Just In
- 7 min ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 31 min ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 50 min ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- 1 hr ago ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
Don't Miss
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Movies Nannamma Superstar: ಬಿಗ್ ಬಾಸ್ ಸಂಗೀತಾ ಹೊಟ್ಟೆಗೆ ಏನ್ ತಿಂತಾರೆ? ಮೃದಿನಿಗೆ ಕಾಡಿದ ದೊಡ್ಡ ಪ್ರಶ್ನೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Gowri Habba 2022 : ಸುವರ್ಣ ಗೌರಿ ಹಬ್ಬ: ಪೂಜೆಗೆ ಮುಹೂರ್ತ ಯಾವಾಗ? ಗೌರಿ ದಾರದ ಮಹತ್ವವೇನು?
ಭಾರತದ ಪ್ರಮುಖ ಹಬ್ಬಗಳಾದ ಗೌರಿ-ಗಣೇಶ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳಷ್ಟೇ ಬಾಕಿದೆ. ಗಣೇಶ ಹಬ್ಬಕ್ಕಿಂತ ಒಂದು ದಿನ ಮುಂಚಿತವಾಗಿ ಗೌರಿ ಹಬ್ಬವನ್ನು ಆಚರಿಸಲಾಗುವುದು. ಭಾದ್ರಪದ ಮಾಸದ ಶುದ್ಧ ತದಿಗೆ ದಿನ ಗೌರಿ ಪೂಜೆಯನ್ನು ಮಾಡಲಾಗುವುದು.
ಗೌರಿ ದೇವಿ ಪ್ರಕೃತಿಯ ಸ್ವರೂಪ. ಪಾರ್ವತಿ ದೇವಿಯ ಅಪರಾವತಾರ. ಕುಟುಂಬದ ಸಂತೋಷ, ಸಮೃದ್ಧಿ ಹೆಚ್ಚಿಸಲಿ, ನಮಗೆ ಶಕ್ತಿಯನ್ನು ನೀಡಲಿ ಎಂದು ಶ್ರದ್ಧೆ-ಭಕ್ತಿಯಿಂದ ಗೌರಿಯನ್ನು ಪೂಜಿಸಲಾಗುವುದು. ಗೌರಿ ಹಬ್ಬವನ್ನು ಸುವರ್ಣ ಗೌರಿ ಹಬ್ಬವೆಂದು ಕರೆಯಲಾಗುವುದು.
ಈ ವರ್ಷ ಸುವರ್ಣ ಗೌರಿ ಹಬ್ಬ ಯಾವಾಗ, ಪೂಜಾ ಮುಹೂರ್ತ, ಪೂಜಾ ವಿಧಿ ಇವುಗಳ ಬಗ್ಗೆ ತಿಳಿಯೋಣ:
ಗೌರಿ ಹಬ್ಬದ ದಿನಾಂಕ
ಆಗಸ್ಟ್ 30 ಮಂಗಳವಾರ
ಭಾದ್ರಪದ ಮಾಸದ ಶುಕ್ಲ ಪಕ್ಷದ ತದಿಗೆಯಂದು ಗೌರಿ ಹಬ್ಬವನ್ನು ಆಚರಿಸಲಾಗುವುದು.
ಗೌರಿ ಹಬ್ಬದ ವ್ರತದ ಸಮಯ
ತೃತೀಯಾ ತಿಥಿ ಪ್ರಾರಂಭ: ಆಗಸ್ಟ್ 29, 3:20ಕ್ಕೆ
ತೃತೀಯಾ ತಿಥಿ ಮುಕ್ತಾಯ: ಆಗಸ್ಟ್ 30, 3:30ಕ್ಕೆ
ಬೆಳಗ್ಗೆ ಗೌರಿ ಪೂಜೆಗೆ ಮುಹೂರ್ತ
ಬೆಳಗ್ಗೆ 05:22ಕ್ಕೆ ಪ್ರಾತಂಭ 07:52ಕ್ಕೆ ಮುಕ್ತಾಯ
ಪೂಜೆಗೆ ಕಾಲಾವಧಿ 2 ಗಂಟೆ 29 ನಿಮಿಷ
ಗೌರಿ ಹಬ್ಬದಲ್ಲಿ 16ಗಂಟಿನ ದಾರದ ಮಹತ್ವ
ಈ ವ್ರತವನ್ನು ಮುತ್ತೈದೆಯರು 16 ವರ್ಷ ಮಾಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಗೌರಿ ದೇವಿ ಶಿವನನ್ನು ಒಲಿಸಿಕೊಳ್ಳಲು ಬರೀ ಹಣ್ಣುಗಳನ್ನು ಮಾತ್ರ ಸೇವಿಸುತ್ತಾ 16 ವರ್ಷ ತಪಸ್ಸು ಮಾಡಿದಳು ಎಂಬ ಪೌರಾಣಿಕ ಕತೆಯಿದೆ. ಗೌರಿಯ ತಪಸ್ಸಿಗೆ ಮೆಚ್ಚಿ ಶಿವ ಪಾರ್ವತಿಯನ್ನು ಮದುವೆಯಾದ.
ಗೌರಿ ಹಬ್ಬದಂದು 16 ಗಂಟುಗಳ ಗೌರಿದಾರವನ್ನು ಬಲ ಮಣಿಕಟ್ಟಿಗೆ ಧರಿಸಲಾಗುವುದು. ಇದರಿಂದ ಗೌರಿಯ ಆಶೀರ್ವಾದ ಸಿಗುತ್ತದೆ.
ಗೌರಿ ಹಬ್ಬಕ್ಕೆ ಬಾಗಿನ
ಗೌರಿ ಹಬ್ಬಕ್ಕೆ ಕನಿಷ್ಠ 5 ಬಾಗಿನಗಳನ್ನು ತಯಾರಿಸಲಾಗುವುದು. ಈ ಬಾಗಿನದಲ್ಲಿ ಸಾಮಾನ್ಯವಾಗಿ ಅರಿಶಿಣ-ಕುಂಕುಮ, ಕಪ್ಪು ಬಳೆಗಳು, ಕಪ್ಪು ಮಣಿಗಳು , ಒಂದು ಬಾಚಣಿಗೆ, ಒಂದು ಚಿಕ್ಕ ಕನ್ನಡಿ, ಬಳೆ, ತೆಂಗಿನಕಾಯಿ, ಬ್ಲೌಸ್ ಪೀಸ್, ಧಾನ್ಯ, ಅಕ್ಕಿ, ಹಣ್ಣುಗಳಿರಬೇಕು. ಬಾಗಿನವನ್ನು ಮೊರದಲ್ಲಿ ನೀಡಬೇಕು. ತಯಾರು ಮಾಡಿದ ಬಾಗಿನದಲ್ಲಿ ಒಂದು ಬಾಗಿನವನ್ನು ಗೌರಿ ದೇವಿಗೆ ಇಟ್ಟು ನಂತರ ನಂತರ ಉಳಿದವುಗಳನ್ನು ಹಬ್ಬಕ್ಕೆ ಬಂದ ಮುತ್ತೈದೆಯರಿಗೆ ನೀಡಲಾಗುವುದು.
ಗೌರಿ ವ್ರತ
ಮನೆಯ ಹೆಂಗಸರು, ಹೆಣ್ಣು ಮಕ್ಕಳು ಗೌರಿ ಹಬ್ಬದಂದು ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ, ಲಕ್ಷ್ಮಿಯಂತೆ ಅಲಂಕರಿಸಿಕೊಂಡು ದೇವಾಲಯಕ್ಕೆ ಹೋಗಿ ಪೂಜೆ ಮಾಡಿ ಬಂದು ನಂತರ ಮನೆಯಲ್ಲಿ ಗೌರಿ ಪೂಜೆಯನ್ನು ಮಾಡುತ್ತಾರೆ. ಈ ದಿನ ಉಪವಾಸವಿದ್ದು ಗೌರಿ ವ್ರತವನ್ನು ಆಚರಿಸಲಾಗುವುದು.
ಸ್ವರ್ಣ ಗೌರಿ ವ್ರತವನ್ನು ಮಾಡುವವರಿಗೆ ಗೌರಿಯು ಸಕಲ ಸೌಭಾಗ್ಯ ನೀಡಿ ಸಲಹುತ್ತಾಳೆ ಎಂಬುವುದು ಅವಳ ಭಕ್ತರ ಅಚಲ ನಂಬಿಕೆ.
ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯಗಳು.....