Latest Updates
-
ದಶಕಗಳ ಬಳಿಕ ಅಪರೂಪದ ರಾಜಯೋಗ! ಈ ರಾಶಿಗಳಿಗೆ ಹರಿದು ಬರಲಿದೆ ಸಂಪತ್ತು.. ನಿಮ್ಮ ಕಷ್ಟಗಳೆಲ್ಲಾ ದೂರ! -
ಹೊಟ್ಟೆಗೆ ತಂಪು.. ನಾಲಿಗೆಗೆ ರುಚಿ..! ಇಡ್ಲಿ, ದೋಸೆ, ಅನ್ನಕ್ಕೆ ಸೂಪರ್.. ಸೌತೆಕಾಯಿ ಬಳಸಿ ಈ ರೀತಿ ಪಚ್ಚಡಿ ಮಾಡಿ -
March 18 Horoscope: ಪ್ರಯಾಣಗಳ ಮಾಡುವಾಗ ಎಚ್ಚರಿಕೆ ವಹಿಸಿ! -
ಲವ್ ಮ್ಯಾರೇಜ್ನ ಅಡೆತಡೆಗಳು ದೂರ! ಸಂಗಾತಿಗೆ ಹೊಸ ಉದ್ಯೋಗ -
ಯುಗಾದಿ ಹಬ್ಬಕ್ಕೆ ಮಾಡಿ ಗಸೆಗಸೆ ಪಾಯಸ: ಬಾಯಲ್ಲಿ ನೀರು ತರಿಸುವ ಸಿಹಿ -
Summer Garden: ಬೇಸಿಗೆಯಲ್ಲಿ ಬಾಡದ ಹೂವುಗಳಿವು! ಈ 5 ಹೂಗಳನ್ನು ನೆಡಿದ್ರೆ ಸಾಕು.. ನಿಮ್ಮ ಗಾರ್ಡನ್ ಕಲರ್ಫುಲ್ -
ಸೂರ್ಯ ಬುಧನಿಂದ ಬುಧಾದಿತ್ಯ ಯೋಗ; ಈ ರಾಶಿಯವರ ಬದುಕಲ್ಲಿ ಬೆಳಕು, ಕಷ್ಟಗಳು ಪರಿಹಾರ -
ಯುಗಾದಿ ಹೊಸತೊಡಕು.. ಮಟನ್ ಖರೀದಿಸುವಾಗ ಮೋಸ ಹೋಗಬೇಡಿ! ಫ್ರೆಶ್ ಇದ್ಯಾ? ಅಥವಾ ನಿನ್ನೆಯದ್ದೇ? ಹೀಗೆ ಗುರುತಿಸಿ -
ಒಂದು ಹನಿ ಎಣ್ಣೆ ಕೆಳಗೆ ಬೀಳದಂತೆ ಬಾಟಲಿಗೆ ಹಾಕೋ ಐಡಿಯಾ ಗೊತ್ತಾ? ಈ ಟ್ರಿಕ್ಸ್ ನೀವೆಂದು ಬಳಸಿರಲ್ಲ! -
ಸ್ಟೌವ್ ಬೇಡ, ಎಣ್ಣೆ ಬೇಡ..! 5 ನಿಮಿಷದಲ್ಲಿ ಸಿದ್ಧವಾಗುತ್ತೆ ಈ ಇಡಿಚ್ಚ ಮೊಸರು ಚಟ್ನಿ! ಒಮ್ಮೆ ಟ್ರೈ ಮಾಡಿ
ಭಾನುವಾರದ ದಿನ ಭವಿಷ್ಯ: ಮೀನ ರಾಶಿಯ ವ್ಯಾಪಾರಿಗಳಿಗೆ ಆರ್ಥಿಕ ಲಾಭ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋ ಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಕಾರ್ತಿಕಾ
ತಿಥಿ: ಸಪ್ತಮಿ
ನಕ್ಷತ್ರ: ಬೆಳಗ್ಗೆ 8:46ರವರೆಗೆ ಪುಷ್ಯಾ ನಂತರ ಅಶ್ಲೇಷ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಸಂಜೆ 04:13 ರಿಂದ5:40ರವರೆಗೆ
ಗುಳಿಕಕಾಲ: ಮಧ್ಯಾಹ್ನ 2:46ರಿಂದ ಸಂಜೆ 4:16 ರವರೆಗೆ
ಯಮಗಂಡಕಾಲ: ಮಧ್ಯಾಹ್ನ 11:59 ರಿಂದ01:19ರವರೆಗೆ
ದುರ್ಮುಹೂರ್ತ:
ಸಂಜೆ 04:7ರಿಂದ 04:54ರವರೆಗೆ
ಸೂರ್ಯೋದಯ: ಬೆಳಗ್ಗೆ 06:05ಕ್ಕೆ
ಸೂರ್ಯಾಸ್ತ: ಸಂಜೆ 05:40ಕ್ಕೆ

ಮೇಷ ರಾಶಿ:
ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಸಮಯ ಅನುಕೂಲಕರವಾಗಿಲ್ಲ. ನೌಕರಿಯಲ್ಲಿರುವವರು ಸಂಬಳವನ್ನು ಹೆಚ್ಚಿಸಲು ಬಯಸಿದರೆ, ಇದಕ್ಕಾಗಿ ನೀವು ಸ್ವಲ್ಪ ಸಮಯ ಕಾಯಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸುಧಾರಿಸುತ್ತದೆ ಮತ್ತು ಇಂದು ನೀವು ಅವರೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಸಂಗಾತಿಯ ವರ್ತನೆ ನಿಮಗೆ ಸಿಟ್ಟು ತರಿಸಿದರೂ ನಿಮ್ಮ ಕೋಪ ನೀವು ನಿಯಂತ್ರಿಸುವುದು ಒಳ್ಳೆಯದು, ಇದರಿಂದ ವೈಮನಸ್ಸು ತಪ್ಪಿಸಬಹುದು. ಅಧಿಕ ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 34
ಒಳ್ಳೆಯ ಸಮಯ: ಸಂಜೆ 5 ರಿಂದ 9:15 ರವರೆಗೆ

ವೃಷಭ ರಾಶಿ
ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅವಶ್ಯಕ. ಈ ಸಮಯದಲ್ಲಿ, ಕೆಲಸದ ಜೊತೆಗೆ ನಿಮ್ಮ ಕುಟುಂಬದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ನೀವು ನಿರುದ್ಯೋಗಿಗಳಾಗಿದ್ದರೆ, ನೀವು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ವ್ಯವಹಾರಕ್ಕೆ ಸಂಬಂಧಿಸಿದ ಜನರು ಇಂದು ಸಾಕಷ್ಟು ಓಡಾಡಬೇಕಾಗುತ್ತದೆ. ಹಣದ ಬಗ್ಗೆ ಹೇಳುವುದಾದರೆ ಆದಾಯ ಚೆನ್ನಾಗಿದೆ ಜೊತೆಗೆ ಖರ್ಚು ಕೂಡ ಇದೆ. ನೀವು ಚಿಂತನಶೀಲವಾಗಿ ಖರ್ಚು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದು ಉತ್ತಮ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 31
ಒಳ್ಳೆಯ ಸಮಯ: ಮಧ್ಯಾಹ್ನ 2:45 ರಿಂದ 9:30 ರವರೆಗೆ

ಮಿಥುನ ರಾಶಿ
ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಹಿರಿಯ ಸಹೋದರ ಅಥವಾ ಸಹೋದರಿಯ ಸಹಾಯದಿಂದ, ನಿಮ್ಮ ಜೀವನದಲ್ಲಿ ಯಾವುದೇ ದೊಡ್ಡ ಸಮಸ್ಯೆ ಕೊನೆಗೊಳ್ಳುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಸುಧಾರಿಸುತ್ತದೆ. ಕಷ್ಟದ ಸಂದರ್ಭದಲ್ಲಿ ಸಂಗಾತಿಯ ಬೆಂಬಲವನ್ನು ನೀವು ಪಡೆಯುತ್ತೀರಿ. ಕೆಲಸದ ಕಡೆ ಹೆಚ್ಚು ಗಮನ ಹರಿಸಬೇಕು. ಕಚೇರಿಯಲ್ಲಿ ಕೆಲ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಿ.
ನೀವು ಸಣ್ಣ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದು,ಆದರೆ ಹಣಕಾಸಿನ ಸಮಸ್ಯೆಗಳಿಂದಾಗಿ ನಿಮ್ಮ ಯೋಜನೆ ಮುಂದುವರಿಯುತ್ತಿಲ್ಲವಾದರೆ ನೀವು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ವ್ಯಾಪಾರಿಗಳು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನಿರ್ಲಕ್ಷ್ಯದಿಂದಾಗಿ ನಿಮ್ಮ ಆರೋಗ್ಯವು ಕ್ಷೀಣಿಸಬಹುದು. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 3 ರವರೆಗೆ

ಕರ್ಕ ರಾಶಿ
ಆರ್ಥಿಕ ರಂಗದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟವಾಗಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಇಂದು ನೀವು ಸುಲಭವಾಗಿ ಹಣವನ್ನು ಸಂಪಾದಿಸಲು ಸಾಧ್ಯವಾಗುತ್ತದೆ ಮತ್ತು ಸಾಲವನ್ನು ಕೂಡ ತೀರಿಸುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿಉತ್ತದೆ. ವೈವಾಹಿಕ ಜೀವನ ಖುಷಿಯಾಗಿ ಇರಲಿದೆ.
ಕೆಲಸದ ಬಗ್ಗೆ ಹೇಳುವುದಾದರೆ ಇತರರ ವ್ಯವಹಾರಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ವ್ಯಾಪಾರಿಗಳು ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಇಂದು ನೀವು ಶೀತ ಕೆಮ್ಮಿನಿಂದ ತೊಂದರೆಗೊಳಗಾಗುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ

ಸಿಂಹ ರಾಶಿ
ವೈವಾಹಿಕ ಜೀವನದಲ್ಲಿ ಯಾವುದೇ ಸಕಾರಾತ್ಮಕ ಬದಲಾವಣೆ ಬರಬಹುದು. ನಿಮ್ಮ ಸಂಗಾತಿಯೊಂದಿಗೆ ಪ್ರೀತಿ ಹೆಚ್ಚಾಗುತ್ತದೆ. ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಮತ್ತು ನಿಮ್ಮ ದಾರಿಯಲ್ಲಿ ಕೆಲವು ಅಡೆತಡೆಗಳು ಎದುರಾಗುತ್ತಿದ್ದರೆ, ಶೀಘ್ರದಲ್ಲೇ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗುವುದು. ನೀವು ಮನೆಯ ಹಿರಿಯರಿಂದ ಆಶೀರ್ವಾದ ಪಡೆಯುವ ಮೂಲಕ ಸಕಾರಾತ್ಮಕತೆಯ ಭಾವನೆಯನ್ನು ಪಡೆಯುತ್ತೀರಿ.ಕೆಲಸದ ಬಗ್ಗೆ ಹೇಳುವುದಾದರೆ ಇಂದು ಕೆಲ ದೊಡ್ಡ ಜವಾಬ್ದಾರಿ ನಿಮ್ಮ ಹೆಗಲಿಗೆ ಬೀಳಬಹುದು. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ನೀವು ಚಿಂತನಶೀಲವಾಗಿ ಖರ್ಚು ಮಾಡುತ್ತೀರಿ. ಆರೋಗ್ಯಕ್ಕಾಗಿ ಯೋಗ, ವ್ಯಾಯಾಮ ಮಾಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಒಳ್ಳೆಯ ಸಮಯ: ಬೆಳಿಗ್ಗೆ 8:15 ರಿಂದ ಮಧ್ಯಾಹ್ನ 2:30 ರವರೆಗೆ

ಕನ್ಯಾ ರಾಶಿ
ಆರ್ಥಿಕ ರಂಗದಲ್ಲಿ ಇಂದು ನಿಮಗೆ ಉತ್ತಮ ದಿನವಲ್ಲ. ಹಣ ಕಳೆದುಕೊಳ್ಳುವ ಬಲವಾದ ಸಾಧ್ಯತೆ ಇದೆ. ಇಂದು, ಸಾಲ ತೆಗೆದುಕೊಳ್ಳುವ ಅವಶ್ಯಕತೆಯೂ ಇರಬಹುದು. ಹಣಕಾಸಿನ ತೊಂದರೆಗಳು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು. ನೀವು ಸಮಯವನ್ನು ನೀವು ಚೆನ್ನಾಗಿ ಬಳಸಬೇಕು. ನಿಮ್ಮ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿ. ಮತ್ತೊಂದೆಡೆ, ವ್ಯಾಪಾರ ವರ್ಗವು ಇಂದು ಸ್ವಲ್ಪ ಪರಿಹಾರವನ್ನು ಪಡೆಯಬಹುದು. ನಿಮ್ಮ ಯಾವುದೇ ವ್ಯವಹಾರ ವಿಷಯಗಳು ದೀರ್ಘಕಾಲದಿಂದ ಕೆಲ ಗೊಂದಲಕ್ಕೆ ಸಿಲುಕಿಕೊಂಡಿದ್ದರೆ, ಇಂದು ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಇರುತ್ತದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧಗಳು ಉತ್ತಮವಾಗಿರುತ್ತವೆ ಮತ್ತು ನಿಮಗೆ ಭಾವನಾತ್ಮಕ ಬೆಂಬಲವೂ ಸಿಗುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಮಿಶ್ರ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಒಳ್ಳೆಯ ಸಮಯ: ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ

ತುಲಾ ರಾಶಿ
ನಿಮ್ಮ ದಿನಚರಿಯನ್ನು ಕ್ರಮಬದ್ಧಗೊಳಿಸಿದರೆ, ನೀವು ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಬಹುದು. ಈ ಸಮಯದಲ್ಲಿ ನೀವು ನಿಮ್ಮ ಬಗ್ಗೆಯೂ ಗಮನ ಹರಿಸಬೇಕು, ಇಲ್ಲದಿದ್ದರೆ ನಿಮ್ಮ ಆರೋಗ್ಯವು ದುರ್ಬಲವಾಗಬಹುದು. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ಮನೆಯ ವಾತಾವರಣ ಸಾಕಷ್ಟು ಚೆನ್ನಾಗಿರುತ್ತದೆ. ಪ್ರೀತಿಪಾತ್ರರೊಡನೆ ಸಂತೋಷದಿಂದ ದಿನ ಕಳೆಯಲಾಗುವುದು.
ಇಂದು ನೀವು ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಲಾಭ ಗಳಿಸುವ ಅವಕಾಶ ಸಿಗುತ್ತದೆ. ಹಣದ ಬಗ್ಗೆ ಹೇಳುವುದಾದರೆ ಇಂದು ಯಾವುದೇ ಸಮಸ್ಯೆ ಇರುವುದಿಲ್ಲ. ನೀವು ಯಾವುದೇ ಅಮೂಲ್ಯ ವಸ್ತುವನ್ನು ಖರೀದಿಸಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 15
ಒಳ್ಳೆಯ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 2:30 ರವರೆಗೆ

ವೃಶ್ಚಿಕ ರಾಶಿ
ಇಂದು ನಿಮಗೆ ಮಿಶ್ರ ದಿನವಾಗಿರುತ್ತದೆ. ಕೆಲವು ಜನರು ನಿಮ್ಮನ್ನು ಅನಗತ್ಯವಾಗಿ ತೊಂದರೆಗೊಳಿಸಬಹುದು. ಅಂತಹ ಜನರಿಂದ ಪ್ರಭಾವಿತರಾಗದಿರುವುದು ಉತ್ತಮ. ಅಂತಹ ನಕಾರಾತ್ಮಕ ವಿಷಯಗಳು ನಿಮ್ಮ ಗುರಿಯಿಂದ ನಿಮ್ಮನ್ನು ಬೇರೆಡೆಗೆ ಸೆಳೆಯಬಹುದು.
ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಸಂಗಾತಿಯ ಪ್ರೀತಿ ಮತ್ತು ಬೆಂಬಲವನ್ನು ನೀವು ಪಡೆಯುತ್ತೀರಿ. ಪ್ರೇಮಿಯಾಗಿದ್ದರೆ ನಿಮ್ಮ ಪ್ರಿಯತಮೆಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಹಣದ ವಿಷಯದಲ್ಲಿ ಆತುರ ಪಡದಿರುವುದು ಉತ್ತಮ. ಆರೋಗ್ಯದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 26
ಒಳ್ಳೆಯ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ಧನು ರಾಶಿ
ಇಂದು, ಒಂದು ದೊಡ್ಡ ಸಮಸ್ಯೆ ನಿಮ್ಮ ಮುಂದೆ ಇದ್ದಕ್ಕಿದ್ದಂತೆ ಉದ್ಭವಿಸಬಹುದು, ಇದರಿಂದಾಗಿ ಮನಸ್ಸು ತುಂಬಾ ಅಸಮಾಧಾನ ಉಂಟಾಗುವುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಧೈರ್ಯದಿಂದ ಕೆಲಸ ಮಾಡಬೇಕು. ಶಾಂತ ಮನಸ್ಸಿನಿಂದ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಿದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯನಿರ್ವಹಣೆಯ ವಿಷಯಕ್ಕೆ ಬಂದಾಗ, ನೀವು ಕಚೇರಿಯಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ಹೊಂದಿರಬಹುದು. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ, ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ.
ಮತ್ತೊಂದೆಡೆ, ನೀವು ದೊಡ್ಡ ಉದ್ಯಮಿಯಾಗಿದ್ದರೆ, ಇಂದು ನಿಮಗೆ ತುಂಬಾ ಅದೃಷ್ಟದ ದಿನವಾಗಿದೆ. ನೀವು ದೊಡ್ಡ ಹಣಕಾಸಿನ ಲಾಭವನ್ನು ಪಡೆಯಬಹುದು. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಸ್ವಲ್ಪ ವಾಗ್ವಾದ ಬರಬಹುದು. ನಿಮ್ಮ ಅತಿಯಾದ ಕೋಪವನ್ನು ನಿಯಂತ್ರಿಸಿ. ಆರೋಗ್ಯದ ವಿಷಯದಲ್ಲಿ ಈ ದಿನ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಒಳ್ಳೆಯ ಸಮಯ: ಬೆಳಿಗ್ಗೆ 8:15 ರಿಂದ ಮಧ್ಯಾಹ್ನ 2:30 ರವರೆಗೆ

ಮಕರ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ನೀವು ಸಂತೋಷ ಮತ್ತು ಶಾಂತಿಯನ್ನು ಬಯಸಿದರೆ, ನೀವು ನಿಮ್ಮ ಸಂಗಾತಿಯನ್ನು ಗೌರವಿಸಬೇಕು. ಅಲ್ಲದೆ, ನಿಮ್ಮ ಸಂಬಂಧದಲ್ಲಿ ನೀವು ಪಾರದರ್ಶಕವಾಗಿಡಬೇಕು. ನಿಮ್ಮ ಆಲೋಚನೆಗಳನ್ನು ಸಂಗಾತಿ ಜೊತೆ ಹಂಚಿಕೊಳ್ಳಬಹುದು. ಹಣದ ಬಗ್ಗೆ ಹೇಳುವುದಾದರೆ ಈ ದಿನವು ನಿಮಗೆ ತುಂಬಾ ದುಬಾರಿಯಾಗಿದೆ. ದಿನದ ಎರಡನೇ ಭಾಗದಲ್ಲಿ, ಮನೆಯಲ್ಲಿ ಅತಿಥಿಗಳು ಇದ್ದಕ್ಕಿದ್ದಂತೆ ಆಗಮಿಸಬಹುದು ಮತ್ತು ಅವರ ಆತಿಥ್ಯದಲ್ಲಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬಹುದು.
ವ್ಯಾಪಾರಿಗಳಿಗೆ ಮಿಶ್ರ ಫಲಿತಾಂಶ ಸಿಗುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 23
ಒಳ್ಳೆಯ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ

ಕುಂಭ ರಾಶಿ
ಇಂದು ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಲಿದೆ. ನಿಮ್ಮ ಶಿಕ್ಷಣದ ಬಗ್ಗೆ ನೀವು ಯಾವುದೇ ಪ್ರಯತ್ನಗಳನ್ನು ಮಾಡುತ್ತಿದ್ದರೆ, ಇಂದು ಯಶಸ್ಸು ಸಿಗಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ನೀವು ಅಧ್ಯಯನಗಳಲ್ಲಿಯೂ ಚೆನ್ನಾಗಿ ತೊಡಗಿಕೊಳ್ಖಬಹುದು. ಕುಟುಂಬಗಳ ನಡುವಿನ ಬಿರುಕನ್ನು ಕೊನೆಗೊಳಿಸುವಲ್ಲಿ ನೀವು ಯಶಸ್ವಿಯಾಗುವ ಸಾಧ್ಯತೆಯಿದೆ. ಇಂದು ನಾವು ಮನೆಯ ವಾತಾವರಣದಲ್ಲಿ ಸುಧಾರಣೆಯನ್ನು ನೋಡುತ್ತೀರಿ.ನೀವು ಕೆಲವು ಹೆಚ್ಚುವರಿ ಕೆಲಸಗಳನ್ನು ಮಾಡಬೇಕಾಗಬಹುದು. ನೀವು ವ್ಯಾಪಾರಮಾಡುತ್ತಿದ್ದರೆ ಅದಕ್ಕಾಗಿಪ್ರಯಾಣಿಸಬೇಕಾಗಬಹುದು. ನಿಮ್ಮ ಪ್ರಯಾಣವು ಶುಭವಾಗಿರುತ್ತದೆ. ಈ ಎಲ್ಲದರ ಮಧ್ಯೆ ನೀವು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು, ಆದ್ದರಿಂದ ನಿರ್ಲಕ್ಷ್ಯ ವಹಿಸಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 1:00 ರಿಂದ ಸಂಜೆ 7 ರವರೆಗೆ

ಮೀನ ರಾಶಿ
ನೀವು ವ್ಯಾಪಾರಯಾಗಿದ್ದರೆ ಇದ್ದಕ್ಕಿದ್ದಂತೆ ನೀವು ಕೆಲವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಇದಲ್ಲದೆ, ನೀವು ಹೊಸ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ಸಮಯ ಇದಕ್ಕೆ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಲಿದೆ. ನಿಮಗೆ ಬೇಕಾದ ವರ್ಗಾವಣೆಯನ್ನು ನೀವು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಪ್ರೀತಿ ಮತ್ತು ಐಕ್ಯತೆ ಕುಟುಂಬದಲ್ಲಿ ಉಳಿಯುತ್ತದೆ.
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಉಳಿಯುತ್ತದೆ. ನಿಮ್ಮ ಪ್ರೀತಿಪಾತ್ರರು ದೈನಂದಿನ ಕಾರ್ಯಗಳಲ್ಲಿ ಸಹ ನಿಮಗೆ ಸಹಾಯ ಮಾಡಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ದೈಹಿಕವಾಗಿ ತುಂಬಾ ಚುರುಕಾಗಿರುತ್ತೀರಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟ ಸಂಖ್ಯೆ: 19
ಒಳ್ಳೆಯ ಸಮಯ: ಮಧ್ಯಾಹ್ನ 2 ರಿಂದ 9 ರವರೆಗೆ
ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,
ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.
ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು
ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋ ಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.
ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005



Click it and Unblock the Notifications











