Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಅತ್ಯಾಚಾರಿಗಳ ಅಂತ್ಯಕ್ಕೆ ಟ್ವಿಟ್ಟಿಗರ ಸಂಭ್ರಮ
ಹೆಣ್ಣನ್ನು ಬರೀ ಕಾಮದ ದೃಷ್ಟಿಯಿಂದ ನೋಡುವ ಕ್ರೂರಿ ಮೃಗಗಳಿಗೆ ನಡುಕ ಶುರುವಾಗಿದೆ. ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದ ಪಾಪಿಗಳು ಇನ್ನಿಲ್ಲ ಎನ್ನುವುದೇ ಖುಷಿಪಡುವಂಥ ವಿಷಯವಾಗಿದೆ. ಇದೇ ಮೊದಲ ಬಾರಿಗೆ ಅತ್ಯಾಚಾರಿಗಳಿಗೆ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಈ ಘಟನೆ ಬಗ್ಗೆ ಸಾಮಾಜಿಕ ತಾಣದಲ್ಲಿ ಜನರು ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ, ಸುಟ್ಟು ಕೊಂದು ಪೈಶಾಚ್ಯ ಕೃತ್ಯ ಮುಗಿಸಿದ ಜಾಗದಲ್ಲಿಯೇ ಹೈದರಾಬಾದ್ ಪೊಲೀಸರ ಎನ್ಕೌಂಟರ್ನಲ್ಲಿ ಪಾಪಿಗಳು ಪರಲೋಕ ಸೇರಿದ್ದಾರೆ. ನವೆಂಬರ್ 27ಕ್ಕೆ ಪಶುವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಂದವರನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಪೊಲೀಸರು. ಆದರೆ ಅರೆಸ್ಟ್ ಮಾಡಿ ಜೈಲಿನಲ್ಲಿ ಇಡುವುದರಿಂದ ಇಂಥ ಪ್ರಕರಣಗಳು ನಿಲ್ಲುವುದಿಲ್ಲ, ಈ ಆರೋಪಿಗಳನ್ನು ಆದಷ್ಟು ಬೇಗ ನೇಣಿನಲ್ಲಿ ಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ನಡೆದ 10 ದಿನಗಳಲ್ಲಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಸಿಕ್ಕಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಅಪರಾಧಿ ದಾಖಲೆಯ ಕಚೇರಿNCRB) ಪ್ರಕಾರ ಪ್ರತಿದಿನ ಸುಮಾರು ನೂರಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. 2017ರಲ್ಲಿ 32, 000 ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್ನು ಎಷ್ಟೋ ಸಂತ್ರಸ್ತೆಯರು ಮರ್ಯಾದೆಗೆ ಅಂಜಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದರೂ ಕೆಲವು ವರ್ಷಗಳು ಕಳೆದ ಮೇಲೆ ಜೈಲಿನಿಂದ ಹೊರಬರಬಹುದು ಎಂಬ ಚಿಂತನೆಯೇ ಅತ್ಯಾಚಾರ ಹೆಚ್ಚಲು ಕಾರಣವಾಗಿದೆ.
ಆದರೆ ಹೈದರಾಬಾದ್ನ ಎನ್ಕೌಂಟರ್ ಪ್ರಕರಣ ಅತ್ಯಾಚಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದು, ಇದರ ಕುರಿತು ಟ್ವಿಟರ್ನಲ್ಲಿ ಟ್ವೀಟ್ಗಳ ಮಹಾಪೂರವೇ ಹರಿದು ಬರುತ್ತಿದೆ.



Click it and Unblock the Notifications
