Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.

ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.

ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.



Click it and Unblock the Notifications