Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಮೌನಿ ಅಮವಾಸ್ಯೆಯಂದು ಪಿತೃ ದೋಷ ನಿವಾರಣೆಗೆ ಈ ವಿಧಿವಿಧಾನ ಪಾಲಿಸಿ
Pulse
oi-Shreeraksha
By Shreeraksha
ಪಿತೃದೋಷಗಳಿಂದ ಮುಕ್ತಿ ಪಡೆಯಲು ಸಹಾಯಮಾಡುವ ಅಮವಾಸ್ಯೆಯೇ ಮೌನಿ ಅಮವಾಸ್ಯೆ. ಮೌನವಾಗಿಯೇ ಏನನ್ನೂ ಮಾತನಾಡದೇ ಆಚರಣೆ ಮಾಡುವ ಕಾರಣದಿಂದಾಗಿ ಇದನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ.ಫೆಬ್ರವರಿ 11ರಂದು ಇರುವ ಈ ಅಮವಾಸ್ಯೆಯಂದು ಗಂಗಾ ಸ್ನಾನ ಮಾಡುವುದು, ದಾನ ಮಾಡುವುದು ಮತ್ತು ಸದ್ಗುಣಗಳನ್ನು ಪಾಲನೆ ಮಾಡುವುದು ಬಹಳ ಶುಭಕರ.

ಮೌನಿ ಅಮವಾಸ್ಯೆಯಂದು ಎಳ್ಳು ಅಥವಾ ಇತರ ವಸ್ತುಗಳನ್ನು ದಾನ ಮಾಡುವುದರಿಂದ ವಿಷ್ಣುವಿನ ಆಶೀರ್ವಾದಕ್ಕೆ ಪಾತ್ರರಾಗುತ್ತೀರಿ. ಮೌನಿ ಅಮಾವಾಸ್ಯೆಯಂದು, ಪಿತೃಗಳ ಎಲ್ಲಾ ಕೆಲಸಗಳನ್ನು ಮೌನವಾಗಿ ಮಾಡಲಾಗುತ್ತದೆ. ಈ ದಿನ, ಪಿತೃದೋಷವನ್ನು ಕೆಲವು ವಿಶೇಷ ಕ್ರಮಗಳಿಂದ ಸಮಾಧಾನಪಡಿಸಬಹುದು. ಆ ವಿಧಾನಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.

ಪಿತೃದೋಷ ನಿವಾರಣೆಗಾಗಿ ಪೂಜೆ ಮಾಡುವ ವಿಧಾನ:
- ಪಿತೃ ದೋಷವನ್ನು ತೊಡೆದುಹಾಕಲು, ಈ ದಿನ ಪೂರ್ವಜರನ್ನು ಧ್ಯಾನಿಸುತ್ತಾ ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
- ಪಿತ್ರ ದೋಷ ತಡೆಗಟ್ಟಲು, ಕಮಲದಲ್ಲಿ ನೀರನ್ನು ತೆಗೆದುಕೊಂಡು ಅದಕ್ಕೆ ಕೆಂಪು ಹೂವುಗಳು ಮತ್ತು ಕಪ್ಪು ಎಳ್ಳು ಸೇರಿಸಿ.
- ನಂತರ ಈ ನೀರನ್ನು ಸೂರ್ಯ ದೇವರಿಗೆ ಅರ್ಪಿಸಿ, ನಿಮ್ಮ ಪಿತೃಗಳ ಶಾಂತಿಗಾಗಿ ಪ್ರಾರ್ಥಿಸಿ.
- ಅಶ್ವತ್ಥ ಮರದ ಮೇಲೆ ಕೆಲವು ಬಿಳಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು, ಮರವನ್ನು 108 ಬಾರಿ ಪ್ರದಕ್ಷಿಣೆ ಹಾಕಿ.
- ಮೌನಿ ಅಮಾವಾಸ್ಯೆಯ ದಿನ, ಎಳ್ಳಿನ ಲಡ್ಡು, ಎಳ್ಳೆಣ್ಣೆ, ನೆಲ್ಲಿ, ಕಂಬಳಿ ಮತ್ತು ಬಟ್ಟೆಗಳನ್ನು ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಿ. ಇದನ್ನು ಮಾಡುವುದರಿಂದ ನಿಮಗೆ ಪುಣ್ಯ ಲಭಿಸುತ್ತದೆ.
- ಮನೆಯ ದಕ್ಷಿಣ ಭಾಗದಲ್ಲಿ ಸ್ವಲ್ಪ ಎಳ್ಳನ್ನು ಬಿಳಿ ಬಟ್ಟೆಯ ಮೇಲೆ ಹಾಕಿ. ಅದರ ಮೇಲೆ ಹಿತ್ತಾಳೆ ಅಥವಾ ತಾಮ್ರದ ಹೂಜಿಯನ್ನು ಸ್ಥಾಪಿಸಿ.
- ಈಗ ಅದರ ಎಡಭಾಗದಲ್ಲಿ ಎಳ್ಳೆಣ್ಣೆಯ ದೀಪವನ್ನು ಪಿತೃಗಳಿಗಾಗಿ ಹಚ್ಚಿ. ಈಗ ನೀರು ತುಂಬಿದ ಸ್ಟೀಲ್ ಪಾತ್ರೆಯನ್ನು ಮಧ್ಯದಲ್ಲಿ ಇರಿಸಿ.
- ಅದರ ಮೇಲೆ ಸ್ಟೀಲ್ ಪ್ಲೇಟ್ ಮತ್ತು ಎಳ್ಳಿನ ರೊಟ್ಟಿ ಇರಿಸಿ.
- ಈಗ ಅದರ ಮೇಲೆ ತುಳಸಿ ಎಲೆಯನ್ನು ಇರಿಸಿ.
- ಇದಕ್ಕೆ ಬಿಳಿ ಹೂವನ್ನು ಅರ್ಪಿಸಿ ಮತ್ತು ಶ್ರೀಗಂಧದ ತಿಲಕವನ್ನು ಇಡಿ.
- ಈಗ ರೊಟ್ಟಿಯನ್ನು ನಾಲ್ಕು ತುಂಡುಗಳನ್ನು ಮಾಡಿ. ಅದರಲ್ಲಿ ಒಂದು ತುಂಡನ್ನು ನಾಯಿಗೆ, ಎರಡನೆಯ ತುಂಡು ಹಸುವಿಗೆ, ಮೂರನೆಯ ತುಂಡನ್ನು ಕ್ಷುದ್ರಶಕ್ತಿಗಳಿಗೆ, ನಾಲ್ಕನೆಯ ತುಂಡನ್ನು ಅಶ್ವತ್ಥ ಮರದ ಕೆಳಗೆ ಇರಿಸಿ.

ವಾಸ್ತು ಪ್ರಕಾರ ಪಿತೃ ದೋಷ ನಿವಾರಣೆಗೆ ಹೀಗೆ ಮಾಡಿ:

ನೆನಪಿನಲ್ಲಿಡಿ:
ಈ ಎಲ್ಲಾ ಕೆಲಸಗಳನ್ನು ನೀವು ಮೌನವಾಗಿ ಮಾಡಬೇಕು ಎಂಬುದನ್ನು ನೆನಪಿನಲ್ಲಿಡಿ.
Comments
English summary
Mauni Amavasya 2021 : Pitru Dosh Nivaran Pujan Vidhi
Story first published: Wednesday, February 10, 2021, 18:00 [IST]
Other articles published on Feb 10, 2021



Click it and Unblock the Notifications
