Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪಾಪ ವಿಮೋಚನೆ ಏಕಾದಶಿ 2023: ಈ ಏಕಾದಶಿ ಪಾಲಿಸಿದರೆ ಕಷ್ಟ-ಕಾರ್ಪಣ್ಯ ದೂರಾಗುವುದು
ಏಕಾದಶಿ ಶ್ರೀ ವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ನಮ್ಮ ಬದುಕಿನಲ್ಲಿರುವ ಕಷ್ಟ-ಕಾರ್ಪಣ್ಯಗಳು ದೂರಾಗಿ ಒಳಿತಾಗಲಿದೆ ಎಂಬ ನಂಬಿಕೆ ಇದೆ. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ. ಈ ಮಾರ್ಚ್ 18ಕ್ಕೆ ಪಾಪ ವಿಮೋಚನೆ ಏಕಾದಶಿ ಆಚರಿಸಲಾಗುವುದು.
ಈ ಪಾಪವಿಮೋಚನೆ(ಪಾಪವಿಮೋಚನಿ) ಏಕಾದಶಿ ಆಚರಿಸುವುದರಿಂದ ಸಿಗುವ ಫಲವೇನು, ಈ ದಿನ ಪೂಜೆಗೆ ಶುಭ ಮುಹೂರ್ತ ಯಾವಾಗ, ಶ್ರೀ ವಿಷ್ಣುವನ್ನು ಹೇಗೆ ಆರಾಧಿಸಬೇಕು, ಇದರ ಕುರಿತ ಪೌರಾಣಿಕ ಕತೆಯೇನು ಎಂದು ನೋಡೋಣ ಬನ್ನಿ:

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಶ್ರೀವಿಷ್ಣುವಿನ ಪೂಜಾ ವಿಧಾನ
ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಬೇಕು. ನಂತರ ಪೂಜಾ ಸ್ಥಳವನ್ನು ಸ್ವಚ್ಛ ಮಾಡಿ, ಶ್ರೀ ವಿಷ್ಣುವಿನ ಮೂರ್ತಿ ಅಥವಾ ಫೋಟೋವನ್ನು ಸ್ವಚ್ಛ ಮಾಡಿ.
* ಶ್ರೀ ವಿಷ್ಣುವಿಗೆ ಹೂಗಳಿಂದ ಅಲಂಕರಿಸಿ ಪೂಜಿಸಿ. ಹೀಗೆ ವಿಷ್ಣುವನ್ನು ಪೂಜಿಸುವಾಗ ಹಳದಿ ವಸ್ತ್ರ, 11 ಹಳದಿ ಹೂಗಳು ಹಾಗೂ 11 ಹಳದಿ ಹೂಗಳು, 11 ಹಳದಿ ಹಣ್ಣುಗಳು ಹಾಗೂ 11 ಬಗೆಯ ಹಳದಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು ಪೂಜಿಸಿಬೇಕು. ಈ ದಿನ ಉಪವಾಸ ನಿಯಮಗಳನ್ನು ಪಾಲಿಸಿ ಈ ಏಕಾದಶಿ ಪಾಲಿಸಿದರೆ ತುಂಬಾ ಒಳ್ಳೆಯದು.

ಪಾಪವಿಮೋಚನೆ ಏಕಾದಶಿ ಪ್ರಯೋಜನಗಳು
ಪಾಪವಿಮೋಚನೆ ಏಕಾದಶಿ ಆಚರಿಸುವುದರಿಂದ ಪಾಪಗಳು ಕಳೆದು ಮೋಕ್ಷ ಸಿಗುವುದು. ಬದುಕಿನಲ್ಲಿ ಎದುರಾಗುತ್ತಿರುವ ಕಷ್ಟಗಳು, ಸವಾಲುಗಳು ದೂರಾಗುವುದು. ಈ ಏಕಾದಶಿಯನ್ನು ಕಟ್ಟು ನಿಟ್ಟಾಗಿ ಪಾಲಿಸಿದರೆ ನಿಮ್ಮ ಆಸೆ ಈಡೇರಲಿದೆ, ಜೀವನದಲ್ಲಿ ನೆಮ್ಮದಿ, ಸಂಪತ್ತು, ಸಮೃದ್ಧಿ ಹೆಚ್ಚಲಿದೆ.
ಪೌರಾಣಿಕ ಹಿನ್ನೆಲೆ
ಧರ್ಮರಾಯ ಶ್ರೀ ಕೃಷ್ಣ ನ ಪಾಪ ಕಳೆದು ಮೋಕ್ಷ ಪಡೆಯುವುದು ಹೇಗೆ ಎಂದು ಕೇಳಿದಾಗ ಶ್ರೀ ಕೃಷ್ಣ ಪಾಪವಿಮೋಚನಿ ಏಕಾದಶಿ ಆಚರಿಸುವಂತೆ ಸೂಚಿಸುತ್ತಾನೆ. ಯಾರು ಈ ಏಕಾದಶಿ ಆಚಾರಿಸುತ್ತಾರೋ ಅವರು ಎಲ್ಲಾ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಎಂಬುವುದಾಗಿಯೂ ಹೇಳುತ್ತಾನೆ.
ಯಾರು ಈ ವ್ರತ ಆಚರಿಸುತ್ತಾರೋ ಅವರ ಎಲ್ಲಾ ಪಾಪಗಳಿಂದ ಮುಕ್ತಿ ಪಡೆದು ಸ್ವರ್ಗಕ್ಕೆ ಹೋಗುತ್ತಾರೆ ಎಂದು ಕೂಡ ಹೇಳಲಾಗುವುದು



Click it and Unblock the Notifications
