Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಶನಿವಾರ: ಏನು ಮಾಡಬಾರದು ಹಾಗೂ ಯಾವ ವಸ್ತುಗಳನ್ನು ಮನೆಗೆ ತರಬಾರದು?
ಹಿಂದೂ ಧರ್ಮದ ಪ್ರಕಾರ ಶನಿವಾರ ಎಂಬುವುದು ಶನಿ ದೇವನಿಗೆ ಮೀಸಲಾದ ದಿನವಾಗಿದೆ. ಶನಿ ದೇವನನ್ನು ನ್ಯಾಯದ ದೇವರೇ ಎಂದು ಕರೆಯಲಾಗುವುದು. ಶನಿಯ ಕೋಪಕ್ಕೆ ಕಾರಣವಾದರೆ ಅವನಿಗೆ ಉಳಿಗಾಲವಿಲ್ಲ, ಅದೇ ಶನಿಯ ಕೃಪೆಗೆ ಪಾತ್ರರಾದರೆ ಜೀವನದಲ್ಲಿರುವ ಕಷ್ಟಗಳು ದೂರವಾಗುವುದು, ಸಾಡೇಸಾತಿ, ಶನಿ ದೋಷ ಇವೆಲ್ಲಾ ದೂರವಾಗುವುದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ಆದ್ದರಿಂದಲೇ ಶನಿವಾರದಂದು ಶನಿ ದೇವನಿಗೆ ಕೋಪ ತರಿಸುವ ಅಥವಾ ಶನಿಗೆ ಇಷ್ಟವಾಗದ ಯಾವುದೇ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಒಂದು ವೇಳೆ ಹಾಗೇ ಮಾಡಿದರೆ ಅನಿಷ್ಟ ಉಂಟಾಗುವುದು ಎಂದು ಹೇಳಲಾಗುವುದು. ಎಲ್ಲವೂ ಒಂದು ನಂಬಿಕೆಯಾಗಿದೆ. ಅಭಿಪ್ರಾಯಗಳು ಅವರವರ ನಂಬಿಕೆಗೆ ಬಿಟ್ಟದ್ದು, ನೀವು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಿಕೆಯುಳ್ಳವರಾದರೆ ಶನಿವಾರದೆಂದು ಏನು ಮಾಡಬಾರದು ಎಂದು ನೋಡೋಣ ಬನ್ನಿ:

ಶನಿವಾರ ಏನು ಮಾಡಬಾರದು?
* ಈ ದಿನ ಬಡವರಿಗೆ ನೋವುಂಟು ಮಾಡಿದರೆ ಶನಿ ದೇವ ಕ್ಷಮಿಸಲ್ಲ. ಆದ್ದರಿಂದ ಅವರಿಗೆ ನೋವುಂಟು ಮಾಡುವುದು, ಹೀಯಾಳಿಸುವುದು ಮಾಡಬಾರದು.
* ಇನ್ನು ಶನಿವಾರ ಯಾರಿಗೂ ಎಣ್ಣೆ ದಾನ ಮಾಡಬೇಡಿ ಹಾಗೂ ಎಣ್ಣೆಯನ್ನು ಖದೀದಿ ಮಾಡಬೇಡಿ.
* ಶನಿವಾರದಂದು ಯಾರಿಂದಲೂ ಚಪ್ಪಲಿ ಅಥವಾ ಶೂ ಗಿಫ್ಟ್ ಆಗಿ ಪಡೆಯಬೇಡಿ, ನೀವು ಕೊಡಲೂ ಬೇಡಿ.

ಯಾವ ವಸ್ತುಗಳನ್ನು ಖರೀದಿಸಬಾರದು
* ಶನಿವಾರ ಕಬ್ಬಿಣವನ್ನು ಖರೀದಿ ಮಾಡಬಾರದು ಇಲ್ಲದಿದ್ದರೆ ಕಬ್ಬಣದಿಂದ ಮಾಡಿದಂಥ ವಸ್ತುಗಳನ್ನು ಮನೆಗೆ ತರಬಾರದು, ಅದು ಅದೃಷ್ಟವಲ್ಲ ಎಂದು ಹೇಳಲಾಗುವುದು.
* ಶನಿವಾರ ಎಣ್ಣೆಯನ್ನು ಖರೀದಿ ಮಾಡಬಾರದು, ಖರೀದಿಸಿದರೆ ಆರೋಗ್ಯ ಸಮಸ್ಯೆ, ಬದುಕಿನಲ್ಲಿ ಸಮಸ್ಯೆಗಳು ಎದುರಾಗುವುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.
* ಉಪ್ಪು ತಂದ್ರೆ ಸಾಲ ಹೆಚ್ಚುವುದು ಎಂದು ಹೇಳಲಾಗುವುದು.
* ಕತ್ತರಿ ಕೊಂಡು ತಂದರೆ ಜಗಳವಾಗುವುದು
* ಪೊರಕೆ ತಂದರೆ ಸಾಲ ಹೆಚ್ಚುವುದು
* ಇಂಕ್ ತರುವುದರಿಂದ ಬದುಕಿನಲ್ಲಿ ಸೋಲಾಗುವುದು, ಆದ್ದರಿಂದ ಇವುಗಳೆನ್ನೆಲ್ಲಾ ತರಬಾರದು ಎಂದು ಜ್ಯೋತಿಷ್ಯದಲ್ಲಿ ನಂಬಿಕೆ ಇರುವವರು ಬಲವಾಗಿ ನಂಬುತ್ತಾರೆ.

ಶನಿವಾರ ಏನು ಮಾಡಬೇಕು?
* ಸಮೀಪದ ಹನುಮಂತನ ಗುಡಿಗೆ ಹೋಗಿ ದೀಪ ಹಚ್ಚಿ.
* ಶನಿವಾರದಂದು ಅರಳಿ ಮರಕ್ಕೆ ನೀರು ಹಾಕಿ ಪೂಜಿಸಿ
* ಶನಿವಾರ ಕಪ್ಪು ವಸ್ತ್ರ, ನೀಲಿ ವಸ್ತ್ರ ಅಥವಾ ಕಪ್ಪು ಎಳ್ಳು ದಾನ ಮಾಡಿ.

ಶನಿಯನ್ನು ಒಲಿಸಿಕೊಳ್ಳುವುದು ಹೇಗೆ?
ಶನಿವಾರ ಉಪವಾಸವಿದ್ದು ಶನಿ ದೇವಾಲಯಕ್ಕೆ ಹೋಗಿ ಎಣ್ಣೆ ಅರ್ಪಿಸಿ, ಪ್ರಾರ್ಥಿಸಿ. ಪ್ರಾರ್ಥಿಸುವಾಗ ಅಥವಾ ಪೂಜಿಸುವಾಗ ಮೂರ್ತಿಯ ಎದುರಿಗೆ ಶನಿಯ ದೃಷ್ಟಿ ನೇರವಾಗಿ ಬೀಳುವಂತೆ ನಿಲ್ಲಬಾರದು.
* ಶನಿ ಮಂತ್ರಗಳನ್ನು ಹೇಳಿ.
* ಈ ದಿನ ಬಡವರಿಗೆ, ಹಸಿದವರಿಗೆ ಆಹಾರ ದಾನ ಮಾಡಿ.
* ನಿರ್ಗತಿಕರಿಗೆ ಕಪ್ಪು ಅಥವಾ ಕಡು ನೀಲಿ ವಸ್ತ್ರ ದಾನ ಮಾಡಿ.
* ಹಿರಿಯರನ್ನು ಗೌರವಿಸಿ.



Click it and Unblock the Notifications











