Latest Updates
-
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ!
ಪಾಪ ವಿಮೋಚನೆ ಏಕಾದಶಿ 2023: ಈ ಏಕಾದಶಿ ಪಾಲಿಸಿದರೆ ಕಷ್ಟ-ಕಾರ್ಪಣ್ಯ ದೂರಾಗುವುದು
ಏಕಾದಶಿ ಶ್ರೀ ವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ನಮ್ಮ ಬದುಕಿನಲ್ಲಿರುವ ಕಷ್ಟ-ಕಾರ್ಪಣ್ಯಗಳು ದೂರಾಗಿ ಒಳಿತಾಗಲಿದೆ ಎಂಬ ನಂಬಿಕೆ ಇದೆ. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ. ಈ ಮಾರ್ಚ್ 18ಕ್ಕೆ ಪಾಪ ವಿಮೋಚನೆ ಏಕಾದಶಿ ಆಚರಿಸಲಾಗುವುದು.
ಈ ಪಾಪವಿಮೋಚನೆ(ಪಾಪವಿಮೋಚನಿ) ಏಕಾದಶಿ ಆಚರಿಸುವುದರಿಂದ ಸಿಗುವ ಫಲವೇನು, ಈ ದಿನ ಪೂಜೆಗೆ ಶುಭ ಮುಹೂರ್ತ ಯಾವಾಗ, ಶ್ರೀ ವಿಷ್ಣುವನ್ನು ಹೇಗೆ ಆರಾಧಿಸಬೇಕು, ಇದರ ಕುರಿತ ಪೌರಾಣಿಕ ಕತೆಯೇನು ಎಂದು ನೋಡೋಣ ಬನ್ನಿ:

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಶ್ರೀವಿಷ್ಣುವಿನ ಪೂಜಾ ವಿಧಾನ
ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಬೇಕು. ನಂತರ ಪೂಜಾ ಸ್ಥಳವನ್ನು ಸ್ವಚ್ಛ ಮಾಡಿ, ಶ್ರೀ ವಿಷ್ಣುವಿನ ಮೂರ್ತಿ ಅಥವಾ ಫೋಟೋವನ್ನು ಸ್ವಚ್ಛ ಮಾಡಿ.
* ಶ್ರೀ ವಿಷ್ಣುವಿಗೆ ಹೂಗಳಿಂದ ಅಲಂಕರಿಸಿ ಪೂಜಿಸಿ. ಹೀಗೆ ವಿಷ್ಣುವನ್ನು ಪೂಜಿಸುವಾಗ ಹಳದಿ ವಸ್ತ್ರ, 11 ಹಳದಿ ಹೂಗಳು ಹಾಗೂ 11 ಹಳದಿ ಹೂಗಳು, 11 ಹಳದಿ ಹಣ್ಣುಗಳು ಹಾಗೂ 11 ಬಗೆಯ ಹಳದಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು ಪೂಜಿಸಿಬೇಕು. ಈ ದಿನ ಉಪವಾಸ ನಿಯಮಗಳನ್ನು ಪಾಲಿಸಿ ಈ ಏಕಾದಶಿ ಪಾಲಿಸಿದರೆ ತುಂಬಾ ಒಳ್ಳೆಯದು.

ಪಾಪವಿಮೋಚನೆ ಏಕಾದಶಿ ಪ್ರಯೋಜನಗಳು
ಪಾಪವಿಮೋಚನೆ ಏಕಾದಶಿ ಆಚರಿಸುವುದರಿಂದ ಪಾಪಗಳು ಕಳೆದು ಮೋಕ್ಷ ಸಿಗುವುದು. ಬದುಕಿನಲ್ಲಿ ಎದುರಾಗುತ್ತಿರುವ ಕಷ್ಟಗಳು, ಸವಾಲುಗಳು ದೂರಾಗುವುದು. ಈ ಏಕಾದಶಿಯನ್ನು ಕಟ್ಟು ನಿಟ್ಟಾಗಿ ಪಾಲಿಸಿದರೆ ನಿಮ್ಮ ಆಸೆ ಈಡೇರಲಿದೆ, ಜೀವನದಲ್ಲಿ ನೆಮ್ಮದಿ, ಸಂಪತ್ತು, ಸಮೃದ್ಧಿ ಹೆಚ್ಚಲಿದೆ.
ಪೌರಾಣಿಕ ಹಿನ್ನೆಲೆ
ಧರ್ಮರಾಯ ಶ್ರೀ ಕೃಷ್ಣ ನ ಪಾಪ ಕಳೆದು ಮೋಕ್ಷ ಪಡೆಯುವುದು ಹೇಗೆ ಎಂದು ಕೇಳಿದಾಗ ಶ್ರೀ ಕೃಷ್ಣ ಪಾಪವಿಮೋಚನಿ ಏಕಾದಶಿ ಆಚರಿಸುವಂತೆ ಸೂಚಿಸುತ್ತಾನೆ. ಯಾರು ಈ ಏಕಾದಶಿ ಆಚಾರಿಸುತ್ತಾರೋ ಅವರು ಎಲ್ಲಾ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಎಂಬುವುದಾಗಿಯೂ ಹೇಳುತ್ತಾನೆ.
ಯಾರು ಈ ವ್ರತ ಆಚರಿಸುತ್ತಾರೋ ಅವರ ಎಲ್ಲಾ ಪಾಪಗಳಿಂದ ಮುಕ್ತಿ ಪಡೆದು ಸ್ವರ್ಗಕ್ಕೆ ಹೋಗುತ್ತಾರೆ ಎಂದು ಕೂಡ ಹೇಳಲಾಗುವುದು



Click it and Unblock the Notifications












