Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.

ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.

ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.



Click it and Unblock the Notifications











