Just In
- 44 min ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 5 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 14 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 14 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
Don't Miss
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿವಾರದ ದಿನ ಭವಿಷ್ಯ: ಕರ್ಕ ರಾಶಿಗೆ ಹಣದ ಚಿಂತೆ, ಸಿಂಹ ರಾಶಿಗೆ ಮುಖ್ಯವಾದ ದಿನ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಆಶ್ವಿಜ
ನಕ್ಷತ್ರ:
ಸಂಜೆ
05:58ರವರೆಗೆ
ಅಶ್ವಿನಿ,
ನಂತರ
ಭರಣಿ
ಶುಕ್ಲ
ಪಕ್ಷ
ರಾಹುಕಾಲ:
ಬೆಳಗ್ಗೆ
09:18ರಿಂದ
10:41ರವರೆಗೆ
ಗುಳಿಕಕಾಲ:
ಬೆಳಗ್ಗೆ
06:32ರಿಂದ
07:55ರವರೆಗೆ
ಯಮಗಂಡಕಾಲ:
ಮಧ್ಯಾಹ್ನ
01:27ರಿಂದ
02:50ರವರೆಗೆ
ದುರ್ಮುಹೂರ್ತ:
ಬೆಳಗ್ಗೆ
06:32ರಿಂದ
07:17ರವರೆಗೆ
ಬೆಳಗ್ಗೆ
07:17ರಿಂದ
08:01ರವರೆಗೆ
ಸೂರ್ಯೋದಯ:
ಬೆಳಗ್ಗೆ
06:32ಕ್ಕೆ
ಸೂರ್ಯಾಸ್ತ:
ಸಂಜೆ
05:36ಕ್ಕೆ
ಮೇಷ ರಾಶಿ:
ನಿಮ್ಮ ಸಂಬಂಧಗಳನ್ನು ಸುಧಾರಿಸಲು ನೀವು ಬಯಸಿದರೆ ನಿಮ್ಮ ಸ್ವಭಾವವನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಕಠಿಣ ಮಾತುಗಳು ಇತರರ ಭಾವನೆಗಳನ್ನು ನೋಯಿಸಬಹುದು. ವ್ಯಾಪಾರಸ್ಥರು ಕಾನೂನಿನ ನಿಯಮಗಳನ್ನು ಅನುಸರಿಸಬೇಕು. ಇಲ್ಲದಿದ್ದರೆ ನೀವು ಕೆಲವು ದೊಡ್ಡ ತೊಂದರೆಗಳಲ್ಲಿ ಸಿಲುಕಿಕೊಳ್ಳಬಹುದು. ಮತ್ತೊಂದೆಡೆ, ಉದ್ಯೋಗದಲ್ಲಿರುವವರು ತಮ್ಮ ಕೆಲಸದ ಬಗ್ಗೆ ಹೆಚ್ಚು ಗಂಭೀರವಾಗಿರಬೇಕು. ಇಂದು, ಉನ್ನತ ಅಧಿಕಾರಿಗಳ ಕಠಿಣ ವರ್ತನೆ ನಿಮಗೆ ಕಿರಿಕಿರಿ ಉಂಟುಮಾಡಬಹುದು. ಇಂದು ಆರ್ಥಿಕ ಪರಿಸ್ಥಿತಿ ಸ್ವಲ್ಪ ಅಸಮಧಾನಕರ. ವೆಚ್ಚಗಳು ಹೆಚ್ಚಲಿವೆ. ಇಂದು ಅವಸರದಿಂದ ಯಾವ ಕೆಲಸವನ್ನೂ ಮಾಡಬೇಡಿ. ಮೆಟ್ಟಿಲುಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಜಾಗರೂಕರಾಗಿರಿ ಇಲ್ಲದಿದ್ದರೆ ನಿಮಗೆ ತೊಂದರೆಯಾಗಬಹುದು.
ಉತ್ತಮ ಬಣ್ಣ: ಕಡುಗೆಂಪು
ಶುಭ ಸಂಖ್ಯೆ: 30
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ
ವೃಷಭ ರಾಶಿ:
ದಿನವು ನಿಮಗೆ ಕೊಂಚ ಕಷ್ಟಕರ ದಿನವೆನ್ನಬಹುದು. ನೀವು ಒಂಟಿತನ ಮತ್ತು ಪ್ರಕ್ಷುಬ್ಧತೆಯನ್ನು ಅನುಭವಿಸುವಿರಿ. ಸಂಗಾತಿಯ ನಡವಳಿಕೆಯು ನಿಮಗೆ ಸರಿ ಎನಿಸುವುದಿಲ್ಲ. ಇದರಿಂದಾಗಿ ನೀವು ತುಂಬಾ ಖಿನ್ನತೆಗೆ ಒಳಗಾಗುತ್ತೀರಿ. ನಿಮ್ಮ ಪ್ರೀತಿಯವರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆಂದು ನೀವು ಭಾವಿಸುವಿರಿ. ನಿಮ್ಮ ಮನಸ್ಸಿನಲ್ಲಿ ಯಾವುದೇ ಸಂದಿಗ್ಧತೆ ಇದ್ದರೆ, ನಿಮ್ಮ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡುವುದು ಉತ್ತಮ. ಮೌನವಾಗಿ ಉಳಿಯುವ ಮೂಲಕ ತಪ್ಪುಗ್ರಹಿಕೆಯು ಹೆಚ್ಚಾಗುತ್ತದೆ. ಕಚೇರಿಯಲ್ಲಿ ಮುಖ್ಯಸ್ಥರೊಂದಿಗೆ ಪ್ರಮುಖ ಚರ್ಚೆ ನಡೆಯಬಹುದು. ನೀವು ಪೂರ್ಣ ವಿಶ್ವಾಸದಿಂದ ಇರುತ್ತೀರಿ. ಅವರು ನಿಮ್ಮ ಅಭಿಪ್ರಾಯಗಳನ್ನು ಒಪ್ಪುವ ಸಾಧ್ಯತೆಯಿದೆ. ವ್ಯಾಪಾರಿಗಳು ಇಂದು ಸ್ವಲ್ಪ ನಷ್ಟವನ್ನು ಅನುಭವಿಸಬೇಕಾಗಬಹುದು ಆದರೆ ನೀವು ಚಿಂತಿಸುವ ಅಗತ್ಯವಿಲ್ಲ, ವ್ಯವಹಾರಗಳಲ್ಲಿ ಇಂತಹ ಏರಿಳಿತಗಳು ಸಾಮಾನ್ಯ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಮಾಡುತ್ತಲೇ ಇರಿ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನಿಮಗೆ ಕೆಲಸದ ಭಾರ ಹೆಚ್ಚು. ಮಾನಸಿಕ ಒತ್ತಡ ಹೆಚ್ಚಾಗುತ್ತದೆ ಮತ್ತು ನೀವು ತುಂಬಾ ಆಲಸ್ಯ ಹೊಂದುತ್ತೀರಿ.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 9
ಶುಭ ಸಮಯ: ಸಂಜೆ 4:30 ರಿಂದ 10:10 ರವರೆಗೆ
ಮಿಥುನ ರಾಶಿ:
ನಿಮ್ಮ ಯೋಚನೆಗಳನ್ನು ಒಂದು ದಿನ ಮುಂಚಿತವಾಗೊಯೇ ಹಾಕಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಕೆಲಸವನ್ನು ಮಾಡಲು ಪ್ರಯತ್ನಿಸಿ, ನಿಮ್ಮ ಮೇಲೆ ಹೆಚ್ಚು ಒತ್ತಡ ಹೇರಬೇಡಿ. ವ್ಯಾಪಾರಸ್ಥರು ಇಂದು ಆರ್ಥಿಕ ವಹಿವಾಟು ನಡೆಸದಿರುವುದು ಉತ್ತಮ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಮನಸ್ತಾಪ ಇಂದು ಕೊನೆಗೊಳ್ಳಬಹುದು. ನಿಮ್ಮ ಕೋಪವನ್ನು ಬಿಟ್ಟು ನಿಮ್ಮ ಪ್ರಿಯತಮೆಯನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನೀವು ಹೆಚ್ಚು ಖರ್ಚು ಮಾಡುವ ಮನಸ್ಥಿತಿಯಲ್ಲಿದ್ದರೆ ಅದನ್ನು ಖಂಡಿತವಾಗಿಯೂ ತಪ್ಪಿಸಿ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ ಇಂದು ತಲೆನೋವಿನ ಸಮಸ್ಯೆ ಇರಬಹುದು.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 7: 15 ರವರೆಗೆ
ಕರ್ಕಾಟಕ ರಾಶಿ:
ಇಂದು ನಿಮಗೆ ಹಣದ ಚಿಂತೆ. ಹಳೆಯ ಸಾಲಗಳ ಬಗ್ಗೆ ನೀವು ತುಂಬಾ ಚಿಂತೆ ಮಾಡಬೇಕಾಗಬಹುದು. ಹಣಕಾಸಿನ ಅಡಚಣೆಗಳಿಂದಾಗಿ, ನಿಮ್ಮ ಕೆಲವು ಕೆಲಸಗಳು ಇಂದು ಅಪೂರ್ಣವಾಗಿಯೇ ಉಳಿಯಬಹುದು. ನೌಕರಸ್ಥರು ಉನ್ನತ ಅಧಿಕಾರಿಗಳೊಂದಿಗೆ ಕೆಲವು ವಾದ ವಿವಾದಗಳನ್ನು ಮಾಡಬಹುದು. ಆದಷ್ಟು ನಿಮ್ಮ ಕೋಪವನ್ನು ನಿಯಂತ್ರಿಸಿ. ನಿಮ್ಮ ಕಾರ್ಯಕ್ಷಮತೆಯನ್ನು ನೀವು ಸುಧಾರಿಸಬೇಕಾಗಿದೆ ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಅದೇ ಸಮಯದಲ್ಲಿ, ವ್ಯಾಪಾರಿ ವರ್ಗವು ಇಂದು ಯೋಗ್ಯವಾದ ಲಾಭವನ್ನು ಗಳಿಸಬಹುದು. ನಿಧಾನಗತಿಯಲ್ಲಿ ವ್ಯವಹರಿಸಿದರೆ ಮಾತ್ರ ನಿಮ್ಮ ವ್ಯವಹಾರವು ಬೆಳೆಯುತ್ತದೆ. ವೈಯಕ್ತಿಕ ಜೀವನದಲ್ಲಿ ಉದ್ವಿಗ್ನತೆ ಇರುತ್ತದೆ. ಕುಟುಂಬ ಬೆಂಬಲ ಸಿಗುವುದಿಲ್ಲ. ಈ ಸಮಯದಲ್ಲಿ ನಿಮ್ಮ ಆರೋಗ್ಯವು ನಿಮ್ಮ ಮೊದಲ ಆದ್ಯತೆಯಾಗಿರಬೇಕು, ಆದ್ದರಿಂದ ಸಣ್ಣ ಅಜಾಗರೂಕತೆಯನ್ನು ಸಹ ಮಾಡಬೇಡಿ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 28
ಶುಭ ಸಮಯ: ಮಧ್ಯಾಹ್ನ 12:30 ರಿಂದ 6:15 ರವರೆಗೆ
ಸಿಂಹ ರಾಶಿ:
ಈ ದಿನ ನಿಮಗೆ ಬಹಳ ಮುಖ್ಯವಾದ ದಿನ. ವ್ಯಾಪಾರಸ್ಥರಿಗೆ ಅನುಕೂಲಕರ. ಇಂದು ದೀರ್ಘಕಾಲದ ವ್ಯವಹಾರ ಸಮಸ್ಯೆಯನ್ನು ಪರಿಹರಿಸುವ ಮೂಲಕ ನೀವು ಆರ್ಥಿಕವಾಗಿ ಲಾಭ ಗಳಿಸುತ್ತೀರಿ. ಉದ್ಯೋಗಿಗಳು ತಮ್ಮ ದಕ್ಷತೆಯಿಂದ ಉನ್ನತ ಅಧಿಕಾರಿಗಳ ವಿಶ್ವಾಸ ಮತ್ತು ಹೃದಯವನ್ನು ಗೆಲ್ಲಲು ಸಾಧ್ಯವಾಗುತ್ತದೆ. ನಿಮ್ಮ ಮೇಲೆ ಜವಾಬ್ದಾರಿಗಳೂ ಹೆಚ್ಚಾಗಬಹುದು. ನೀವು ವಿದ್ಯಾರ್ಥಿಯಾಗಿದ್ದರೆ ಈ ಸಮಯದಲ್ಲಿ ನಿಮ್ಮ ಅಧ್ಯಯನದತ್ತ ಹೆಚ್ಚು ಗಮನ ಹರಿಸಬೇಕು. ನಿಮ್ಮ ಗುರಿ ಮುಟ್ಟಲು ನೀವು ಶ್ರಮಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಹಣದ ಪರಿಸ್ಥಿತಿ ಉತ್ತಮ. ಇಂದು ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹೆಚ್ಚು ಹೊರಗಡೆ ಓಡಾಡಬೇಡಿ. ನಿಮ್ಮ ಆರಾಮದ ಕಡೆಗೆ ಗಮನ ಕೊಡಿ.
ಉತ್ತಮ ಬಣ್ಣ: ಕಡು ಹಸಿರು
ಶುಭ ಸಂಖ್ಯೆ: 28
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಕನ್ಯಾರಾಶಿ:
ವ್ಯಾಪಾರಸ್ಥರಿಗೆ ಇಂದು ಶುಭ ಫಲ. ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಮತ್ತೊಂದೆಡೆ, ನೀವು ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡುವ ಬಗ್ಗೆ ಯೋಚಿಸುತ್ತಿದ್ದರೆ, ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನೌಕರರಸ್ಥರಿಗೆ ಸಾಮಾನ್ಯ ದಿನ. ಇಂದು ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಅಲ್ಲದೆ, ನೀವು ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ದಿನದ ಎರಡನೇ ಭಾಗದಲ್ಲಿ ನೀವು ಮೋಜು ಮಾಡಲು ಸ್ವಲ್ಪ ಸಮಯ ಸಿಗುತ್ತದೆ. ಕುಟುಂಬದೊಂದಿಗೆ ಆನಂದನ ಸಮಯ ಕಳೆಯುತ್ತೀರಿ. ನಿಮ್ಮ ಸಂಗಾತಿಯನ್ನು ಗೌರವಿಸಿ. ಸಣ್ಣ ವಿಷಯಗಳ ಬಗ್ಗೆ ನಿಮ್ಮ ಸಂಗಾತಿಯೊಂದಿಗೆ ವಾದಿಸುವುದನ್ನು ತಪ್ಪಿಸಿ. ಅವರ ಸ್ವಭಾವದಲ್ಲಿ ಸ್ವಲ್ಪ ಬದಲಾವಣೆಗಳಿದ್ದರೆ, ಪ್ರೀತಿಯ ಮಾತುಗಳ ಮೂಲಕ ಅವರ ಮನಸ್ಸಿನಲ್ಲಿನ ವಿಷಯವನ್ನು ತಿಳಿಯಲು ಪ್ರಯತ್ನಿಸಿ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನ.
ಉತ್ತಮ ಬಣ್ಣ: ನೇರಳೆ
ಶುಭ ಸಂಖ್ಯೆ: 14
ಶುಭ ಸಮಯ: ಬೆಳಗ್ಗೆ 8:30 ರಿಂದ ಸಂಜೆ 6 ರವರೆಗೆ
ತುಲಾ ರಾಶಿ:
ನಿಮ್ಮ ನಾಲಿಗೆಯೇ ನಿಮಗೆ ಆಪತ್ತು ತರಬಹುದು. ಹಾಗಾಗಿ ಇಂದು ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಕಠಿಣ ಪದಗಳು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಮಾತನಾಡುವಾಗ, ಬಹಳ ಯೋಚನೆ ಮಾಡಿ ಪದಗಳ ಬಳಕೆ ಮಾಡಿ. ನೀವು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಬೇಕು. ಅವರೊಂದಿಗೆ ಬೆರೆತು. ವ್ಯಾಪಾರಸ್ಥರಿಗೆ ಇಂದು ತುಸು ನಿರಾಶೆ. ನೀವು ನಿರೀಕ್ಷಿಸಿದಂತೆ ಪ್ರಯೋಜನಗಳನ್ನು ಪಡೆಯದೇ ಇರಬಹುದು. ನೀವು ಇಂದು ಮಾನಸಿಕವಾಗಿ ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ನಿಮ್ಮ ಆತ್ಮ ಸ್ಥೈರ್ಯ ದುರ್ಬಲಗೊಳ್ಳಬಹುದು. ಇಂದು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಆರ್ಥಿಕವಾಗಿ ಮಿಶ್ರ ದಿನ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ನಿಮ್ಮ ವೆಚ್ಚಗಳು ಹೆಚ್ಚಾಗಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಉತ್ತಮ ಬಣ್ಣ: ಹಸಿರು
ಶುಭ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 9:45 ರಿಂದ ಮಧ್ಯಾಹ್ನ 3 ರವರೆಗೆ
ವೃಶ್ಚಿಕ ರಾಶಿ:
ನಿಮಗೆ ವಿರುದ್ಧವಾದ ಪರಿಸ್ಥಿತಿಗೆ ಹೆದರುವ ಬದಲು ನೀವು ಅವುಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸಿದರೆ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಹೆಚ್ಚಿನ ಒತ್ತಡವನ್ನು ತೆಗೆದುಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೂ ಒಳ್ಳೆಯದಲ್ಲ. ನಾಳೆಯ ಚಿಂತೆ ಇಂದಿನ ದಿನವನ್ನು ನಾಶಮಾಡುತ್ತದೆ ಎಂಬುದು ನೆನಪಿರಲಿ. ನೌಕರಸ್ಥರಿಗೆ ಇಂದು ಕೆಲಸದ ಹೊರೆ ಹೆಚ್ಚು. ನಿಮ್ಮ ಕೆಲಸವನ್ನು ನೀವು ಸಂಪೂರ್ಣ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯವನ್ನು ಹಾಕಿ ಮಾಡಿ. ಹಾಗೆಯೇ ವ್ಯಾಪಾರಿಗಳು ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ನಿಮ್ಮ ವಿರೋಧಿಗಳು ನಿಮಗೆ ತೀವ್ರವಾದ ಸ್ಪರ್ಧೆ ನೀಡಬಹುದು. ಈ ಸಮಯದಲ್ಲಿ, ಒಂದು ಸಣ್ಣ ತಪ್ಪು ಕೂಡ ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ವೈವಾಹಿಕ ಜೀವನದಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಸಂಗಾತಿಯೊಂದಿಗಿನ ಮನಸ್ತಾಪಗಳು ಹೆಚ್ಚಾಗಬಹುದು. ನೀವು ತಾಳ್ಮೆಯಿಂದ ಇದ್ದರೆ ಅದು ನಿಮ್ಮ ಸಂಬಂಧಕ್ಕೆ ಒಳ್ಳೆಯದು.
ಉತ್ತಮ ಬಣ್ಣ: ಕೆಂಪು
ಶುಭ ಸಂಖ್ಯೆ: 24
ಶುಭ ಸಮಯ: ಸಂಜೆ 5 ರಿಂದ 10 ರವರೆಗೆ
ಧನು ರಾಶಿ:
ಈವು ಆರ್ಥಿಕವಾಗಿ ಸಬಲರಾಗಬೇಕಾದರೆ, ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಮೊದಲನೆಯದಾಗಿ, ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸಿ. ಆದರೆ ಇದಕ್ಕಾಗಿ ತಪ್ಪು ಮಾರ್ಗವನ್ನು ಅನುಸರಿಸಬೇಡಿ. ಉದ್ಯೋಗಸ್ಥರು ಇಂದು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಸಾಕಷ್ಟು ತೊಂದರೆಗಳ ನಂತರ ನಿಮ್ಮ ಗುರಿಯನ್ನು ತಲುಪುತ್ತೀರಿ. ಮತ್ತೊಂದೆಡೆ, ನೀವು ಕಚೇರಿಯಲ್ಲಿ ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ನಿಮ್ಮ ನಡವಳಿಕೆಯ ಬಗ್ಗೆ ಗಮನವಿರಲಿ. ವ್ಯಾಪಾರಿಗಳಿಗೆ ಇಂದು ಉತ್ತಮ ದಿನ. ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಸಾಧ್ಯತೆಯಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಮನೆಯಲ್ಲಿ ಶಾಂತಿ ಇರುತ್ತದೆ. ನಿಮ್ಮ ಆರೋಗ್ಯದ ಮಟ್ಟಿಗೆ, ನೀವು ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ನಲ್ಲಿ ದೀರ್ಘಕಾಲ ಕೆಲಸ ಮಾಡುತ್ತಿದ್ದರೆ ನಿಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿ ಮಾಡಿ. ಇಲ್ಲದಿದ್ದರೆ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆ ಉಂಟಾಗಬಹುದು.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 17
ಶುಭ ಸಮಯ: ಬೆಳಗ್ಗೆ 4:10 ರಿಂದ ಮಧ್ಯಾಹ್ನ 2 ರವರೆಗೆ
ಮಕರ ರಾಶಿ:
ಉದ್ಯೋಗಿಗಳು ಇಂದು ಯಾವುದೇ ವಿಷಯದಲ್ಲೂ ನಿರ್ಲಕ್ಷ್ಯವನ್ನು ಮಾಡಬೇಡಿ. ಮೇಲಧಿಕಾರಿಗಳು ನಿಮ್ಮ ಕಾರ್ಯಗಳನ್ನು ಪರಿಶೀಲಿಸಬಹುದು. ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿರುವುದು ಉತ್ತಮ. ನೀವು ವ್ಯಾಪಾರ ಮಾಡುವವರಾಗಿದ್ದರೆ, ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡುವ ಸಾಧ್ಯತೆಯಿದೆ. ಇಂದಿನ ಪ್ರಯಾಣವು ನಿಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ದಿನದ ಎರಡನೇ ಭಾಗದಲ್ಲಿ ಸ್ವಲ್ಪ ಸಮಸ್ಯೆಗಳಿರಬಹುದು. ಇದ್ದಕ್ಕಿದ್ದಂತೆ ನಿಮ್ಮ ಒತ್ತಡ ಹೆಚ್ಚಾಗಬಹುದು, ಅದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು. ಕುಟುಂಬ ಜೀವನದ ಬಗ್ಗೆ ಮಾತನಾಡುವುದಾದರೆ, ನಿಮ್ಮ ಹಿರಿಯರ ಬಗ್ಗೆ ನಿರ್ಲಕ್ಷ ವಹಿಸಿದರೆ, ನಿಮಗೇ ತೊಂದರೆಯಾಗಬಹುದು. ನೀವು ಮನೆಯ ಸದಸ್ಯರ ವಿರೋಧವನ್ನು ಎದುರಿಸಬೇಕಾಗುತ್ತದೆ. ಇಂದು ಆರ್ಥಿಕವಾಗಿ ಮಿಶ್ರ ದಿನ.
ಉತ್ತಮ ಬಣ್ಣ: ಬಿಳಿ
ಶುಭ ಸಂಖ್ಯೆ: 10
ಶುಭ ಸಮಯ: ಮಧ್ಯಾಹ್ನ 2 ರಿಂದ 7 ರವರೆಗೆ
ಕುಂಭ ರಾಶಿ:
ಭೂ ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನಿಮ್ಮನ್ನು ಇಂದು ಕಾಡಬಹುದು. ಆದರೆ ನೀವು ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ, ಸಮಯ ಬಂದಾಗ ಮಾತ್ರ ವಿಷಯವು ನಿಮ್ಮ ಪರವಾಗಿ ಇರುತ್ತದೆ. ನೌಕರಸ್ಥರಿಗೆ ಶುಭ ದಿನ. ನಿಮ್ಮ ಉತ್ತಮ ಸಾಧನೆಗಾಗಿ ಕಚೇರಿಯಲ್ಲಿ ಹೆಚ್ಚಿನ ಗೌರವಕ್ಕೆ ಪಾತ್ರರಾಗುತ್ತೀರಿ. ನಿಮ್ಮ ಪ್ರಗತಿಯೂ ಸಾಧ್ಯ. ನೀವು ವ್ಯಾಪಾರ ಮಾಡುವವರಾಗಿದ್ದರೆ ಮತ್ತು ನಿಮ್ಮ ಕೆಲಸವು ಸಾಮಾನ್ಯ ಅಂಗಡಿ, ಲೇಖನ ಸಾಮಗ್ರಿಗಳೊಂದಿಗೆ ಸಂಪರ್ಕ ಹೊಂದಿದ್ದರೆ ನೀವು ಲಾಭ ಪಡೆಯಬಹುದು. ಕುಟುಂಬ ಜೀವನದಲ್ಲಿ ಸ್ವಲ್ಪ ಉದ್ವಿಗ್ನ ಪರಿಸ್ಥಿತಿ. ನೀವು ಮನೆಯ ಸದಸ್ಯರೊಂದಿಗೆ ಸಂವಾದ ನಡೆಸಬಹುದು. ಆರೋಗ್ಯ ಇಂದು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 2
ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ
ಮೀನ ರಾಶಿ:
ಉದ್ಯೋಗಸ್ಥರಿಗೆ ಇಂದು ಒಳ್ಳೆಯ ದಿನ. ಎಲ್ಲವೂ ಅನುಕೂಲಕರವಾಗಿರುತ್ತದೆ. ಉದ್ಯೋಗ ಅಥವಾ ವ್ಯವಹಾರ ಯಾವುದೇ ಆಗಿರಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳು ಯಾವುದಾದರೂ ದೊಡ್ಡ ಲಾಭವನ್ನು ಗಳಿಸಬಹುದು. ನಿಮ್ಮ ವ್ಯವಹಾರವು ಬೆಳೆಯುತ್ತದೆ. ಮತ್ತೊಂದೆಡೆ, ದುಡಿಯುವ ಜನರ ಕಠಿಣ ಪರಿಶ್ರಮ ಯಶಸ್ವಿಯಾಗಬಹುದು. ವಿದ್ಯಾರ್ಥಿಗಳಿಗೆ ಸಮಯ ಒಳ್ಳೆಯದು. ನೀವು ಶ್ರದ್ಧೆಯಿಂದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಉನ್ನತ ಶಿಕ್ಷಣ ಪಡೆಯಲು ನೀವು ಯಾವುದೇ ಪ್ರಯತ್ನ ಮಾಡುತ್ತಿದ್ದರೆ ನೀವು ಸಿಹಿ ಸುದ್ದಿ ಕೇಳುವ ಸಾಧ್ಯತೆ ಇದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಪೋಷಕರೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ನೀವು ಮದುವೆಯಾಗಿದ್ದರೆ, ನಿಮ್ಮ ಸಂಗಾತಿಗೆ ಒಳ್ಳೆಯ ಉಡುಗೊರೆಯನ್ನು ನೀಡಲು ಈ ದಿನ ಒಳ್ಳೆಯದು. ನಿಮ್ಮ ದಾಂಪತ್ಯ ಜೀವನವನ್ನು ಉತ್ಸಾಹ ಮತ್ತು ಆನಂದದಿಂದ ಕೂಡಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ, ನೀವು ಆಸ್ತಮಾ ರೋಗಿಯಾಗಿದ್ದರೆ ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಉತ್ತಮ ಬಣ್ಣ: ಆಕಾಶ
ಶುಭ ಸಂಖ್ಯೆ: 16
ಶುಭ ಸಮಯ: ಸಂಜೆ 6 ರಿಂದ 9 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005