Just In
Don't Miss
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.
ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ
ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ
ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.
ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.