Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಜು. 20 ಪ್ರಥಮ ಏಕಾದಶಿ: ಪೂಜಾವಿಧಿ ಹಾಗೂ ಈ ದಿನದ ಮಹತ್ವವೇನು?
ಜುಲೈ 20 ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿ, ಈ ಏಕಾದಶಿಯನ್ನು ದೇವಾಶ್ಯಯನಿ ಏಕಾದಶಿ ಅಥವಾ ಪ್ರಥಮ ಏಕಾದಶಿ ಕರೆಯಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಅದರಂತೆ ಆಷಾಢ ಮಾಸದಲ್ಲಿ ಬರುವ ಏಕಾದಶಿಯಂದು ಕೂಡ ಹಲವಾರು ಆಚರಣೆಗಳಿವೆ. ಈ ದಿನ ಉಪವಾಸವಿದ್ದು ಏಕಾದಶಿಯನ್ನು ಆಚರಿಸಲಾಗುವುದು, ಕೆಲವರು ಹಣ್ಣುಗಳನ್ನು ಸೇವಿಸುತ್ತಾರೆ.

ದೇವಾಶ್ಯಯನಿ ಏಕಾದಶಿಯ ಮಹತ್ವ
ಈ ದಿನ ಯಾರು ಉಪವಾಸವಿದ್ದು ಏಕಾದಶಿ ವ್ರತ ಆಚರಿಸುತ್ತಾರೋ ಅವರ ಪಾಪಗಳನ್ನು ಸುಟ್ಟು ಬಿಡುತ್ತೇನೆ ಹಾಗೂ ಅವರ ಹೃದಯದಲ್ಲಿ ನಾನು ವಾಸಿಸುತ್ತೇನೆ ಎಂದು ಶ್ರೀಕೃಷ್ಣನೇ ಹೇಳಿರುವುದಾಗಿ ಪೌರಾಣಿಕ ಕತೆಯಿದೆ. ಇಂದಿನಿಂದ ಚಾತುರ್ಮಾಸ ಪ್ರಾರಂಭ. ಈ ನಾಲ್ಕು ತಿಂಗಳು ಭಗವಂತ ಯೋಗ ನಿದ್ದೆಯಲ್ಲಿರುತ್ತಾನೆ.

ದೇವಾಶ್ಯಯನಿ ಏಕಾದಶಿ 2021: ತಿಥಿ ಮತ್ತು ಸಮಯ
ದೇವಾಶ್ಯಯನಿ ಏಕಾದಶಿ : ಜುಲೈ 20, ಮಂಗಳವಾರ
ತಿಥಿ ಪ್ರಾರಂಭ: ಸಂಜೆ 04:29, ಜುಲೈ 19, 2021
ಏಕಾದಶಿ ತಿಥಿ ಮುಕ್ತಾಯ: ಮಧ್ಯಾಹ್ನ 01:47, ಜುಲೈ 20, 2021
ಪಾರಣ : ಜುಲೈ 21 ಬೆಳಗ್ಗೆ 05:44ರಿಂದ 08:15ರವರೆಗೆ

ಶಯನಿ ಏಕಾದಶಿ ಬಳಿಕ ನಿದ್ದೆ ಹೋಗುವ ವಿಷ್ಣು
ಆಷಾಢ ಮಾಸದ ಶುಕ್ಲ ಪಕ್ಷದ ಶಯನಿ ಏಕಾದಶಿ ಬಳಿಕ ಚಾತುರ್ಮಾಸ ಪ್ರಾರಂಭ, ಈ ನಾಲ್ಕು ತಿಂಗಳು ವಿಷ್ಣು ನಿದ್ದೆಯಲ್ಲಿರುತ್ತಾನೆ. ಆಗ ಶಿವನು ಈ ಲೋಕವನ್ನು ಕಾಯುತ್ತಾನೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಚಾತುರ್ಮಾಸ ಎಂಬುವುದು ಪವಿತ್ರವಾದ ಮಾಸವಾಗಿದ್ದು ಇಂದಿನಿಂದ ಆರಂಭ.

ಶಯನಿ ಏಕಾದಶಿ ಪೂಜಾ ವಿಧಿ
* ಈ ದಿನ ಉಪವಾಸವಿರಬೇಕು.
* ಕೆಲವರು ಸಾತ್ವಿಕ ಆಹಾರ ಸೇವಿಸುತ್ತಾರೆ, ಆದರೆ ಆ ಆಹಾರದಲ್ಲಿ ಧಾನ್ಯಗಳು, ಕಾಳುಗಳು, ತರಕಾರಿಗಳಾದ ಈರುಳ್ಳಿ ಹಾಗೂ ಇತರ ಮಸಾಲೆ ಪದಾರ್ಥಗಳು ಇರಬಾರದು.
* ವಿಷ್ಣುವಿನ ಪೂರ್ತಿಯನ್ನು ಹಳದಿ ಹೂಗಳಿಂದ ಅಲಂಕರಿಸಬೇಕು. ನಂತರ ತುಳಸಿಯನ್ನು ಅರ್ಪಿಸಬೇಕು.
* ನಂತರ ವಿಷ್ಣು ಸಹಸ್ರನಾಮ ಹೇಳಿ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಬೇಕು.
* ಭಕ್ತರು ಇಡೀ ರಾತ್ರಿ ಎಚ್ಚರವಾಗಿದ್ದು ಈ ವ್ರತ ಮಾಡುತ್ತಾರೆ.



Click it and Unblock the Notifications