Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಚಂದ್ರಗ್ರಹಣ 2021: ಗ್ರಹಣ ಮುಕ್ತಾಯವಾದ ಬಳಿಕ ಏನು ಮಾಡಿದರೆ ಒಳ್ಳೆಯದು?
ಇಂದು ಅಂದರೆ ನವೆಂಬರ್ 19 ರಂದು ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದರಿಂದ ಚಂದ್ರಗ್ರಹಣ ಸಂಭವಿಸುತ್ತದೆ. ಇದು ಖಗೋಳ ಘಟನೆಯಾಗಿದೆ. ಆದರೆ ಇದು ಧಾರ್ಮಿಕ ಮತ್ತು ಜ್ಯೋತಿಷ್ಯದಲ್ಲೂ ಮಹತ್ವವನ್ನು ಹೊಂದಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಗ್ರಹಣವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಗ್ರಹಣದ ಸಮಯ ಮತ್ತು ಅಂತ್ಯದ ನಂತರ, ಮಾಡಬೇಕಾದ ಕೆಲವು ಕಾರ್ಯಗಳನ್ನು ಹೇಳಲಾಗಿದೆ.
ಗ್ರಹಣವಾದಾಗ ಪರಿಸರದಲ್ಲಿ ಋಣಾತ್ಮಕತೆ ಹೆಚ್ಚುತ್ತದೆ ಎಂದು ಹೇಳಲಾಗುವದು, ಇದರಿಂದಾಗಿ ಜೀವನದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬಹುದು. ಗ್ರಹಣದ ಸಮಯದಲ್ಲಿ ಎಲ್ಲಾ ಮಂಗಳಕರ ಶುಭ ಕಾರ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಇದರೊಂದಿಗೆ ಗ್ರಹಣ ಮುಗಿದ ನಂತರವೂ, ಗ್ರಹಣದ ಕೆಟ್ಟ ಪರಿಣಾಮಗಳನ್ನು ತಪ್ಪಿಸಲು ಕೆಲವು ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದರೆ ಗ್ರಹಣದ ದುಷ್ಪರಿಣಾಮಗಳನ್ನು ತಪ್ಪಿಸಲು ಚಂದ್ರಗ್ರಹಣ ಮುಗಿದ ನಂತರ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಗ್ರಹಣ ಮುಗಿದ ನಂತರ ಸ್ವಚ್ಛಗೊಳಿಸಿ
ಚಂದ್ರಗ್ರಹಣ ಮುಗಿದ ನಂತರ, ಇಡೀ ಮನೆ ಮತ್ತು ಪೂಜೆಯ ಮನೆಯನ್ನು ಸ್ವಚ್ಛಗೊಳಿಸಿ. ಗ್ರಹಣದ ಸಮಯದಲ್ಲಿ ನಕಾರಾತ್ಮಕತೆ ಹೆಚ್ಚಾಗುವುದರಿಂದ ಗ್ರಹಣ ಮುಗಿದ ನಂತರ ಶುಚಿಗೊಳಿಸಬೇಕು. ಮನೆಯಲ್ಲಿರುವ ಋಣಾತ್ಮಕ ಶಕ್ತಿ ಹೋಗಲಾಡಿಸಲು ಮನೆಯನ್ನು ಸ್ವಚ್ಛಗೊಳಿಸಿದ ನಂತರ ಗಂಗಾಜಲವನ್ನು ಸಿಂಪಡಿಸಬೇಕು.

ಸ್ನಾನ ಮಾಡಬೇಕು
ಗ್ರಹಣ ಮುಗಿದ ನಂತರ, ಮನೆ ಸ್ವಚ್ಛಗೊಳಿಸಿದ ಬಳಿಕ ಸ್ನಾನವನ್ನು ಮಾಡಬೇಕು ಏಕೆಂದರೆ ಗ್ರಹಣದ ನಕಾರಾತ್ಮಕತೆಯು ಮಾನವ ದೇಹದ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಚಂದ್ರಗ್ರಹಣ ಮುಗಿದಾಗ ಸ್ನಾನ ಮಾಡಿ. ಸಾಧ್ಯವಾದರೆ, ಪವಿತ್ರ ನದಿ ಅಥವಾ ಸರೋವರದಲ್ಲಿ ಸ್ನಾನ ಮಾಡಬೇಕು. ನದಿಗೆ ಹೋಗಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಮನೆಯಲ್ಲಿ ಗಂಗಾಜಲವನ್ನು ಸೇರಿಸಿ ಸ್ನಾನ ಮಾಡಬೇಕು.

ಗ್ರಹಣ ಮುಗಿದ ನಂತರ ದಾನ ಮಾಡಿ-
ಚಂದ್ರಗ್ರಹಣ ಮುಗಿದಾಗ ದಾನ ಮಾಡಲು ಮರೆಯದಿರಿ. ಗ್ರಹಣ ಮುಗಿದ ನಂತರ ದಾನ ಮಾಡುವುದು ಬಹಳ ಪುಣ್ಯವೆಂದು ಪರಿಗಣಿಸಲಾಗಿದೆ. ಗ್ರಹಣ ಮುಗಿದ ನಂತರ ಆಹಾರ, ವಸ್ತ್ರ ಇತ್ಯಾದಿಗಳನ್ನು ನಿರ್ಗತಿಕರಿಗೆ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಬೇಕು.



Click it and Unblock the Notifications