Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಚಂದ್ರಗ್ರಹಣ 2021: ಗ್ರಹಣ ಮುಕ್ತಾಯವಾದ ಬಳಿಕ ಏನು ಮಾಡಿದರೆ ಒಳ್ಳೆಯದು?
ಇಂದು ಅಂದರೆ ನವೆಂಬರ್ 19 ರಂದು ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದರಿಂದ ಚಂದ್ರಗ್ರಹಣ ಸಂಭವಿಸುತ್ತದೆ. ಇದು ಖಗೋಳ ಘಟನೆಯಾಗಿದೆ. ಆದರೆ ಇದು ಧಾರ್ಮಿಕ ಮತ್ತು ಜ್ಯೋತಿಷ್ಯದಲ್ಲೂ ಮಹತ್ವವನ್ನು ಹೊಂದಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಗ್ರಹಣವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಗ್ರಹಣದ ಸಮಯ ಮತ್ತು ಅಂತ್ಯದ ನಂತರ, ಮಾಡಬೇಕಾದ ಕೆಲವು ಕಾರ್ಯಗಳನ್ನು ಹೇಳಲಾಗಿದೆ.
ಗ್ರಹಣವಾದಾಗ ಪರಿಸರದಲ್ಲಿ ಋಣಾತ್ಮಕತೆ ಹೆಚ್ಚುತ್ತದೆ ಎಂದು ಹೇಳಲಾಗುವದು, ಇದರಿಂದಾಗಿ ಜೀವನದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬಹುದು. ಗ್ರಹಣದ ಸಮಯದಲ್ಲಿ ಎಲ್ಲಾ ಮಂಗಳಕರ ಶುಭ ಕಾರ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಇದರೊಂದಿಗೆ ಗ್ರಹಣ ಮುಗಿದ ನಂತರವೂ, ಗ್ರಹಣದ ಕೆಟ್ಟ ಪರಿಣಾಮಗಳನ್ನು ತಪ್ಪಿಸಲು ಕೆಲವು ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದರೆ ಗ್ರಹಣದ ದುಷ್ಪರಿಣಾಮಗಳನ್ನು ತಪ್ಪಿಸಲು ಚಂದ್ರಗ್ರಹಣ ಮುಗಿದ ನಂತರ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಗ್ರಹಣ ಮುಗಿದ ನಂತರ ಸ್ವಚ್ಛಗೊಳಿಸಿ
ಚಂದ್ರಗ್ರಹಣ ಮುಗಿದ ನಂತರ, ಇಡೀ ಮನೆ ಮತ್ತು ಪೂಜೆಯ ಮನೆಯನ್ನು ಸ್ವಚ್ಛಗೊಳಿಸಿ. ಗ್ರಹಣದ ಸಮಯದಲ್ಲಿ ನಕಾರಾತ್ಮಕತೆ ಹೆಚ್ಚಾಗುವುದರಿಂದ ಗ್ರಹಣ ಮುಗಿದ ನಂತರ ಶುಚಿಗೊಳಿಸಬೇಕು. ಮನೆಯಲ್ಲಿರುವ ಋಣಾತ್ಮಕ ಶಕ್ತಿ ಹೋಗಲಾಡಿಸಲು ಮನೆಯನ್ನು ಸ್ವಚ್ಛಗೊಳಿಸಿದ ನಂತರ ಗಂಗಾಜಲವನ್ನು ಸಿಂಪಡಿಸಬೇಕು.

ಸ್ನಾನ ಮಾಡಬೇಕು
ಗ್ರಹಣ ಮುಗಿದ ನಂತರ, ಮನೆ ಸ್ವಚ್ಛಗೊಳಿಸಿದ ಬಳಿಕ ಸ್ನಾನವನ್ನು ಮಾಡಬೇಕು ಏಕೆಂದರೆ ಗ್ರಹಣದ ನಕಾರಾತ್ಮಕತೆಯು ಮಾನವ ದೇಹದ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಚಂದ್ರಗ್ರಹಣ ಮುಗಿದಾಗ ಸ್ನಾನ ಮಾಡಿ. ಸಾಧ್ಯವಾದರೆ, ಪವಿತ್ರ ನದಿ ಅಥವಾ ಸರೋವರದಲ್ಲಿ ಸ್ನಾನ ಮಾಡಬೇಕು. ನದಿಗೆ ಹೋಗಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಮನೆಯಲ್ಲಿ ಗಂಗಾಜಲವನ್ನು ಸೇರಿಸಿ ಸ್ನಾನ ಮಾಡಬೇಕು.

ಗ್ರಹಣ ಮುಗಿದ ನಂತರ ದಾನ ಮಾಡಿ-
ಚಂದ್ರಗ್ರಹಣ ಮುಗಿದಾಗ ದಾನ ಮಾಡಲು ಮರೆಯದಿರಿ. ಗ್ರಹಣ ಮುಗಿದ ನಂತರ ದಾನ ಮಾಡುವುದು ಬಹಳ ಪುಣ್ಯವೆಂದು ಪರಿಗಣಿಸಲಾಗಿದೆ. ಗ್ರಹಣ ಮುಗಿದ ನಂತರ ಆಹಾರ, ವಸ್ತ್ರ ಇತ್ಯಾದಿಗಳನ್ನು ನಿರ್ಗತಿಕರಿಗೆ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಬೇಕು.



Click it and Unblock the Notifications











