Just In
Don't Miss
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Movies
ರಿಷಿ ಕಪೂರ್ ಅರ್ಧಕ್ಕೆ ಬಿಟ್ಟು ಹೋದ ಪಾತ್ರ ಮುಂದುವರಿಸಲಿದ್ದಾರೆ ಪರೇಶ್ ರಾವಲ್
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶುಕ್ರವಾರದ ದಿನ ಭವಿಷ್ಯ: ನಿಮ್ಮ ರಾಶಿ ಬಗ್ಗೆ ಏನು ಹೇಳಿದೆ ನೋಡಿ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com
ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಕಾರ್ತಿಕಾ
ನಕ್ಷತ್ರ: ನವೆಂಬರ್ 28, ಮಧ್ಯಾಹ್ನ 12:23ರ ವರೆಗೆ ಅಶ್ವಿನಿ, ನಂತರ ಭರಣಿ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ:ಬೆಳಗ್ಗೆ 10:50ರಿಂದ 12:09ರವರೆಗೆ
ಗುಳಿಕಕಾಲ:ಬೆಳಗ್ಗೆ 08:12ರಿಂದ 09:31ರವರೆಗೆ
ಯಮಗಂಡಕಾಲ:ಮಧ್ಯಾಹ್ನ 02:46ರಿಂದ 04:05ರವರೆಗೆ
ದುರ್ಮುಹೂರ್ತ:ಬೆಳಗ್ಗೆ 09:00ರಿಂದ 09:42ರವರೆಗೆ
ಮಧ್ಯಾಹ್ನ 12:30ರಿಂದ 01:12ರವರೆಗೆ
ಸೂರ್ಯೋದಯ: ಬೆಳಗ್ಗೆ 06:53ಕ್ಕೆ
ಸೂರ್ಯಾಸ್ತ: ಸಂಜೆ 05:24ಕ್ಕೆ

ಮೇಷ ರಾಶಿ:
ಇಂದು ನೀವು ಯಾವುದೇ ಹೂಡಿಕೆಗೆ ಅವಕಾಶವನ್ನು ಪಡೆಯಬಹುದು ಆದರೆ ನಿಮ್ಮ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ನೀವು ಉದ್ಯೋಗ ಮಾಡುತ್ತಿದ್ದರೆ, ಇಂದು ನಿಮ್ಮ ಕೆಲಸಕ್ಕೆ ನಿಮ್ಮ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ನ ಸಮಸ್ಯೆಯಿಂದಾಗಿ ಅಡೆತಡೆಗಳು ಉಂಟಾಗಬಹುದು. ಆದರೆ ಶೀಘ್ರದಲ್ಲೇ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತೀರಿ. ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನೀವು ಕುಟುಂಬದೊಂದಿಗೆ ಉತ್ತಮ ದಿನವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗೆ ಪ್ರೀತಿ ಮತ್ತು ಬಾಂಧವ್ಯ ಹೆಚ್ಚಾಗುತ್ತದೆ. ಆರೋಗ್ಯ ವಿಷಯಗಳು ಇಂದು ಉತ್ತಮವಾಗಿರುತ್ತವೆ. ಆದಾಗ್ಯೂ, ಹೆಚ್ಚು ಓಡಾಟವನ್ನು ತಪ್ಪಿಸಿ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 9:05 ರಿಂದ ಮಧ್ಯಾಹ್ನ 12 ರವರೆಗೆ

ವೃಷಭ ರಾಶಿ:
ಇಂದು, ನೀವು ಸಂಪತ್ತನ್ನು ಗಳಿಸುತ್ತೀರಿ ಅದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಈ ಹಣವನ್ನು ನೀವು ಸರಿಯಾಗಿ ಬಳಸುವುದು ಉತ್ತಮ. ಇದರಿಂದ ಭವಿಷ್ಯದಲ್ಲಿ ನಿಮಗೆ ಉತ್ತಮ ಲಾಭ ದೊರೆಯುತ್ತದೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿ ನೀವು ಮಾಡುವ ಕೆಲಸದಿಂದಾಗಿ ನಿಮ್ಮ ಸಾಮರ್ಥ್ಯವನ್ನು ಇಂದು ಕಚೇರಿಯಲ್ಲಿ ಪ್ರಶಂಸಿಸಲಾಗುತ್ತದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ತುಂಬಾ ಸಂತೋಷವಾಗುತ್ತಾರೆ. ಆದರೆ ಇದರಿಂದ ಅಹಂಕಾರ ಮನೋಭಾವವನ್ನು ಬೆಳೆಸಿಕೊಳ್ಳಬೇಡಿ. ನಿಮ್ಮ ಸಂಗಾತಿಯ ಬಗ್ಗೆ ಗಮನ ವಹಿಸಿ. ಸಣ್ಣ ವಿಷಯಗಳ ಮೇಲೆ ಕೋಪಗೊಳ್ಳುವ ನಿಮ್ಮ ಅಭ್ಯಾಸದಿಂದಾಗಿ ನಿಮ್ಮ ಸಂಬಂಧವು ಹದಗೆಡಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನಿಮ್ಮ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಹೀಗಾದಾಗ ಆರೋಗ್ಯ ಹದಗೆಡುತ್ತದೆ.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 6
ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ

ಮಿಥುನ ರಾಶಿ:
ನೀವು ಉದ್ಯೋಗ ಮಾಡುತ್ತಿದ್ದರೆ, ದೀರ್ಘಕಾಲದಿಂದ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಉನ್ನತ ಅಧಿಕಾರಿಗಳ ಕಠಿಣ ವರ್ತನೆ ನಿಮಗೆ ತೊಂದರೆ ಎನಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಿ ಮತ್ತು ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ. ಇಂದು ನೀವು ನಿಮ್ಮ ಮಾತುಗಳನ್ನು ಬಹಳ ಯೋಚನೆ ಮಾಡಿ ಬಳಸಬೇಕಾಗುತ್ತದೆ. ಮಾತನಾಡುವ ಭರದಲ್ಲಿ ನಿಮಗೇ ನೋವುಂಟೂ ಮಾಡುವಂಥ ಮಾತುಗಳನ್ನು ಆಡಬೇಡಿ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಪೋಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿದೆ. ಹಣದ ವಿಷಯದಲ್ಲಿ, ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಇದರಿಂದ ನಿಮ್ಮ ಮುಂದಿನ ಯೋಜನೆಗಳಲ್ಲಿ ಯಾವುದೇ ಅಡೆತಡೆಗಳು ಉಂಟಾಗುವುದಿಲ್ಲ. ಇಂದು ನಿಮ್ಮ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 26
ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ಕರ್ಕಾಟಕ ರಾಶಿ:
ನಿಮ್ಮ ಮನಸ್ಸನ್ನು ಇಂದು ಆದಷ್ಟು ಶಾಂತವಾಗಿರಿಸಿಕೊಳ್ಳಬೇಕು. ಅನಗತ್ಯವಾಗಿ ಯೋಚಿಸುವ ಮೂಲಕ, ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಿಕೊಳ್ಳುತ್ತೀರಿ. ತಾಳ್ಮೆಯಿಂದಿರಿ ಮತ್ತು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ. ಉದ್ಯೋಗಸ್ಥರು, ಬಾಕಿ ಇರುವ ಕಾರ್ಯಗಳನ್ನು ಇಂದು ಪೂರ್ಣಗೊಳಿಸುವುದನ್ನು ಗುರಿಯಾಗಿಸಿಕೊಳ್ಳಬೇಕು. ನೀವು ಸೋಮಾರಿಯಾಗಿದ್ದರೆ ಅಥವಾ ನಿಮ್ಮ ಕೆಲಸವನ್ನು ಮುಂದೂಡಿದರೆ ಕಷ್ಟವಾಗುತ್ತದೆ. ಈ ಸಮಯದಲ್ಲಿ ನೀವು ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರಿಗಳಿಗೆ ಮಿಶ್ರ ಫಲ. ಕುಟುಂಬದೊಂದಿಗೆ ಸಂಬಂಧವು ಬಲವಾಗಿರುತ್ತದೆ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಮೂಳೆಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಈ ಮೊದಲೇ ಇದ್ದರೆ ಇಂದು ಆ ಸಮಸ್ಯೆ ಹೆಚ್ಚಾಗಬಹುದು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 9
ಶುಭ ಸಮಯ: ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ

ಸಿಂಹ ರಾಶಿ:
ನೀವು ವ್ಯಾಪಾರ ಮಾಡುತ್ತಿದ್ದರೆ, ನಿಧಾನಗತಿಯ ಕೆಲಸದಿಂದಾಗಿ ಇಂದು ನೀವು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ವಿಶೇಷವಾಗಿ ಈ ಸಮಯದಲ್ಲಿ ಆರ್ಥಿಕ ಸಮಸ್ಯೆ ನಿಮ್ಮನ್ನು ಕಾಡಬಹುದು. ಅದರೆ ಶೀಘ್ರದಲ್ಲೇ ಈ ಸಮಸ್ಯೆ ದೂರವಾಗಲಿದೆ. ಇಂದು, ನಿಮ್ಮ ಸಂಗಾತಿಯೊಂದಿಗೆ ಸಣ್ಣ ವಿಷಯಗಳ ಬಗ್ಗೆ ಚರ್ಚೆ ನಡೆಸಬಹುದು. ಮನೆಯ ಸದಸ್ಯರು ನಿಮ್ಮ ಕೋಪದ ಸ್ವಭಾವವನ್ನು ಟೀಕಿಸಬಹುದು. ನಿಮ್ಮ ಪ್ರೀತಿಪಾತ್ರರ ಮೇಲೆ ಅನಗತ್ಯವಾಗಿ ಕೋಪ ಮಾಡಿಕೊಳ್ಳುವುದನ್ನು ನಿಯಂತ್ರಿಸುವುದು ಉತ್ತಮ. ನಕಾರಾತ್ಮಕ ಆಲೋಚನೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ, ನಿಮ್ಮ ಮನಸ್ಸನ್ನು ಬದಲಾಯಿಸಿಕೊಂಡರೆ ಎಲ್ಲವೂ ನಿಮಗೆ ಸರಿ ಹೊಂದುವಂತೆಯೇ ಆಗುತ್ತವೆ. ವಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ, ನಿಮ್ಮ ಭಾವನೆಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ ಮತ್ತು ನಿಮ್ಮ ಸಂಗಾತಿ ನಿಮ್ಮಿಂದ ದೂರವಾಗುವ ಯಾವುದೇ ಕೆಲಸವನ್ನು ಮಾಡಬೇಡಿ. ಸಂಜೆ ನೀವು ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯುವ ಅವಕಾಶವನ್ನು ಪಡೆಯಬಹುದು.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 30
ಶುಭ ಸಮಯ: ಮಧ್ಯಾಹ್ನ 2 ರಿಂದ 6 ರವರೆಗೆ

ಕನ್ಯಾ ರಾಶಿ:
ಹೊಸ ಹೂಡಿಕೆ ಇಂದು ಅವಕಾಶ ಪಡೆಯುವಿರಿ. ನಿಮ್ಮ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ನ ಸಮಸ್ಯೆಯಿಂದಾಗಿ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು. ಸಮಸ್ಯೆ ಶೀಘ್ರದಲ್ಲೇ ಬಗೆಹರಿಯುತ್ತದೆ. ತಾಳ್ಮೆಯಿಂದಿರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನೀವು ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ. ಸಂಗಾತಿಯೊಂದಿಗೆ ಪ್ರೀತಿ ಮತ್ತು ಬಾಂಧವ್ಯ ಉತ್ತಮವಾಗಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತವೆ. ಆದರೂ ಅನಗತ್ಯ ಓಡಾಟವನ್ನು ತಪ್ಪಿಸಿ.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 20
ಶುಭ ಸಮಯ: ಬೆಳಗ್ಗೆ 4 ರಿಂದ ಸಂಜೆ 6 ರವರೆಗೆ

ತುಲಾ ರಾಶಿ:
ಇಂದು ನೀವು ನಿಮ್ಮ ಆತ್ಮೀಯ ಸ್ನೇಹಿತನನ್ನು ಭೇಟಿ ಮಾಡಬಹುದು. ಬಹಳ ಸಮಯದ ನಂತರ, ನಿಮ್ಮ ಸ್ನೇಹಿತನೊಂದಿಗೆ ಸಾಕಷ್ಟು ಮಾತನಾಡುವ ಮೂಲಕ ನೀವು ಸಾಕಷ್ಟು ಉಲ್ಲಾಸಗೊಳ್ಳುವಿರಿ. ಮನೆಯಲ್ಲಿನ ಪರಿಸ್ಥಿತಿಗಳು ಒತ್ತಡವನ್ನುಂಟುಮಾಡುತ್ತವೆ. ನಿಮ್ಮ ಮಾತನ್ನು ನೀವು ನಿಯಂತ್ರಿಸಬೇಕು. ನಿಮ್ಮ ಉದ್ಯೋಗದಲ್ಲಿ, ಮುಂದುವರಿಯಲು ನಿಮಗೆ ಅವಕಾಶವಿದೆ. ವ್ಯಾಪಾರಿಗಳಿಗೆ ದಿನವು ತುಂಬಾ ಒತ್ತಡದಿಂದ ಕೂಡಿರುತ್ತದೆ. ದೊಡ್ಡ ವ್ಯವಹಾರ ವಿಷಯಕ್ಕಾಗಿ ನೀವು ಇಂದು ಸಾಕಷ್ಟು ಓಡಬೇಕಾಗಬಹುದು. ಇದಲ್ಲದೆ, ಇಂದು ನೀವು ವ್ಯವಹಾರಕ್ಕಾಗಿ ಸಾಲವನ್ನು ತೆಗೆದುಕೊಳ್ಳಬೇಕಾಗಬಹುದು. ಆರೋಗ್ಯದ ಬಗ್ಗೆ ಮಾತನಾಡುತ್ತಾ, ನೀವು ಸ್ವಚ್ಛತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸೋಂಕುಗಳು ಸಂಭವಿಸಬಹುದು ಜೋಪಾನ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 3 ರಿಂದ 6:30 ರವರೆಗೆ

ವೃಶ್ಚಿಕ ರಾಶಿ:
ಇಂದು ನಿಮ್ಮ ಕುಟುಂಬವು ನಿಮ್ಮ ಆದ್ಯತೆಯಾಗಿರುತ್ತದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರ ನಡುವೆ ಹೆಚ್ಚು ಸಮಯ ಕಳೆಯಲು ಬಯಸುತ್ತೀರಿ. ಕಳೆದ ಕೆಲವು ದಿನಗಳಿಂದ, ಕೆಲಸದ ಹೊರೆ ಮತ್ತು ಮನೆಯಲ್ಲಿ ಕೆಲವು ಗಂಭೀರ ಸಮಸ್ಯೆಗಳಿಂದಾಗಿ ನೀವು ತುಂಬಾ ಅಸಮಾಧಾನಗೊಂಡಿದ್ದೀರಿ, ಆದರೆ ಇಂದು ನಿಮಗೆ ಸ್ವಲ್ಪ ಸಮಾಧಾನ ಸಿಗುತ್ತದೆ. ಇಂದು ಕಳೆಯುವ ಕ್ಷಣಗಳು ನಿಮಗೆ ಸ್ಮರಣೀಯವಾಗುತ್ತವೆ. ಸಂಗಾತಿಯೊಂದಿಗಿನ ಪರಸ್ಪರ ಬಾಂಧವ್ಯ ಹೆಚ್ಚಾಗುತ್ತದೆ. ಸಂತೋಷ ಮತ್ತು ದುಃಖದಲ್ಲಿ ಒಬ್ಬರನ್ನೊಬ್ಬರು ಪರಸ್ಪರ ಸಂಪೂರ್ಣವಾಗಿ ಬೆಂಬಲಿಸುತ್ತೀರಿ. ಸಮಯದೊಂದಿಗೆ ನಿಮ್ಮ ಸಂಬಂಧವು ಬಲಗೊಳ್ಳುತ್ತಿದೆ. ಕಾರ್ಯ ಕ್ಷೇತ್ರದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ನೀವು ನಿಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತದೆ. ನೀವು ವ್ಯಾಪಾರ ಮಾಡುತ್ತಿದ್ದರೆ ಇದ್ದಕ್ಕಿದ್ದಂತೆ ದೊಡ್ಡ ಸಮಸ್ಯೆ ಉದ್ಭವಿಸಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿದೆ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 12
ಶುಭ ಸಮಯ: ಸಂಜೆ 4:30 ರಿಂದ 11 ರವರೆಗೆ

ಧನು ರಾಶಿ:
ಇಂದು ನಿಮಗೆ ಅದೃಷ್ಟದ ದಿನ. ಕೆಲಸಗಳು ಸರಾಗವಾಗಿ ನಡೆಯುತ್ತವೆ. ಕುಟುಂಬ ಜೀವನದಲ್ಲಿ ಅಪಶ್ರುತಿ ಇರುತ್ತದೆ. ನೀವು ಕುಟುಂಬ ಸದಸ್ಯರೊಂದಿಗೆ ವಿವಾದವನ್ನು ಹೊಂದಬಹುದು. ನಿಮ್ಮ ಸಂಬಂಧಗಳನ್ನು ಸುಧಾರಿಸಲು ನೀವು ಬಯಸಿದರೆ, ನಿಮ್ಮ ಸ್ವಭಾವವನ್ನು ಸ್ವಲ್ಪ ಬದಲಿಸಲು ಪ್ರಯತ್ನಿಸಿ ಮತ್ತು ಎಲ್ಲರೊಂದಿಗೆ ಪ್ರೀತಿ ಮತ್ತು ನಮ್ರತೆಯಿಂದ ವರ್ತಿಸಿ. ಮತ್ತೊಂದೆಡೆ, ಸಂಗಾತಿಯ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಒಳ್ಳೆಯದು. ಕಾರ್ಯ ಕ್ಷೇತ್ರದಲ್ಲಿ ಏರಿಳಿತದ ಪರಿಸ್ಥಿತಿಗಳು ಕಂಡುಬರುತ್ತವೆ. ನಿಮ್ಮ ಪರವಾಗಿ ನೀವು ಕಷ್ಟಪಟ್ಟು ಕೆಲಸ ಮಾಡುತ್ತೀರಿ, ಆದರೆ ಕೆಲಸದ ಒತ್ತಡವು ನಿಮ್ಮನ್ನು ಕಾಡುತ್ತದೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ತೊಂದರೆಗಳು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು.
ಉತ್ತಮ ಬಣ್ಣ: ಕಡು ನೀಲಿ
ಶುಭ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 2:45 ರಿಂದ 9:30 ರವರೆಗೆ

ಮಕರ ರಾಶಿ:
ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಜೀವನ ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರುತ್ತದೆ. ನಿಮ್ಮ ಜೀವನದಲ್ಲಿ ಈ ಮೊದಲು ಏರಿಳಿತದ ಪರಿಸ್ಥಿತಿಯಿಂದ ನೀವು ಅಸಮಾಧಾನಗೊಂಡಿದ್ದೀರಿ, ಆದರೆ ಇಂದು ಈ ಸ್ಥಿತಿಯನ್ನು ಸುಧಾರಿಸಲು ಅವಕಾಶ ಪಡೆಯುತ್ತೀರಿ. ನೀವು ಕಳೆದುಕೊಂಡ ಆತ್ಮವಿಶ್ವಾಸವನ್ನು ಮತ್ತೆ ಗಳಿಸುತ್ತೀರಿ. ನಿಮ್ಮ ಎಲ್ಲಾ ತೊಂದರೆಗಳೂ ನಿವಾರಣೆ ಯಾಗಿ, ನಿಮ್ಮ ಪ್ರೀತಿಪಾತ್ರರ ಜೊತೆ ನಗುತ್ತಾ ದಿನವನ್ನು ಕಳೆಯುತ್ತೀರಿ ಮತ್ತು ತುಂಬಾ ಉಲ್ಲಾಸದಿಂದ ಇರುತ್ತೀರಿ. ನೀವು ನೌಕರಿ ಮಾಡುತ್ತಿದ್ದರೆ ಕಚೇರಿಯಲ್ಲಿರುವ ನಿಮ್ಮ ಸಹೋದ್ಯೋಗಿಗಳಿಗೆ ಕೆಟ್ಟದ್ದನ್ನು ಮಾಡಬೇಡಿ. ಇದರಿಂದ ನೀವೇ ತೊಂದರೆಗೆ ಸಿಲುಕಬಹುದು. ಇನ್ನು ಹಣದ ಬಗ್ಗೆ ಮಾತನಾಡುವುದಾದರೆ ಲಾಭವಾಗಬಹುದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಕೇಸರಿ
ಶುಭ ಸಂಖ್ಯೆ: 34
ಶುಭ ಸಮಯ: ಸಂಜೆ 5 ರಿಂದ 9:15 ರವರೆಗೆ

ಕುಂಭ ರಾಶಿ:
ಬಹುಕಾಲ ಬಾಕಿ ಇರುವ ಸಮಸ್ಯೆಯನ್ನು ಇಂದು ಪರಿಹರಿಸಬಹುದು. ಹಣದ ಹರಿವು ಚೆನ್ನಾಗಿರುತ್ತದೆ. ನೀವು ಇಂದು ದೊಡ್ಡ ಆರ್ಥಿಕ ವ್ಯವಹಾರ ಮಾಡುವುದಿದ್ದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ಹಳೆಯ ದಿನಗಳಂತೆ ನಿಮ್ಮ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಉತ್ಸಾಹವನ್ನು ತರಲು, ಮೊದಲು ನಿಮ್ಮ ನಡವಳಿಕೆಯನ್ನು ಮೃದುಗೊಳಿಸಲು ನೀವು ಪ್ರಯತ್ನಿಸಬೇಕು. ನಿಮ್ಮ ಕೋಪವು ನಿಮ್ಮ ಸಂಗಾತಿಗೆ ದುಃಖ ತರುತ್ತದೆ. ಇಂದು ನೀವು ಸ್ನೇಹಿತರನ್ನು ಭೇಟಿ ಮಾಡಬಹುದು. ತಮಾಷೆಯಾಗಿ ಹೇಳಿದ ವಿಷಯಗಳನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ. ಉದ್ಯೋಗಿಗಳ ದಿನವು ತುಂಬಾ ಒತ್ತಡದಿಂದ ಕೂಡಿರುತ್ತದೆ. ಆದರೆ ನಿಮ್ಮ ಬಲವಾದ ಇಚ್ಛಾಶಕ್ತಿಯಿಂದ ನಿಮ್ಮ ಎಲ್ಲಾ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 8
ಶುಭ ಸಮಯ: ಬೆಳಗ್ಗೆ 7: 15 ರಿಂದ 2: 05ರ ವರೆಗೆ

ಮೀನ ರಾಶಿ:
ನೀವು ಕಚೇರಿಯಲ್ಲಿ ನಡೆಯುತ್ತಿರುವ ರಾಜಕೀಯಕ್ಕೆ ಬಲಿಯಾಗಬಹುದು. ಹಿರಿಯರ ಮುಂದೆ ಮುಜುಗರಕ್ಕೊಳಗಾಗುವ ಸಾಧ್ಯತೆಯಿದೆ. ನೀವು ಬುದ್ಧಿವಂತಿಕೆಯಿಂದ ವರ್ತಿಸುವುದು ಉತ್ತಮ. ನೀವು ವ್ಯಾಪಾರ ಮಾಡಿದರೆ ನೀವು ಇಂದು ಒತ್ತಡವನ್ನು ಅನುಭವಿಸುವಿರಿ. ಹೊಸ ವಹಿವಾಟನ್ನು ಪೂರೈಸಲು ನೀವು ತುಂಬಾ ಶ್ರಮಿಸಬೇಕಾಗಬಹುದು. ಕುಟುಂಬ ಜೀವನ ಸಾಮಾನ್ಯವಾಗಿರಲಿದೆ. ಕುಟುಂಬದೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ಕಷ್ಟದ ಸನ್ನಿವೇಶಗಳಲ್ಲಿಯೂ ಸಹ, ನಿಮ್ಮ ಸಂಗಾತಿಯು ನಿಮ್ಮ ಆತ್ಮವಿಶ್ವಾಸ ಕುಸಿಯಲು ಬಿಡುವುದಿಲ್ಲ. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಆರ್ಥಿಕವಾಗಿ ನೀವು ಸುರಕ್ಷಿತವಾಗಿರುತ್ತೀರಿ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ದೈನಂದಿನ ವ್ಯಾಯಾಮವನ್ನು ಮುಂದುವರಿಸಿ, ನೀವು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿ ಇಂದು ಆರಾಮವಾಗಿರುತ್ತೀರಿ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 25
ಶುಭ ಸಮಯ: ಬೆಳಗ್ಗೆ 7:20 ರಿಂದ ಮಧ್ಯಾಹ್ನ 2:30 ರವರೆಗೆ
ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com