Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.

ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ

ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.

ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.



Click it and Unblock the Notifications











