Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಪಾಪ ವಿಮೋಚನೆ ಏಕಾದಶಿ 2023: ಈ ಏಕಾದಶಿ ಪಾಲಿಸಿದರೆ ಕಷ್ಟ-ಕಾರ್ಪಣ್ಯ ದೂರಾಗುವುದು
ಏಕಾದಶಿ ಶ್ರೀ ವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ ನಮ್ಮ ಬದುಕಿನಲ್ಲಿರುವ ಕಷ್ಟ-ಕಾರ್ಪಣ್ಯಗಳು ದೂರಾಗಿ ಒಳಿತಾಗಲಿದೆ ಎಂಬ ನಂಬಿಕೆ ಇದೆ. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ. ಈ ಮಾರ್ಚ್ 18ಕ್ಕೆ ಪಾಪ ವಿಮೋಚನೆ ಏಕಾದಶಿ ಆಚರಿಸಲಾಗುವುದು.
ಈ ಪಾಪವಿಮೋಚನೆ(ಪಾಪವಿಮೋಚನಿ) ಏಕಾದಶಿ ಆಚರಿಸುವುದರಿಂದ ಸಿಗುವ ಫಲವೇನು, ಈ ದಿನ ಪೂಜೆಗೆ ಶುಭ ಮುಹೂರ್ತ ಯಾವಾಗ, ಶ್ರೀ ವಿಷ್ಣುವನ್ನು ಹೇಗೆ ಆರಾಧಿಸಬೇಕು, ಇದರ ಕುರಿತ ಪೌರಾಣಿಕ ಕತೆಯೇನು ಎಂದು ನೋಡೋಣ ಬನ್ನಿ:

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಪಾಪವಿಮೋಚನೆ ಏಕಾದಶಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಹಾಗೂ ಪಾರಣ ಸಮಯ
ಮಾರ್ಚ್ 18ಕ್ಕೆ ಪಾಪವಿಮೋಚನೆ ಏಕಾದಶಿ ಆಚರಿಸಲಾಗುವುದು.
ಏಕಾದಶಿ ತಿಥಿ ಮುಹೂರ್ತ: ಮಾರ್ಚ್ 17, ಮಧ್ಯಾಹ್ನ 02:6ರಿಂದ ಪ್ರಾರಂಭ
ಮಾರ್ಚ್ 18 ಬೆಳಗ್ಗೆ 11:13ಕ್ಕೆ ಮುಕ್ತಾಯ
ಪಾರಣ ಸಮಯ: ಮಾರ್ಚ್ 19 ಮುಂಜಾನೆ 06:25ರಿಂದ 08:07ರವರೆಗೆ

ಶ್ರೀವಿಷ್ಣುವಿನ ಪೂಜಾ ವಿಧಾನ
ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಬೇಕು. ನಂತರ ಪೂಜಾ ಸ್ಥಳವನ್ನು ಸ್ವಚ್ಛ ಮಾಡಿ, ಶ್ರೀ ವಿಷ್ಣುವಿನ ಮೂರ್ತಿ ಅಥವಾ ಫೋಟೋವನ್ನು ಸ್ವಚ್ಛ ಮಾಡಿ.
* ಶ್ರೀ ವಿಷ್ಣುವಿಗೆ ಹೂಗಳಿಂದ ಅಲಂಕರಿಸಿ ಪೂಜಿಸಿ. ಹೀಗೆ ವಿಷ್ಣುವನ್ನು ಪೂಜಿಸುವಾಗ ಹಳದಿ ವಸ್ತ್ರ, 11 ಹಳದಿ ಹೂಗಳು ಹಾಗೂ 11 ಹಳದಿ ಹೂಗಳು, 11 ಹಳದಿ ಹಣ್ಣುಗಳು ಹಾಗೂ 11 ಬಗೆಯ ಹಳದಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು ಪೂಜಿಸಿಬೇಕು. ಈ ದಿನ ಉಪವಾಸ ನಿಯಮಗಳನ್ನು ಪಾಲಿಸಿ ಈ ಏಕಾದಶಿ ಪಾಲಿಸಿದರೆ ತುಂಬಾ ಒಳ್ಳೆಯದು.

ಪಾಪವಿಮೋಚನೆ ಏಕಾದಶಿ ಪ್ರಯೋಜನಗಳು
ಪಾಪವಿಮೋಚನೆ ಏಕಾದಶಿ ಆಚರಿಸುವುದರಿಂದ ಪಾಪಗಳು ಕಳೆದು ಮೋಕ್ಷ ಸಿಗುವುದು. ಬದುಕಿನಲ್ಲಿ ಎದುರಾಗುತ್ತಿರುವ ಕಷ್ಟಗಳು, ಸವಾಲುಗಳು ದೂರಾಗುವುದು. ಈ ಏಕಾದಶಿಯನ್ನು ಕಟ್ಟು ನಿಟ್ಟಾಗಿ ಪಾಲಿಸಿದರೆ ನಿಮ್ಮ ಆಸೆ ಈಡೇರಲಿದೆ, ಜೀವನದಲ್ಲಿ ನೆಮ್ಮದಿ, ಸಂಪತ್ತು, ಸಮೃದ್ಧಿ ಹೆಚ್ಚಲಿದೆ.
ಪೌರಾಣಿಕ ಹಿನ್ನೆಲೆ
ಧರ್ಮರಾಯ ಶ್ರೀ ಕೃಷ್ಣ ನ ಪಾಪ ಕಳೆದು ಮೋಕ್ಷ ಪಡೆಯುವುದು ಹೇಗೆ ಎಂದು ಕೇಳಿದಾಗ ಶ್ರೀ ಕೃಷ್ಣ ಪಾಪವಿಮೋಚನಿ ಏಕಾದಶಿ ಆಚರಿಸುವಂತೆ ಸೂಚಿಸುತ್ತಾನೆ. ಯಾರು ಈ ಏಕಾದಶಿ ಆಚಾರಿಸುತ್ತಾರೋ ಅವರು ಎಲ್ಲಾ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಎಂಬುವುದಾಗಿಯೂ ಹೇಳುತ್ತಾನೆ.
ಯಾರು ಈ ವ್ರತ ಆಚರಿಸುತ್ತಾರೋ ಅವರ ಎಲ್ಲಾ ಪಾಪಗಳಿಂದ ಮುಕ್ತಿ ಪಡೆದು ಸ್ವರ್ಗಕ್ಕೆ ಹೋಗುತ್ತಾರೆ ಎಂದು ಕೂಡ ಹೇಳಲಾಗುವುದು



Click it and Unblock the Notifications
