Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಧನುರ್ಮಾಸದಲ್ಲಿ ಈ ಪರಿಹಾರ ಮಾಡಿದರೆ ಅದೃಷ್ಟ ಲಭಿಸುವುದು
ವೈದಿಕ ಶಾಸ್ತ್ರದ ಪ್ರಕಾರ ಗ್ರಹಗಳ ಅಧಿಪತಿಯಾಗಿರುವ ಸೂರ್ಯ ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಇದನ್ನು ಸೂರ್ಯನ ಸಂಕ್ರಮಣ ಅಥವಾ ಸಂಕ್ರಾಂತಿ ಎಂದು ಕರೆಯಲಾಗುವುದು. 16 ಡಿಸೆಂಬರ್ 2022ಕ್ಕೆ ಸೂರ್ಯನು ಧನು ರಾಶಿಯನ್ನು ಪ್ರವೇಶಿಸಿರುವುದರಿಂದ ಧನು ಸಂಕ್ರಾಂತಿ ಉಂಟಾಗಿದೆ.

ಈ ಧನು ಸಂಕ್ರಾಂತಿಯು ಡಿಸೆಂಬರ್ 16ರಿಂದ ಜನವರಿ 14 ರವರೆಗೆ ಇರುತ್ತದೆ. 2023 ಜನವರಿ 14ಕ್ಕೆ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಆಚರಿಸಲಾಗುವುದು. ಸೂರ್ಯನು ಧನು ರಾಶಿಯಲ್ಲಿರುವಾಗ ಈ ತಿಂಗಳನ್ನು ಶೂನ್ಯ ಮಾಸವೆಂದು ಹೇಳಲಾಗುವುದು.
ಧನು ಸಂಕ್ರಾಂತಿಯ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಈ ಅವಧಿಯಲ್ಲಿ ಮದುವೆ, ಗೃಹ ಪ್ರವೇಶ, ನಾಮಕರಣ ಮಾಡುವುದಿಲ್ಲ, ಆದರೆ ಪೂಜ್ಯ ಕಾರ್ಯಗಳಿಗೆ ತುಂಬಾನ ಶ್ರೇಷ್ಠವಾಗಿದೆ. ಇನ್ನು ಸೂರ್ಯನು ಧನು ರಾಶಿಯಲ್ಲಿ ಇರುವಾಗ ಕೆಲವೊಂದು ಪರಿಹಾರಗಳನ್ನು ಮಾಡುವುದರಿಂದ ತುಂಬಾ ಉತ್ತಮವಾದ ಪ್ರಯೋಜ ಪಡೆಯುತ್ತೀರಿ.
ಧನುರ್ಮಾಸದಲ್ಲಿ ಏನು ಮಾಡಬೇಕು?
* ಧನುರ್ಮಾಸದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ ಮತ್ತು ದಾನ ಮಾಡಬೇಕು. ಈ ತಿಂಗಳಿನಲ್ಲಿ ಬಡವರಿಗೆ ಅನ್ನದಾನ, ಅನ್ನದಾನ, ವಸ್ತ್ರದಾನ ಮಾಡುವುದರಿಂದ ಪುಣ್ಯ ಲಭಿಸುವುದು ಎಂದು ಹೇಳಲಾಗುವುದು.
* ಧನುರ್ಮಾಸದಲ್ಲಿ ಪ್ರತಿದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಿ. ಶಿವನಿಗೆ ಅಭಿಷೇಕ ಮಾಡಿ. ಮಹಾಮೃತ್ಯುಜಯ ಮಂತ್ರವನ್ನೂ ಪಠಿಸಿ. ಈ ರೀತಿ ಮಾಡುವುದರಿಂದ ಅಹಿತಕರ ಘಟನೆಗಳನ್ನು ತಡೆಯಬಹುದು, ನಮ್ಮ ಕಾರ್ಯದಲ್ಲಿ ಇರುವ ವಿಘ್ನಗಳನ್ನು ದೂರ ಮಾಡಬಹುದು.
* ಭಗವಾನ್ ವಿಷ್ಣು ಮತ್ತು ತಾಯಿ ಲಕ್ಷ್ಮಿಯನ್ನು ಆರಾಧಿಸಿದರೆ ಒಳ್ಳೆಯದು.ತಾಯಿ ಲಕ್ಷ್ಮಿ ನಿಮ್ಮ ಮನೆಯಲ್ಲಿ ಸದಾ ನೆಲೆಸುತ್ತಾಳೆ. ನೀವು ವೃತ್ತಿಯಲ್ಲಿ ಪ್ರಗತಿಯನ್ನು ಪಡೆಯುತ್ತೀರಿ.
* ಪ್ರತಿದಿನ ಗಾಯತ್ರಿ ಮಂತ್ರವನ್ನು ಪಠಿಸಿ.
ಧನು ಸಂಕ್ರಾಂತಿ ಮಹತ್ವ
ಸೂರ್ಯನು ಧನು ರಾಶಿಗೆ ಪ್ರವೇಶಿಸಿದ ದಿನದಿಂದ ನಮ್ಮ ಕರ್ಮಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುವುದು. ಅದಕ್ಕಾಗಿಯೇ ಎಲ್ಲಾ ಶುಭ ಕಾರ್ಯಕ್ರಮಗಳನ್ನು ಒಂದು ತಿಂಗಳ ಕಾಲ ಸ್ಥಗಿತಗೊಳಿಸಲಾಗುವುದು, ಈ ಅವಧಿಯಲ್ಲಿ ದೇವರ ಕಾರ್ಯಗಳಿಗೆ ಹೆಚ್ಚು ಮಹತ್ವ ನೀಡಲಾಗುವುದು.
ಸೂರ್ಯನನ್ನು ಆರಾಧಿಸಿ
ಧಾರ್ಮಿಕ ಗ್ರಂಥಗಳ ಪ್ರಕಾರ, ಧನು ಸಂಕ್ರಾಂತಿಯಂದು ಭಗವಾನ್ ಸೂರ್ಯನನ್ನು ಪೂಜಿಸಲು ವಿಶೇಷ ಪ್ರಾಮುಖ್ಯತೆ ಇದೆ. ಸೂರ್ಯ ದೇವರನ್ನು ಪೂಜಿಸುವುದರಿಂದ ಪಾಪಗಳಿಂದ ಮುಕ್ತಿ ದೊರೆಯುತ್ತದೆ. ಈ ದಿನ ಸೂರ್ಯ ದೇವರೊಂದಿಗೆ ಭಗವಾನ್ ವಿಷ್ಣು, ಜಗನ್ನಾಥ ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದರಿಂದ ವಿಶೇಷ ಫಲಿತಾಂಶಗಳನ್ನು ಪಡೆಯಬಹುದು.
ಭಗವಾನ್ ಸೂರ್ಯ ಮತ್ತು ಶ್ರೀ ಕೃಷ್ಣನನ್ನು ಪ್ರತಿ ದಿನ ಪೂಜಿಸಿ.
ಸೂರ್ಯನನ್ನು ಆರಾಧಿಸುವುದರಿಂದ ಸಿಗುವ ಫಲ
ಧನು ಸಂಕ್ರಾಂತಿ ಅವಧಿಯನ್ನು ಸಮೃದ್ಧಿಗೆ ಮಂಗಳಕರವೆಂದು ಪರಿಗಣಿಸದಿದ್ದರೂ, ಈ ಅವಧಿಯಲ್ಲಿ ಸೂರ್ಯ ದೇವರು ಮತ್ತು ವಿಷ್ಣುವನ್ನು ಪೂಜಿಸುವ ಜೊತೆಗೆ ದಾನ ಮಾಡುವುದು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವೈದಿಕ ಶಾಸ್ತ್ರಗಳ ಪ್ರಕಾರ, ಧನು ಸಂಕ್ರಾಂತಿಯ ಅವಧಿಯಲ್ಲಿ ಭಗವಂತ ಸೂರ್ಯ ಮತ್ತು ಭಗವಂತ ವಿಷ್ಣುವನ್ನು ಪೂಜಿಸಿದರೆ ಒಳ್ಳೆಯದು. ಇದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಈ ಅವಧಿಯಲ್ಲಿ ಸತ್ಯನಾರಾಯಣ ಕಥೆಯನ್ನು ಕೇಳುವುದು, ಓದುವುದು ಒಳ್ಳೆಯದು. ಶಿವ ಚಾಲೀಸವನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಸಿಗುತ್ತದೆ.



Click it and Unblock the Notifications












