Just In
- 58 min ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 13 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಮವಾರದ ದಿನ ಭವಿಷ್ಯ: ಮೇಷ, ಮಕರ ರಾಶಿಯವರಿಗೆ ಮಿಶ್ರಫಲ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಆಶ್ವಿಜ
ನಕ್ಷತ್ರ:
ಶತಭಿಷ
ತಿಥಿ:
ಶುಕ್ಲ
ಪಕ್ಷ
ರಾಹುಕಾಲ:
ಬೆಳಗ್ಗೆ
07:53ರಿಂದ
09:17ರವರೆಗೆ
ಗುಳಿಕಕಾಲ:
ಮಧ್ಯಾಹ್ನ
29ರಿಂದ
02:53ರವರೆಗೆ
ಯಮಗಂಡಕಾಲ:
ಬೆಳಗ್ಗೆ
10:41ರಿಂದ
12:05ರವರೆಗೆ
ದುರ್ಮುಹೂರ್ತ:
ಮಧ್ಯಾಹ್ನ
12:27ರಿಂದ
01:05ರವರೆಗೆ
ಮಧ್ಯಾಹ್ನ
02:42ರಿಂದ
03:26ರವರೆಗೆ
ಸೂರ್ಯೋದಯ: ಬೆಳಗ್ಗೆ 06:98ಕ್ಕೆ
ಸೂರ್ಯಾಸ್ತ: ಸಂಜೆ 05:41ಕ್ಕೆ
ಮೇಷ ರಾಶಿ:
ಈ ದಿನ ನಿಮಗೆ ಮಿಶ್ರಫಲ. ಬದಲಾವಣೆಗಳಿಗೆ ಇದು ಸೂಕ್ತ ಸಮಯವಲ್ಲ. ನೀವು ಪ್ರಸ್ತುತ ಯಾವುದೇ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಅವಸರದಲ್ಲಿ ಯಾವುದೇ ನಿರ್ಧಾರ ಬೇಡ. ಇಂದು ಮನಸ್ಸಿನಲ್ಲಿ ಅಸ್ಪಷ್ಟ ಭಯ ಇರುತ್ತದೆ. ನೀವು ನಕಾರಾತ್ಮಕತೆಯನ್ನು ಸಹ ಅನುಭವಿಸುವ ಸಾಧ್ಯತೆ ಇದೆ. ಈ ರೀತಿಯಾಗಿ, ಅನಗತ್ಯವಾಗಿ ಯೋಚಿಸುವುದರಿಂದ ನಿಮ್ಮ ಒತ್ತಡ ಹೆಚ್ಚಾಗುತ್ತದೆ, ಇದರಿಂದ ನಿಮ್ಮ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಉಂಟಾಗುತ್ತದೆ. ನಿಮ್ಮ ಗೊಂದಲಗಳನ್ನು ಸ್ನೇಹಿತರು ಅಥವಾ ಕುಟುಂಬದವರೊಂದಿಗೆ ಹಂಚಿಕೊಳ್ಳುವುದು ಉತ್ತಮ. ಮನೆಯ ವಾತಾವರಣ ಉತ್ತಮವಾಗಿರುತ್ತದೆ. ಕುಟುಂಬಕ್ಕೆ ಸಂಪೂರ್ಣ ಬೆಂಬಲ ಸಿಗಲಿದೆ. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲು ಇಂದು ನಿಮಗೆ ಅವಕಾಶ ಸಿಗುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಇಂದು ಯಾವುದೇ ವ್ಯಾಪಾರ ವಹಿವಾಟಿಗೆ ಸಕಾಲ. ಒಂದು ವೇಳೆ ನಿಮಗೆ ಉಸಿರಾಟ ಸಂಬಂಧಿ ಇದ್ದರೆ ಹೆಚ್ಚಿನ ಕಾಳಜಿ ವಹಿಸಿ.
ಉತ್ತಮ ಬಣ್ಣ: ತಿಳಿ ಹಳದಿ
ಶುಭ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 7 ರವರೆಗೆ
ವೃಷಭ ರಾಶಿ:
ಇಂದು ಕೆಲಸದ ವಿಷಯದಲ್ಲಿ ನೀವು ಬಹಳ ಜಾಗರೂಕಗಾಗಿರಬೇಕು. ವ್ಯಾಪಾರ ವಹಿವಾಟಿನ ವಿಷಯದಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ. ಇಲ್ಲದಿದ್ದರೆ ಕಷ್ಟವನ್ನು ಎದುರಿಸಬೇಕಾಗುತ್ತದೆ. ಕಚೇರಿಯಲ್ಲಿ ನಿಮ್ಮನ್ನು ನೀವು ಸಂಪೂರ್ಣವಾಗಿ ತೊಡಗಿಸಿಕೊಳ್ಳಿ. ನಿಮಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿದ್ದರೆ, ಅವುಗಳನ್ನೂ ಮುಗಿಸಿ. ಇಲ್ಲವಾದರೆ ಸಮಸ್ಯೆ ಎದುರಿಸಬೇಕಾಗಬಹುದು. ನಿಮ್ಮ ಕೆಲಸವನ್ನು ನೀವು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ, ಶೀಘ್ರದಲ್ಲೇ ಪ್ರಗತಿಯನ್ನು ಪಡೆಯುವಿರಿ. ಕುಟುಂಬ ಜೀವನದಲ್ಲಿ ಒತ್ತಡದ ಪರಿಸ್ಥಿತಿ. ಮನೆಯ ಕಿರಿಯ ಸದಸ್ಯರೊಂದಿಗಿನ ಸಂಬಂಧದಲ್ಲಿ ಕಹಿ ಉಂಟಾಗಬಹುದು. ನಿಮ್ಮ ಕಠಿಣ ಸ್ವಭಾವವನ್ನು ನೀವು ನಿಯಂತ್ರಿಸಬೇಕು. ಹಣದ ಬಗ್ಗೆ ಮಾತನಾಡುವುದಾದರೆ, ಮನೆಯ ವೆಚ್ಚಗಳು ಹೆಚ್ಚು. ಆರೋಗ್ಯದ ವಿಷಯಕ್ಕೆ ಬಂದರೆ, ಹೆಚ್ಚು ಚಿಂತೆ ಮಾಡುವುದನ್ನು ಬಿಡಿ. ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 38
ಶುಭ ಸಮಯ: ಸಂಜೆ 4 ರಿಂದ 9 ರವರೆಗೆ
ಮಿಥುನ ರಾಶಿ:
ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿ. ಯಾವುದೇ ಕಾರಣಕ್ಕೂ ನಿರ್ಲಕ್ಷ ಬೇಡ. ಇಲ್ಲದಿದ್ದರೆ ನೀವು ಕೆಲವು ಗಂಭೀರ ಕಾಯಿಲೆಗೆ ಒಳಗಾಗಬಹುದು. ನಿಮಗೆ ಆರೋಗ್ಯ ಸರಿ ಇಲ್ಲದಿದ್ದರೆ, ಕೂಡಲೇ ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ಆರೋಗ್ಯವೇ ಭಾಗ್ಯ ಎಂಬಂತೆ ಆರೋಗ್ಯವಾಗಿದ್ದರೆ ಮಾತ್ರ ಯಾವುದೇ ಸಾಧನೆ ಮಾಡಲು ಸಾಧ್ಯ. ನೀವು ನೌಕರಿ ಮಾಡುವವರಾಗಿದ್ದರೆ ನಿಮ್ಮ ಬಾಸ್ ನಿಮ್ಮ ಕೆಲಸದ ಬಗ್ಗೆ ಬಹಳ ಮೆಚ್ಚುಗೆ ತೋರಿಸುತ್ತಾರೆ. ನಿಮ್ಮ ಪ್ರಗತಿಯ ಚಿಹ್ನೆಗಳನ್ನು ಕಾಣುತ್ತೀರಿ. ವ್ಯವಹಾರ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕೆಲವು ಪ್ರಮುಖ ಕೆಲಸಗಳನ್ನು ಇಂದು ಪೂರ್ಣಗೊಳಿಸಬಹುದು. ಹಣದ ಹರಿವು ಚೆನ್ನಾಗಿರುತ್ತದೆ. ಇಂದು ವೆಚ್ಚಗಳು ಕಡಿಮೆ ಇರುತ್ತದೆ, ಆದರೂ ನೀವು ನಿರೀಕ್ಷಿಸುತ್ತಿರುವ ಆರ್ಥಿಕ ಲಾಭವನ್ನು ಪಡೆಯಲು ಸಾಧ್ಯವಿಲ್ಲ.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 6
ಶುಭ ಸಮಯ: ಬೆಳಗ್ಗೆ 6:40 ರಿಂದ ಮಧ್ಯಾಹ್ನ 12 ರವರೆಗೆ
ಕರ್ಕಾಟಕ:
ನಿಮ್ಮನ್ನು ದೊಡ್ಡ ಚಿಂತೆ ಕಾಡಬಹುದು. ಕೆಲವು ಸಮಯದಿಂದ, ನಿಮ್ಮ ವೃತ್ತಿಪರ ಅಥವಾ ವೈಯಕ್ತಿಕ ಜೀವನದಲ್ಲಿ ಏರಿಳಿತದ ಪರಿಸ್ಥಿತಿ ಇದ್ದರೆ ಇಂದು ಸುಧಾರಿಸಬಹುದು. ಮನೆಯ ಸಮಸ್ಯೆಯಿಂದಾಗಿ ಕೆಲಸದ ಬಗ್ಗೆ ಸರಿಯಾದ ಗಮನ ಹರಿಸಲು ನಿಮಗೆ ಸಾಧ್ಯವಾಗದಿದ್ದರೆ, ಇಂದು ನಿಮಗೆ ಪರಿಹಾರ ಸಿಗುತ್ತದೆ. ಮೊದಲನೆಯದಾಗಿ, ನಿಮ್ಮ ಸಂಬಂಧಗಳ ಬಗ್ಗೆ ಮಾತನಾಡುವುದಾದರೆ, ಇಂದು ನಿಮ್ಮ ಕುಟುಂಬದ ಅಸಮಾಧಾನವನ್ನು ನಿವಾರಿಸಲು ನಿಮಗೆ ಸಾಧ್ಯವಾಗುತ್ತದೆ. ಇದರಿಂದ ಕಲಿತ ಪಾಠ ಕಲಿಯಿರಿ. ಭವಿಷ್ಯದಲ್ಲಿ ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುವ ಯಾವುದೇ ಕೆಲಸವನ್ನು ನೀವು ಮಾಡಬಾರದು. ಕೆಲಸದ ಬಗ್ಗೆ ಮಾತನಾಡುವುದಾದರೆ, ನೀವು ಉದ್ಯಮಿಯಾಗಿದ್ದರೆ, ನೀವು ಇಂದು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಅದೇ ಉದ್ಯೋಗದಲ್ಲಿರುವ ಜನರಿಗೆ ಉದ್ಯೋಗಗಳನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳುವುದನ್ನು ಸಧ್ಯಕ್ಕೆ ಕೈಬಿಡಿ. ಆ ರೀತಿಯ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬಾರದು ಇದಕ್ಕೆಲ್ಲ ಸರಿಯಾದ ಚಿಂತನೆ ಮುಖ್ಯ. ಹಣದ ಹರಿವು ಚೆನ್ನಾಗಿರುತ್ತದೆ. ನಿಮ್ಮ ಬಜೆಟ್ ಸಮತೋಲನದಲ್ಲಿರುತ್ತದೆ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 22
ಶುಭ ಸಮಯ: ಸಂಜೆ 5 ರಿಂದ 9 ರವರೆಗೆ
ಸಿಂಹ ರಾಶಿ:
ನಿಅಮ್ಗಿಂದು ಕಚೇರಿಯಲ್ಲಿ ಉತ್ತಮ ಗೌರವ ಸಿಗಲಿದೆ. ಇದು ನಿಮ್ಮ ವ್ಯಕ್ತಿತ್ವವನ್ನು ಬಲಪಡಿಸುತ್ತದೆ. ಹಿರಿಯರು ನಿಮ್ಮಿಂದ ತುಂಬಾ ಪ್ರಭಾವಿತರಾಗುತ್ತಾರೆ. ವ್ಯಾಪಾರಸ್ಥರು ಆರ್ಥಿಕ ನಷ್ಟವನ್ನು ಅನುಭವಿಸಬಹುದು. ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆದರೆ ಬಹಳ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಕುಟುಂಬದಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯುವ ಮೂಲಕ ನಿಮಗೆ ಒಳ್ಳೆಯದೆ ಆಗುತ್ತದೆ. ಇಂದು ಒಡಹುಟ್ಟಿದವರೊಂದಿಗೆ ಬಹಳ ಮೋಜಿನ ದಿನವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಉಳಿಯುತ್ತದೆ. ದೈನಂದಿನ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಇಂದು ಹಣದ ದೃಷ್ಟಿಯಿಂದ ಉತ್ತಮ ದಿನ. ನಿಮ್ಮ ನಿಗದಿತ ಬಜೆಟ್ ಪ್ರಕಾರ ನೀವು ಖರ್ಚು ಮಾಡಬೇಕು. ನಿಮ್ಮ ಆರೋಗ್ಯದ ಮಟ್ಟಿಗೆ, ಇಂದು ಮಿಶ್ರ ದಿನ.
ಉತ್ತಮ ಬಣ್ಣ: ನೀಲಿ
ಶುಭ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ
ಕನ್ಯಾರಾಶಿ:
ಇಂದು ನಿಮ್ಮ ಆರೋಗ್ಯದ ಬಗ್ಗೆ ನೀವು ತುಂಬಾ ಚಿಂತೆ ಮಾಡಬಹುದು. ಆರೋಗ್ಯ ಸಮಸ್ಯೆಯಿಂದ ನಿಮಗೆ ನಿಮ್ಮ ಕೆಲಸದ ಬಗ್ಗೆ ಸರಿಯಾಗಿ ಗಮನ ಹರಿಸಲು ಕೂಡ ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಉತ್ತಮ. ನಿಮ್ಮ ಮೇಲೆ ಹೆಚ್ಚು ಕೆಲಸದ ಒತ್ತಡ ಹೇರಬೇಡಿ. ನಿಮಗೆ ಬರಬೇಕಿದ್ದ ಬಾಕಿ ಹಣ ಇಂದಿಗೂ ಸಿಗದೆ ನಿರಾಶೆಯಾಗಬಹುದು. ಇತರರೊಂದಿಗೆ ಚರ್ಚೆಯಿಂದ ನಿಮಗೆ ಹಾನಿಯಾಗಬಹುದು. ಯಾವುದೇ ಸಂದರ್ಭದಲ್ಲೂ ನಿಮ್ಮ ತಾಳ್ಮೆಯನ್ನು ಕಳೆದುಕೊಳ್ಳುವುದನ್ನು ತಪ್ಪಿಸಿ. ನೀವು ಶಾಂತಿಯಿಂದ ಕೆಲಸ ಮಾಡಬೇಕು. ನೌಕರಸ್ಥರಿಗೆ ದಿನ ಮಿಶ್ರ ಫಲ. ಉದ್ಯೋಗಿಗಳು ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ಪಾಲಿಸಬೇಕು. ಇಂದು ನಿಮಗೆ ಯಾವುದೇ ಪ್ರಮುಖ ಜವಾಬ್ದಾರಿಯನ್ನು ವಹಿಸಿದ್ದರೆ, ಅದನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಪ್ರಯತ್ನಿಸಿ. ಅದೇ ಸಮಯದಲ್ಲಿ, ವ್ಯಾಪಾರಿಗಳು ಹೆಚ್ಚಿನ ಸರಕುಗಳನ್ನು ಸಂಗ್ರಹಿಸುವುದನ್ನು ತಪ್ಪಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 20
ಶುಭ ಸಮಯ: ಬೆಳಗ್ಗೆ 9:40 ರಿಂದ ಮಧ್ಯಾಹ್ನ 12:25
ತುಲಾ ರಾಶಿ:
ಇಂದು, ವ್ಯಾಪಾರಿಗಳಿಗೆ ದಿನವು ಏರಿಳಿತದಿಂದ ಕೂಡಿರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನಿಮಗಿಂದು ಸಿಗದಿದ್ದರೆ ನಿರಾಶೆಗೊಳ್ಳುವ ಅಗತ್ಯ ವಿಲ್ಲ. ಮುಂದೆ ಉತ್ತಮ ದಿನ ನಿಮ್ಮದಾಗಲಿದೆ. ನೀವು ಪೂರ್ಣ ಸಕಾರಾತ್ಮಕತೆಯಿಂದ ಪ್ರಯತ್ನಿಸುತ್ತಲೇ ಇರುತ್ತೀರಿ, ಶೀಘ್ರದಲ್ಲೇ ವಿಷಯಗಳು ನಿಮ್ಮ ಪರವಾಗಿ ತಿರುಗುತ್ತವೆ. ಮತ್ತೊಂದೆಡೆ, ಉದ್ಯೋಗದಲ್ಲಿರುವ ಜನರು ಸೋಮಾರಿತನವನ್ನು ತ್ಯಜಿಸಿ ತಮ್ಮ ಕೆಲಸದತ್ತ ಗಮನ ಹರಿಸಬೇಕು, ವಿಶೇಷವಾಗಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಸ್ವಾರ್ಥಿ ಜನರಿಂದ ದೂರವಿರಿ. ಹೊಗಳಿಕೆ ಮತ್ತು ಬೈಗುಳದ ನಡುವಿನ ವ್ಯತ್ಯಾಸವನ್ನು ನೀವು ಅರ್ಥಮಾಡಿಕೊಳ್ಳಬೇಕು, ಇಲ್ಲದಿದ್ದರೆ ಇಂದು ಯಾರಾದರೂ ನಿಮ್ಮನ್ನು ಅನ್ಯತಾ ಬಳಸಿಕೊಳ್ಳಬಹುದು. ಹಣದ ವಿಷಯದಲ್ಲಿ ದಿನ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಹೊರಗಿನ ಆಹಾರವನ್ನು ತಿನ್ನುವುದನ್ನು ನಿಮಗೆ ಒಳ್ಳೆಯದಲ್ಲ.
ಉತ್ತಮ ಬಣ್ಣ: ಆಕಾಶ
ಶುಭ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 7:15 ರಿಂದ ಮಧ್ಯಾಹ್ನ 12:45
ವೃಶ್ಚಿಕ ರಾಶಿ:
ನಿರುದ್ಯೋಗಿಗಳಿಗೆ ಇಂದು ಪುನಃ ನಿರಾಶೆಯಾಗಬಹುದು. ಉದ್ಯೋಗ ಗಳಿಸುವಲ್ಲಿ ವಿಳಂಬವು ನಿಮ್ಮ ಒತ್ತಡವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಆತ್ಮವಿಶ್ವಾಸವನ್ನು ದುರ್ಬಲಗೊಳಿಸುತ್ತದೆ. ಆದರೆ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ತಾಳ್ಮೆಯಿಂದ ಇರಿ. ಶೀಘ್ರದಲ್ಲೇ ನಿಮ್ಮ ಸಮಸ್ಯೆಗಳು ಬಗೆಹರಿಯುತ್ತದೆ. ವ್ಯಾಪಾರಿಗಳು ಇಂದು ಜಾಗರೂಕರಾಗಿರಬೇಕು. ಆರ್ಥಿಕ ವಹಿವಾಟುಗಳನ್ನು ಎಚ್ಚರಿಕೆಯಿಂದ ಮಾಡಿ ಇಲ್ಲದಿದ್ದರೆ ನಷ್ಟಗಳನ್ನು ಅನುಭವಿಸಬೇಕಾಗಬಹುದು. ನೀವು ಇತ್ತೀಚೆಗೆ ಯಾವುದೇ ಹೂಡಿಕೆ ಮಾಡಿದ್ದರೆ, ನಿಮಗೆ ಉತ್ತಮ ಲಾಭಗಳು ಸಿಗುವುದಿಲ್ಲ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ನಿಮ್ಮ ಆರೋಗ್ಯದ ಬಗ್ಗೆಯೂ ನೀವು ಗಮನ ಹರಿಸಬೇಕು. ನಿರಂತರವಾಗಿ ಕೆಲಸ ಮಾಡುವುದನ್ನು ಬಿಡಿ. ತಿನ್ನುವುದು ಮತ್ತು ಕುಡಿಯುವುದರಲ್ಲಿ ನಿರ್ಲಕ್ಷ್ಯ ವಹಿಸಬೇಡಿ, ಮತ್ತು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 28
ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ
ಧನು ರಾಶಿ:
ನಿಮಗಿಂದು ದಿನ ಉತ್ತಮವಾಗಿದೆ ಆದರೆ ಜಾಗರೂಕತೆಯನ್ನು ವಹಿಸಿ. ಎಚ್ಚರಿಕೆಯಿಂದ ಮತ್ತು ತಿಳುವಳಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಇತರರಿಂದ ಹೆಚ್ಚಿನದನ್ನು ನಿರೀಕ್ಷಿಸಬೇಡಿ. ಯಾರೊಬ್ಬರ ಕಾರಣದಿಂದಾಗಿ ನೀವು ಇಂದು ತುಂಬಾ ದುಃಖಿತರಾಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ನೋಡಿದರೆ, ನಿಮ್ಮ ಬಾಸ್ ಖುಷಿಯಾಗಬಹುದು. ನಿಮ್ಮ ಪ್ರಗತಿಯ ಕನಸು ಈಡೇರಬಹುದು. ನೀವು ಫ್ಯಾಷನ್ನಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ಇಂದು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಮತ್ತೊಂದೆಡೆ, ಆನ್ಲೈನ್ನಲ್ಲಿ ವ್ಯಾಪಾರ ಮಾಡುವ ಜನರು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುವುದಿಲ್ಲ. ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುತ್ತವೆ ಮತ್ತು ನೀವು ಹೆಚ್ಚಿನ ಸಂಪತ್ತನ್ನು ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನೀವು ಇಂದು ಆಲಸ್ಯವನ್ನು ಅನುಭವಿಸುವಿರಿ.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 10
ಶುಭ ಸಮಯ: ಸಂಜೆ 6 ರಿಂದ 8:45 ರವರೆಗೆ
ಮಕರ ರಾಶಿ:
ಇಂದು ನಿಮಗೆ ಮಿಶ್ರ ಫಲ. ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ನೀವು ತುಂಬಾ ಗಂಭೀರವಾಗಿರುತ್ತೀರಿ. ನಿಮ್ಮ ಎಲ್ಲಾ ಕೆಲಸಗಳನ್ನು ನೀವು ಪೂರ್ಣ ಶಕ್ತಿ ಮತ್ತು ಕಠಿಣ ಪರಿಶ್ರಮದಿಂದ ಪೂರ್ಣಗೊಳಿಸುತ್ತೀರಿ. ಬಾಸ್ ಇದರಿಂದ ಸಂತೋಷಗೊಳ್ಳುತ್ತಾರೆ. ಮತ್ತೊಂದೆಡೆ, ನೀವು ವ್ಯಾಪಾರ ಮಾಡುವವರಾಗಿದ್ದರೆ, ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ಹಣಕಾಸು ವ್ಯವಹಾರ ಮಾಡುವವರು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಹಣಕಾಸಿನ ಸ್ಥಿತಿ ತೃಪ್ತಿಕರವಾಗಿರುತ್ತದೆ ಆದರೆ ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸಗಳನ್ನು ಮಾಡಲು ಈ ಸಮಯ ಸೂಕ್ತವಲ್ಲ. ಇಂದು ಕುಟುಂಬ ಜೀವನದಲ್ಲಿ ಸ್ವಲ್ಪ ಕೋಲಾಹಲ ಉಂಟಾಗುತ್ತದೆ. ಕಿರಿಯ ಸಹೋದರರೊಂದಿಗೆ ಬಾಂಧವ್ಯವನ್ನು ಸರಿಯಾಗಿ ಇರಿಸಿಕೊಳ್ಳಿ. ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಿ. ಇಂದು, ಸಂಗಾತಿಯ ವರ್ತನೆ ನಿಮಗೆ ಸರಿಬರುವುದಿಲ್ಲ. ನಿಮ್ಮ ಪ್ರಿಯತಮೆಯನ್ನು ನೀವು ಪ್ರೀತಿಯಿಂದ ನೋಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಇಂದು ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಉತ್ತಮ ಬಣ್ಣ: ಮರೂನ್
ಶುಭ ಸಂಖ್ಯೆ: 32
ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 2: 30 ರವರೆಗೆ
ಕುಂಭ ರಾಶಿ:
ಒತ್ತಡದಿಂದ ನಿಮಗಿಂದು ವಿಶ್ರಾಂತಿ. ಇಂದು ನೀವು ನಿಮಗಾಗಿ ಸಾಕಷ್ಟು ಸಮಯವನ್ನು ಕಳೆಯುತ್ತೀರಿ.ನಿಮ್ಮನ್ನು ರಿಫ್ರೆಶ್ ಮಾಡಿಕೊಳ್ಳಲು ಈ ದಿನವು ಒಳ್ಳೆಯದು, ಆದ್ದರಿಂದ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ವಾಕ್ ಹೋಗುವ ಸಾಧ್ಯತೆ. ನಿಮ್ಮ ಪ್ರಿಯತಮೆಯೊಂದಿಗೆ ಸಮಯ ಕಳೆಯಿರಿ, ಈ ಕ್ಷಣಗಳು ನಿಮಗೆ ಸ್ಮರಣೀಯವಾಗುತ್ತವೆ. ತಾಯಿಯಿಂದ ಆರ್ಥಿಕ ಲಾಭ ಸಾಧ್ಯ. ದುಡಿಯುವ ಜನರು ತಮ್ಮ ಕಠಿಣ ಪರಿಶ್ರಮದ ಫಲವನ್ನು ಪಡೆಯಬಹುದು. ನೀವು ದೀರ್ಘಕಾಲ ಮಾಡಲು ಬಯಸಿದ ಕೆಲಸವನ್ನು ಇಂದು ಈಡೇರಿಸಬಹುದು. ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನ. ನಿಮ್ಮ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾತನಾಡಿದರೆ ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಚೆನ್ನಾಗಿ ಉಳಿತಾಯ ಮಾಡಲು ಸಾಧ್ಯವಾಗುತ್ತದೆ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 7
ಒಳ್ಳೆಯ ಸಮಯ: ಮಧ್ಯಾಹ್ನ 2 ರಿಂದ 4:20
ಮೀನ ರಾಶಿ:
ಇಂದು ಕೆಲಸದ ಒತ್ತಡದಿಂದ ಬಿಡುವನ್ನು ಪಡೆದು ನಿಮಗಾಗಿ ನೀವು ಸ್ವಲ್ಪ ಸಮಯವನ್ನು ಕಳೆಯುವಿರಿ. ನಿಮ್ಮ ವಿಶ್ರಾಂತಿಗಾಗಿ ನೀವು ಇಂದು ಪ್ರಯತ್ನಿಸಿ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಸಾಕಷ್ಟು ಸಿಹಿ ಮತ್ತು ಸಿಹಿ ಮಾತುಕತೆಗಳನ್ನು ನಡೆಸುತ್ತೀರಿ ಮತ್ತು ನೀವು ಸಾಕಷ್ಟು ಮನರಂಜನೆ ಪಡೆಯುತ್ತೀರಿ. ನಿಮ್ಮ ಪ್ರಿಯತಮೆಯೊಂದಿಗೆ ಸ್ಮರಣೀಯ ಕ್ಷಣಗಳನ್ನು ಕಳೆಯಿರಿ. ವ್ಯಾಪಾರಿಗಳಿಗೆ ದಿನದಲ್ಲಿ ಕೆಲಸಗಳು ಅಧಿಕ. ನಿಮ್ಮ ವ್ಯವಹಾರವನ್ನು ಬೆಳೆಸಲು ನೀವು ಶ್ರಮಿಸುತ್ತೀರಿ. ಅಂತೆಯೇ, ನಿರಂತರ ಪ್ರಯತ್ನಗಳನ್ನು ಮಾಡುತ್ತಲೇ ಇರಿ, ಶೀಘ್ರದಲ್ಲೇ ನಿಮಗೆ ಉತ್ತಮ ಫಲ ಸಿಗುತ್ತದೆ.ನಿಮ್ಮ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾತನಾಡುವುದಾದರೆ, ದಿನವು ಸಾಮಾನ್ಯವಾಗಿರುತ್ತದೆ. ಇಂದು ಉಳಿತಾಯ ಮಾಡಬಹುದು.
ಉತ್ತಮ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 12:20 ರಿಂದ ಸಂಜೆ 4 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005