Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ರಾಶಿ ಪ್ರಕಾರ ಹನುಮಂತನ ಪೂಜಿಸಿದರೆ ತುಂಬಾ ಒಳ್ಳೆಯದು, ಯಾವ ರಾಶಿಯವರು ಹೇಗೆ ಪೂಜಿಸಬೇಕು ನೋಡಿ
ಶ್ರೀ ಆಂಜನೇಯ ಶ್ರೀ ರಾಮನ ಭಕ್ತ. ಭಕ್ತಿ ಎಂದರೆ ಏನು, ಹೇಗಿರುತ್ತದೆ ಎಂಬುವುದಕ್ಕೆ ನಿದರ್ಶನ ಹನುಮಂತ. ಹನುಮಂತನನ್ನು ಪೂಜಿಸಿದರೆ ಐಶ್ವರ್ಯ, ಧೈರ್ಯ, ಆತ್ಮಸ್ಥೈರ್ಯ, ಆರೋಗ್ಯ ಎಲ್ಲವೂ ಲಭಿಸುವುದು. ಜೀವನದಲ್ಲಿ ಎದುರಾದ ಕಷ್ಟಗಳನ್ನು ಎದುರಿಸಬಹುದು, ರೋಗಗಳು ದೂರಾಗುವುದು.

ಜ್ಯೋತಿಷ್ಯದಲ್ಲಿ ನಿಮ್ಮ ರಾಶಿಯ ಪ್ರಕಾರ ಹನುಮಂತನ ಪೂಜಿಸಿದರೆ ಇನ್ನೂ ಒಳ್ಳೆಯದು ಎಂದು ಹೇಳಲಾಗುತ್ತದೆ. ಯಾವ ರಾಶಿಯವರು ಹೇಗೆ ಪೂಜಿಸಿದರೆ ಹೆಚ್ಚಿನ ಫಲ ಸಿಗುವುದು ಎಂದು ಹೇಳಲಾಗಿದೆ ನೋಡಿ:

ಮೇಷ ರಾಶಿ
ಮೇಷ ರಾಶಿಯವರು ಅಧಿಪತಿ ಮಂಗಳ. ಮಂಗಳವಾರ ಹಾಗೂ ಶನಿವಾರ ಹನುಮಂತನಿಗೆ ಕುಂಕುಮ ಅರ್ಪಿಸಿ ಪೂಜೆ ಸಲ್ಲಿಸಿ.

ವೃಷಭ ರಾಶಿಯವರು
ವೃಷಭ ರಾಶಿಯವರು ಪ್ರತಿದಿನ ಒಂದು ಬಾರಿಯಾದರೂ ಹನುಮಾನ್ ಚಾಲೀಸ ಹೇಳಿದರೆ ಕಷ್ಟಗಳು, ರೋಗಗಳು ದೂರಾಗುವುದು.

ಮಿಥುನ ರಾಶಿ
ಮಿಥುನ ರಾಶಿಯ ಅಧಿಪತಿ ಬುಧ, ಹನುಮಂತನಿಗೆ ಬುಧನ ರಕ್ಷಣೆ ಇದೆ. ನೀವು ಶನಿವಾರ ಹನುಮಂತನಿಗೆ ಬೂಂದಿ ಪ್ರಸಾದ ಅರ್ಪಿಸಿ.

ಕರ್ಕ ರಾಶಿ
ಕರ್ಕ ರಾಶಿಯವರ ಅಧಿಪತಿ ಚಂದ್ರ. ನೀವು ಕೆಂಪು ವಸ್ತ್ರ ಅರ್ಪಿಸಿ.

ಸಿಂಹ ರಾಶಿ
ಸಿಂಹ ರಾಶಿಯವರ ಅಧಿಪತಿ ಸೂರ್ಯ. ನೀವು ಶ್ರೀ ಆದಿತ್ಯ ಹೃದಯ ಸ್ತೋತ್ರ ಪಠಿಸಿ, ಬಡವರಿಗೆ ಆಹಾರವನ್ನು ನೀಡಿದರೆ ಹನುಮಂತನಿಗೆ ತೃಪ್ತಿಯಾಗುವುದು.

ಕನ್ಯಾ ರಾಶಿ
ಕನ್ಯಾ ರಾಶಿಯವರ ಅಧಿಪತಿ ಬುಧ ನೀವು ಹನುಮಂತನ ಆಶೀರ್ವಾದ ಪಡೆಯಲು ಹನುಮಾನ್ ಚಾಲೀಸವನ್ನು 108 ಬಾರಿ ಪಠಿಸಿ.

ತುಲಾ ರಾಶಿ
ತುಲಾ ರಾಶಿಯ ಅಧಿಪತಿ ಶುಕ್ರ. ರಾಮಚರಿತ ಮಾನಸ ಬಾಲಕಾಂಡ ಓದಿದರೆ ಕಷ್ಟಗಳು, ರೋಗಗಳು ದೂರಾಗುವುದು, ಐಶ್ವರ್ಯ ಹೆಚ್ಚುವುದು, ಜೀವನದಲ್ಲಿ ಯಶಸ್ಸು ಪಡೆಯುವಿರಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ನೀವು ಪ್ರತೀದಿನ ಓಂ ಶ್ರೀ ಹನುಮಂತೇ ನಮಃ ಪಠಿಸಿದರೆ ಎಲ್ಲಾ ಸಮಸ್ಯೆಗಳು ದೂರಾಗುವುದು, ನಿಮ್ಮ ಕಾರ್ಯದಲ್ಲಿ ಯಶಸ್ಸು ಕಾಣುವಿರಿ.

ಧನು ರಾಶಿ
ಧನು ರಾಶಿಯ ಅಧಿಪತಿ ಗುರು. ಯಾವುದೇ ದೇವಾಲಯಕ್ಕೆ ಹೋಗಿ ಶ್ರೀ ಸೀತಾ ಮಂತ್ರ ಪಠಿಸಿ ರಾಮ ಚರಿತೆ ಮಾನಸ ಪುಸ್ತಕವನ್ನು ಹಂಚಿದರೆ ಶ್ರೀ ಹನುಮಂತನ ಆಶೀರ್ವಾದ ನಿಮ್ಮ ಮೇಲಿರುತ್ತದೆ.

ಮಕರ ರಾಶಿ
ಮಕರ ರಾಶಿಯ ಅಧಿಪತಿ ಶನಿ. ಶನಿ ದೇವನ ಗುರು ಹನುಮಂತ. ನೀವು ಶನಿ ದೇವರನಿಗೆ ಸಾಸಿವೆ ಎಣ್ಣೆಯ ದೀಪ ಹಚ್ಚಿ. ಮಂಗಳವಾರ, ಶನಿವಾರ ಹನಮಾನ್ ಚಾಲೀಸ ಪಠಿಸಿ, ಇದರಿಂದ ನಿಮ್ಮ ಎಲ್ಲಾ ಕಷ್ಟಗಳು ದೂರಾಗಿ ಬದುಕಿನಲ್ಲಿ ಸಂತೋಷ ನೆಲೆಸುವುದು.

ಕುಂಭ ರಾಶಿ
ಕುಂಭ ರಾಶಿಯ ಅಧಿಪತಿ ಶನಿ. ನೀವು ಶ್ರೀ ರಾಮ ಮಂತ್ರ ಪಠಿಸಿ ಹಾಗೂ ಹನುಮಾನ್ ಚಾಲೀಸ ಹೇಳಿ. ಇದರಿಂದ ನಿಮ್ಮ ಬದುಕಿನಲ್ಲಿ ನೆಮ್ಮದಿ, ಪ್ರೀತಿ, ಶಾಂತಿ, ಸಂತೋಷ ಇರುತ್ತದೆ.

ಮೀನ ರಾಶಿ
ಮೀನ ರಾಶಿಯ ಅಧಿಪತಿ ಗುರು. ನೀವು ಪ್ರತಿ ದಿನ ಶ್ರೀ ಹನುಮಂತೇ ನಮಃ ಪಠಿಸಿದರೆ ಆರೋಗ್ಯ, ಐಶ್ವರ್ಯ, ಯಶಸ್ಸಯ ಲಭಿಸುವುದು.



Click it and Unblock the Notifications