Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಚಂದ್ರಗ್ರಹಣ 2021: ಗ್ರಹಣ ಮುಕ್ತಾಯವಾದ ಬಳಿಕ ಏನು ಮಾಡಿದರೆ ಒಳ್ಳೆಯದು?
ಇಂದು ಅಂದರೆ ನವೆಂಬರ್ 19 ರಂದು ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದರಿಂದ ಚಂದ್ರಗ್ರಹಣ ಸಂಭವಿಸುತ್ತದೆ. ಇದು ಖಗೋಳ ಘಟನೆಯಾಗಿದೆ. ಆದರೆ ಇದು ಧಾರ್ಮಿಕ ಮತ್ತು ಜ್ಯೋತಿಷ್ಯದಲ್ಲೂ ಮಹತ್ವವನ್ನು ಹೊಂದಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಗ್ರಹಣವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಗ್ರಹಣದ ಸಮಯ ಮತ್ತು ಅಂತ್ಯದ ನಂತರ, ಮಾಡಬೇಕಾದ ಕೆಲವು ಕಾರ್ಯಗಳನ್ನು ಹೇಳಲಾಗಿದೆ.
ಗ್ರಹಣವಾದಾಗ ಪರಿಸರದಲ್ಲಿ ಋಣಾತ್ಮಕತೆ ಹೆಚ್ಚುತ್ತದೆ ಎಂದು ಹೇಳಲಾಗುವದು, ಇದರಿಂದಾಗಿ ಜೀವನದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬಹುದು. ಗ್ರಹಣದ ಸಮಯದಲ್ಲಿ ಎಲ್ಲಾ ಮಂಗಳಕರ ಶುಭ ಕಾರ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಇದರೊಂದಿಗೆ ಗ್ರಹಣ ಮುಗಿದ ನಂತರವೂ, ಗ್ರಹಣದ ಕೆಟ್ಟ ಪರಿಣಾಮಗಳನ್ನು ತಪ್ಪಿಸಲು ಕೆಲವು ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದರೆ ಗ್ರಹಣದ ದುಷ್ಪರಿಣಾಮಗಳನ್ನು ತಪ್ಪಿಸಲು ಚಂದ್ರಗ್ರಹಣ ಮುಗಿದ ನಂತರ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಗ್ರಹಣ ಮುಗಿದ ನಂತರ ಸ್ವಚ್ಛಗೊಳಿಸಿ
ಚಂದ್ರಗ್ರಹಣ ಮುಗಿದ ನಂತರ, ಇಡೀ ಮನೆ ಮತ್ತು ಪೂಜೆಯ ಮನೆಯನ್ನು ಸ್ವಚ್ಛಗೊಳಿಸಿ. ಗ್ರಹಣದ ಸಮಯದಲ್ಲಿ ನಕಾರಾತ್ಮಕತೆ ಹೆಚ್ಚಾಗುವುದರಿಂದ ಗ್ರಹಣ ಮುಗಿದ ನಂತರ ಶುಚಿಗೊಳಿಸಬೇಕು. ಮನೆಯಲ್ಲಿರುವ ಋಣಾತ್ಮಕ ಶಕ್ತಿ ಹೋಗಲಾಡಿಸಲು ಮನೆಯನ್ನು ಸ್ವಚ್ಛಗೊಳಿಸಿದ ನಂತರ ಗಂಗಾಜಲವನ್ನು ಸಿಂಪಡಿಸಬೇಕು.

ಸ್ನಾನ ಮಾಡಬೇಕು
ಗ್ರಹಣ ಮುಗಿದ ನಂತರ, ಮನೆ ಸ್ವಚ್ಛಗೊಳಿಸಿದ ಬಳಿಕ ಸ್ನಾನವನ್ನು ಮಾಡಬೇಕು ಏಕೆಂದರೆ ಗ್ರಹಣದ ನಕಾರಾತ್ಮಕತೆಯು ಮಾನವ ದೇಹದ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಚಂದ್ರಗ್ರಹಣ ಮುಗಿದಾಗ ಸ್ನಾನ ಮಾಡಿ. ಸಾಧ್ಯವಾದರೆ, ಪವಿತ್ರ ನದಿ ಅಥವಾ ಸರೋವರದಲ್ಲಿ ಸ್ನಾನ ಮಾಡಬೇಕು. ನದಿಗೆ ಹೋಗಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಮನೆಯಲ್ಲಿ ಗಂಗಾಜಲವನ್ನು ಸೇರಿಸಿ ಸ್ನಾನ ಮಾಡಬೇಕು.

ಗ್ರಹಣ ಮುಗಿದ ನಂತರ ದಾನ ಮಾಡಿ-
ಚಂದ್ರಗ್ರಹಣ ಮುಗಿದಾಗ ದಾನ ಮಾಡಲು ಮರೆಯದಿರಿ. ಗ್ರಹಣ ಮುಗಿದ ನಂತರ ದಾನ ಮಾಡುವುದು ಬಹಳ ಪುಣ್ಯವೆಂದು ಪರಿಗಣಿಸಲಾಗಿದೆ. ಗ್ರಹಣ ಮುಗಿದ ನಂತರ ಆಹಾರ, ವಸ್ತ್ರ ಇತ್ಯಾದಿಗಳನ್ನು ನಿರ್ಗತಿಕರಿಗೆ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಬೇಕು.



Click it and Unblock the Notifications