Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಅತ್ಯಾಚಾರಿಗಳ ಅಂತ್ಯಕ್ಕೆ ಟ್ವಿಟ್ಟಿಗರ ಸಂಭ್ರಮ
ಹೆಣ್ಣನ್ನು ಬರೀ ಕಾಮದ ದೃಷ್ಟಿಯಿಂದ ನೋಡುವ ಕ್ರೂರಿ ಮೃಗಗಳಿಗೆ ನಡುಕ ಶುರುವಾಗಿದೆ. ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದ ಪಾಪಿಗಳು ಇನ್ನಿಲ್ಲ ಎನ್ನುವುದೇ ಖುಷಿಪಡುವಂಥ ವಿಷಯವಾಗಿದೆ. ಇದೇ ಮೊದಲ ಬಾರಿಗೆ ಅತ್ಯಾಚಾರಿಗಳಿಗೆ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಈ ಘಟನೆ ಬಗ್ಗೆ ಸಾಮಾಜಿಕ ತಾಣದಲ್ಲಿ ಜನರು ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ, ಸುಟ್ಟು ಕೊಂದು ಪೈಶಾಚ್ಯ ಕೃತ್ಯ ಮುಗಿಸಿದ ಜಾಗದಲ್ಲಿಯೇ ಹೈದರಾಬಾದ್ ಪೊಲೀಸರ ಎನ್ಕೌಂಟರ್ನಲ್ಲಿ ಪಾಪಿಗಳು ಪರಲೋಕ ಸೇರಿದ್ದಾರೆ. ನವೆಂಬರ್ 27ಕ್ಕೆ ಪಶುವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಂದವರನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಪೊಲೀಸರು. ಆದರೆ ಅರೆಸ್ಟ್ ಮಾಡಿ ಜೈಲಿನಲ್ಲಿ ಇಡುವುದರಿಂದ ಇಂಥ ಪ್ರಕರಣಗಳು ನಿಲ್ಲುವುದಿಲ್ಲ, ಈ ಆರೋಪಿಗಳನ್ನು ಆದಷ್ಟು ಬೇಗ ನೇಣಿನಲ್ಲಿ ಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ನಡೆದ 10 ದಿನಗಳಲ್ಲಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಸಿಕ್ಕಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಅಪರಾಧಿ ದಾಖಲೆಯ ಕಚೇರಿNCRB) ಪ್ರಕಾರ ಪ್ರತಿದಿನ ಸುಮಾರು ನೂರಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. 2017ರಲ್ಲಿ 32, 000 ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್ನು ಎಷ್ಟೋ ಸಂತ್ರಸ್ತೆಯರು ಮರ್ಯಾದೆಗೆ ಅಂಜಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದರೂ ಕೆಲವು ವರ್ಷಗಳು ಕಳೆದ ಮೇಲೆ ಜೈಲಿನಿಂದ ಹೊರಬರಬಹುದು ಎಂಬ ಚಿಂತನೆಯೇ ಅತ್ಯಾಚಾರ ಹೆಚ್ಚಲು ಕಾರಣವಾಗಿದೆ.
ಆದರೆ ಹೈದರಾಬಾದ್ನ ಎನ್ಕೌಂಟರ್ ಪ್ರಕರಣ ಅತ್ಯಾಚಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದು, ಇದರ ಕುರಿತು ಟ್ವಿಟರ್ನಲ್ಲಿ ಟ್ವೀಟ್ಗಳ ಮಹಾಪೂರವೇ ಹರಿದು ಬರುತ್ತಿದೆ.



Click it and Unblock the Notifications