Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
Magh Purnima 2023 : ಫೆ.5ಕ್ಕೆ ಮಾಘ ಪೂರ್ಣಿಮೆ: ಈ ದಿನ ದಾನದ ಮಹತ್ವವೇನು?
ಈ ಬಾರಿ ಮಾಘ ಪೂರ್ಣಿಮೆ ಫೆಬ್ರವರಿ 4 ಹಾಗೂ 5 ರಂದು ಬಂದಿದೆ. ಇದು ಇಡೀ ಮಾಘ ಮಾಸದ ಸ್ನಾನ, ದಾನ, ದಾನ, ಜಪ ಮತ್ತು ತಪಸ್ಸಿನ ಕೊನೆಯ ದಿನವಾಗಿದೆ. ಈ ದಿನ ಸಾವಿರಾರು ಜನರು ಪುಣ್ಯ ನದಿಯಲ್ಲಿ ಸ್ನಾನ ಮಾಡುತ್ತಾರೆ, ಈ ರೀತಿ ಪುಣ್ಯ ಸ್ನಾನ ಮಾಡಿದರೆ ಪಾಪಗಳು ಕಳೆದು ಹೋಗಿ ಸಂಕಲ್ಪ ನೆರವೇರುವುದು ಎಂಬ ನಂಬಿಕೆ. ಇದಾಗಿ ಒಂದು ತಿಂಗಳಿನಲ್ಲಿ ಹೋಳಿ ಹಬ್ಬ ಆಚರಿಸಲಾಗುವುದು.

ಮಾಘ ಮಾಸ ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ಮಾಸ ಎಂದು ಹೇಳಲಾಗುವುದು. ಶಾಸ್ತ್ರಗಳ ಪ್ರಕಾರ, ಮಾಘ ಪೂರ್ಣಿಮೆಯ ದಿನದಂದು ಶ್ರೀ ಹರಿಯು ಗಂಗೆಯ ನೀರಿನಲ್ಲಿ ನೆಲೆಸುತ್ತಾನೆ, ಆದ್ದರಿಂದ ಈ ದಿನ ಗಂಗಾ ಸ್ನಾನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಕೇವಲ ಗಂಗಾಜಲವನ್ನು ಸ್ಪರ್ಶಿಸಿದರೂ ವೈಕುಂಠ ಲೋಕ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಈ ದಿನ ಸೂರ್ಯೋದಯಕ್ಕೆ ಮುನ್ನ ಪುಣ್ಯ ನದಿಯಲ್ಲಿ ಅಥವಾ ಮನೆಯಲ್ಲಿ ಸ್ನಾನದ ನೀರಿಗೆ ಸ್ವಲ್ಪ ಗಂಗಾ ಜಲ ಹಾಕಿ ಸ್ನಾನ ಮಾಡಿ ವಿಷ್ಣುವಿನ ಪೂಜೆ ಮಾಡಲಾಗುವುದು.
ಮಾಘ ಪೂರ್ಣಿಮೆಯ ಮಹತ್ವವೇನು? ಈ ದಿನ ಯಾವ ವಸ್ತುಗಳನ್ನು ದಾನ ಮಾಡಬೇಕು ಎಂಬೆಲ್ಲಾ ಮಾಹಿತಿ ತಿಳಿಯೋಣ ಬನ್ನಿ:

ಮಾಘ ಪೂರ್ಣಿಮೆ ಯಾವಾಗ?
ಮಾಘ ಮಾಸದ ಹುಣ್ಣಿಮೆಯ ದಿನಾಂಕವು ಶುಕ್ಲ ಪಕ್ಷದ ಫೆಬ್ರವರಿ 4 ರಂದು 09:29 ನಿಮಿಷದಿಂದ ಪ್ರಾರಂಭವಾಗಿ ಫೆಬ್ರವರಿ 5 ರಂದು 11:58 ನಿಮಿಷಗಳವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ, ಮಾಘ ಪೂರ್ಣಿಮಾವನ್ನು ಫೆಬ್ರವರಿ 5, 2023 ರಂದು ಆಚರಿಸಲಾಗುತ್ತದೆ.

ಮಾಘ ಮಾಸದಲ್ಲಿ ಪುಣ್ಯ ನದಿಯಲ್ಲಿ ಸ್ನಾನದ ಮಹತ್ವ
ಈ ದಿನ ವಿಷ್ಣು ಮತ್ತು ತಾಯಿ ಲಕ್ಷ್ಮಿಯನ್ನು ಪೂಜಿಸಿ, ಮನಸ್ಸಿನಲ್ಲಿ ಗಂಗಾ ಮಾತೆಯನ್ನು ಧ್ಯಾನಿಸುವುದರಿಂದ ವ್ಯಕ್ತಿಯು ಸಂತೋಷ ಮತ್ತು ಅದೃಷ್ಟವನ್ನು ಪಡೆಯುತ್ತಾನೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮಾಘ ಪೂರ್ಣಿಮೆಯಂದು ಗಂಗಾ ಸ್ನಾನವನ್ನು ಮಾಡುವುದರಿಂದ ಇಡೀ ವರ್ಷದ ಧ್ಯಾನದ ಫಲ ಸಿಗುವುದು. ಈ ದಿನ, ಗಂಗಾ ಸೇರಿದಂತೆ ಇತರ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಪುಣ್ಯಕಾರ್ಯ, ಇದರಿಂದ ಆತ್ಮ ಹಾಗೀ ಮನಸನ್ಸು ಶುದ್ಧವಾಗುತ್ತದೆ ಎಂದು ಹೇಳಲಾಗುವುದು. ಈ ದಿನದಂದು ಪುಣ್ಯಸ್ನಾನ ಮಾಡಿದರೆ ಎಲ್ಲಾ ರೋಗಗಳು ದೂರಾಗುವದು. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡುವಾಗ 'ಓಂ ನಮೋ ಭಗವತೇ ವಾಸುದೇವಾಯ ನಮಃ' ಎಂದು ಜಪಿಸುತ್ತಾ ಸ್ನಾನ ಮಾಡಬೇಕು. ಗಂಗೆಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಗಂಗಾಜಲವನ್ನು ಚಿಮುಕಿಸಿ ಪುಣ್ಯದ ಫಲವನ್ನು ಪಡೆಯಬಹುದು.

ದಾನ ಮತ್ತು ಪೂಜೆಯ ಮಹತ್ವ
* ಸ್ನಾನದ ನಂತರ, ಕಪ್ಪು ಎಳ್ಳನ್ನು ಪಾತ್ರೆಯಲ್ಲಿ ತುಂಬಿಸಿ ಮತ್ತು ಅದರೊಂದಿಗೆ ಸ್ವೆಟರ್, ಕಂಬಳಿ ದಾನ ಮಾಡುವುದರಿಂದ ಸಂಪತ್ತು ಮತ್ತು ಸಂತಾನ ವೃದ್ಧಿಯಾಗುತ್ತದೆ.
* ಈ ದಿನದಂದು ಭಗವಂತ ಸತ್ಯನಾರಾಯಣನ ಕಥೆಯನ್ನು ಹೇಳುವುದರಿಂದ ಶ್ರೀ ವಿಷ್ಣು ಮತ್ತು ತಾಯಿ ಲಕ್ಷ್ಮಿಯ ಅನಂತ ಕೃಪೆಗೆ ಪಾತ್ರರಾಗುವಿರಿ. ಇದರಿಂದ ಸುಖ-ಸೌಭಾಗ್ಯ, ಸಂಪತ್ತು-ಸಂತಾನ ಪ್ರಾಪ್ತಿಯಾಗುತ್ತದೆ
* ಈ ದಿನ ಮಾತೆ ಸರಸ್ವತಿಯನ್ನು ನಿಯಮಾವಳಿಗಳ ಪ್ರಕಾರ ಪೂಜಿಸಿ, ಬಿಳಿ ಹೂವುಗಳನ್ನು ಅರ್ಪಿಸಿದರೆ ಮಕ್ಕಳ ಜ್ಞಾನ ಹೆಚ್ಚುವುದು, ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚುವುದು.
* ಈ ದಿನದಂದು ಪೂರ್ವಜರಿಗೆ ಅರ್ಪಿಸುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಮತ್ತು ಆಯಸ್ಸು, ಆರೋಗ್ಯ ವೃದ್ಧಿಯಾಗುತ್ತದೆ.
ಮಾಘ ಪೂರ್ಣಿಮೆಯಂದು ಸ್ನಾನ ಮಾಡುವುದರಿಂದ ಸೂರ್ಯ ಮತ್ತು ಚಂದ್ರ ಜನ್ಮ ದೋಷಗಳಿಂದ ಮುಕ್ತಿ ದೊರೆಯುತ್ತದೆ.
ಮಾಘ ಪೂರ್ಣಿಮೆಗೆ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ, ಈ ದಿನ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ನಿರ್ಗತಿಕರಿಗೆ ದಾನ ಮಾಡಿ, ಬ್ರಾಹ್ಮಣರಿಗೆ ದಾನ ಮಾಡಿ
* ನೀವು ದಾನ ಮಾಡುವಾಗ ದಾನ ಮಾಡುವ ವಸ್ತುವಿನ ಜೊತೆ ಸ್ವಲ್ಪ ಕಪ್ಪು ಎಳ್ಳು ಹಾಕಿ ದಾನ ಮಾಡಿ.
ಈ ದಿನ ಓಂ ನಮೋ ನಾರಾಯಣ ಅಂತ 108 ಬಾರಿ ಪಠಿಸಿ.



Click it and Unblock the Notifications