Just In
- 54 min ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 2 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 3 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- 4 hrs ago ಶನಿಯ ನಕ್ಷತ್ರ ಬದಲಾವಣೆ: ಅಕ್ಟೋಬವರೆಗೆ ಈ 3 ರಾಶಿಯವರು ಇದರ ಉತ್ತಮ ಫಲ ಪಡೆಯುವಿರಿ
Don't Miss
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಯೇಷ್ಠ ಪೂರ್ಣಿಮಾ ವ್ರತ 2021: ಪೂಜಾ ವಿಧಿ ಹಾಗೂ ಈ ದಿನದ ವಿಶೇಷವೇನು?
ಹಿಂದೂ ಧರ್ಮದಲ್ಲಿ ಜ್ಯೇಷ್ಠ ಮಾಸವೇ ತುಂಬಾ ವಿಶೇಷವಾದದ್ದು. ಈ ತಿಂಗಳಿನಲ್ಲಿ ಗಂಗಾ ದಸರಾ, ನಿರ್ಜಲ ಏಕಾದಶಿ ಹೀಗೆ ಅನೇಕ ವಿಶೇಷ ದಿನಗಳಿವೆ, ಅದರಲ್ಲೊಂದು ಜ್ಯೇಷ್ಠ ಪೂರ್ಣಿಮಾ. ಈ ವರ್ಷ ಜ್ಯೇಷ್ಠ ಪೂರ್ಣಿಮಾ ಜೂನ್ 24ರಂದು ಬಂದಿದೆ. ಜ್ಯೇಷ್ಠ ಪೂರ್ಣಿಮಾ ದಿನ ವಿಷ್ಣು ಹಾಗೂ ಶಿವನನ್ನು ಪೂಜಿಸಲಾಗುವುದು. ಈ ದಿನ ಪವಿತ್ರ ನದಿಯಲ್ಲಿ ಅಥವಾ ಸ್ನಾನದ ನೀರಿನಲ್ಲಿ ಗಂಗಾಜಲ ಹಾಕಿ ಸ್ನಾನ ಮಾಡಿ ಉಪವಾಸವಿದ್ದು ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನದ ವಿಶೇಷತೆ, ಶುಭ ಮುಹೂರ್ತ ಹಾಗೂ ಪೂಜಾ ವಿಧಿ ಬಗ್ಗೆ ಮಾಹಿತಿ ಈ ಲೇಖನದಲ್ಲಿ ನೋಡಿ.
ಜ್ಯೇಷ್ಠ ಪೂರ್ಣಿಮಾ ವ್ರತ 2021: ದಿನಾಂಕ ಮತ್ತು ಸಮಯ
ಪೂರ್ಣಿಮಾ ಪ್ರಾರಂಭ: ಜೂನ್ 23, ಮುಂಜಾನೆ 02:02ಕ್ಕೆ
ಪೂರ್ಣಿಮಾ ಮುಕ್ತಾಯ: ಜೂನ್ 24 ಮಧ್ಯಾಹ್ನ 10:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:25ಕ್ಕೆ
ಸೂರ್ಯಾಸ್ತ: ಸಂಜೆ 06:16ರವರೆಗೆ
ಜ್ಯೇಷ್ಠ ಪೂರ್ಣಿಮಾ ವ್ರತ 2021: ಶುಭ ಮುಹೂರ್ತ
ಬ್ರಹ್ಮ ಮುಹೂರ್ತ ಬೆಳಗ್ಗೆ 04:48ರಿಂದ 05:36ರವರೆಗೆ
ಅಭಿಜಿತ್ ಮುಹೂರ್ತ ಬೆಳಗ್ಗೆ 11:57ರಿಂದ ಮಧ್ಯಾಹ್ನ 12:44ರವರೆಗೆ
ಗೋಧೂಳಿ ಮುಹೂರ್ತ ಸಂಜೆ 06:05ರವರೆಗೆ 06:29ರವರೆಗೆ
ಅಮೃತ ಕಾಲ ರಾತ್ರಿ 11:26ರಿಂದ 12:52ರವರೆಗೆ
ರವಿ ಯೋಗ ಜೂನ್ 25, 06:25ರಿಂದ 7:41ರವರೆಗೆ
ಜ್ಯೇಷ್ಠ ಪೂರ್ಣಿಮಾ ವ್ರತದ ಮಹತ್ವ
ಇದು ತುಂಬಾ ಪವಿತ್ರವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣು ಹಾಗೂ ಶಿವನ ಭಕ್ತರು ಉಪವಾಸವಿದ್ದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ಶುಭ ಫಲ ಉಂಟಾಗುವುದು ಹಾಗೂ ಪಾಪಗಳಿಂದ ಮುಕ್ತಿ ಸಿಗುವುದು ಎಂಬ ನಂಬಿಕೆ ಇದೆ. ಈ ದಿನ ಅಗ್ಯತವಿರುವವರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದು.
ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಬೇಕು.
* ವಿಷ್ಣು ಹಾಗೂ ಶಿವನನ್ನು ಆರಾಧಿಸಬೇಕು.
* ವಿಷ್ಣುವಿಗೆ ತುಳಸಿಯನ್ನು ಶಿವನಿಗೆ ಬಿಲ್ವೆ ಪತ್ರೆಯನ್ನು ಅರ್ಪಿಸಬೇಕು.
* ಕೆಲವರು ಉಪವಾಸ ಮಾಡಿದರೆ, ಇನ್ನು ಕೆಲವರು ಈ ದಿನದಂದು ಸಾತ್ವಿಕ ಆಹರಗಳನ್ನಷ್ಟೇ ಸೇವಿಸುತ್ತಾರೆ.
* ಚಂದ್ರನಿಗೆ ಹಾಲು ಮತ್ತು ಜೇನಿನಿಂದ ಆರ್ಘ್ಯ ಸಲ್ಲಿಸಬೇಕು.
* ವಿಷ್ಣು ಲಕ್ಷ್ಮಿ ಜೊತೆಗೆ ಆಲದ ಮರದಲ್ಲಿ ನೆಲೆಸಿರುತ್ತಾನೆ ನಂಬಿಕೆ ಇದೆ, ಆದ್ದರಿಂದ ಈ ದಿನ ಆಲದ ಮರಕ್ಕೆ ನೀರು ಹಾಗೂ ಹಾಲು ಅರ್ಪಿಸಲಾಗುವುದು.
ಈ ರೀತಿ ಜ್ಯೇಷ್ಠ ಪೂರ್ಣಿಮಾ ಆಚರಿಸಿದರೆ ಅವರ ಬದುಕಿನಲ್ಲಿ ಸಂತೋಷ, ಸಮೃದ್ಧಿ ನೆಲೆಸುವುದು.