Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಅತ್ಯಾಚಾರಿಗಳ ಅಂತ್ಯಕ್ಕೆ ಟ್ವಿಟ್ಟಿಗರ ಸಂಭ್ರಮ
ಹೆಣ್ಣನ್ನು ಬರೀ ಕಾಮದ ದೃಷ್ಟಿಯಿಂದ ನೋಡುವ ಕ್ರೂರಿ ಮೃಗಗಳಿಗೆ ನಡುಕ ಶುರುವಾಗಿದೆ. ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದ ಪಾಪಿಗಳು ಇನ್ನಿಲ್ಲ ಎನ್ನುವುದೇ ಖುಷಿಪಡುವಂಥ ವಿಷಯವಾಗಿದೆ. ಇದೇ ಮೊದಲ ಬಾರಿಗೆ ಅತ್ಯಾಚಾರಿಗಳಿಗೆ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಈ ಘಟನೆ ಬಗ್ಗೆ ಸಾಮಾಜಿಕ ತಾಣದಲ್ಲಿ ಜನರು ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ, ಸುಟ್ಟು ಕೊಂದು ಪೈಶಾಚ್ಯ ಕೃತ್ಯ ಮುಗಿಸಿದ ಜಾಗದಲ್ಲಿಯೇ ಹೈದರಾಬಾದ್ ಪೊಲೀಸರ ಎನ್ಕೌಂಟರ್ನಲ್ಲಿ ಪಾಪಿಗಳು ಪರಲೋಕ ಸೇರಿದ್ದಾರೆ. ನವೆಂಬರ್ 27ಕ್ಕೆ ಪಶುವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಂದವರನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಪೊಲೀಸರು. ಆದರೆ ಅರೆಸ್ಟ್ ಮಾಡಿ ಜೈಲಿನಲ್ಲಿ ಇಡುವುದರಿಂದ ಇಂಥ ಪ್ರಕರಣಗಳು ನಿಲ್ಲುವುದಿಲ್ಲ, ಈ ಆರೋಪಿಗಳನ್ನು ಆದಷ್ಟು ಬೇಗ ನೇಣಿನಲ್ಲಿ ಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ನಡೆದ 10 ದಿನಗಳಲ್ಲಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಸಿಕ್ಕಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಅಪರಾಧಿ ದಾಖಲೆಯ ಕಚೇರಿNCRB) ಪ್ರಕಾರ ಪ್ರತಿದಿನ ಸುಮಾರು ನೂರಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. 2017ರಲ್ಲಿ 32, 000 ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್ನು ಎಷ್ಟೋ ಸಂತ್ರಸ್ತೆಯರು ಮರ್ಯಾದೆಗೆ ಅಂಜಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದರೂ ಕೆಲವು ವರ್ಷಗಳು ಕಳೆದ ಮೇಲೆ ಜೈಲಿನಿಂದ ಹೊರಬರಬಹುದು ಎಂಬ ಚಿಂತನೆಯೇ ಅತ್ಯಾಚಾರ ಹೆಚ್ಚಲು ಕಾರಣವಾಗಿದೆ.
ಆದರೆ ಹೈದರಾಬಾದ್ನ ಎನ್ಕೌಂಟರ್ ಪ್ರಕರಣ ಅತ್ಯಾಚಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದು, ಇದರ ಕುರಿತು ಟ್ವಿಟರ್ನಲ್ಲಿ ಟ್ವೀಟ್ಗಳ ಮಹಾಪೂರವೇ ಹರಿದು ಬರುತ್ತಿದೆ.



Click it and Unblock the Notifications