Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಮಹಾಶಿವರಾತ್ರಿ 2023: ಫೆ. 18ರ ಬಳಿಕ ಈ 6 ರಾಶಿಯವರಿಗೆ ಸುವರ್ಣಕಾಲ, ಶಿವಕೃಪೆಯಿಂದ ಅಪಾರ ಯಶಸ್ಸು ದೊರೆಯಲಿದೆ
ಹಿಂದೂಗಳ ಪ್ರಮುಖ ಹಬ್ಬವಾದ ಮಹಾಶಿವರಾತ್ರಿಯನ್ನು 2023ರಲ್ಲಿ ಫೆಬ್ರವರಿ 18ರಂದು ಆಚರಿಸಲಾಗುವುದು. ಶಿವಭಕ್ತರಿಗೆ ಈ ದಿನ ತುಂಬಾನೇ ವಿಶೇಷ. ಈ ದಿನ ಉಪವಾಸವಿದ್ದು, ಜಾಗರಣೆ ಮಾಡಿ ಶಿವನ ಮಂತ್ರಗಳನ್ನು ಹೇಳುತ್ತಾ ಈ ದಿನ ಕಳೆದರೆ ಶಿವನ ಕೃಪೆಗೆ ಪಾತ್ರರಾಗುವಿರಿ.

ಶಿವ ತನ್ನ ಭಕ್ತರಿಗೆ ಬೇಗನೆ ಒಲಿಯುತ್ತಾನೆ. ಶಿವನ ಕೃಪೆಯಿದ್ದರೆ ಜೀವನದಲ್ಲಿರುವ ಕಷ್ಟಗಳು ದೂರಾಗುವುದು, ಶಿವಕೃಪೆಯಿಂದಾಗಿ ಬದುಕಿನಲ್ಲಿ ಎಲ್ಲಾ ಒಳಿತಾಗುವುದು. ಅಕಾಲಿಕ ಮರಣವನ್ನು ತಡೆಯುವ ಶಕ್ತಿ ಮೃತ್ಯುಂಜಯನಿಗಿದೆ.
ಈ ಬಾರಿ ಶಿವರಾತ್ರಿ ಮತ್ತಷ್ಟು ವಿಶೇಷವಾಗಿದೆ
ಈ ಬಾರಿ ಮಹಾಶಿವರಾತ್ರಿ ಹಾಗೂ ಪ್ರದೋಷ ಎರಡೂ ಒಟ್ಟಿಗೆ ಬಂದಿದೆ. ಈ ಎರಡೂ ಶಿವನಿಗೆ ಮೀಸಲಾಗಿರುವ ವಿಶೇಷ ದಿನಗಳು. ಈ ಬಾರಿ ಪ್ರದೋಷ ವ್ರತದಂದೇ ಶಿವರಾತ್ರಿ ಕೂಡ ಇರುವುದರಿಂದ ಪೂಜೆಯ ಫಲ 10 ಪಟ್ಟು ಹೆಚ್ಚಲಿದೆ. ಈ ದಿನ ಶಿವಭಕ್ತರು ಉಪವಾಸವಿದ್ದು, ರಾತ್ರಿ ನಿದ್ದೆ ಮಾಡದೆ ಜಾಗರಣೆ ಮಾಡಿ ಮಾರನೇಯ ದಿನ ಪಾರಣ ಮುಹೂರ್ತದಲ್ಲಿ ಆಹಾರ ಸೇವಿಸುತ್ತಾರೆ.

ಪಾರಣ ಮುಹೂರ್ತ
ಫೆಬ್ರವರಿ 19, 2023 ರಂದು ಬೆಳಗ್ಗೆ 6.57 ರಿಂದ ಮಧ್ಯಾಹ್ನ 3.25 ರವರೆಗೆ ಇದೆ.
ಜ್ಯೋತಿಷ್ಯ ಪ್ರಕಾರ ರಾಶಿಗಳ ಮೇಲೆ ಶಿವರಾತ್ರಿ ಪ್ರಭಾವ
ಜ್ಯೋತಿಷ್ಯ ಪ್ರಕಾರ ಈ ಶಿವರಾತ್ರಿ ಕೆಲವೊಂದು ರಾಶಿಗಳಿಗೆ ತುಂಬಾನೇ ಮಂಗಳಕರವಾಗಿದೆ, ಶಿವರಾತ್ರಿಯ ಬಳಿಕ ಅನೇಕ ಅದೃಷ್ಟದ ಘಟನೆಗಳು ಈ ರಾಶಿಯವರ ಜೀವನದಲ್ಲಿ ನಡೆಯಲಿದೆ, ಆ ಅದೃಷ್ಟದ ರಾಶಿಗಳಾವುವು ಎಂದು ನೋಡೋಣ ಬನ್ನಿ:

ಮೇಷ ರಾಶಿ
ಈ ಶಿವರಾತ್ರಿ ಬಳಿಕ ನಿಮ್ಮ ಜೀವನದಲ್ಲಿಅನೇಕ ಮಂಗಳಕರ ಘಟನೆ ನಡೆಯಲಿದೆ. ಶಿವರಾತ್ರಿ ಬಳಿಕ ನಿಮ್ಮ ಆದಾಯ ಹೆಚ್ಚಾಗಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಹೊಸ ಉದ್ಯೋಗ ಅವಕಾಶಗಳು ದೊರೆಯಲಿದೆ. ಶಿವನ ಕೃಪೆಯಿಂದ ನಿಮ್ಮ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಶಿವನ ಅಪಾರ ಅನುಗ್ರಹವಿದೆ. ನೀವು ತುಂಬಾ ಸಮಯದಿಂದ ಬಡ್ತಿಗಾಗಿ ಪ್ರಯತ್ನಿಸುತ್ತಿದ್ದರೆ ನೀವು ಬಡ್ತಿ ಹೊಂದುತ್ತೀರಿ, ಆದಾಯ ಹೆಚ್ಚಾಗಲಿದೆ. ಇನ್ನು ನಿಮ್ಮ ಯಾವುದೋ ಕೆಲಸ ಅಪೂರ್ಣವಾಗಿದ್ದರೆ ಶಿವರಾತ್ರಿ ಬಳಿಕ ನೀವು ಮಾಡುವ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗಸ್ಥರ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗಲಿದೆ. ನೀವು ಆಸ್ತಿ ಅಥವಾ ವಾಹನ ಖರೀದಿಸಲು ಚಿಂತಿಸುತ್ತಿದ್ದರೆ ಅದು ನೆರವೇರಲಿದೆ.

ಮಿಥುನ ರಾಶಿ :
ಶಿವನ ಕೃಪೆಯಿಂದ ಆರೋಗ್ಯ ಚೆನ್ನಾಗಿರುತ್ತದೆ. ಇನ್ನು ಏನಾದರೂ ಅನಾರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಾಣುವಿರಿ. ಮಿಥುನ ರಾಶಿಯವರು ವೃತ್ತಿಯಲ್ಲಿ ಅದ್ಭುತ ಪ್ರಗತಿ ಕಂಡುಬರುವುದು ಮತ್ತು ಕೌಟುಂಬಿಕ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ.

ತುಲಾ ರಾಶಿಯವರಿಗೆ ಮಹಾದೇವನ ಆಶೀರ್ವಾದ
ತುಲಾ ರಾಶಿಯವರ ಮೇಲೂ ಮಹಾದೇವನ ಕೃಪೆ ಅಧಿಕವಿದೆ. ಆದ್ದರಿಂದ ನಿಮ್ಮ ಆದಾಯದಲ್ಲಿ ಪ್ರಗತಿ ಕಾಣುವಿರಿ. ನಿಮ್ಮ ಆರೋಗ್ಯ ಕೂಡ ತುಂಬಾ ಚೆನ್ನಾಗಿರುತ್ತದೆ. ನೀವು ವ್ಯಾಪಾರಸ್ಥರಾಗಿದ್ದರೆ ಈ ಅವಧಿ ಒಳ್ಳೆಯ ಆರ್ಥಿಕ ಲಾಭ ಗಳಿಸುವಿರಿ.

ಧನು ರಾಶಿಯವರಿಗೆ ಮಹಾದೇವನ ಆಶೀರ್ವಾದ
ಶಿವರಾತ್ರಿಯ ಬಳಿಕ ಧನುರಾಶಿಯವರ ಜೀವನದಲ್ಲಿ ಅನೇಕ ಒಳ್ಳೆಯ ಬದಲಾವಣೆಯಾಗಲಿದೆ. ನಿಮ್ಮ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ವೃತ್ತಿಜೀವನದ ವಿಷಯದಲ್ಲಿ, ನೀವು ಕೆಲವು ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುತ್ತೀರಿ, ಅವರಿಂದ ನಿಮ್ಮ ವೃತ್ತಿಜೀವನವು ಹೊಸ ಎತ್ತರವನ್ನು ಮುಟ್ಟುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಲಾಭ ಗಳಿಸುತ್ತೀರಿ.

ಕುಂಭ ರಾಶಿ
ಈ ಮಹಾಶಿವರಾತ್ರಿ ಬಳಿ ಕುಂಭ ರಾಶಿಯವರಿಗೆ ಸುವರ್ಣಕಾಲ. ನೀವು ಮಾಡು ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ, ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ, ಹಣದ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ . ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ.
ಈ ಮಂತ್ರಗಳನ್ನು ಪಠಿಸಿ
'ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಶಿವ ಧ್ಯಾನ ಮಂತ್ರ
ಕರ್ಚರನ್ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್ ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ



Click it and Unblock the Notifications