Just In
Don't Miss
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜು. 20 ಪ್ರಥಮ ಏಕಾದಶಿ: ಪೂಜಾವಿಧಿ ಹಾಗೂ ಈ ದಿನದ ಮಹತ್ವವೇನು?
ಜುಲೈ 20 ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿ, ಈ ಏಕಾದಶಿಯನ್ನು ದೇವಾಶ್ಯಯನಿ ಏಕಾದಶಿ ಅಥವಾ ಪ್ರಥಮ ಏಕಾದಶಿ ಕರೆಯಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಅದರಂತೆ ಆಷಾಢ ಮಾಸದಲ್ಲಿ ಬರುವ ಏಕಾದಶಿಯಂದು ಕೂಡ ಹಲವಾರು ಆಚರಣೆಗಳಿವೆ. ಈ ದಿನ ಉಪವಾಸವಿದ್ದು ಏಕಾದಶಿಯನ್ನು ಆಚರಿಸಲಾಗುವುದು, ಕೆಲವರು ಹಣ್ಣುಗಳನ್ನು ಸೇವಿಸುತ್ತಾರೆ.
ದೇವಾಶ್ಯಯನಿ ಏಕಾದಶಿಯ ಮಹತ್ವ
ಈ ದಿನ ಯಾರು ಉಪವಾಸವಿದ್ದು ಏಕಾದಶಿ ವ್ರತ ಆಚರಿಸುತ್ತಾರೋ ಅವರ ಪಾಪಗಳನ್ನು ಸುಟ್ಟು ಬಿಡುತ್ತೇನೆ ಹಾಗೂ ಅವರ ಹೃದಯದಲ್ಲಿ ನಾನು ವಾಸಿಸುತ್ತೇನೆ ಎಂದು ಶ್ರೀಕೃಷ್ಣನೇ ಹೇಳಿರುವುದಾಗಿ ಪೌರಾಣಿಕ ಕತೆಯಿದೆ. ಇಂದಿನಿಂದ ಚಾತುರ್ಮಾಸ ಪ್ರಾರಂಭ. ಈ ನಾಲ್ಕು ತಿಂಗಳು ಭಗವಂತ ಯೋಗ ನಿದ್ದೆಯಲ್ಲಿರುತ್ತಾನೆ.
ದೇವಾಶ್ಯಯನಿ ಏಕಾದಶಿ 2021: ತಿಥಿ ಮತ್ತು ಸಮಯ
ದೇವಾಶ್ಯಯನಿ ಏಕಾದಶಿ : ಜುಲೈ 20, ಮಂಗಳವಾರ
ತಿಥಿ ಪ್ರಾರಂಭ: ಸಂಜೆ 04:29, ಜುಲೈ 19, 2021
ಏಕಾದಶಿ ತಿಥಿ ಮುಕ್ತಾಯ: ಮಧ್ಯಾಹ್ನ 01:47, ಜುಲೈ 20, 2021
ಪಾರಣ : ಜುಲೈ 21 ಬೆಳಗ್ಗೆ 05:44ರಿಂದ 08:15ರವರೆಗೆ
ಶಯನಿ ಏಕಾದಶಿ ಬಳಿಕ ನಿದ್ದೆ ಹೋಗುವ ವಿಷ್ಣು
ಆಷಾಢ ಮಾಸದ ಶುಕ್ಲ ಪಕ್ಷದ ಶಯನಿ ಏಕಾದಶಿ ಬಳಿಕ ಚಾತುರ್ಮಾಸ ಪ್ರಾರಂಭ, ಈ ನಾಲ್ಕು ತಿಂಗಳು ವಿಷ್ಣು ನಿದ್ದೆಯಲ್ಲಿರುತ್ತಾನೆ. ಆಗ ಶಿವನು ಈ ಲೋಕವನ್ನು ಕಾಯುತ್ತಾನೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಚಾತುರ್ಮಾಸ ಎಂಬುವುದು ಪವಿತ್ರವಾದ ಮಾಸವಾಗಿದ್ದು ಇಂದಿನಿಂದ ಆರಂಭ.
ಶಯನಿ ಏಕಾದಶಿ ಪೂಜಾ ವಿಧಿ
* ಈ ದಿನ ಉಪವಾಸವಿರಬೇಕು.
* ಕೆಲವರು ಸಾತ್ವಿಕ ಆಹಾರ ಸೇವಿಸುತ್ತಾರೆ, ಆದರೆ ಆ ಆಹಾರದಲ್ಲಿ ಧಾನ್ಯಗಳು, ಕಾಳುಗಳು, ತರಕಾರಿಗಳಾದ ಈರುಳ್ಳಿ ಹಾಗೂ ಇತರ ಮಸಾಲೆ ಪದಾರ್ಥಗಳು ಇರಬಾರದು.
* ವಿಷ್ಣುವಿನ ಪೂರ್ತಿಯನ್ನು ಹಳದಿ ಹೂಗಳಿಂದ ಅಲಂಕರಿಸಬೇಕು. ನಂತರ ತುಳಸಿಯನ್ನು ಅರ್ಪಿಸಬೇಕು.
* ನಂತರ ವಿಷ್ಣು ಸಹಸ್ರನಾಮ ಹೇಳಿ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಬೇಕು.
* ಭಕ್ತರು ಇಡೀ ರಾತ್ರಿ ಎಚ್ಚರವಾಗಿದ್ದು ಈ ವ್ರತ ಮಾಡುತ್ತಾರೆ.