Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮೌನಿ ಅಮವಾಸ್ಯೆಯಂದು ಪಿತೃ ದೋಷ ನಿವಾರಣೆಗೆ ಈ ವಿಧಿವಿಧಾನ ಪಾಲಿಸಿ
Pulse
oi-Shreeraksha
By Shreeraksha
ಪಿತೃದೋಷಗಳಿಂದ ಮುಕ್ತಿ ಪಡೆಯಲು ಸಹಾಯಮಾಡುವ ಅಮವಾಸ್ಯೆಯೇ ಮೌನಿ ಅಮವಾಸ್ಯೆ. ಮೌನವಾಗಿಯೇ ಏನನ್ನೂ ಮಾತನಾಡದೇ ಆಚರಣೆ ಮಾಡುವ ಕಾರಣದಿಂದಾಗಿ ಇದನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ.ಫೆಬ್ರವರಿ 11ರಂದು ಇರುವ ಈ ಅಮವಾಸ್ಯೆಯಂದು ಗಂಗಾ ಸ್ನಾನ ಮಾಡುವುದು, ದಾನ ಮಾಡುವುದು ಮತ್ತು ಸದ್ಗುಣಗಳನ್ನು ಪಾಲನೆ ಮಾಡುವುದು ಬಹಳ ಶುಭಕರ.

ಮೌನಿ ಅಮವಾಸ್ಯೆಯಂದು ಎಳ್ಳು ಅಥವಾ ಇತರ ವಸ್ತುಗಳನ್ನು ದಾನ ಮಾಡುವುದರಿಂದ ವಿಷ್ಣುವಿನ ಆಶೀರ್ವಾದಕ್ಕೆ ಪಾತ್ರರಾಗುತ್ತೀರಿ. ಮೌನಿ ಅಮಾವಾಸ್ಯೆಯಂದು, ಪಿತೃಗಳ ಎಲ್ಲಾ ಕೆಲಸಗಳನ್ನು ಮೌನವಾಗಿ ಮಾಡಲಾಗುತ್ತದೆ. ಈ ದಿನ, ಪಿತೃದೋಷವನ್ನು ಕೆಲವು ವಿಶೇಷ ಕ್ರಮಗಳಿಂದ ಸಮಾಧಾನಪಡಿಸಬಹುದು. ಆ ವಿಧಾನಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.

ಪಿತೃದೋಷ ನಿವಾರಣೆಗಾಗಿ ಪೂಜೆ ಮಾಡುವ ವಿಧಾನ:
- ಪಿತೃ ದೋಷವನ್ನು ತೊಡೆದುಹಾಕಲು, ಈ ದಿನ ಪೂರ್ವಜರನ್ನು ಧ್ಯಾನಿಸುತ್ತಾ ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
- ಪಿತ್ರ ದೋಷ ತಡೆಗಟ್ಟಲು, ಕಮಲದಲ್ಲಿ ನೀರನ್ನು ತೆಗೆದುಕೊಂಡು ಅದಕ್ಕೆ ಕೆಂಪು ಹೂವುಗಳು ಮತ್ತು ಕಪ್ಪು ಎಳ್ಳು ಸೇರಿಸಿ.
- ನಂತರ ಈ ನೀರನ್ನು ಸೂರ್ಯ ದೇವರಿಗೆ ಅರ್ಪಿಸಿ, ನಿಮ್ಮ ಪಿತೃಗಳ ಶಾಂತಿಗಾಗಿ ಪ್ರಾರ್ಥಿಸಿ.
- ಅಶ್ವತ್ಥ ಮರದ ಮೇಲೆ ಕೆಲವು ಬಿಳಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು, ಮರವನ್ನು 108 ಬಾರಿ ಪ್ರದಕ್ಷಿಣೆ ಹಾಕಿ.
- ಮೌನಿ ಅಮಾವಾಸ್ಯೆಯ ದಿನ, ಎಳ್ಳಿನ ಲಡ್ಡು, ಎಳ್ಳೆಣ್ಣೆ, ನೆಲ್ಲಿ, ಕಂಬಳಿ ಮತ್ತು ಬಟ್ಟೆಗಳನ್ನು ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಿ. ಇದನ್ನು ಮಾಡುವುದರಿಂದ ನಿಮಗೆ ಪುಣ್ಯ ಲಭಿಸುತ್ತದೆ.
- ಮನೆಯ ದಕ್ಷಿಣ ಭಾಗದಲ್ಲಿ ಸ್ವಲ್ಪ ಎಳ್ಳನ್ನು ಬಿಳಿ ಬಟ್ಟೆಯ ಮೇಲೆ ಹಾಕಿ. ಅದರ ಮೇಲೆ ಹಿತ್ತಾಳೆ ಅಥವಾ ತಾಮ್ರದ ಹೂಜಿಯನ್ನು ಸ್ಥಾಪಿಸಿ.
- ಈಗ ಅದರ ಎಡಭಾಗದಲ್ಲಿ ಎಳ್ಳೆಣ್ಣೆಯ ದೀಪವನ್ನು ಪಿತೃಗಳಿಗಾಗಿ ಹಚ್ಚಿ. ಈಗ ನೀರು ತುಂಬಿದ ಸ್ಟೀಲ್ ಪಾತ್ರೆಯನ್ನು ಮಧ್ಯದಲ್ಲಿ ಇರಿಸಿ.
- ಅದರ ಮೇಲೆ ಸ್ಟೀಲ್ ಪ್ಲೇಟ್ ಮತ್ತು ಎಳ್ಳಿನ ರೊಟ್ಟಿ ಇರಿಸಿ.
- ಈಗ ಅದರ ಮೇಲೆ ತುಳಸಿ ಎಲೆಯನ್ನು ಇರಿಸಿ.
- ಇದಕ್ಕೆ ಬಿಳಿ ಹೂವನ್ನು ಅರ್ಪಿಸಿ ಮತ್ತು ಶ್ರೀಗಂಧದ ತಿಲಕವನ್ನು ಇಡಿ.
- ಈಗ ರೊಟ್ಟಿಯನ್ನು ನಾಲ್ಕು ತುಂಡುಗಳನ್ನು ಮಾಡಿ. ಅದರಲ್ಲಿ ಒಂದು ತುಂಡನ್ನು ನಾಯಿಗೆ, ಎರಡನೆಯ ತುಂಡು ಹಸುವಿಗೆ, ಮೂರನೆಯ ತುಂಡನ್ನು ಕ್ಷುದ್ರಶಕ್ತಿಗಳಿಗೆ, ನಾಲ್ಕನೆಯ ತುಂಡನ್ನು ಅಶ್ವತ್ಥ ಮರದ ಕೆಳಗೆ ಇರಿಸಿ.

ವಾಸ್ತು ಪ್ರಕಾರ ಪಿತೃ ದೋಷ ನಿವಾರಣೆಗೆ ಹೀಗೆ ಮಾಡಿ:

ನೆನಪಿನಲ್ಲಿಡಿ:
ಈ ಎಲ್ಲಾ ಕೆಲಸಗಳನ್ನು ನೀವು ಮೌನವಾಗಿ ಮಾಡಬೇಕು ಎಂಬುದನ್ನು ನೆನಪಿನಲ್ಲಿಡಿ.
Comments
English summary
Mauni Amavasya 2021 : Pitru Dosh Nivaran Pujan Vidhi
Story first published: Wednesday, February 10, 2021, 18:00 [IST]
Other articles published on Feb 10, 2021



Click it and Unblock the Notifications