Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಮಹಾಶಿವರಾತ್ರಿ 2022: ಈ 4 ರಾಶಿಗಳಿಗೆ ಕಾದಿದೆ ಅದೃಷ್ಟದ ಬದುಕು!
ಮಾರ್ಚ್ 1 ರಂದು ಮಹಾಶಿವರಾತ್ರಿ. ಶಿವನ ಆರಾಧನೆಗೆ ಮೀಸಲಾದ ದಿನ. ಈ ದಿನದಂದು ಜನರು ಉಪವಾಸವನ್ನು ಆಚರಿಸಿ, ಶ್ರದ್ಧೆ ಹಾಗೂ ಭಕ್ತಿಯಿಂದ ಶಿವನನ್ನು ಪೂಜಿಸುತ್ತಾರೆ. ಇದರಿಂದ ಜೀವನದ ಎಲ್ಲಾ ದುಃಖಗಳು ದೂರವಾಗಿ, ಸಂತೋಷ ನೆಲೆಯಾಗುವುದು ಎಂಬ ನಂಬಿಕೆಯಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಮಹಾಶಿವರಾತ್ರಿಯಂದು ಕೆಲವು ರಾಶಿಗಳು ಬಹಳ ಅದೃಷ್ಟವನ್ನು ಗಳಿಸುತ್ತವೆಯಂತೆ. ಇವರ ಮೇಲೆ ಶಿವನ ಕೃಪೆ ಬಹಳ ಚೆನ್ನಾಗಿರಲಿದ್ದು, ಈ ದಿನದಿಂದ ಅವರ ಬದುಕು ಉತ್ತಮವಾಗಲಿದೆ ಎಂದು ಶಾಸ್ತ್ರ ಹೇಳುವುದು. ಹಾಗಾದರೆ, ಶಿವರಾತ್ರಿಯಂದು ಅದೃಷ್ಟವಿರುವ ರಾಶಿಗಳಾವುವು ನೋಡೋಣ.
ಮಹಾಶಿವರಾತ್ರಿಯಂದು, ಅದೃಷ್ಟ ಹೊಂದಿರುವ ರಾಶಿಚಕ್ರಗಳಾವವು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಮೇಷ:
ಈ ರಾಶಿಯವರಿಗೆ ಒಳ್ಳೆಯ ದಿನಗಳು ಬರಲಿವೆ. ಈ ಮಹಾಶಿವರಾತ್ರಿಯಿಂದ, ನಿಮ್ಮ ಅದೃಷ್ಟದ ನಕ್ಷತ್ರಗಳು ಸಹ ಹೆಚ್ಚು ಉತ್ತುಂಗಕ್ಕೇರುತ್ತವೆ. ಜೀವನದಿಂದ ದುಃಖ ದೂರವಾಗುತ್ತದೆ. ಸ್ಥಗಿತಗೊಂಡ ಕೆಲಸ ನಡೆಯಲಿದೆ. ಜೊತೆಗೆ ಸಂಬಳ ಹೆಚ್ಚಾಗುವ ಸಾಧ್ಯತೆಗಳಿವೆ. ಶಿವನ ಕೃಪೆಯಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಈ ದಿನ ಶಿವ ಚಾಲೀಸಾವನ್ನು ಪಠಿಸಿ ಮತ್ತು ಶಿವನಿಗೆ ಅಭಿಷೇಕ ಮಾಡಿ. ಇದರಿಂದ ಫಲಿತಾಂಶಗಳು ಮತ್ತಷ್ಟು ಹೆಚ್ಚಾಗುವುದು.

ಸಿಂಹ:
ಈ ಮಹಾಶಿವರಾತ್ರಿಯಿಂದ ಶಿವನ ಕೃಪೆಯಿಂದ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವೃತ್ತಿಜೀವನದಲ್ಲಿ ವಿಶೇಷ ಸಾಧನೆ ಮಾಡಬಹುದು. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಅವರು ಬಯಸಿದ ಕೆಲಸ ಸಿಗುತ್ತದೆ. ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸಲು ಸಾಧ್ಯವಾಗುತ್ತದೆ. ಜೀವನದಲ್ಲಿ ಹೊಸ ದಾರಿಗಳು ತೆರೆದುಕೊಳ್ಳುತ್ತವೆ.

ತುಲಾ:
ಈ ರಾಶಿಯವರಿಗೆ ಈ ಸಮಯವು ತುಂಬಾ ಶುಭಕರವಾಗಿರುತ್ತದೆ. ಈ ಮಹಾಶಿವರಾತ್ರಿಯಿಂದ ನೀವು ಒಂದಕ್ಕಿಂತ ಹೆಚ್ಚು ಮಾಧ್ಯಮಗಳ ಮೂಲಕ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಕೆಲಸದ ಸ್ಥಳದಲ್ಲಿ ನೀವು ದೊಡ್ಡ ಸ್ಥಾನವನ್ನು ಪಡೆಯಬಹುದು. ನೀವು ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಈ ಸಮಯವು ನಿಮಗೆ ತುಂಬಾ ಒಳ್ಳೆಯದು. ಜೀವನದಲ್ಲಿ ಹೊಸ ಚಿಂತನೆಯೊಂದಿಗೆ ಮುನ್ನಡೆಯುತ್ತೀರಿ.

ವೃಶ್ಚಿಕ:
ಮಹಾಶಿವರಾತ್ರಿಯು ಈ ಬಾರಿ ನಿಮಗೆ ಹೊಸ ಸಾಧನೆಗಳನ್ನು ತಂದಿದೆ. ಕಚೇರಿಯಲ್ಲಿ ಮೇಲಧಿಕಾರಿಯಿಂದ ಸಂಪೂರ್ಣ ಸಹಕಾರ ದೊರೆಯಲಿದೆ. ಸಂಬಳ ಹೆಚ್ಚಾಗುವ ಸಾಧ್ಯತೆಗಳಿವೆ. ಈ ದಿನ ಶಿವನನ್ನು ಪೂಜಿಸುವುದು ಮತ್ತು ರುದ್ರಾಭಿಷೇಕ ಮಾಡಿಸುವುದು ಶ್ರೇಯಸ್ಸನ್ನು ತರುವುದು. ಜೊತೆಗೆ ಶಿವ ಚಾಲೀಸಾ ಪಠಿಸುವುದು ಶುಭಕರ.



Click it and Unblock the Notifications