Latest Updates
-
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ!
ಅತ್ಯಾಚಾರಿಗಳ ಅಂತ್ಯಕ್ಕೆ ಟ್ವಿಟ್ಟಿಗರ ಸಂಭ್ರಮ
ಹೆಣ್ಣನ್ನು ಬರೀ ಕಾಮದ ದೃಷ್ಟಿಯಿಂದ ನೋಡುವ ಕ್ರೂರಿ ಮೃಗಗಳಿಗೆ ನಡುಕ ಶುರುವಾಗಿದೆ. ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದ ಪಾಪಿಗಳು ಇನ್ನಿಲ್ಲ ಎನ್ನುವುದೇ ಖುಷಿಪಡುವಂಥ ವಿಷಯವಾಗಿದೆ. ಇದೇ ಮೊದಲ ಬಾರಿಗೆ ಅತ್ಯಾಚಾರಿಗಳಿಗೆ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಈ ಘಟನೆ ಬಗ್ಗೆ ಸಾಮಾಜಿಕ ತಾಣದಲ್ಲಿ ಜನರು ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ, ಸುಟ್ಟು ಕೊಂದು ಪೈಶಾಚ್ಯ ಕೃತ್ಯ ಮುಗಿಸಿದ ಜಾಗದಲ್ಲಿಯೇ ಹೈದರಾಬಾದ್ ಪೊಲೀಸರ ಎನ್ಕೌಂಟರ್ನಲ್ಲಿ ಪಾಪಿಗಳು ಪರಲೋಕ ಸೇರಿದ್ದಾರೆ. ನವೆಂಬರ್ 27ಕ್ಕೆ ಪಶುವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಂದವರನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಪೊಲೀಸರು. ಆದರೆ ಅರೆಸ್ಟ್ ಮಾಡಿ ಜೈಲಿನಲ್ಲಿ ಇಡುವುದರಿಂದ ಇಂಥ ಪ್ರಕರಣಗಳು ನಿಲ್ಲುವುದಿಲ್ಲ, ಈ ಆರೋಪಿಗಳನ್ನು ಆದಷ್ಟು ಬೇಗ ನೇಣಿನಲ್ಲಿ ಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ನಡೆದ 10 ದಿನಗಳಲ್ಲಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಸಿಕ್ಕಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಅಪರಾಧಿ ದಾಖಲೆಯ ಕಚೇರಿNCRB) ಪ್ರಕಾರ ಪ್ರತಿದಿನ ಸುಮಾರು ನೂರಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. 2017ರಲ್ಲಿ 32, 000 ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್ನು ಎಷ್ಟೋ ಸಂತ್ರಸ್ತೆಯರು ಮರ್ಯಾದೆಗೆ ಅಂಜಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದರೂ ಕೆಲವು ವರ್ಷಗಳು ಕಳೆದ ಮೇಲೆ ಜೈಲಿನಿಂದ ಹೊರಬರಬಹುದು ಎಂಬ ಚಿಂತನೆಯೇ ಅತ್ಯಾಚಾರ ಹೆಚ್ಚಲು ಕಾರಣವಾಗಿದೆ.
ಆದರೆ ಹೈದರಾಬಾದ್ನ ಎನ್ಕೌಂಟರ್ ಪ್ರಕರಣ ಅತ್ಯಾಚಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದು, ಇದರ ಕುರಿತು ಟ್ವಿಟರ್ನಲ್ಲಿ ಟ್ವೀಟ್ಗಳ ಮಹಾಪೂರವೇ ಹರಿದು ಬರುತ್ತಿದೆ.



Click it and Unblock the Notifications