Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಜೇಷ್ಠ ಅಮಾವಾಸ್ಯೆ 2021: ಮಹತ್ವ, ಪೂಜಾ ವಿಧಾನ ಮತ್ತು ಈ ದಿನ ಮಾಡಬಾರದ ಕೆಲಸಗಳು
ಹಿಂದೂ ಪಂಚಾಂಗದ ಪ್ರಕಾರ ಜೇಷ್ಠ ಮಾಸದಲ್ಲಿ ಬರುವ ಅಮಾವಾಸ್ಯೆಯನ್ನು ಜೇಷ್ಠ ಅಮಾವಾಸ್ಯೆ ಎನ್ನುತ್ತಾರೆ. ಜೇಷ್ಠ ಅಮಾವಾಸ್ಯೆಯಂದು ಸೂರ್ಯ ಪುತ್ರ ಶನಿ ಜನಿಸಿದ ದಿನ ಆದ್ದರಿಂದ ಇಂದು ಶನಿಜಯಂತಿಯನ್ನು ಆಚರಿಸುತ್ತೇವೆ.
ಆದರೆ ಇತರೆ ಅಮಾವಾಸ್ಯೆಗಳಿಗಿಂತ ಇದು ವಿಶೇಷ ಕಾರಣ, ಈ ಮಾಸದಲ್ಲಿ ಬರುವ ಅಮಾವಾಸ್ಯೆಯು ನಕಾರಾತ್ಮಕ ಶಕ್ತಿಗಳು ಹಾಗೂ ಅಗೋಚರ ಚೇತನಗಳ ಶಕ್ತಿ ಪ್ರಬಲವಾಗಿರುತ್ತದೆ ಎನ್ನಲಾಗುತ್ತದೆ. ಆದ್ದರಿಂದ ಇಂದು ಹಿಂದೂಗಳು ತಮ್ಮ ಹಿರಿಯರಿಗೆ ಪೂಜೆ ಸಲ್ಲಿಸುವ ವಾಡಿಕೆ ಇದೆ.

ಜೇಷ್ಠ ಅಮಾವಾಸ್ಯೆಯ ಸಮಯ
2021ನೇ ಸಾಲಿನಲ್ಲಿ ಜೂನ್ 10ರಂದು ಜೇಷ್ಠ ಅಮಾವಾಸ್ಯೆಯನ್ನು ಆಚರಿಸಲಾಗುತ್ತಿದೆ. ಈ ವರ್ಷದ ಮತ್ತೊಂದು ವಿಶೇಷ ಎಂದರೆ ಇದೇ ದಿನ, 148 ವರ್ಷಗಳ ಬಳಿಕ ಒಂದೇ ದಿನ ವರ್ಷದ ಮೊದಲ ಸೂರ್ಯಗ್ರಹಣ ಹಾಗೂ ಶನಿಜಯಂತಿ ಘಟಿಸುತ್ತಿದೆ. ಜತೆಗೆ ಅಂದು ವಟಸಾವಿತ್ರಿ ವ್ರತ ಮತ್ತು ರೋಹಿನಿ ವ್ರತವನ್ನು ಆಚರಿಸಲಾಗುತ್ತಿದೆ.
ಜೂನ್ 10ರಂದು ಜೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯೆಯು ಜೂನ್ 09 ರಂದು ಮಧ್ಯಾಹ್ನ 01:57ಕ್ಕೆ ಪ್ರಾರಂಭವಾಗಲಿದ್ದು, ಜೂನ್ 10ರಂದು ಸಂಜೆ 04:22ಕ್ಕೆ ಕೊನೆಗೊಳ್ಳಲಿದೆ.

ಜೇಷ್ಠ ಅಮಾವಾಸ್ಯೆಯ ಶುಭವೋ-ಅಶುಭವೋ?
ಹಿಂದೂ ಸಂಪ್ರದಾಯದಲ್ಲಿ ಕೆಲವರ ಪ್ರಕಾರ ಜೇಷ್ಠ ಅಮಾವಾಸ್ಯೆಯನ್ನು ಶುಭವಲ್ಲದ ದಿನ ಎಂದೂ ಹೇಳಲಾಗುತ್ತದೆ. ಈ ದಿನ ದುಷ್ಟ, ಹಾನಿಕಾರಕ, ನಕಾರಾತ್ಮಕ ಶಕ್ತಿಗಳು, ದುಷ್ಟ ಕಣ್ಣುಗಳು ಮತ್ತು ಮಾಟಮಂತ್ರಗಳನ್ನು ಮುಕ್ತಗೊಳಿಸಲಾಗಿರುವುದರಿಂದ ಈ ಅಮಾವಾಸ್ಯೆಯ ದಿನವನ್ನು ದುರದೃಷ್ಟಕರ ದಿನವೆಂದು ಪರಿಗಣಿಸಲಾಗಿದೆ. ಜೇಷ್ಠ ಅಮಾವಾಸ್ಯೆಯ ದಿನದಂದು ಪ್ರಾರಂಭವಾದ ಯಾವುದೇ ಕಾರ್ಯ ಅಥವಾ ಹೊಸ ಕೆಲಸವು ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆಯೂ ಇದೆ. ಆದ್ದರಿಂದ ಹಿಂದೂಗಳು ಈ ದಿನ ಯಾವುದೇ ಶುಭ ಕಾರ್ಯವನ್ನು ಮಾಡುವುದನ್ನು ತಪ್ಪಿಸುತ್ತಾರೆ.
ಇನ್ನು ಕೆಲವರು ಈ ದಿನ ಶುಭವಾದ ದಿನ. ಇಂದು ಶನಿಜನಿಸಿದ ದಿನ ಎಂದು ಶನಿ ಆಮಾವಾಸ್ಯೆ ಎಂದು ಪೂಜಿಸುತ್ತಾರೆ. ಕಾಳ ಸರ್ಪ ದೋಷ ಪೂಜೆ ಮುಂತಾದ ಕಾರ್ಯಗಳಿಗೆ ಜೇಷ್ಠ ಅಮಾವಾಸ್ಯೆಯ ದಿನವು ಶುಭವಾಗಿದೆ. ಈ ದಿನದಂದು ಹಿರಿಯರಿಗೆ ಶ್ರಾದ್ಧಾ ಮಾಡಿದರೆ ಶ್ರೇಷ್ಠ ಎನ್ನಲಾಗುತ್ತದೆ.

ಜೇಷ್ಠ ಅಮಾವಾಸ್ಯೆ ಪೂಜಾ ವಿಧಾನ
ಅಮಾವಾಸ್ಯೆಯ ದಿನ ಬೆಳಿಗ್ಗೆ ಸ್ನಾನ ಮಾಡಿ, ಮೊದಲು ಸೂರ್ಯ ದೇವರಿಗೆ ಪೂಜೆಯನ್ನು ಅರ್ಪಿಸಿದ ನಂತರ, ಪೂರ್ವಜರನ್ನು ಸ್ಮರಿಸಿ ಪೂಜಿಸಬೇಕು. ತಾಮ್ರದ ಪಾತ್ರೆಯಲ್ಲಿ ನೀರು, ಶ್ರೀಗಂಧ ಮತ್ತು ಕೆಂಪು ಬಣ್ಣದ ಹೂವುಗಳನ್ನು ಸುರಿಯುವುದರ ಮೂಲಕ ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಬೇಕು. ಪೂರ್ವಜರ ಆತ್ಮಗಳ ಶಾಂತಿಗಾಗಿ, ಉಪವಾಸ ಮಾಡಬೇಕು ಮತ್ತು ಬಡವರಿಗೆ ದಾನ ಮಾಡುವ ವಾಡಿಕೆ ಇದೆ.

ಜೇಷ್ಠ ಅಮಾವಾಸ್ಯೆಯಂದು ಏನನ್ನು ಮಾಡಬೇಕು?
ಸೂರ್ಯೋದಯಕ್ಕೂ ಮುನ್ನ ಸ್ನಾನ ನೀರಿಗೆ ಕಪ್ಪು ಎಳ್ಳು ಹಾಕಿ ಶುದ್ಧ ಸ್ನಾನ ಮಾಡಿ.
ಸೂರ್ಯ ಮತ್ತು ಅರಳೀಮರಕ್ಕೆ ಮರಕ್ಕೆ ನೀರನ್ನು ಅರ್ಪಿಸಬೇಕು.
ಬ್ರಾಹ್ಮಣರು ಅಥವಾ ಬಡವರಿಗೆ ಆಹಾರವನ್ನು ನೀಡಿ.

ಜೇಷ್ಠ ಅಮಾವಾಸ್ಯೆಯಂದು ಏನನ್ನು ಮಾಡಬಾರದು?
ಜೇಷ್ಠ ಅಮಾವಾಸ್ಯೆಯಂದು ಸೂರ್ಯೋದಯದ ನಂತರ ಮಲಗಬಾರದು.
ಈ ದಿನ ಎಣ್ಣೆ ಮಸಾಜ್ ಮಾಡಬಾರದು.
ಗಡ್ಡ, ಉಗುರುಗಳು ಮತ್ತು ಕೂದಲನ್ನು ಸಹ ಕತ್ತರಿಸಬಾರದು.
ಯಾವುದೇ ರೀತಿಯ ಮಾದಕ ದ್ರವ್ಯವನ್ನು ತೆಗೆದುಕೊಳ್ಳಬಾರದು.
ಶಾಖಾಹಾರಿ ಆಹಾರಗಳನ್ನು ತಿನ್ನಬಾರದು.
ಸುಳ್ಳು ಹೇಳಬಾರದು.
ಗಂಡ ಹೆಂಡತಿ ಪರಸ್ಪರ ದೂರವಿರಬೇಕು.
ಮಧ್ಯಾಹ್ನ ಮತ್ತು ಸೂರ್ಯಾಸ್ತದ ಸಮಯದಲ್ಲಿ ಮಲಗಬಾರದು.



Click it and Unblock the Notifications