Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
ರೈತನ ಬೆಳೆ ರಕ್ಷಿಸುತ್ತಿರುವ ಹುಲಿವೇಷದ ನಾಯಿ
ಶಿವಮೊಗ್ಗದ ರೈತರೊಬ್ಬರ ಮನೆಯಲ್ಲಿ ಹುಲಿಯೊಂದು ಓಡಾಡಿದಂತೆ ಕಂಡವರು ಅರೆಕ್ಷಣ ಅಯ್ಯೋ... ಇಲ್ಲಿಗೆ ಹುಲಿ ಬಂದಿದೆಯೇ? ಎಂದು ಗಾಬರಿ ಬೀಳುತ್ತಿದ್ದರು. ಸೂಕ್ಷ್ಮವಾಗಿ ನೋಡಿದರೆ ಹುಲಿಯಲ್ಲ, ಅರೇ... ಹುಲಿ ಅಲ್ಲ, ಹುಲಿಯಂತೆ ಕಾಣುವ ಈ ಪ್ರಾಣಿ ಯಾವುದೆಂದು ನೋಡಿದರೆ ಅದೊಂದು ನಾಯಿಯಾಗಿತ್ತು. ನಾಯಿಗೆ ಹುಲಿಯಂತೆ ಕಾಣಲು ಬಣ್ಣ ಬಳಿದಿದ್ದರು.
ಇದೇನು ಹುಲಿವೇಷಕ್ಕೆ ಮನುಷ್ಯರು ಬಣ್ಣ ಬಳಿದಂತೆ ನಾಯಿಗೂ ಬಳಿದಿದ್ದಾರೆ, ಈ ನಾಯಿಗೆ ಏಕೆ ಬೇಕು ಈ ಹುಲಿಯ ಬಣ್ಣ ಎಂದು ನೋಡಿದರೆ ಅಲ್ಲಿ ಹುಲಿಯಂತೆ ಕಾಣುವ ನಾಯಿಯನ್ನು ತನ್ನ ಬೆಳೆಯ ರಕ್ಷಣೆಗೆ ಬಳಸಿದ ರೈತನ ಚಾಣಾಕ್ಷತನ ಹಾಗೂ ಅವನ ನೋವು ಎರಡೂ ಎದ್ದು ಕಾಣುತ್ತದೆ.
ರೈತರು ಬೆಳೆದ ಬೆಲೆ ಕೈ ಸಿಗಲು ಎಷ್ಟು ಕಷ್ಟಪಡುತ್ತಾರೆ ಎನ್ನುವುದು ಅವರಿಗಷ್ಟೇ ಗೊತ್ತಿರುತ್ತದೆ. ಪ್ರಕೃತಿ ವಿಕೋಪ, ಮಂಗ, ಹಂದಿ ಹೀಗೆ ಇತರ ಪ್ರಾಣಿಗಳ ಕಾಟಗಳಿಂದ ರೈತ ತನ್ನ ಬೆಳೆ ರಕ್ಷಣೆ ಮಾಡುವಷ್ಟರಲ್ಲಿ ಸುಸ್ತಾಗಿ ಹೋಗುತ್ತಾನೆ. ಇನ್ನು ಬೆಳೆ ಬೆಳೆಯುವ ಕಡೆ ಮಂಗಗಳ ಕಾಟ ಇದ್ದರಂತೂ ಮುಗಿಯಿತು. ಬೆಳೆದು ಬಂದ ಬೆಳೆಗಳು ಕಪಿಚೇಷ್ಠೆಗೆ ಸಿಲುಕಿ ನಲುಗಿ ಹೋಗಿರುತ್ತವೆ. ಎಷ್ಟೇ ಕಾವಲು ಕುಳಿತರು ಅವು ತಮ್ಮ ಕೆಲಸ ಮಾಡದೆ ಬಿಡುವುದಿಲ್ಲ. ಇನ್ನು ಅವುಗಳಿಗಂತೂ ಮನುಷ್ಯನ ಭಯ ಇರುವುದಿಲ್ಲ.
ಹಾಗಾಗಿ ತನ್ನ ಬೆಳೆಯನ್ನು ರಕ್ಷಣೆ ಮಾಡಲು ತೀರ್ಥಹಳ್ಳಿ ತಾಲೂಕಿನ ನಲ್ಲೂರು ರೈತ ಶ್ರೀಕಂಠ ಗೌಡ ಈ ಐಡಿಯಾ ಮಾಡಿದ್ದಾರೆ. ಅವರ ಬೆಳೆಗೆ ಮಂಗಗಳು ದಾಳಿ ತುಂಬಾ ನಷ್ಟ ಮಾಡುತ್ತಿದ್ದವು. ಆಗ ಬಟ್ಕಳದಲ್ಲಿ ಒಬ್ಬ ರೈತ ಹುಲಿಯ ಆಕೃತಿ ತಂದು ಇಟ್ಟಾಗ ಅದಕ್ಕೆ ಹೆದರಿ ಮಂಗಗಳು ಬಾರದಿದ್ದ ಕತೆ ಕೇಳಿದ್ದು ನೆನಪಾಗಿ ಹಾಗೇ ಮಾಡುತ್ತಾರೆ.
ಹುಲಿಯ ಆಕೃತಿಯನ್ನು ನೋಡಿ ಭಯಪಟ್ಟು ಮಂಗಗಳು ಬರುತ್ತಿರಲಿಲ್ಲ, ಆದರೆ ಆ ಆಕೃತಿ ಎಲ್ಲಿಗೂ ಚಲಿಸದೆ ಒಂದೇ ಕಡೆ ಇರುವುದನ್ನು ನೋಡಿದ ಮಂಗಗಳು ಮತ್ತೆ ತಮ್ಮ ಕಪಿಚೇಷ್ಠೆಗೆ ಮುಂದಾಗುತ್ತವೆ. ಆಗ ಶ್ರೀಕಂಠ ಗೌಡರಿಗೆ ಹೊಳೆದಿದ್ದೇ ನಾಯಿಯನ್ನೇ ಹುಲಿ ಮಾಡುವ ಯೋಚನೆ.
#Karnataka farmer paints #TigerStripes on #dog to #SaveCrop from #monkeys
— 4to40 (@4to40) November 29, 2019
Srikanta Gowda, a farmer from #Naluru village, #Thirthahalli taluk in #Karnataka, has painted his dog to look like a tiger to save his crop from monkeys. https://t.co/ZZwhD2pe0g pic.twitter.com/VBhcbEeEWT
ಇದೀಗ ನಾಯಿ ಹುಲಿಯ ಗತ್ತಿನಲ್ಲಿ ಬೆಳೆ ಬೆಳೆದ ತೋಟದಲ್ಲಿ ಓಡಾಡುತ್ತಿದ್ದರೆ ಮಂಗಗಳು ಅದಕ್ಕೆ ಹೆದರಿ ಬರುವುದನ್ನು ನಿಲ್ಲಿಸಿವೆ. ತಮ್ಮ ಐಡಿಯಾ ವರ್ಕ್ಔಟ್ ಆಯ್ತು ಅಂತ ಶ್ರೀಕಂಠ ಗೌಡರಿಗೂ ನೆಮ್ಮದಿಯಾಗಿದೆ. ಇವರ ಐಡಿಯಾಕ್ಕೆ ಟ್ವಿಟರ್ನಲ್ಲಿ ಭಾರಿ ಮೆಚ್ಚುಗೆಯೂ ಸಿಕ್ಕಿದೆ.



Click it and Unblock the Notifications
