Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.

ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.

ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.



Click it and Unblock the Notifications