Latest Updates
-
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್!
ಕುಂಭ ರಾಶಿಗೆ ಬುಧ ಪ್ರವೇಶ, ಅಸ್ತಂಗತ : ಈ 4 ರಾಶಿಗಳಿಗೆ ಆರ್ಥಿಕವಾಗಿ ಒಳ್ಳೆಯದು
ಒಂಬತ್ತು ಗ್ರಹಗಳ ರಾಜಕುಮಾರ ಎಂದು ಪರಿಗಣಿಸಲ್ಪಟ್ಟ ಬುಧ, ಶನಿಯು ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ.

ಫೆಬ್ರವರಿ 27ಕ್ಕೆ ಕುಂಭ ರಾಶಿಗೆ ಬುಧ ಪ್ರವೇಶಿಸುತ್ತದೆ, ಮಾರನೇಯ ದಿನವೇ ಅಸ್ತಂಗತವಾಗಲಿದೆ. ಬುಧ ಕುಂಭ ರಾಶಿಯಲ್ಲಿರುವ ಈ ಅವಧಿ ಈ ಕೆಳಗಿನ ರಾಶಿಯವರಿಗೆ ಧನಾತ್ಮಕವಾಗಿ ತುಂಬಾನೇ ಉತ್ತಮವಾಗಿದೆ:

ಮೇಷ ರಾಶಿ
ಬುಧದ ಕುಂಭ ಸಂಕ್ರಮಣವು ಮೇಷ ರಾಶಿಯವರಿಗೆ ಒಳ್ಳೆಯದು. ಈ ಅವಧಿಯು ದುಡಿಯುವ ಜನರಿಗೆ ಉತ್ತಮವಾಗಿರುತ್ತದೆ. ಕಠಿಣ ಪರಿಶ್ರಮ ಪ್ರತಿಫಲ ಕೊಡುತ್ತದೆ. ಭಗವಾನ್ ವಿಷ್ಣುವಿನ ಶ್ರೀ ವಾಮನ ರೂಪವನ್ನು ಪೂಜಿಸುವುದರಿಂದ ತುಂಬಾ ಪ್ರಯೋಜನ ಸಿಗಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಕುಂಭ ರಾಶಿಯವರಿಗೆ ಬುಧದ ಪ್ರವೇಶವು ಅನುಕೂಲಕರವಾಗಿದೆ. ಉದ್ಯೋಗದಲ್ಲಿ ಸ್ಥಿರತೆ ಉಂಟಾಗಬಹುದು. ಹಿರಿಯರ ಸಂಪೂರ್ಣ ಸಹಕಾರ ಸಿಗಲಿದೆ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುವುದು. ಸಾಧ್ಯವಾದರೆ ನಿತ್ಯವೂ ಹಸುವಿಗೆ ಮೇವು ತಿನ್ನಿಸಿ. ಇದರಿಂದ ಮತ್ತಷ್ಟು ಉತ್ತಮ ಫಲ ಸಿಗಲಿದೆ.

ಸಿಂಹ ರಾಶಿ
ಕುಂಭ ರಾಶಿಗೆ ಬುಧದ ಪ್ರವೇಶವು ಸಿಂಹ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ಈ ಸಮಯವು ಉದ್ಯಮಿಗಳಿಗೆ ಅನುಕೂಲಕರವಾಗಿರುತ್ತದೆ. ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಈ ಅವಧಿ ತುಂಬಾನೇ ಒಳ್ಳೆಯದಿದೆ. ಜೀವನದಲ್ಲಿ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಮಾತಿನ ಮೇಲೆ ಹಿಡಿತವಿರಲಿ. ಬುಧವಾರದಂದು ನಿಯಮಿತವಾಗಿ ಶ್ರೀ ಗಣಪತಿ ಅಥರ್ವಶೀರ್ಷವನ್ನು ಪಠಿಸಿ.

ತುಲಾ ರಾಶಿ
ಬುಧದ ಕುಂಭ ಸಂಕ್ರಮಣವು ತುಲಾ ರಾಶಿಯವರಿಗೆ ಧನಾತ್ಮಕವಾಗಿರಬಹುದು. ನಿಮ್ಮ ದಕ್ಷತೆಯನ್ನು ಹೆಚ್ಚಿಸಬಹುದು. ಈ ಅವಧಿಯಲ್ಲಿ ಹಣವನ್ನು ಪಡೆಯುವ ಉತ್ತಮ ಅವಕಾಶಗಳಿವೆ. ನಿಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ನಿಮಗೆ ಅವಕಾಶ ಸಿಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಸಮಯವಾಗಲಿದೆ. ಸಾಧ್ಯವಾದರೆ, ಬುಧವಾರದಂದು ಅಗತ್ಯವಿರುವವರಿಗೆ ಬಟ್ಟೆಗಳನ್ನು ದಾನ ಮಾಡಿ.



Click it and Unblock the Notifications