬಾ ಕಾರ್ಯನಿರತರಾಗಿರುತ್ತೀರಿ, ಆದ್ದರಿಂದ ನೀವು ಪರಸ್ಪರ ಹೆಚ್ಚು ಸಮಯ ಕಳೆಯುವ ಅವಕಾಶ ಸಿಗದೇ ಹೋಗಬಹುದು. ಹಣದ ಪರಿಸ್ಥಿತಿ ಸಾಮಾನ್ಯವಾಗಿದೆ. ನಿಮ್ಮ ಆರೋಗ್ಯವನ್ನು ಸುಧಾರಿಸಲು ನೀವು ಬಯಸಿದರೆ, ನೀವು ವಿಶ್ರಾಂತಿಯನ್ನು ಪಡೆಯಿರಿ.

ಉತ್ತಮ ಬಣ್ಣ: ನೇರಳೆ

ಶುಭ ಸಂಖ್ಯೆ: 5

ಶುಭ ಸಮಯ: ಸಂಜೆ 6:15 ರಿಂದ 9 ರವರೆಗೆ

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿ:

ಆರೋಗ್ಯದ ದೃಷ್ಟಿಯಿಂದ ದಿನವು ಅಷ್ಟು ಉತ್ತಮವಾಗಿಲ್ಲ. ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಯಾವುದೇ ಶ್ವಾಸಕೋಶದ ಕಾಯಿಲೆ ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಸ್ವಲ್ಪ ಅಸಡ್ಡೆ ಮಾಡುವುದೂ ಒಳ್ಳೆಯದಲ್ಲ. ಆರ್ಥಿಕವಾಗಿ ದಿನ ಅಷ್ಟು ಉತ್ತಮವಾಗಿಲ್ಲ. ಸಾಲವನ್ನು ಮರುಪಾವತಿ ಮಾಡಲು ನಿಮ್ಮ ಮೇಲೆ ಒತ್ತಡ ಬೀಳಬಹುದು. ಆದರೆ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳು ಅಸಮಾಧಾನವನ್ನು ವ್ಯಕ್ತಪಡಿಸಬಹುದು. ನಿಮ್ಮ ತಪ್ಪುಗಳನ್ನೂ ಅವರು ಗುರುತಿಸಬಹುದು. ಭವಿಷ್ಯದಲ್ಲಿ ನೀವು ಅಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ನೀವು ಅವರ ಮಾತುಗಳಿಗೆ ಗಮನ ಕೊಡುವುದು ಉತ್ತಮ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನ. ಇಂದು ನೀವು ಸ್ವಲ್ಪ ಏಕಾಂಗಿವನ್ನು ಅನುಭವಿಸುವಿರಿ.

ಉತ್ತಮ ಬಣ್ಣ: ಹಳದಿ

ಶುಭ ಸಂಖ್ಯೆ: 18

ಶುಭ ಸಮಯ: ಮಧ್ಯಾಹ್ನ 1 ರಿಂದ 5 ರವರೆಗೆ

ಧನು ರಾಶಿ:

ಧನು ರಾಶಿ:

ಇಂದು ಉದ್ಯೋಗಿಗಳಿಗೆ ಬಿಡುವಿಲ್ಲದ ದಿನವಾಗಲಿದೆ. ಇದ್ದಕ್ಕಿದ್ದಂತೆ ನೀವು ಕೆಲಸಕ್ಕೆ ಸಂಬಂಧಿಸಿದಂತೆ ಬೇರೆಡೆಗೆ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪ್ರಯಾಣ ಪ್ರಯೋಜನಕಾರಿಯಾಗುವುದಲ್ಲದೆ ಅದು ತುಂಬಾ ಖುಷಿಕೊಡುತ್ತದೆ. ಮತ್ತೊಂದೆಡೆ, ವ್ಯಾಪಾರಸ್ಥರು ಇಂದು ನಿರೀಕ್ಷೆಯಂತೆ ಪ್ರಯೋಜನಗಳನ್ನು ಪಡೆಯುತ್ತಾರೆ. ನಿಮ್ಮ ಕೆಲಸ ಆಮದು ರಫ್ತಿಗೆ ಸಂಬಂಧಿಸಿದ್ದಾಗಿದ್ದರೆ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ, ನೀವು ಒಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಮನಸ್ಸಿನಲ್ಲಿ ಯಾವುದೇ ಸಂದಿಗ್ಧತೆ ಇದ್ದರೆ, ದಯವಿಟ್ಟು ಕುಟುಂಬ ಸದಸ್ಯರನ್ನು ಸಂಪರ್ಕಿಸಿ. ನೀವು ಇಂದು ಆರ್ಥಿಕವಾಗಿ ಹೆಚ್ಚು ಸುರಕ್ಷಿತವಾಗಿರುತ್ತೀರಿ. ಗ್ರಹಗಳ ಶುಭ ಸ್ಥಾನವು ದೊಡ್ಡ ಆರ್ಥಿಕ ಲಾಭದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಪ್ರಣಯ ಸಂಜೆ ಕಳೆಯಲು ಇಂದು ನೀವು ನಿಮ್ಮ ನೆಚ್ಚಿನ ಸ್ಥಳವೊಂದಕ್ಕೆ ಪಿಕ್ನಿಕ್ ಗೆ ಹೋಗಬಹುದು.

ಉತ್ತಮ ಬಣ್ಣ: ಕಿತ್ತಳೆ

ಶುಭ ಸಂಖ್ಯೆ: 12

ಶುಭ ಸಮಯ: ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ:

ಮಕರ ರಾಶಿ:

ಇಂದು ನೀವು ಕೆಲವು ಹುಳಿ ಸಿಹಿ ಅನುಭವಗಳನ್ನು ಪಡೆಯುವ ಸಾಧ್ಯತೆ. ಯಾವುದೇ ನಿರ್ಗತಿಕರಿಗೆ ನಿಸ್ವಾರ್ಥ ಮನೋಭಾವದಿಂದ ನೀವು ಸಹಾಯ ಮಾಡುತ್ತೀರಿ, ಅದು ನಿಮಗೆ ಸಾಕಷ್ಟು ಸಂತೋಷವನ್ನು ನೀಡುತ್ತದೆ. ನಿಮ್ಮ ಮನಸ್ಸು ತುಂಬಾ ಉತ್ಸುಕವಾಗಿರುತ್ತದೆ. ಮತ್ತು ನಿಮ್ಮ ಪ್ರತಿಯೊಂದು ಜವಾಬ್ದಾರಿಯನ್ನು ನೀವು ಪೂರೈಸುತ್ತೀರಿ. ಉಧ್ಯೂಗಸ್ಥರಿಗೆ ಇಂದಿನ ದಿನ ಬಹಳ ಮುಖ್ಯವಾದ ದಿನ. ನೀವು ಉತ್ತಮ ಸಂಬಳವನ್ನು ಪಡೆಯಬಹುದು ಅಥವಾ ನಿಮಗೆ ಕೆಲವು ದೊಡ್ಡ ಜವಾಬ್ದಾರಿಯನ್ನು ನೀಡಬಹುದು. ಮತ್ತೊಂದೆಡೆ, ನೀವು ಉದ್ಯೋಗಗಳನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಸಮಯ ಇದಕ್ಕೆ ಅನುಕೂಲಕರವಾಗಿರುತ್ತದೆ. ವ್ಯಾಪಾರಿಗಳಿಗೆ ಇಂದು ಮಿಶ್ರ ಫಲ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ಇಂದು, ನಿಮ್ಮ ಸಂಗಾತಿಯಿಂದ ನೀವು ವಿಶೇಷ ಉಡುಗೊರೆಯನ್ನು ಪಡೆಯಬಹುದು. ನಿಮ್ಮ ನಡುವಿನ ಪ್ರೀತಿ ಇನ್ನಷ್ಟು ಆಳವಾಗುತ್ತದೆ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಆಲ್ಕೋಹಾಲ್ ಮತ್ತು ಸಿಗರೇಟ್‌ನಂತಹ ಕೆಟ್ಟ ಅಭ್ಯಾಸಗಳಿಂದ ದೂರವಿರಿ.

ಉತ್ತಮ ಬಣ್ಣ: ಕಿತ್ತಳೆ

ಶುಭ ಸಂಖ್ಯೆ: 12

ಶುಭ ಸಮಯ: ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ

ಕುಂಭ ರಾಶಿ:

ಕುಂಭ ರಾಶಿ:

ಕೆಲಸದ ವಿಷಯದಲ್ಲಿ ಇಂದು ವಿಷಮ ಸ್ಥಿತಿ. ಸ್ವಲ್ಪ ಸಮಸ್ಯೆ ಉದ್ಭವಿಸಬಹುದು. ನಿಮ್ಮ ವಿರೋಧಿಗಳ ಬಗ್ಗೆ ನೀವು ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದರೆ ನಿಮ್ಮ ವ್ಯಕ್ತಿತ್ವಕ್ಕೇ ಕಳಂಕ ಬರಬಹುದು. ನೀವು ವ್ಯಾಪಾರ ಮಾಡುವವರಾಗಿದ್ದರೆ ಮತ್ತು ಹೊಸ ಉದ್ಯೋಗವನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದರೆ, ನಿಮ್ಮ ಮನಸ್ಸಿನಲ್ಲಿ ಗೊಂದಲದ ಪರಿಸ್ಥಿತಿ ಉದ್ಭವಿಸಬಹುದು. ಹಾಗಿದ್ದಾಗ ಅನುಭವಸ್ಥರ ಮಾರ್ಗದರ್ಶನ ಪಡೆದು ಮುಂದಿನ ಹೆಜ್ಜೆಯಿಡಿ. ಸ್ವಲ್ಪ ವಿಶ್ರಾಂತಿ ಪಡೆಯುವುದು ಉತ್ತಮ. ಹಣದ ಪರಿಸ್ಥಿತಿಯಲ್ಲಿ ಉತ್ತಮ ಬದಲಾವಣೆ ಉಂಟಾಗಬಹುದು. ಹಳೆಯ ಆಸ್ತಿಯ ಮಾರಾಟ ಮಾಡುವ ಸಾಧ್ಯತೆ. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ. ಸಂಗಾತಿಯ ಮನಸ್ಥಿತಿ ಇಂದು ಉತ್ತಮವಾಗಿರುತ್ತದೆ. ಪೋಷಕರೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯವೂ ಉತ್ತಮ ಸ್ಥಿತಿಯಲ್ಲಿರುತ್ತದೆ.

ಉತ್ತಮ ಬಣ್ಣ: ನೇರಳೆ

ಶುಭ ಸಂಖ್ಯೆ: 28

ಶುಭ ಸಮಯ: ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ

ಮೀನ ರಾಶಿ:

ಮೀನ ರಾಶಿ:

ಕೆಲಸದ ವಿಷಯದಲ್ಲಿ ಇಂದು ನಿಮಗೆ ಅದ್ಭುತ ದಿನ. ನಿಮ್ಮ ದೀರ್ಘಕಾಲದ ಕಠಿಣ ಪರಿಶ್ರಮವು ನಿಮಗೆ ಉತ್ತಮ ಯಶಸ್ಸನ್ನು ತರುತ್ತದೆ. ಹಾಗೆಯೇ ನಿರುದ್ಯೋಗಿಗಳಿಗೆ ಇಂದು ಉದ್ಯೋಗ ದೊರೆಯುವ ಬಲವಾದ ಸಾಧ್ಯತೆಯಿದೆ. ನೀವು ಇತ್ತೀಚೆಗೆ ಯಾವುದಾದರೂ ಕಂಪನಿಗೆ ಇಂಟರ್ವ್ಯೂ ನೀಡಿದ್ದರೆ ನಿಮಗೆ ಸಿಹಿ ಸುದ್ಧಿ ಸಿಗಬಹುದು. ಮತ್ತೊಂದೆಡೆ, ವ್ಯಾಪಾರಸ್ಥರು, ತಮ್ಮ ವ್ಯವಹಾರವನ್ನು ಮುಂದುವರೆಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ದಿನ ಉತ್ತಮವಾದದ್ದು. ವೈವಾಹಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗಬಹುದು. ಆದರೆ ಯಾಉದೇ ವಿಷಯಕ್ಕೂ ವಾದವನ್ನು ಮಾಡದಿರಿ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ನೀವು ಗೌರವಿಸಬೇಕು. ಪರಸ್ಪರ ಅರ್ಥಮಾಡಿಕೊಳ್ಳಲು ಅವರಿಗೆ ಹೆಚ್ಚಿನ ಸಮಯವನ್ನು ನೀಡಬೇಕು. ಇಂದು ಹಣದ ವಿಷಯದಲ್ಲಿ ಉತ್ತಮ ದಿನ. ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಯೋಜನಗಳನ್ನೇ ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಇಂದು ಅನುಕೂಲಕರವಾದ ದಿನ. ಮಾನಸಿಕವಾಗಿ ನೀವು ಸಾಕಷ್ಟು ಸಕಾರಾತ್ಮಕತೆಯನ್ನು ಅನುಭವಿಸುವಿರಿ.

ಉತ್ತಮ ಬಣ್ಣ: ಆಕಾಶ

ಶುಭ ಸಂಖ್ಯೆ: 28

ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

English summary

Dina Bhavishya 25 October 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Saturday, October 24, 2020, 11:58 [IST]
X
Desktop Bottom Promotion