Latest Updates
-
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ!
ರಾಶಿ ಪ್ರಕಾರ ಹನುಮಂತನ ಪೂಜಿಸಿದರೆ ತುಂಬಾ ಒಳ್ಳೆಯದು, ಯಾವ ರಾಶಿಯವರು ಹೇಗೆ ಪೂಜಿಸಬೇಕು ನೋಡಿ
ಶ್ರೀ ಆಂಜನೇಯ ಶ್ರೀ ರಾಮನ ಭಕ್ತ. ಭಕ್ತಿ ಎಂದರೆ ಏನು, ಹೇಗಿರುತ್ತದೆ ಎಂಬುವುದಕ್ಕೆ ನಿದರ್ಶನ ಹನುಮಂತ. ಹನುಮಂತನನ್ನು ಪೂಜಿಸಿದರೆ ಐಶ್ವರ್ಯ, ಧೈರ್ಯ, ಆತ್ಮಸ್ಥೈರ್ಯ, ಆರೋಗ್ಯ ಎಲ್ಲವೂ ಲಭಿಸುವುದು. ಜೀವನದಲ್ಲಿ ಎದುರಾದ ಕಷ್ಟಗಳನ್ನು ಎದುರಿಸಬಹುದು, ರೋಗಗಳು ದೂರಾಗುವುದು.

ಜ್ಯೋತಿಷ್ಯದಲ್ಲಿ ನಿಮ್ಮ ರಾಶಿಯ ಪ್ರಕಾರ ಹನುಮಂತನ ಪೂಜಿಸಿದರೆ ಇನ್ನೂ ಒಳ್ಳೆಯದು ಎಂದು ಹೇಳಲಾಗುತ್ತದೆ. ಯಾವ ರಾಶಿಯವರು ಹೇಗೆ ಪೂಜಿಸಿದರೆ ಹೆಚ್ಚಿನ ಫಲ ಸಿಗುವುದು ಎಂದು ಹೇಳಲಾಗಿದೆ ನೋಡಿ:

ಮೇಷ ರಾಶಿ
ಮೇಷ ರಾಶಿಯವರು ಅಧಿಪತಿ ಮಂಗಳ. ಮಂಗಳವಾರ ಹಾಗೂ ಶನಿವಾರ ಹನುಮಂತನಿಗೆ ಕುಂಕುಮ ಅರ್ಪಿಸಿ ಪೂಜೆ ಸಲ್ಲಿಸಿ.

ವೃಷಭ ರಾಶಿಯವರು
ವೃಷಭ ರಾಶಿಯವರು ಪ್ರತಿದಿನ ಒಂದು ಬಾರಿಯಾದರೂ ಹನುಮಾನ್ ಚಾಲೀಸ ಹೇಳಿದರೆ ಕಷ್ಟಗಳು, ರೋಗಗಳು ದೂರಾಗುವುದು.

ಮಿಥುನ ರಾಶಿ
ಮಿಥುನ ರಾಶಿಯ ಅಧಿಪತಿ ಬುಧ, ಹನುಮಂತನಿಗೆ ಬುಧನ ರಕ್ಷಣೆ ಇದೆ. ನೀವು ಶನಿವಾರ ಹನುಮಂತನಿಗೆ ಬೂಂದಿ ಪ್ರಸಾದ ಅರ್ಪಿಸಿ.

ಕರ್ಕ ರಾಶಿ
ಕರ್ಕ ರಾಶಿಯವರ ಅಧಿಪತಿ ಚಂದ್ರ. ನೀವು ಕೆಂಪು ವಸ್ತ್ರ ಅರ್ಪಿಸಿ.

ಸಿಂಹ ರಾಶಿ
ಸಿಂಹ ರಾಶಿಯವರ ಅಧಿಪತಿ ಸೂರ್ಯ. ನೀವು ಶ್ರೀ ಆದಿತ್ಯ ಹೃದಯ ಸ್ತೋತ್ರ ಪಠಿಸಿ, ಬಡವರಿಗೆ ಆಹಾರವನ್ನು ನೀಡಿದರೆ ಹನುಮಂತನಿಗೆ ತೃಪ್ತಿಯಾಗುವುದು.

ಕನ್ಯಾ ರಾಶಿ
ಕನ್ಯಾ ರಾಶಿಯವರ ಅಧಿಪತಿ ಬುಧ ನೀವು ಹನುಮಂತನ ಆಶೀರ್ವಾದ ಪಡೆಯಲು ಹನುಮಾನ್ ಚಾಲೀಸವನ್ನು 108 ಬಾರಿ ಪಠಿಸಿ.

ತುಲಾ ರಾಶಿ
ತುಲಾ ರಾಶಿಯ ಅಧಿಪತಿ ಶುಕ್ರ. ರಾಮಚರಿತ ಮಾನಸ ಬಾಲಕಾಂಡ ಓದಿದರೆ ಕಷ್ಟಗಳು, ರೋಗಗಳು ದೂರಾಗುವುದು, ಐಶ್ವರ್ಯ ಹೆಚ್ಚುವುದು, ಜೀವನದಲ್ಲಿ ಯಶಸ್ಸು ಪಡೆಯುವಿರಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ನೀವು ಪ್ರತೀದಿನ ಓಂ ಶ್ರೀ ಹನುಮಂತೇ ನಮಃ ಪಠಿಸಿದರೆ ಎಲ್ಲಾ ಸಮಸ್ಯೆಗಳು ದೂರಾಗುವುದು, ನಿಮ್ಮ ಕಾರ್ಯದಲ್ಲಿ ಯಶಸ್ಸು ಕಾಣುವಿರಿ.

ಧನು ರಾಶಿ
ಧನು ರಾಶಿಯ ಅಧಿಪತಿ ಗುರು. ಯಾವುದೇ ದೇವಾಲಯಕ್ಕೆ ಹೋಗಿ ಶ್ರೀ ಸೀತಾ ಮಂತ್ರ ಪಠಿಸಿ ರಾಮ ಚರಿತೆ ಮಾನಸ ಪುಸ್ತಕವನ್ನು ಹಂಚಿದರೆ ಶ್ರೀ ಹನುಮಂತನ ಆಶೀರ್ವಾದ ನಿಮ್ಮ ಮೇಲಿರುತ್ತದೆ.

ಮಕರ ರಾಶಿ
ಮಕರ ರಾಶಿಯ ಅಧಿಪತಿ ಶನಿ. ಶನಿ ದೇವನ ಗುರು ಹನುಮಂತ. ನೀವು ಶನಿ ದೇವರನಿಗೆ ಸಾಸಿವೆ ಎಣ್ಣೆಯ ದೀಪ ಹಚ್ಚಿ. ಮಂಗಳವಾರ, ಶನಿವಾರ ಹನಮಾನ್ ಚಾಲೀಸ ಪಠಿಸಿ, ಇದರಿಂದ ನಿಮ್ಮ ಎಲ್ಲಾ ಕಷ್ಟಗಳು ದೂರಾಗಿ ಬದುಕಿನಲ್ಲಿ ಸಂತೋಷ ನೆಲೆಸುವುದು.

ಕುಂಭ ರಾಶಿ
ಕುಂಭ ರಾಶಿಯ ಅಧಿಪತಿ ಶನಿ. ನೀವು ಶ್ರೀ ರಾಮ ಮಂತ್ರ ಪಠಿಸಿ ಹಾಗೂ ಹನುಮಾನ್ ಚಾಲೀಸ ಹೇಳಿ. ಇದರಿಂದ ನಿಮ್ಮ ಬದುಕಿನಲ್ಲಿ ನೆಮ್ಮದಿ, ಪ್ರೀತಿ, ಶಾಂತಿ, ಸಂತೋಷ ಇರುತ್ತದೆ.

ಮೀನ ರಾಶಿ
ಮೀನ ರಾಶಿಯ ಅಧಿಪತಿ ಗುರು. ನೀವು ಪ್ರತಿ ದಿನ ಶ್ರೀ ಹನುಮಂತೇ ನಮಃ ಪಠಿಸಿದರೆ ಆರೋಗ್ಯ, ಐಶ್ವರ್ಯ, ಯಶಸ್ಸಯ ಲಭಿಸುವುದು.



Click it and Unblock the Notifications