Just In
- 7 min ago ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 2 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 4 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Don't Miss
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ.14-ಫೆ.13ರವರೆಗೆ ಮಕರ ರಾಶಿಯಲ್ಲಿ ಶತ್ರುಗಳಾದ ಸೂರ್ಯ-ಶನಿ ಯುತಿ: ಈ 3 ರಾಶಿಯವರು ತುಂಬಾ ಜಾಗ್ರತೆವಹಿಸಬೇಕು, 4 ರಾಶಿಯವರಿಗೆ ಒಳ
ಮಕರ ರಾಶಿಯಲ್ಲಿ ಶನಿ ಈಗಾಗಲೇ ಇದೆ, ಇದೀಗ ಜನವರಿ 14ಕ್ಕೆ ಸೂರ್ಯ ಕೂಡ ಮಕರ ರಾಶಿಗೆ ಪ್ರವೇಶಿಸಲಿದೆ. ಇದರಿಂದ ಮಕರ ರಾಶಿಯಲ್ಲಿ ಸೂರ್ಯ-ಶನಿ ಸಂಯೋಗ ಉಂಟಾಗಲಿದೆ. ಸೂರ್ಯ ಹಾಗೂ ಶನಿ ಒಂದೇ ರಾಶಿಯಲ್ಲಿ ಫೆಬ್ರವರಿ 13ರವರೆಗೆ ಈ ರಾಶಿಯಲ್ಲಿ ಇರಲಿದೆ.
ಸೂರ್ಯ ಹಾಗೂ ಶನಿಯನ್ನು ಶತ್ರು ಗ್ರಹಗಳು ಎಂದು ಹೇಳಲಾಗುವುದು. ಈ ಎರಡು ಗ್ರಹಗಳು ಒಂದೇ ರಾಶಿಯಲ್ಲಿದ್ದಾಗ ಕೆಲವೊಂದು ರಾಶಿಗಳ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಈ ಅವಧಿಯಲ್ಲಿ 3 ರಾಶಿಯವರು ತುಂಬಾನೇ ಜಾಗ್ರತೆವಹಿಸಬೇಕಾಗಿದೆ. 4 ರಾಶಿಯವರಿಗೆ ಒಳ್ಳೆಯದಿದೆ, ಉಳಿದ 5 ರಾಶಿಯವರಿಗೆ ಈ ಅವಧಿ ಸರಾಸರಿಯಾಗಿರಲಿದೆ.
ಈ ರಾಶಿಯವರು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕಾಗಿದೆ
ಕರ್ಕ ರಾಶಿ
ಸೂರ್ಯ ಮತ್ತು ಶನಿಯ ಸಂಯೋಗದಿಂದ ಕರ್ಕ ರಾಶಿಯವರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತ ಹೊಂದಿರುವುದು ಬಹಳ ಮುಖ್ಯ, ಇಲ್ಲದಿದ್ದರೆ ಮಾಡುವ ಕೆಲಸವೂ ಹಾಳಾಗಬಹುದು ಮತ್ತು ಸಂಬಂಧಗಳು ಹಳಸಬಹುದು. ಇದರೊಂದಿಗೆ ವಾಹನ ಚಲಾಯಿಸುವಾಗ ಸ್ವಲ್ಪ ಎಚ್ಚರ ವಹಿಸುವುದು ಬಹಳ ಮುಖ್ಯ.
ವೃಶ್ಚಿಕ ರಾಶಿ
ಈ ರಾಶಿಯವರು ಈ ಅವಧಿಯಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ಅದಕ್ಕಾಗಿಯೇ ನೀವು ಸ್ವಲ್ಪ ಯೋಚಿಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಉತ್ತಮವಾಗಿರುತ್ತದೆ. ಇದರೊಂದಿಗೆ, ಸೂರ್ಯ ಮತ್ತು ಶನಿಯ ಸಂಯೋಜನೆಯಿಂದಾಗಿ ನೀವು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ಎಚ್ಚರದಿಂದಿರಿ
ಕುಂಭ ರಾಶಿ
ಕುಂಭ ರಾಶಿಯವರಿಗೆ ಸೂರ್ಯ ಮತ್ತು ಶನಿಯ ಸಂಯೋಗವೂ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಏಕೆಂದರೆ ಎರಡೂ ಗ್ರಹಗಳು ಈ ರಾಶಿಯಲ್ಲಿ ಸಂಧಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ಈ ರಾಶಿಯವರ ಜೀವನದಲ್ಲಿ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿಯೇ ಪ್ರತಿಯೊಂದು ಕೆಲಸವನ್ನು ಸ್ವಲ್ಪ ಯೋಚಿಸಿ ಮಾಡಿದರೆ ಒಳ್ಳೆಯದು.
ಈ ರಾಶಿಯವರಿಗೆ ಒಳ್ಳೆಯದಿದೆ
ಮೇಷ ರಾಶಿ
ಶನಿ-ಸೂರ್ಯ ಸಂಯೋಗ ಮೇಷ ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುವಿರಿ, ಕೆಲವರು ಉದ್ಯೋಗದಲ್ಲಿ ಬಡ್ತಿ ಹೊಂದಬಹುದು. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಲಿದೆ, ನೀವು ಮಾಡುವ ಕೆಲಸವನ್ನು ಗುರುತಿಸಲಾಗುವುದು, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗುವುದು, ಈ ಅವಧಿಯಲ್ಲಿ ಆರೋಗ್ಯ ಕೂಡ ತುಂಬಾ ಚೆನ್ನಾಗಿರುತ್ತದೆ.
ಸೂರ್ಯ-ಶನಿಯ ಸಂಯೋಗದ ಅವಧಿ ನಿಮಗೆ ತುಂಬಾನೇ ಮಂಗಳಕರವಾಗಿದೆ.
ಸಿಂಹ ರಾಶಿ
ನೀವು ಯಾವುದಾದರೂ ಯೋಜನೆಯಲ್ಲಿ ಮುಂದುವರೆಯಬೇಕೆಂದಿದ್ದರೆ ಈ ಅವಧಿ ತುಂಬಾ ಅನುಕೂಲಕರವಾಗಿದೆ. ಏನಾದರೂ ಹೊಸ ವೃತ್ತಿ ಅಥವಾ ಉದ್ಯಮ ಮಾಡುವುದಾದರೆ ಅದರಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಈ ಅವಧಿ ಸರಕಾರಿ ಕೆಲಸದಲ್ಲಿರುವವರಿಗೂ ತುಂಬಾ ಒಳ್ಳೆಯದಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರು ಈ ಅವಧಿಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಾರೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರುತ್ತದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ತುಂಬಾ ಲಾಭ ಗಳಿಸುತ್ತಾರೆ. ಈ ಸಮಯದಲ್ಲಿ ಕೌಟುಂಬಿಕ ಜೀವನ ಚೆನ್ನಾಗಿರುತ್ತದೆ. ಇನ್ನು ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ.
ತುಲಾ ರಾಶಿ
ತುಲಾ ರಾಶಿಯವರಿಗೆ ಶನಿ-ಸೂರ್ಯ ಅವಧಿ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಉತ್ತಮವಾಗಿರುತ್ತದೆ. ಈ ಅಧಿಯಲ್ಲಿ ನಿಮಗೆ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ ಏನಾದರೂ ಸಾಲವಿದ್ದರೆ ಅದನ್ನು ಮರಳಿಸಲೂ ಸಾಧ್ಯವಾಗುವುದು. ಈ ಅವಧಿಯಲ್ಲಿ ಕೆಲವರು ಆಸ್ತಿಯನ್ನು ಖರೀದಿಸಬಹುದು. ವೃತ್ತಿ ಜೀವನದಲ್ಲಿ ನೀವು ಬಯಸಿದ ಫಲಿತಾಂಶ ಸಿಗಲಿದೆ.
ಧನು ರಾಶಿ:
ಧನು ರಾಶಿಯವರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದರೆ ಈ ಅವಧಿಯಲ್ಲಿ ಪರಿಹಾರ ಕಾಣುವಿರಿ. ಈ ಅವಧಿಯಲ್ಲಿ ನೀವು ನಿಮ್ಮ ತಂದೆಯಿಂದ ಆರ್ಥಿಕ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಅಲ್ಲದೆ ಆರ್ಥಿಕವಾಗಿ ಹಣ ಗಳಿಸಲು ಅನೇಕ ಅವಕಾಶಗಳನ್ನು ಕೂಡ ಪಡೆಯುತ್ತೀರಿ. ನಿಮ್ಮ ಆದಾಯ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ನಡೆಸುವವರಿಗೆ ಈ ಸಮಯ ಅನುಕೂಲಕರವಾಗಿದೆ.
ಶನಿ+ಶುಕ್ರ ಸಂಯೋಗದ ಅವಧಿಯಲ್ಲಿ ಈ ಪರಿಹಾರಗಳನ್ನು ಮಾಡಿದರೆ ಒಳ್ಳೆಯದು:
* ಬಡವರಿಗೆ ಕಣ್ಣಿನ ಚಿಕಿತ್ಸೆಗೆ ಹಣ ದಾನ ಮಾಡಿ.
* ವಿಷ್ಣು ಸಹಸ್ರನಾಮ ಪಠಿಸುವುದು, ಕೇಳುವುದು ಮಾಡಿ.
* ಆದಿತ್ಯ ಮಂತ್ರ ಪಠಿಸಿ
* ಶಿವನಿಗೆ ಅಭಿಷೇಕ ಮಾಡಿಸಿ
* ಸಮೀಪದ ಕಾಳಿ ದೇವಾಲಯಕ್ಕೆ ಹೋಗಿ ದಾನ ಮಾಡಿ.