Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಶನಿವಾರ: ಏನು ಮಾಡಬಾರದು ಹಾಗೂ ಯಾವ ವಸ್ತುಗಳನ್ನು ಮನೆಗೆ ತರಬಾರದು?
ಹಿಂದೂ ಧರ್ಮದ ಪ್ರಕಾರ ಶನಿವಾರ ಎಂಬುವುದು ಶನಿ ದೇವನಿಗೆ ಮೀಸಲಾದ ದಿನವಾಗಿದೆ. ಶನಿ ದೇವನನ್ನು ನ್ಯಾಯದ ದೇವರೇ ಎಂದು ಕರೆಯಲಾಗುವುದು. ಶನಿಯ ಕೋಪಕ್ಕೆ ಕಾರಣವಾದರೆ ಅವನಿಗೆ ಉಳಿಗಾಲವಿಲ್ಲ, ಅದೇ ಶನಿಯ ಕೃಪೆಗೆ ಪಾತ್ರರಾದರೆ ಜೀವನದಲ್ಲಿರುವ ಕಷ್ಟಗಳು ದೂರವಾಗುವುದು, ಸಾಡೇಸಾತಿ, ಶನಿ ದೋಷ ಇವೆಲ್ಲಾ ದೂರವಾಗುವುದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ಆದ್ದರಿಂದಲೇ ಶನಿವಾರದಂದು ಶನಿ ದೇವನಿಗೆ ಕೋಪ ತರಿಸುವ ಅಥವಾ ಶನಿಗೆ ಇಷ್ಟವಾಗದ ಯಾವುದೇ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಒಂದು ವೇಳೆ ಹಾಗೇ ಮಾಡಿದರೆ ಅನಿಷ್ಟ ಉಂಟಾಗುವುದು ಎಂದು ಹೇಳಲಾಗುವುದು. ಎಲ್ಲವೂ ಒಂದು ನಂಬಿಕೆಯಾಗಿದೆ. ಅಭಿಪ್ರಾಯಗಳು ಅವರವರ ನಂಬಿಕೆಗೆ ಬಿಟ್ಟದ್ದು, ನೀವು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಿಕೆಯುಳ್ಳವರಾದರೆ ಶನಿವಾರದೆಂದು ಏನು ಮಾಡಬಾರದು ಎಂದು ನೋಡೋಣ ಬನ್ನಿ:

ಶನಿವಾರ ಏನು ಮಾಡಬಾರದು?
* ಈ ದಿನ ಬಡವರಿಗೆ ನೋವುಂಟು ಮಾಡಿದರೆ ಶನಿ ದೇವ ಕ್ಷಮಿಸಲ್ಲ. ಆದ್ದರಿಂದ ಅವರಿಗೆ ನೋವುಂಟು ಮಾಡುವುದು, ಹೀಯಾಳಿಸುವುದು ಮಾಡಬಾರದು.
* ಇನ್ನು ಶನಿವಾರ ಯಾರಿಗೂ ಎಣ್ಣೆ ದಾನ ಮಾಡಬೇಡಿ ಹಾಗೂ ಎಣ್ಣೆಯನ್ನು ಖದೀದಿ ಮಾಡಬೇಡಿ.
* ಶನಿವಾರದಂದು ಯಾರಿಂದಲೂ ಚಪ್ಪಲಿ ಅಥವಾ ಶೂ ಗಿಫ್ಟ್ ಆಗಿ ಪಡೆಯಬೇಡಿ, ನೀವು ಕೊಡಲೂ ಬೇಡಿ.

ಯಾವ ವಸ್ತುಗಳನ್ನು ಖರೀದಿಸಬಾರದು
* ಶನಿವಾರ ಕಬ್ಬಿಣವನ್ನು ಖರೀದಿ ಮಾಡಬಾರದು ಇಲ್ಲದಿದ್ದರೆ ಕಬ್ಬಣದಿಂದ ಮಾಡಿದಂಥ ವಸ್ತುಗಳನ್ನು ಮನೆಗೆ ತರಬಾರದು, ಅದು ಅದೃಷ್ಟವಲ್ಲ ಎಂದು ಹೇಳಲಾಗುವುದು.
* ಶನಿವಾರ ಎಣ್ಣೆಯನ್ನು ಖರೀದಿ ಮಾಡಬಾರದು, ಖರೀದಿಸಿದರೆ ಆರೋಗ್ಯ ಸಮಸ್ಯೆ, ಬದುಕಿನಲ್ಲಿ ಸಮಸ್ಯೆಗಳು ಎದುರಾಗುವುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.
* ಉಪ್ಪು ತಂದ್ರೆ ಸಾಲ ಹೆಚ್ಚುವುದು ಎಂದು ಹೇಳಲಾಗುವುದು.
* ಕತ್ತರಿ ಕೊಂಡು ತಂದರೆ ಜಗಳವಾಗುವುದು
* ಪೊರಕೆ ತಂದರೆ ಸಾಲ ಹೆಚ್ಚುವುದು
* ಇಂಕ್ ತರುವುದರಿಂದ ಬದುಕಿನಲ್ಲಿ ಸೋಲಾಗುವುದು, ಆದ್ದರಿಂದ ಇವುಗಳೆನ್ನೆಲ್ಲಾ ತರಬಾರದು ಎಂದು ಜ್ಯೋತಿಷ್ಯದಲ್ಲಿ ನಂಬಿಕೆ ಇರುವವರು ಬಲವಾಗಿ ನಂಬುತ್ತಾರೆ.

ಶನಿವಾರ ಏನು ಮಾಡಬೇಕು?
* ಸಮೀಪದ ಹನುಮಂತನ ಗುಡಿಗೆ ಹೋಗಿ ದೀಪ ಹಚ್ಚಿ.
* ಶನಿವಾರದಂದು ಅರಳಿ ಮರಕ್ಕೆ ನೀರು ಹಾಕಿ ಪೂಜಿಸಿ
* ಶನಿವಾರ ಕಪ್ಪು ವಸ್ತ್ರ, ನೀಲಿ ವಸ್ತ್ರ ಅಥವಾ ಕಪ್ಪು ಎಳ್ಳು ದಾನ ಮಾಡಿ.

ಶನಿಯನ್ನು ಒಲಿಸಿಕೊಳ್ಳುವುದು ಹೇಗೆ?
ಶನಿವಾರ ಉಪವಾಸವಿದ್ದು ಶನಿ ದೇವಾಲಯಕ್ಕೆ ಹೋಗಿ ಎಣ್ಣೆ ಅರ್ಪಿಸಿ, ಪ್ರಾರ್ಥಿಸಿ. ಪ್ರಾರ್ಥಿಸುವಾಗ ಅಥವಾ ಪೂಜಿಸುವಾಗ ಮೂರ್ತಿಯ ಎದುರಿಗೆ ಶನಿಯ ದೃಷ್ಟಿ ನೇರವಾಗಿ ಬೀಳುವಂತೆ ನಿಲ್ಲಬಾರದು.
* ಶನಿ ಮಂತ್ರಗಳನ್ನು ಹೇಳಿ.
* ಈ ದಿನ ಬಡವರಿಗೆ, ಹಸಿದವರಿಗೆ ಆಹಾರ ದಾನ ಮಾಡಿ.
* ನಿರ್ಗತಿಕರಿಗೆ ಕಪ್ಪು ಅಥವಾ ಕಡು ನೀಲಿ ವಸ್ತ್ರ ದಾನ ಮಾಡಿ.
* ಹಿರಿಯರನ್ನು ಗೌರವಿಸಿ.



Click it and Unblock the Notifications