Latest Updates
-
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ!
ಶುಕ್ರವಾರ ಲಕ್ಷ್ಮಿಯನ್ನು ಹೀಗೆ ಪೂಜಿಸಿದರೆ ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠವಾದ ದಿನ, ಈ ದಿನ ಲಕ್ಷ್ಮಿಯನ್ನು ಆರಾಧಿಸುವುದರಿಂದ ಮನೆಯ ಸಂಪತ್ತು ಹೆಚ್ಚುವುದು, ನಿಮಗೆ ಆರ್ಥಿಕ ತೊಂದರೆಗಳಿದ್ದರೆ ಅವುಗಳು ದೂರಾಗುವುದು. ನೀವು ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಶುಕ್ರವಾರ ಈ ರೀತಿ ಲಕ್ಷ್ಮಿ ಪೂಜೆ ಮಾಡಿದರೆ ನಿಮಗೆ ಹೆಚ್ಚಿನ ಫಲ ಸಿಗುವುದು.

* ಶುಕ್ರವಾರ ಉಪವಾಸವಿದ್ದು ಲಕ್ಷ್ಮಿಯನ್ನು ಆರಾಧಿಸಿ. ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ ಪೂಜೆ ಕೋಣೆ ಶುದ್ಧ ಮಾಡಿ, ಲಜ್ಷ್ಮಿಗೆ ಕಳಸ ಇಟ್ಟು ಪೂಜಿಸಿ. ಈ ದಿನ ನೀವು ಬಿಳಿ, ಕೆಂಪು ಅಥವಾ ಕೆನೆ ಬಣ್ಣದ ವಸ್ತ್ರ ಧರಿಸಿ. ಲಕ್ಷ್ಮಿ ಪೂಜಿಸುವಾಗ ಶ್ರೀಸೂಕ್ತವನ್ನು ಪಠಿಸಿ.
* ಶುಕ್ರವಾರ ಲಕ್ಷ್ಮಿ ಪೂಜೆಗೆ ಕಮಲದ ಹೂವು, ಶಂಖ, ಕೆಂಪು ಅಥವಾ ಗುಲಾಬಿ ಬಟ್ಟೆ ಅರ್ಪಿಸಿ, ಪೂಜಿಸಿ.
* ಶುಕ್ರವಾರ ಮನೆಯನ್ನು ಸ್ವಚ್ಛವಾಗಿಡಿ, ಸ್ವಚ್ಛತೆ ಇರುವ ಸ್ಥಳದಲ್ಲಿ ಲಕ್ಷ್ಮಿ ದೇವಿ ನೆಲೆಸುವುದು. ಮನೆಯಲ್ಲಿ ಬಲೆ ಕಟ್ಟಲು ಬಿಡಬೇಡಿ.
* ನಿಮ್ಮ ಮನೆಯ ಈಶಾನ್ಯ ಮೂಲೆಯಲ್ಲಿ ಮಾತೆ ಲಕ್ಷ್ಮಿಯ ಫೋಟೋ ಇಟ್ಟು ಪೂಜಿಸಿ. ಪೂಜಾ ಸ್ಥಳದ ಬಳಿ ಅಡುಗೆ ಕೋಣೆ ಅಥವಾ ಶೌಚಾಲಯ ಇರಬಾರದು.
* ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು, ಶುಕ್ರವಾರದಂದು, ತಾಯಿಗೆ ಬಿಳಿ ನೈವೇದ್ಯ ಅರ್ಪಿಸಬೇಕು. ಅಕ್ಕಿ ಪಾಯಸ ಮಾಡಿ ಅರ್ಪಿಸಿ.
* ಶುಕ್ರವಾರ 11/4ಕೆಜಿ ಅಕ್ಕಿಯನ್ನು ಕೆಂಪು ಬಣ್ಣದ ಬಟ್ಟೆಯಲ್ಲಿ ಇಟ್ಟು ಗಂಟು ಹಾಕಿ 'ಓಂ ಶ್ರೀ ಶ್ರೀ ನಮಃ' ಎಂಬ ಮಂತ್ರವನ್ನು ಐದು ಬಾರಿ ಜಪಿಸಿ ನಂತರ ಈ ಮೂಟೆಯನ್ನು ಮನೆಯ ಬೀರುವಿನಲ್ಲಿಡಿ. ಹೀಗೆ ಮಾಡುವುದರಿಂದ ಧನ ಲಾಭವಾಗುತ್ತದೆ.
* ಶುಕ್ರವಾರ ಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ಅವಳಿಗೆ ಕೆಂಪು ಬಣ್ಣದ ಬಟ್ಟೆಗಳನ್ನು ಅರ್ಪಿಸುವುದು ಮಂಗಳಕರ.
* ಶುಕ್ರವಾರ ಶ್ರೀ ವಿಷ್ಣು-ಲಕ್ಷ್ಮಿಯನ್ನು ಪೂಜಿಸಿ ಮಂತ್ರಗಳನ್ನು ಪಠಿಸಿ.



Click it and Unblock the Notifications
