Just In
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 1 hr ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 3 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 4 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬುಧವಾರದ ದಿನ ಭವಿಷ್ಯ: ಮಕರ ರಾಶಿಯವರೇ ಕೋಪದಿಂದ ತಪ್ಪಿದ್ದಲ್ಲ ತೊಂದರೆ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005
ಸಂವತ್ಸರ:
ಶಾರ್ವರಿ
ಆಯನ:
ದಕ್ಷಿಣಾಯನ
ಋತು:
ಶರದ್
ಮಾಸ:
ಕಾರ್ತಿಕಾ
ನಕ್ಷತ್ರ:
ನವೆಂಬರ್
05,
ಸಂಜೆ
04:51ರ
ವರೆಗೆ
ಮೃಘಶಿರ,
ನಂತರ
ಆರ್ದ್ರ
ಕೃಷ್ಣ
ಪಕ್ಷ
ರಾಹುಕಾಲ:
ಮಧ್ಯಾಹ್ನ
12:04ರಿಂದ
01:27ರವರೆಗೆ
ಗುಳಿಕಕಾಲ:
ಬೆಳಗ್ಗೆ
10:42ರಿಂದ
12:047ರವರೆಗೆ
ಯಮಗಂಡಕಾಲ:
ಬೆಳಗ್ಗೆ
07:58ರಿಂದ
09:20ರವರೆಗೆ
ದುರ್ಮುಹೂರ್ತ:
ಬೆಳಗ್ಗೆ
11:43ರಿಂದ
12:26ರವರೆಗೆ
ಸೂರ್ಯೋದಯ:
ಬೆಳಗ್ಗೆ
06:35ಕ್ಕೆ
ಸೂರ್ಯಾಸ್ತ:
ಸಂಜೆ
05:34ಕ್ಕೆ
ಮೇಷ ರಾಶಿ:
ಉದ್ಯಮಿಗಳು ಇಂದು ಜಾಗರೂಕರಾಗಿರಬೇಕು. ಯಾವುದೇ ಪ್ರಮುಖ ಆರ್ಥಿಕ ವಹಿವಾಟುಗಳನ್ನು ಇಂದು ಮಾಡದಿರುವುದೇ ಲೇಸು. ಹಾಗೆ ಮಾಡುವುದೇ ಆದಲ್ಲಿ ಅತ್ಯಂತ ಜಾಗರೂಕತೆಯಿಂದ ವ್ಯವಹರಿಸಿ. ಮತ್ತೊಂದೆಡೆ, ನೀವು ಎಲೆಕ್ಟ್ರಾನಿಕ್ಸ್ ವ್ಯವಹಾರವನ್ನು ಮಾಡುವವರಾಗಿದ್ದರೆ ನೀವು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಕೆಲಸ ಆಫೀಸ್ ಕೆಲಸಕ್ಕಷ್ಟೇ ಸೀಮಿತವಾಗಿರಲಿ, ಸಹೋದ್ಯೋಗಿಗಳ ನ್ಯೂನತೆಗಳನ್ನು ಕಂಡುಹಿಡಿಯುವುದು ಅಥವಾ ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಇಂದು ಕುಟುಂಬ ಜೀವನದಲ್ಲಿ ಸ್ವಲ್ಪ ಏರುಪೇರು ಉಂಟಾಗುತ್ತದೆ. ಮನೆಯಲ್ಲಿ ಹಣದ ಬಗ್ಗೆ ವಿವಾದವಾಗಬಹುದು. ಮತ್ತೊಂದೆಡೆ, ಇಂದು ಸಂಗಾತಿಯ ವರ್ತನೆ ನಿಮಗೆ ಸರಿಹೊಂದುವುದಿಲ್ಲ. ಈ ರೀತಿಯ ಪರಿಸ್ಥಿತಿಯಲ್ಲಿ ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳುವುದು ಬಹಳ ಮುಖ್ಯ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಮಾನಸಿಕ ಚಿಂತನೆ ಹೆಚ್ಚಾಗಿ, ನಿಮ್ಮ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ನೀವು ಹೆಚ್ಚು ಒತ್ತಡ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಬೆಳಗ್ಗೆ 6:20 ರಿಂದ ಸಂಜೆ 5:25 ರವರೆಗೆ
ವೃಷಭ ರಾಶಿ:
ಕೆಲಸದ ವಿಷಯದಲ್ಲಿ ಇಂದು ನಿಮಗೆ ತುಂಬಾ ಶುಭವಾಗಲಿದೆ. ಕೆಲವು ಕಾರಣಗಳಿಂದಾಗಿ ನಿಮಗೆ ಭಡ್ತಿ ಸಿಗದೇ ಇದ್ದರೆ, ಇಂದು ಆ ವಿಷಯದಲ್ಲಿ ಕಚೇರಿಯಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ನಿಮ್ಮ ಕೆಲಸವು ಫ್ಯಾಷನ್ಗೆ ಸಂಬಂಧಪಟ್ಟಿದ್ದರೆ ಇಂದು ನಿಮಗೆ ಬಹಳ ಮುಖ್ಯ ದಿನ. ಮಾಧ್ಯಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದವರು ಕೂಡ ಪ್ರಯೋಜನ ಪಡೆಯಬಹುದು. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಆದಾಗ್ಯೂ ಅನಗತ್ಯ ಖರ್ಚುಗಳನ್ನು ಮಾಡಬೇಡಿ. ಈ ಸಮಯದಲ್ಲಿ ನಿಮ್ಮ ಬಜೆಟ್ ಪ್ರಕಾರ ನೀವು ನಿರ್ಧಾರ ಕೈಗೊಳ್ಳಿ. ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ನೀವು ಇಂದು ಪೋಷಕರಿಂದ ಕೆಲವು ಉತ್ತಮ ಸಲಹೆಗಳನ್ನು ಪಡೆಯಬಹುದು. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದಲ್ಲಿ, ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನಿಮಗಾಗಿ ಸಾಕಷ್ಟು ಸಮಯವೂ ಸಿಗುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 40
ಶುಭ ಸಮಯ: ಮಧ್ಯಾಹ್ನ 2 ರಿಂದ 5 ರವರೆಗೆ
ಮಿಥುನ ರಾಶಿ:
ನಿಮ್ಮ ಆರೋಗ್ಯದ ಬಗ್ಗೆ ನೀವು ಹೆಚ್ಚು ಗಮನ ಹರಿಸಿ. ಆಲ್ಕೋಹಾಲ್ ನಂತಹ ಕೆಟ್ಟ ಅಭ್ಯಾಸವನ್ನು ತ್ಯಜಿಸಿ. ಇಲ್ಲದಿದ್ದರೆ ನೀವು ಕೆಲವು ಗಂಭೀರ ಕಾಯಿಲೆಗೆ ಬಲಿಯಾಗಬಹುದು. ನೀವು ವೃತ್ತಿಯಲ್ಲಿ ಶಿಕ್ಷಕರು, ವೈದ್ಯರು ಅಥವಾ ವಕೀಲರಾಗಿದ್ದರೆ, ಈ ದಿನವು ನಿಮಗೆ ಬಹಳ ಮುಖ್ಯವಾದ ದಿನ. ಮತ್ತೊಂದೆಡೆ, ನೀವು ಹೊಸ ವ್ಯವಹಾರಕ್ಕಾಗಿ ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ಈ ಸಮಯದಲ್ಲಿ ದೊಡ್ಡ ಸಾಲವನ್ನು ತೆಗೆದುಕೊಳ್ಳುವುದು ಅಷ್ಟು ಒಳ್ಳೆಯದಲ್ಲ. ಇದರಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ಒತ್ತಡ ಹೆಚ್ಚಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವನ್ನು ಇನ್ನಷ್ಟು ಬಲಗೊಳಿಸಲು, ನೀವು ಪರಸ್ಪರರ ಮೇಲಿನ ನಂಬಿಕೆಯನ್ನು ಬಲಪಡಿಸಬೇಕು. ಸಣ್ಣ ವಿಷಯಗಳ ಬಗ್ಗೆ ಅತಿಯಾದ ಮಾತುಕತೆಯನ್ನು ನಡೆಸಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 4:45 ರಿಂದ 8 ರವರೆಗೆ
ಕರ್ಕಾಟಕ ರಾಶಿ:
ಕಚೇರಿಯಲ್ಲಿ ಪರಿಸ್ಥಿತಿಗಳು ನಿಮಗೆ ಅನುಕೂಲಕರವಾಗಿರುತ್ತದೆ. ಇಂದು ನೀವು ಒಂದು ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಬಹುದು. ನೀವು ಹೆಚ್ಚಿನ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಸರಿಯಾದ ಯೋಜನೆಯೊಂದಿಗೆ ನಿಮ್ಮ ಕೆಲಸದತ್ತ ಗಮನ ಹರಿಸಿ. ಇದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಇಂದು ನಿಮಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ನೀವು ದೊಡ್ಡ ಲಾಭವನ್ನು ಪಡೆಯಬಹುದು. ಮನೆಯ ವಾತಾವರಣ ಇಂದು ಬದಲಾಗುತ್ತದೆ. ಕೆಲವು ದಿನಗಳಿಂದ ನಿಮ್ಮ ಮನೆಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಇಂದು ನಿಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಇರುತ್ತದೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನಿಮಗೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಬಹುದು.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 16
ಶುಭ ಸಮಯ: ಸಂಜೆ 4:30 ರಿಂದ 9:45 ರವರೆಗೆ
ಸಿಂಹ ರಾಶಿ:
ಅನಗತ್ಯವಾಗಿ ಯೋಚಿಸುವ ಮೂಲಕ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳದಿರುವುದು ಒಳ್ಳೆಯದು. ಇಂದು ನಿಮ್ಮ ಮಾನಸಿಕ ಶಾಂತಿಯನ್ನು ಹಾಳುಮಾಡುತ್ತದೆ. ನಿಮ್ಮ ಮನಸ್ಸನ್ನು ನೀವು ಶಾಂತವಾಗಿರಿಸಿಕೊಳ್ಳಬೇಕು ಇಲ್ಲದಿದ್ದರೆ ಕಠಿಣ ಪರಿಸ್ಥಿತಿಗಳನ್ನು ಎದುರಿಸುವುದು ಕಷ್ಟ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದರೆ, ಇಂದು ಅದಕ್ಕೆ ಸೂಕ್ತವಾದ ಸಮಯವಲ್ಲ. ಕಚೇರಿಯಲ್ಲಿ ನಿಮ್ಮ ಬಾಸ್ನ ಮನಸ್ಥಿತಿ ಸರಿಯಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೆಲಸದ ಮೇಲೆ ನೀವು ಗಮನ ಹರಿಸಬೇಕಾಗುತ್ತದೆ, ಇಲ್ಲದಿದ್ದರೆ ಸಮಸ್ಯೆ ಉಂಟಾಗಬಹುದು. ನಿಮ್ಮ ಕೆಲಸವು ಷೇರು ಮಾರುಕಟ್ಟೆಗೆ ಸಂಬಂಧಿಸಿದ್ದಲ್ಲಿ, ಇಂದು ನಿಮಗೆ ಹಾನಿಕಾರಕ ದಿನ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳಿರಬಹುದು. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆಂದು ನೀವು ಭಾವಿಸುವಿರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಯಾಸ ಮತ್ತು ನಿದ್ರಾಹೀನತೆಯ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 37
ಶುಭ ಸಮಯ: ಬೆಳಗ್ಗೆ 7:55 ರಿಂದ ಸಂಜೆ 6 ರವರೆಗೆ
ಕನ್ಯಾರಾಶಿ:
ಈ ದಿನ ನಿಮಗೆ ಮಿಶ್ರಫಲ. ಕಚೇರಿಯಲ್ಲಿ ಸ್ಪರ್ಧೆ ಹೆಚ್ಚಾಗಬಹುದು, ಆದ್ದರಿಂದ ನೀವು ಸರಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ನಿಮ್ಮ ಬಾಸ್ಸ್ ನಿಮಗೆ ವಹಿಸುವ ಯಾವುದೇ ಜವಾಬ್ದಾರಿಯನ್ನು, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಪೂರೈಸಲು ಪ್ರಯತ್ನಿಸಿ. ಈ ಸಮಯದಲ್ಲಿ, ಸಣ್ಣ ಅಜಾಗರೂಕತೆಯು ಕೂಡ ನಿಮ್ಮ ವೃತ್ತಿಜೀವನಕ್ಕೆ ಹಾನಿಕಾರಕವೆಂದು ನೆನಪಿಡಿ. ಹಾಗೆಯೇ, ವ್ಯಾಪಾರಸ್ಥರು ಇಂದು ದೊಡ್ಡ ಪರಿಹಾರವನ್ನು ಪಡೆಯಬಹುದು. ದೀರ್ಘಕಾಲದಿಂದ ಕಾಡುತ್ತಿದ್ದ ಕಾನೂನು ಸಂಬಂಧಿತ ಸಮಸ್ಯೆಗಳು ಇಂದು ಪರಿಹಾರವಾಗುವ ಸಾಧ್ಯತೆಯಿದೆ. ಆರ್ಥಿಕವಾಗಿ ಮಿಶ್ರದಿನ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ, ಆದರೆ ವೆಚ್ಚಗಳು ಹೆಚ್ಚಾಗಬಹುದು. ಸಂಗಾತಿಯೊಂದಿಗೆ ಸ್ವಲ್ಪ ಮನಸ್ತಾಪ. ಆದರೆ ಶೀಘ್ರದಲ್ಲೇ ಎಲ್ಲವೂ ನಿಮ್ಮ ನಡುವೆ ಸರಿಹೋಗಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ಸೋಮಾರಿತನ ಹೆಚ್ಚಾಗಿರುತ್ತದೆ. ನಿಮ್ಮನ್ನು ನೀವು ಆರಾಮವಾಗಿಟ್ಟಿಕೊಳ್ಳಲು ಬೆಳಗಿನ ವಾಕ್ ಹೋಗಿ.
ಅದೃಷ್ಟದ ಬಣ್ಣ: ಕಡುನೀಲಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 3 ರಿಂದ 8 ರವರೆಗೆ
ತುಲಾ ರಾಶಿ:
ಈ ದಿನ ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚು. ಇದರಿಂದ ನಿಮಗೆ ಆಯಾಸವಾಗುತ್ತದೆ. ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡಬೇಕಾಗಬಹುದು. ಇದರಿಂದ ನೀವು ಸಾಕಷ್ಟು ಒತ್ತಡವನ್ನು ಅನುಭವಿಸಬಹುದು. ನಿಮ್ಮ ಯೋಜನೆಯ ಪ್ರಕಾರ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸಿ.ಯಾವುದೇ ಕೆಲಸದಲ್ಲಿ ಆತುರ ಪಡುವುದು ಅಥವಾ ಭೀತಿಗೊಳಗಾಗುವುದನ್ನು ಬಿಡಿ. ವ್ಯಾಪಾರಸ್ಥರಿಗೆ ಅದೃಷ್ಟವಾಗಲಿದೆ. ನಿಮ್ಮ ಹಣಕಾಸಿನ ಸಮಸ್ಯೆಗಳು ಇಂದು ಪರಿಹಾರವಾಗಬಹುದು. ನೀವು ಸಣ್ಣ ಉದ್ಯಮಿಯಾಗಿದ್ದರೆ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ಮನೆಯ ವಾತಾವರಣ ಶಾಂತವಾಗಿರುತ್ತದೆ. ನೀವು ಇಂದು ಮಕ್ಕಳೊಂದಿಗೆ ಚೆನ್ನಾಗಿ ಸಮಯ ಕಳೆಯುತ್ತೀರಿ. ದಿನದ ಎರಡನೇ ಭಾಗದಲ್ಲಿ ನೀವು ಸುತ್ತಾಡಲು ಹೋಗಬಹುದು. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಇಂದು, ವೆಚ್ಚಗಳು ಕಡಿಮೆ ಹಾಗಾಗಿ ನಿಮ್ಮ ಬಜೆಟ್ ಹಾಗೂ ವೆಚ್ಚ ಸಮತೋಲನದಲ್ಲಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಶುಭ ದಿನ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 3
ಶುಭ ಸಮಯ: ಮಧ್ಯಾಹ್ನ 3:30 ರಿಂದ 7:55 ರವರೆಗೆ
ವೃಶ್ಚಿಕ ರಾಶಿ:
ಇಂದು ನಿಮಗೆ ಮಿಶ್ರಫಲ. ಕಚೇರಿಯಲ್ಲಿ ನಿಮ್ಮ ಕಾರ್ಯಗಳು ಸರಿಯಾಗಿ ಆಗುವುದಿಲ್ಲ. ನಿಮ್ಮ ಮೇಲಾಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಅತೃಪ್ತರಾಗಿರುವಂತೆ ಕಾಣುತ್ತಾರೆ. ನಿಮ್ಮ ತಪ್ಪುಗಳಿಂದ ನೀವು ಕಲಿಯಬೇಕು. ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಪುನರಾವರ್ತಿಸುತ್ತಿದ್ದರೆ, ನಿಮಗೆ ಸಿಗುವ ಫಲಿತಾಂಶವೂ ಕೂಡ ತಪ್ಪಾಗಿಯೇ ಇರುತ್ತದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿರುವವರು ಇಂದು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುತ್ತಾರೆ. ಅರ್ಧದಲ್ಲಿ ನಿಂತ ಯೋಜನೆಗಳು ಮತ್ತೆ ಪ್ರಾರಂಭವಾಗಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಸಂಗಾತಿಯ ಕಠಿಣ ವರ್ತನೆ ನಿಮ್ಮಿಬ್ಬರ ನಡುವಿನ ಅಂತರವನ್ನು ಹೆಚ್ಚಿಸುತ್ತದೆ. ನಿಮ್ಮ ನಡವಳಿಕೆ ಮತ್ತು ಮಾತು ಎರಡನ್ನೂ ನಿಯಂತ್ರಿಸಿ, ಸಮಸ್ಯೆಯನ್ನು ಬಗೆಹರಿಸಿ. ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ದೊಡ್ಡ ವೆಚ್ಚವನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ನಿಮಗೆ ಇಂದು ಮೊಣಕಾಲು ನೋವು ಕಾಣಿಸಿಕೊಳ್ಳಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ
ಧನು ರಾಶಿ:
ಹೊಸ ಉದ್ಯೋಗವನ್ನು ಹುಡುಕುತ್ತಿರುವವರು ಶುಭ ಸುದ್ದಿಯನ್ನು ಕೇಳಬಹುದು. ದೊಡ್ಡ ಕಂಪನಿಯಿಂದ ನಿಮಗೆ ಉದ್ಯೋಗ ಪ್ರಸ್ತಾಪ ಬರಬಹುದು. ನೀವು ಪೂರ್ಣ ಸಕಾರಾತ್ಮಕತೆ ಮತ್ತು ಕಠಿಣ ಪರಿಶ್ರಮದಿಂದ ಮುಂದುವರೆಯಿರಿ. ಇದರಿಂದ ಶೀಘ್ರದಲ್ಲೇ ನೀವು ಯಶಸ್ಸಿನ ಉತ್ತುಂಗದಲ್ಲಿರುತ್ತೀರಿ. ಮತ್ತೊಂದೆಡೆ, ನೀವು ವ್ಯವಹಾರ ವಿಷಯಗಳಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ನೀವು ಹೆಚ್ಚು ಚಿಂತಿಸಬೇಕಾಗಿಲ್ಲ, ಏಕೆಂದರೆ ನಿಮ್ಮ ಸಮಸ್ಯೆ ತಾತ್ಕಾಲಿಕವಾದದ್ದು. ನೀವು ವಿದ್ಯಾರ್ಥಿಯಾಗಿದ್ದರೆ ಸೋಮಾರಿತನವನ್ನು ಬಿಡಿ. ಇಲ್ಲದಿದ್ದರೆ ನಿಮ್ಮ ಸುಂದರ ಭವಿಷ್ಯದ ಕನಸು ಅಪೂರ್ಣವಾಗಿಯೇ ಉಳಿಯಬಹುದು. ಇಂದು ಆರ್ಥಿಕವಾಗಿ ದುಬಾರಿ ದಿನ. ಇದ್ದಕ್ಕಿದ್ದಂತೆ ದೊಡ್ಡ ಖರ್ಚು ಎದುರಾಗಬಹುದು. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ನೀವು ಅವರ ಆಶೀರ್ವಾದವನ್ನು ಪಡೆಯುತ್ತೀರಿ. ಇಂದು, ನಿಮ್ಮ ಗಮನವು ಪೂಜೆಯ ಕಡೆ ಹೆಚ್ಚಾಗಿರುತ್ತದೆ. ನೀವು ಕೆಲವು ಧಾರ್ಮಿಕ ಸ್ಥಳಕ್ಕೂ ಭೇಟಿ ನೀಡಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಬೆಳಗ್ಗೆ 9 ರಿಂದ ಸಂಜೆ 7 ರವರೆಗೆ
ಮಕರ ರಾಶಿ:
ನಿಮ್ಮ ಕೋಪವೇ ನಿಮ್ಮನ್ನು ತೊಂದರೆಗೆ ಸಿಲುಕಿಸುತ್ತದೆ ಎಂಬುದು ನೆನಪಿರಲಿ. ಹಾಗಾಗಿ ಇಂದು ಹೆಚ್ಚುತ್ತಿರುವ ನಿಮ್ಮ ಕೋಪವನ್ನು ನಿಯಂತ್ರಿಸಿ. ನಿಮ್ಮ ಆಕ್ರಮಣಕಾರಿ ಸ್ವಭಾವವೇ ನಿಮಗೆ ದೊಡ್ಡ ತೊಂದರೆ ಉಂಟುಮಾಡಬಹುದು. ಇಂದು ನೀವು ನೆರೆಹೊರೆಯವರು ಅಥವಾ ಸಂಬಂಧಿಕರೊಂದಿಗೆ ಜಗಳವಾಡಬಹುದು. ಜಗಳವಾಗದಂತೆ ಎಚ್ಚರ ವಹಿಸಿ. ನಿಮ್ಮ ಯಾವುದೇ ಹಣಕಾಸಿನ ಪ್ರಯತ್ನಗಳು ಇಂದು ಯಶಸ್ವಿಯಾಗಬಹುದು ಮತ್ತು ಇದರಿಂದ ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಕುಟುಂಬದೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ, ವಿಶೇಷವಾಗಿ ಪೋಷಕರು, ಸಹೋದರರು ಮತ್ತು ಸಹೋದರಿಯರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ನೀವು ಸರ್ಕಾರಿ ಕೆಲಸ ಮಾಡುವವರಾಗಿದ್ದಲ್ಲಿ, ನಿಮ್ಮ ಗೌರವ ಹೆಚ್ಚಾಗಬಹುದು. ವ್ಯಾಪಾರಿಗಳಿಗೆ ಇಂದು ಸಾಮಾನ್ಯ ದಿನ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ತಣ್ಣನೆಯ ವಸ್ತುಗಳನ್ನು ಸೇವಿಸುವುದನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 7:30 ರವರೆಗೆ
ಕುಂಭ ರಾಶಿ:
ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಯಿದೆ. ಹೊಸ ಆದಾಯದ ಮೂಲವನ್ನು ಪಡೆಯಬಹುದು. ಇಂದು ನಿಮ್ಮ ವೈವಾಹಿಕ ಜೀವನದ ವಿಶೇಷ ದಿನಗಳಲ್ಲಿ ಒಂದು. ನೀವಿಬ್ಬರೂ ಮೊದಲಿನಂತೆ ಪ್ರೀತಿಯಿಂದ ಇರುವಿರಿ. ಕೆಲಸಕ್ಕೆ ಸಂಬಂಧಿಸಿದಂತೆ ದಿನವು ಶುಭವಾಗಿರುತ್ತದೆ. ಇಂದು, ನಿಮ್ಮ ಕೆಲಸದ ಹೊರೆಯೂ ಕಡಿಮೆ. ಬಾಸ್ ಕೂಡ ಉತ್ತಮ ಮನಸ್ಥಿತಿಯಲ್ಲಿರುತ್ತಾರೆ. ಬಹುಶಃ ಇಂದು ಅವರು ನಿಮ್ಮನ್ನು ತೀವ್ರವಾಗಿ ಹೊಗಳಲೂಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಸಮಯ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೀರಿ. ಕುಟುಂಬ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ. ಇಂದು ನೀವು ಕುಟುಂಬ ಸದಸ್ಯರೊಂದಿಗೆ ಕೆಲವು ಧಾರ್ಮಿಕ ಸ್ಥಳಕ್ಕೆ ಹೋಗಬಹುದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಡು ಹಳದಿ
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಮಧ್ಯಾಹ್ನ 1 ರಿಂದ 5 ರವರೆಗೆ
ಮೀನ ರಾಶಿ:
ನಿಮ್ಮ ಕಠಿಣ ಪರಿಶ್ರಮಕ್ಕೆ ಇಂದು ಉತ್ತಮ ಫಲಿತಾಂಶವನ್ನು ಪಡೆಯುವಿರಿ. ನೀವು ಬಹಳ ಸಮಯದಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮನ್ನರಸಿ ಬರಬಹುದು. ನೌಕರಸ್ಥರಿಗೆ ಹೊಸ ಜವಾಬ್ದಾರಿ ಸಿಗಬಹುದು. ಕಷ್ಟಪಟ್ಟು ಕೆಲಸ ಮಾಡಿ. ಇದು ನಿಮಗೆ ಪ್ರಗತಿಯ ಹಾದಿಯನ್ನು ತೋರಿಸುತ್ತದೆ. ಹಾಗೆಯೇ ವ್ಯಾಪಾರಮಾಡುವವರು ತಮ್ಮ ಹೊಸ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಗಳಿಸುತ್ತಾರೆ. ನೀವು ನಿರೀಕ್ಷಿಸಿದಂತೆ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದಿನವು ಲಾಭದಾಯಕ. ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಬಗೆಹರಿಯುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ ನೀವು ಇಂದು ಅವರ ಆರೋಗ್ಯದಲ್ಲಿ ಸುಧಾರಣೆಯನ್ನು ನೋಡುತ್ತೀರಿ ಆದರೆ ಅವರ ಆರೈಕೆಯಲ್ಲಿ ಯಾವುದೇ ಅಜಾಗರೂಕತೆಯನ್ನು ತೋರಿಸಬೇಡಿ.
ಅದೃಷ್ಟದ ಬಣ್ಣ: ಕ್ರೀಮ್
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 6:15 ರಿಂದ 9 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005