Just In
- 3 min ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 3 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 12 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 12 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುರುವಾರದ ದಿನ ಭವಿಷ್ಯ: ತುಲಾ ರಾಶಿ, ವ್ಯಾಪಾರಿಗಳಿಗಿಂದು ಶುಭ ಫಲ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಆಶ್ವಿಜ
ನಕ್ಷತ್ರ:
ಮಧ್ಯಾಹ್ನ
12:00ರವರೆಗೆ
ಉತ್ತರ
ಭಾದ್ರಪದ
ನಂತರ,
ರೇವತಿ
ಪಕ್ಷ:
ಶುಕ್ಲ
ಪಕ್ಷ
ರಾಹುಕಾಲ:
ಮಧ್ಯಾಹ್ನ
01:28ರಿಂದ
02:51ರವರೆಗೆ
ಗುಳಿಕಕಾಲ:
ಬೆಳಗ್ಗೆ
09:18ರಿಂದ
10:41ರವರೆಗೆ
ಯಮಗಂಡಕಾಲ:
ಬೆಳಗ್ಗೆ
06:31ರಿಂದ
07:54ರವರೆಗೆ
ದುರ್ಮುಹೂರ್ತ:
ಬೆಳಗ್ಗೆ
10:13ರಿಂದ
10:58
ಮಧ್ಯಾಹ್ನ
02:40ರಿಂದ
03:25
ಸೂರ್ಯೋದಯ:
ಬೆಳಗ್ಗೆ
06:31ಕ್ಕೆ
ಸೂರ್ಯಾಸ್ತ:
ಸಂಜೆ
05:38ಕ್ಕೆ
ಮೇಷ ರಾಶಿ:
ನಿಮಗಿಂದು ತುಸು ಬೇಸರದ ದಿನ. ಕೆಲಸದಲ್ಲಿ ಸಮಸ್ಯೆಗಳು ಇರಬಹುದು. ಆದಾಗ್ಯೂ, ನಿಮ್ಮ ಸಾಮರ್ಥ್ಯಗಳನ್ನು ನೀವು ನಂಬಿ, ನಿಮ್ಮಿಂದ ಅತ್ಯುತ್ತಮವಾದದನ್ನು ನೀಡಲು ಪ್ರಯತ್ನಿಸಿ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದಿಂದ ತೃಪ್ತರಾಗುತ್ತಾರೆ. ಮತ್ತೊಂದೆಡೆ, ನೀವು ವ್ಯಾಪಾರಸ್ಥರು ಅಂದುಕೊಂಡ ಲಾಭ ಪಡೆಯದೆ ನಿರಾಶೆಗೊಳ್ಳಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸಾಮರಸ್ಯದಿಂದ ಕೂಡಿರುತ್ತದೆ. ನಿಮ್ಮ ಸಂಗಾತಿಯ ಮೇಲೆ ನಿಮ್ಮ ನಂಬಿಕೆಯನ್ನು ಬಲಪಡಿಸಲು ಪ್ರಯತ್ನಿಸಿ. ಸಣ್ಣ ವಿಷಯಗಳಲ್ಲಿ ಅವರನ್ನು ಅನುಮಾನಿಸುವುದನ್ನು ಬಿಡಿ. ಹಣದ ದೃಷ್ಟಿಯಿಂದ ದಿನ ಅಷ್ಟು ಉತ್ತಮವಲ್ಲ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಒತ್ತಡದಿಂದಾಗಿ ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಅಸಮಾಧಾನಗೊಳ್ಳುತ್ತೀರಿ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 31
ಶುಭ ಸಮಯ: ಸಂಜೆ 5:55 ರಿಂದ 10 ರವರೆಗೆ
ವೃಷಭ ರಾಶಿ:
ಇಂದು ಕೆಲಸ ಕಾರ್ಯಗಳು ಅಧಿಕ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಇದ್ದಕ್ಕಿದ್ದಂತೆ ಪ್ರಯಾಣ ಬೆಳೆಸಬೇಕಾಗಬಹುದು. ಆದಾಗ್ಯೂ, ಈ ಜಾಗತಿಕ ಸಾಂಕ್ರಾಮಿಕ ಖಾಯಿಲೆಯ ದೃಷ್ಟಿಯಿಂದ, ನೀವು ಹೆಚ್ಚು ಜಾಗರೂಕರಾಗಿರಬೇಕು. ಉದ್ಯೋಗಸ್ಥರಿಗೆ ದಿನ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮವನ್ನು ಕಚೇರಿಯಲ್ಲಿ ಪ್ರಶಂಸಿಸಲಾಗುತ್ತದೆ. ನೀವು ಪ್ರಗತಿಯೂ ಉಂಟಾಗಬಹುದು. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಇಂದು ವೆಚ್ಚಗಳು ಹೆಚ್ಚಾಗುತ್ತವೆ ಆದರೆ ಯಾವುದೇ ತೊಂದರೆ ಇರುವುದಿಲ್ಲ. ನಿಮ್ಮ ಕುಟುಂಬದಲ್ಲಿ ಶಾಂತಿ ಇರುತ್ತದೆ. ನಿಮ್ಮ ಪ್ರೀತಿಪಾತ್ರರ ಪ್ರೀತಿ ಮತ್ತು ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ. ಇಂದು ನೀವು ತುಂಬಾ ಆರಾಮವಾಗಿರುತ್ತೀರಿ.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 30
ಶುಭ ಸಮಯ: ಸಂಜೆ 5 ರಿಂದ 9 ರವರೆಗೆ
ಮಿಥುನ ರಾಶಿ:
ನಿಮ್ಮ ಪ್ರಮುಖ ನಿರ್ಧಾರಗಳನ್ನು ಇತರರ ಮಾತುಗಳನ್ನು ಕೇಳಿ ತೆತೆದುಕೊಳ್ಳಬೇಡಿ. ನಿಮ್ಮ ನಿರ್ಧಾರಗಳನ್ನು ನೀವು ಬಹಳ ಆಲೋಚನೆಯಿಂದ ಮತ್ತು ಬುದ್ಧಿವಂತಿಕೆಯಿಂದ ಮಾಡಬೇಕಾಗಿದೆ. ಭವಿಷ್ಯದಲ್ಲಿ ನೀವು ವಿಷಾದಿಸಬೇಕಾದ ಯಾವುದೇ ಕೆಲಸವನ್ನು ಮಾಡಬೇಡಿ. ನಿಮ್ಮ ಪ್ರಮುಖ ಕಾರ್ಯಗಳನ್ನು ಕಚೇರಿಯಲ್ಲಿ ಎಚ್ಚರಿಕೆಯಿಂದ ಪೂರ್ಣಗೊಳಿಸಿ. ಈ ಸಮಯದಲ್ಲಿ, ಸಣ್ಣ ತಪ್ಪನ್ನೂ ಕೂಡ ನೀವು ಮಾಡಬಾರದು. ನಿಮ್ಮ ಕೆಲಸವನ್ನು ಬಿಡಬೇಕಾದ ಅಪಾಯವೂ ಇದೆ. ನಿಮ್ಮ ಕೆಲಸವು ಲೇಖನ ಸಾಮಗ್ರಿಗಳು, ಪುಸ್ತಕಗಳು, ಪೀಠೋಪಕರಣಗಳು ಇತ್ಯಾದಿಗಳಿಗೆ ಸಂಬಂಧಿಸಿದ್ದಲ್ಲಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ. ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಸಂಗಾತಿಯೊಂದಿಗೆ ಸಂಬಂಧ ಉತ್ತಮವಾಗಿರುವುದಿಲ್ಲ. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ ಮತ್ತು ತಪ್ಪು ಪದಗಳನ್ನು ಬಳಸಬೇಡಿ. ಆರೋಗ್ಯದ ದೃಷ್ಟಿಯಿಂದ ಮಿಶ್ರ ದಿನ. ನಿಮಗೆ ಆರೋಗ್ಯ ಸರಿ ಇಲ್ಲದಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಉತ್ತಮ ಬಣ್ಣ: ನೀಲಿ
ಶುಭ ಸಂಖ್ಯೆ: 21
ಶುಭ ಸಮಯ: ಮಧ್ಯಾಹ್ನ 12:40 ರಿಂದ 6 ರವರೆಗೆ
ಕರ್ಕಾಟಕ ರಾಶಿ:
ಮಕ್ಕಳ ಕಡೆಯಿಂದ ತೊಂದರೆ ಉಂಟಾಗಬಹುದು! ಅವರ ತಪ್ಪು ವರ್ತನೆ ನಿಮ್ಮ ಆತಂಕವನ್ನು ಹೆಚ್ಚಿಸುತ್ತದೆ. ನೀವು ಅವರ ತಪ್ಪನ್ನು ಬೆಂಬಲಿಸಬಾರದು ಮತ್ತು ಅವುಗಳನ್ನು ಪ್ರೀತಿಯಿಂದ ವಿವರಿಸಲು ಪ್ರಯತ್ನಿಸಬೇಕು. ಕೆಲಸದಲ್ಲಿ ಉತ್ತಮ ಫಲಿತಾಂಶ ಪಡೆಯುವಿರಿ. ಉದ್ಯೋಗ ಅಥವಾ ವ್ಯವಹಾರಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ಮುಖ್ಯಸ್ಥರೊಂದಿಗೆ ಒಂದು ಪ್ರಮುಖ ವಿಷಯವನ್ನು ಚರ್ಚಿಸಬಹುದು, ಅಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಮತ್ತೊಂದೆಡೆ, ನೀವು ವ್ಯಾಪಾರ ಮಾಡುತ್ತಿದ್ದರೆ, ಜೊತೆಗೆ ನಿಮ್ಮ ಕೆಲಸವು ಹಾರ್ಡ್ವೇರ್ಗೆ ಸಂಬಂಧಪಟ್ಟಿದ್ದರೆ, ನೀವು ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ಪೋಷಕರ ಆರೋಗ್ಯ ಕುಸಿಯಬಹುದು. ನೀವು ಅವರ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಆರ್ಥಿಕವಾಗಿ ದಿನವು ಸಾಮಾನ್ಯವಾಗಿರುತ್ತದೆ. ನೀವು ಯೋಚಿಸಿ ಖರ್ಚು ಮಾಡಿ.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 2
ಶುಭ ಸಮಯ: ಸಂಜೆ 4 ರಿಂದ 9 ರವರೆಗೆ
ಸಿಂಹ ರಾಶಿ:
ನೀವು ನೌಕರಿಯಲ್ಲಿ ಹೊಸ ಯೋಜನೆಗಳನ್ನು ಹಾಕಿ ಕೊಂಡಿದ್ದರೆ ಕಚೇರಿ ಕೆಲಸದಲ್ಲಿ ಬಹಳ ಸಮತೋಲನದಲ್ಲಿರಬೇಕು. ಸಹೋದ್ಯೋಗಿಗಳೊಂದಿಗೆ ತುಂಬಾ ತಾಳ್ಮೆಯಿಂದಿರಿ ಮತ್ತು ಅವರೊಂದಿಗೆ ಕೆಲಸ ಮಾಡಿ. ವ್ಯಾಪಾರಸ್ಥರು ಯಾವುದೇ ದೊಡ್ಡ ಅಪಾಯವನ್ನು ತೆಗೆದುಕೊಳ್ಳದೇ ಇರುವುದು ಸೂಕ್ತ. ನೀವು ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನೀವು ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ನಿರ್ಧಾರ ತೆಗೆದುಕೊಳ್ಳುವಲ್ಲಿ ಆತುರ ಪಡಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ಯಾವುದಾದರೂ ವಿಷಯದಲ್ಲಿನ ಭಿನ್ನಾಭಿಪ್ರಾಯಗಳು ನಿಮಗೆ ಮನೆಯ ಕೆಲವು ಸದಸ್ಯರೊಂದಿಗೆ ತೊಂದರೆ ಸೃಷ್ಟಿಸಬಹುದು. ಮತ್ತೊಂದೆಡೆ, ನಿಮ್ಮ ಸಂಗಾತಿಯು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಸಹ ಎದುರಿಸಬಹುದು, ಅದು ನಿಮ್ಮನ್ನು ಸಾಕಷ್ಟು ಒತ್ತಡಕ್ಕೆ ಒಳಪಡಿಸುತ್ತದೆ. ಹಣದ ಹರಿವು ಚೆನ್ನಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡ ನಂತರವಷ್ಟೇ ಖರ್ಚು ಮಾಡಿ. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಸ್ನಾಯು ಸಂಬಂಧಿತ ಕೆಲವು ಸಮಸ್ಯೆಗಳಿರಬಹುದು.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 38
ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ
ಕನ್ಯಾರಾಶಿ:
ನಿಮಗಿಂದು ಉತ್ತಮ ದಿನ. ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ ಮತ್ತು ಸ್ಥಗಿತಗೊಂಡ ಯಾವುದೇ ಕೆಲಸ ಪೂರ್ಣಗೊಳ್ಳುತ್ತದೆ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗಬಹುದು. ಆದಾಗ್ಯೂ, ನೀವು ಮೇಲಾಧಿಕಾರಿಗಳ ಮತ್ತು ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಟೀಮ್ ವರ್ಕ್ ನಿಂದ, ನೀವು ಕಠಿಣ ಕಾರ್ಯಗಳನ್ನು ಸಹ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನೀವು ಐಟಿ ವಲಯದಲ್ಲಿ ಕೆಲಸ ಮಾಡುತ್ತಿದ್ದರೆ, ಇಂದು ಬಹಳ ಮುಖ್ಯವಾದ ದಿನ. ಮತ್ತೊಂದೆಡೆ, ವ್ಯಾಪಾರಸ್ಥರಿಗೆ ಹಣದ ವಿಷಯದಲ್ಲಿ ಲಭ್ಯವಾಗುತ್ತದೆ. ನೀವು ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಸಮಯ ಇದಕ್ಕೆ ಅನುಕೂಲಕರವಾಗಿರುತ್ತದೆ. ಭವಿಷ್ಯದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನೀವು ಪೋಷಕರ ಪ್ರೀತಿಯನ್ನು ಪಡೆಯುತ್ತೀರಿ. ನಿಮ್ಮ ಪ್ರಿಯತಮೆಯೊಂದಿಗೆ ವಾಕ್ ಅಥವಾ ಲಾಂಗ್ ಡ್ರೈವ್ಗೆ ಹೋಗಲು ನಿಮಗೆ ಅವಕಾಶ ಸಿಗಬಹುದು. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಇಂದು ವೆಚ್ಚಗಳು ಕಡಿಮೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಉಂಟಾಗಬಹುದು.
ಉತ್ತಮ ಬಣ್ಣ: ಆಕಾಶ
ಶುಭ ಸಂಖ್ಯೆ: 29
ಶುಭ ಸಮಯ: ಬೆಳಗ್ಗೆ 4:35 ರಿಂದ ಮಧ್ಯಾಹ್ನ 1 ಗಂಟೆ
ತುಲಾ ರಾಶಿ:
ವ್ಯಾಪಾರಿಗಳಿಗಿಂದು ಶುಭ ಫಲ. ಈ ದಿನವು ನಿಮಗೆ ಅತ್ಯಂತ ಲಾಭದಾಯಕ. ವಿಶೇಷವಾಗಿ ನೀವು ಔಷಧಿಗಳ ವ್ಯವಹಾರವನ್ನು ಮಾಡುತ್ತಿದ್ದರೆ, ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಆದಾಗ್ಯೂ, ಸರಕುಗಳಿಗಾಗಿ ಶಾಪಿಂಗ್ ಮಾಡುವಾಗ ಜಾಗರೂಕರಾಗಿರಿ. ಬ್ರಾಂಡ್ ಇರುವ ಸರಕುಗಳನ್ನು ಮಾತ್ರ ಮಾರಾಟ ಮಾಡಿ. ಕಚೇರಿಯಲ್ಲಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ತುಂಬಾ ಶ್ರಮಿಸಬೇಕಾಗಬಹುದು. ಇದಲ್ಲದೆ ಹಿರಿಯ ಅಧಿಕಾರಿಳೂ ಒತ್ತಡ ಹೇರಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನಸ್ಸನ್ನು ಶಾಂತವಾಗಿಡುವುದು ಅತೀಮುಖ್ಯ. ಒತ್ತಡದಲ್ಲಿ ಕೆಲಸ ಮಾಡುವುದರಿಂದ ನಿಮ್ಮ ಕಾರ್ಯಕ್ಷಮತೆ ಕುಸಿಯುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇದ್ದಕ್ಕಿದ್ದಂತೆ ಮನೆಗೆ ಅತಿಥಿಗಳ ಆಗಮನವಾಗಬಹುದು. ನೀವು ಸಂಗಾತಿಯ ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ ಮತ್ತು ಪರಸ್ಪರ ನಂಬಿಕೆ ಕೂಡ ಬಲಗೊಳ್ಳುತ್ತದೆ. ಹಣವು ಬಲವಾಗಿರುತ್ತದೆ, ಆದರೆ ಯೋಚಿಸದೆ ಖರ್ಚು ಮಾಡುವ ನಿಮ್ಮ ಅಭ್ಯಾಸದಿಂದಾಗಿ, ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಣದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 15
ಶುಭ ಸಮಯ: ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ
ವೃಶ್ಚಿಕ ರಾಶಿ:
ಕೆಲಸದಲ್ಲಿ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ, ನಿರಾಶೆಗೊಳ್ಳದಿರಿ. ನಿಮ್ಮ ತಪ್ಪುಗಳಿಂದ ಕಲಿತು ಮತ್ತೆ ಪ್ರಯತ್ನಿಸಿ. ಧೈರ್ಯ ಮತ್ತು ಕಠಿಣ ಪರಿಶ್ರಮದಿಂದ ಅಸಾಧ್ಯವನ್ನು ಸಹ ಸಾಧ್ಯವಾಗಿಸಬಹುದು. ನಿರುದ್ಯೋಗಿಗಳಿಗೆ ಶುಭ ಸಿದ್ದಿ ಸಿಗಲಿದೆ. ನೀವು ಇತ್ತೀಚೆಗೆ ಎಲ್ಲೋ ಇಂಟರ್ ವ್ಯೂ ನೀಡಿದ್ದರೆ, ಅಲ್ಲಿಂದ ಕರೆ ಬರಬಹುಹುದು. ಹಣದ ಪರಿಸ್ಥಿತಿ ಕ್ಷೀಣಿಸುವ ಸಾಧ್ಯತೆಯಿದೆ. ಹಣವನ್ನು ಕಳೆದುಕೊಳ್ಳಬಹುದು. ಕುಟುಂಬ ಜೀವನದಲ್ಲಿ ನೆಮ್ಮದಿ. ನಿಮ್ಮ ಕುಟುಂಬವನ್ನು ಸರಿಯಾಗಿ ನೋಡಿಕೊಳ್ಳಿ ಮತ್ತು ನೀವು ಅವರ ಮೇಲೆ ಒತ್ತಡ ಹೇರುವುದನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಆಹಾರ ಪದ್ಧತಿಯಿಂದ ಹೊಟ್ಟೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 9
ಶುಭ ಸಮಯ: ಸಂಜೆ 6:15 ರಿಂದ 9 ರವರೆಗೆ
ಧನು ರಾಶಿ:
ಇಂದು ದಿನದ ಆರಂಭವು ಉತ್ತಮವಾಗಿದೆ. ವೈಯಕ್ತಿಕ ಜೀವನದಲ್ಲಿ ನಿಮಗೆ ನೆಮ್ಮದಿ. ಮನೆಯ ಸದಸ್ಯರೊಂದಿಗಿನ ನಿಮ್ಮ ಸಂಬಂಧವು ಸರಿಯಾಗಿ ಆಗದಿದ್ದರೆ, ಅದನ್ನು ಸುಧಾರಿಸಲು ನಿಮಗೆ ಉತ್ತಮ ಅವಕಾಶ ಸಿಗಬಹುದು. ನೀವು ಕಚೇರಿಯಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ಹೊಂದಿರುತ್ತೀರಿ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನಸ್ಸಿಗೆ ಕಿರಿಕಿರಿ ಉಂಟಾಗಬಹುದು. ನಿಮ್ಮ ಸಹೋದ್ಯೋಗಿಗಳೊಂದಿಗೆ ಸರಿಯಾಗಿ ವ್ಯವಹರಿಸುವುದು ಉತ್ತಮ. ಬ್ಯಾಂಕರ್ಗಳು ಬ್ಯಾಂಕಿಂಗ್ನಿಂದ ಲಾಭ ಪಡೆಯಬಹುದು. ವ್ಯಾಪಾರಸ್ಥರು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಪ್ರತಿಯೊಂದು ವ್ಯವಹಾರ ನಿರ್ಧಾರವನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ಇಂದು ನೀವು ಅವರೊಂದಿಗೆ ಸಮಯ ಕಳೆಯಬಹುದು. ಹಣದ ಬಗ್ಗೆ ಮಾತನಾಡುವುದಾದರೆ, ಇಂದು ನೀವು ಹಣಕಾಸಿನ ವಹಿವಾಟುಗಳನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕು, ಇಲ್ಲದಿದ್ದರೆ ನಷ್ಟವಾಗಬಹುದು.
ಉತ್ತಮ ಬಣ್ಣ: ಮರೂನ್
ಶುಭ ಸಂಖ್ಯೆ: 22
ಶುಭ ಸಮಯ: ಬೆಳಗ್ಗೆ 9:35 ರಿಂದ ಸಂಜೆ 6 ರವರೆಗೆ
ಮಕರ ರಾಶಿ:
ಇತರರ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸುವುದನ್ನು ತಪ್ಪಿಸಿ. ಇಲ್ಲದಿದ್ದರೆ, ನೀವು ಮುಜುಗರಕ್ಕೊಳಗಾಗಬೇಕಾಗಬಹುದು. ನಿಮ್ಮ ಮಾತುಗಳಲ್ಲಿ ಬಹಳ ಯೋಚನೆ ಮಾಡಿ ಪದಗಳನ್ನು ಬಳಸಿ. ನೀವು ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಬಹುದು. ಈ ರೀತಿಯ ಪರಿಸ್ಥಿತಿಯಲ್ಲಿ, ನೀವು ತಾಳ್ಮೆಯಿಂದ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಅವರ ಮಾತುಗಳನ್ನು ಒಪ್ಪಲಾಗದಿದ್ದರೆ ತಾಳ್ಮೆಯಿಂದ ಅವರನ್ನು ಒಪ್ಪಿಸಲು ಪ್ರಯತ್ನಿಸಿ. ಈ ದಿನವು ವ್ಯಾಪಾರಸ್ಥರಿಗೆ ಸಮಾಧಾನಕರ. ನಿಮ್ಮ ಕೆಲಸವು ಮರ, ಕಬ್ಬಿಣ, ಬಟ್ಟೆ ಇತ್ಯಾದಿಗಳಿಗೆ ಸಂಬಂಧಪಟ್ಟರೆ ನಿಮಗೆ ಆರ್ಥಿಕ ಲಾಭ ಸಾಧ್ಯ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಮನೆಯ ಸದಸ್ಯರೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಇರುತ್ತದೆ. ಸಂಗಾತಿಯ ಸಹಾಯದಿಂದ, ನೀವು ಯಾವುದೇ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯದ ಮಟ್ಟಿಗೆ, ಇಂದು ನಿಮಗೆ ಉತ್ತಮ ದಿನವಾಗಲಿದೆ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 11
ಶುಭ ಸಮಯ: ಬೆಳಗ್ಗೆ 6:55 ರಿಂದ ಸಂಜೆ 4 ರವರೆಗೆ
ಕುಂಭ ರಾಶಿ:
ಈ ರಾಶಿಯವರಿಗೆ ಇಂದು ಅದೃಷ್ಟ ಕೈಕೊಡಲಿದೆ. ದಿನವು ಅಷ್ಟು ನಿಮ್ಮ ಪರವಾಗಿಲ್ಲ. ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುವಲ್ಲಿ, ನೀವು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಅನಗತ್ಯ ಮಾತನಾಡುವ ಮೂಲಕ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ಇಂದು ನೀವು ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸವನ್ನು ಪೂರ್ಣಗೊಳಿಸದಿದ್ದರೆ, ಹಿರಿಯ ಅಧಿಕಾರಿಗಳು ಕೋಪಗೊಳ್ಳಬಹುದು. ನಿಮ್ಮ ಕೈಗಳು ಹಣದ ವಿಷಯದಲ್ಲಿ ನಿರಾಶೆ ಅನುಭವಿಸುತ್ತವೆ. ನಿಮ್ಮ ಹಣಕಾಸಿನ ಪ್ರಯತ್ನಗಳು ವಿಫಲವಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಪ್ರೀತಿಪಾತ್ರರ ಸಹಾಯದಿಂದ, ಕಷ್ಟದ ಸಮಯದಲ್ಲೂ ನೀವು ಧೈರ್ಯಶಾಲಿಯಾಗಿರುತ್ತೀರಿ. ಆರೋಗ್ಯದ ಬಗ್ಗೆ ಮಾತನಾಡುತ್ತಾ, ಹೆಚ್ಚು ಚಿಂತೆ ಮಾಡುವುದು ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ, ಇದು ಆರೋಗ್ಯದಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಬಹುದು. ಇದನ್ನು ನೆನಪಿನಲ್ಲಿಡಿ.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 16
ಶುಭ ಸಮಯ: ಬೆಳಗ್ಗೆ 4:05 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ:
ಮನಸ್ಸಿಗೆ ಶಾಂತಿ ಸಿಗುವ ದಿನ ಇಂದು. ಯಾವುದೇ ಧಾರ್ಮಿಕ ಕಾರ್ಯಕ್ರಮವನ್ನು ಇಂದು ನಿಮ್ಮ ಮನೆಯಲ್ಲಿ ಆಯೋಜಿಸಬಹುದು. ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಈ ವ್ಯಾಪಕ ಸಾಂಕ್ರಾಮಿಕ ರೋಗದ ವಿರುದ್ಧ ಹೆಚ್ಚು ಜಾಗರೂಕರಾಗಿರಿ. ಕಚೇರಿಯಲ್ಲಿ ಯಾವುದೇ ಹೊಸ ಮತ್ತು ದೊಡ್ಡ ಯೋಜನೆಗೆ ನೀವು ಜವಾಬ್ದಾರರಾಗಿದ್ದರೆ, ನೀವು ಕಷ್ಟಪಟ್ಟು ಮತ್ತು ಶ್ರದ್ಧೆಯಿಂದ ಕೆಲಸ ಮಾಡಬೇಕಾಗುತ್ತದೆ. ಇದರ ಜೊತೆಗೆ ನಿಮಗಾಗಿ ಸಮಯವನ್ನೂ ಮೀಸಲಿಡಬೇಕು. ನೀವು ವ್ಯಾಪಾರ ಮಾಡುವವರಾಗಿದ್ದರೆ, ನಿಮ್ಮ ಮಾತಿನಿಂದಾಗಿ ನೀವು ಇಂದು ನಷ್ಟವನ್ನು ಅನುಭವಿಸಬೇಕಾಗಬಹುದು. ನಿಮ್ಮ ಗ್ರಾಹಕರೊಂದಿಗೆ ಮಾತನಾಡುವಾಗ ನಿಮ್ಮ ಮಾತುಗಳು ಮತ್ತು ನಡವಳಿಕೆಯ ಬಗ್ಗೆ ಗಮನವಿರಲಿ. ಆರೋಗ್ಯದ ದೃಷ್ಟಿಯಿಂದ ದಿನ ಉತ್ತಮವಾಗಿದೆ. ನೀವು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿ ಆರೋಗ್ಯವಾಗಿರುತ್ತೀರಿ.
ಉತ್ತಮ ಬಣ್ಣ: ಕಡುಗೆಂಪು
ಶುಭ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 2 ರಿಂದ 7 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005